Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ದೇಶದ ಆರ್ಥಿಕಾಭಿವೃದ್ದಿಯಲ್ಲಿ ಮಹಿಳೆಯ ಪಾಲು ಇದೆ 
Blogತಾಜಾ ಸುದ್ದಿ

ದೇಶದ ಆರ್ಥಿಕಾಭಿವೃದ್ದಿಯಲ್ಲಿ ಮಹಿಳೆಯ ಪಾಲು ಇದೆ 

Dinamaana Kannada News
Last updated: March 13, 2024 8:41 am
Dinamaana Kannada News
Share
Mahila Dina dvg
Mahila Dina dvg
SHARE

ದಾವಣಗೆರೆ : 

ಅರ್ಥಿಕಾಭಿವೃದ್ದಿಯಲ್ಲಿ ಮಹಿಳೆಯ ಪಾತ್ರವು ಇದ್ದು ಎಲ್ಲಾ ಕ್ಷೇತ್ರಗಳಲ್ಲಿ ಸಕ್ರಿಯ ಭಾಗವಹಿಸುವಿಕೆ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ ತುಂಗಭದ್ರಾ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಸಕ್ತ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇನ್ಸ್‍ಫೈರ್ ಇನ್‍ಕ್ಲೂಜನ್ ಧೈಯವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಮಹಿಳೆಯರು ಇನ್ನೂ ಹೆಚ್ಚಿನ ರೀತಿಯಲ್ಲಿ ಅರ್ಥಿಕ ಸ್ವಾವಲಂಬಿಗಳಾಗಲು ಅವರಿಗೆ ಎಲ್ಲಾ ರೀತಿಯ ಬೆಂಬಲವನ್ನು ಹಾಗೂ ಸಹಕಾರವನ್ನು ನೀಡುವ ಆವಶ್ಯಕತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹೆಣ್ಣನ್ನು ಗೌರವದಿಂದ ಕಾಣಬೇಕು

ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ.ಮ.ಕರೆಣ್ಣವರ ಮಾತನಾಡಿ, ಹೆಣ್ಣನ್ನು ಗೌರವದಿಂದ ಕಾಣಬೇಕು, ಎಲ್ಲಿ ಹೆಣ್ಣನ್ನು ಗೌರವಿಸಲಾಗುತ್ತದೋ ಅಲ್ಲಿನ ವಾತಾವರಣ ಬಹಳ ಸೌಖ್ಯದಿಂದ ಕೂಡಿರುತ್ತದೆ.  ಮೊದಲು ನಮ್ಮ ಮನೆಯನ್ನು ನೆಮ್ಮದಿ, ಸಂತೋಷದಿಂದ ಇಟ್ಟುಕೊಳ್ಳಬೇಕು. ದೌರ್ಜನ್ಯವನ್ನು ತಡೆಯುವುದು ಹೆಣ್ಣು ಮಕ್ಕಳಿಂದ ಸಾಧ್ಯ, ಪ್ರತಿಯೊಬ್ಬರ ಗಂಡಿನ ಯಶಸ್ಸಿನ ಹಿಂದೆ ಮಹಿಳೆಯೊಬ್ಬರು ಇರುತ್ತಾರೆ. ಅವರು ತಾಯಿಯಾಗಿ, ಹೆಂಡತಿಯಾಗಿ,  ಮಗಳಾಗಿ, ಸಹೋದರಿಯಾಗಿ ಬಹುದೊಡ್ಡ ಪಾತ್ರ ವಹಿಸುತ್ತಾರೆ. ಒಂದು ಮಗುವಿನ ಬೆಳವಣಿಗೆ ಹಿಂದೆ ತಾಯಿಯ ಅಪಾರ ಶ್ರಮ ಇರುತ್ತದೆ. ತಾಯಿಗೆ ಮಕ್ಕಳು ತಪ್ಪು ಮಾಡಿದಾಗ ತಿದ್ದುವ ಗುಣವಿರುತ್ತದೆ, ಎಲ್ಲವನ್ನೂ ನಿಭಾಯಿಸುವವಳು ತಾಯಿಯಾಗಿದ್ದಾಳೆ ಎಂದು ತಿಳಿಸಿದರು.
ಎಲ್ಲಿ ನಾರಿಯನ್ನು ಗೌರವಿಸಲಾಗುತ್ತದೋ ಅಲ್ಲಿ ದೇವಿ ನೆಲೆಸುತ್ತಾಳೆ ಎಂದು ಹೇಳಲಾಗುತ್ತದೆ. ಮಹಿಳೆ ಮತ್ತು ಪುರುಷ ಸೇರಿರುವ ಸಮಾಜವಿದು. ಸಮಬಾಳು-ಸಮಪಾಲು ಎಂದಾಗ ಮಾತ್ರ ಅರ್ಥ ಲಭಿಸುವುದು. ಮಹಿಳೆ ಹೇಗೆ ಅಕ್ಕ, ತಂಗಿ, ಮಗಳು, ಅಮ್ಮ, ಗೆಳತಿ ಹೀಗೆ ಎಲ್ಲ ಪಾತ್ರ ವಹಿಸುತ್ತಾಳೋ ಪುರುಷ ಕೂಡ, ಅಣ್ಣ, ತಮ್ಮ, ಮಗ, ಗಂಡ, ಗೆಳೆಯ ಹೀಗೆ ಪಾತ್ರ ನಿರ್ವಹಿಸುತ್ತಾನೆ. ಆದ್ದರಿಂದ ಇಬ್ಬರ ಪಾತ್ರ ಸಮನಾಗಿದ್ದರೆ ಉತ್ತಮ ಸಮಾಜ ಸಾಧ್ಯ ಎಂದರು.
ಇದೇ ಸಂದಂರ್ಭದಲ್ಲಿ ಬೇಟಿ ಬಜಾವೋ ಬೇಟಿ ಪಡಾವೋ ಅಭಿಯಾನದಡಿ ಮಕ್ಕಳಿಗಾಗಿ ಇರುವ ಹಲವಾರು ಕಾಯ್ದೆ ಕಾನೂನುಗಳನ್ನು ಕುರಿತಾದ ಬೋಚರ್‍ಗಳನ್ನು ಸಹ ಬಿಡುಗಡೆ ಮಾಡಲಾಯಿತು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು.ಎಸ್ ಬಳ್ಳಾರಿ, ಆರೋಗ್ಯ ಇಲಾಖೆಯ ಆರ್.ಸಿ.ಹೆಚ್ ಅಧಿಕಾರಿ ಡಾ.ರೇಣುಕಾರಧ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಮಹಾನಗರಪಾಲಿಕೆ ಆಯುಕ್ತೆ ರೇಣುಕಾ, ಸಹಾಯಕ ಕಾರ್ಮಿಕ ಆಯುಕ್ತರಾದ ವೀಣಾ, ಶಿಶು ಅಭಿವೃದ್ದಿ ಅಧಿಕಾರಿ ಕವಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

TAGGED:Davangere NewsDinamana.comWomens dayದಾವಣಗೆರೆ ಸುದ್ದಿದಿನಮಾನ.ಕಾಂಮಹಿಳಾ ದಿನಾಚರಣೆ
Share This Article
Twitter Email Copy Link Print
Previous Article Governor Thawar Chand Gehlot, ಗುರಿ ಸಾಧಿಸಲು ಕ್ರಿಯಾಶೀಲ ಪ್ರಯತ್ನಗಳ ಅವಶ್ಯ
Next Article ಮೆಣಸಿನಕಾಯಿಗೂ ಎಂಎಸ್ಪಿ ಚಿಂತನೆ: ಸಚಿವ ಶಿವಾನಂದ ಪಾಟೀಲ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಅಂತರಾಷ್ಟ್ರೀಯ ಯೋಗ ದಿನ : ಸಿದ್ದತೆಗೆ ಡಿಸಿ ಸೂಚನೆ

ದಾವಣಗೆರೆ ಜೂ.11 : ಅಂತರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ಆಚರಿಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ;…

By Dinamaana Kannada News

ಪುನರ್ಬಲನ ತರಗತಿಗಳನ್ನು ಮೇ 15ರ ಬದಲು ಮೇ 29 ರಿಂದ ಆರಂಭಿಸುವಂತೆ ಒತ್ತಾಯ

ಹರಿಹರ:  ಎಸ್‍ಎಸ್‍ಎಲ್‍ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಪುನರ್ಬಲನ ತರಗತಿಗಳನ್ನು ಮೇ 15ರ ಬದಲು ಮೇ 29 ರಿಂದ ಆರಂಭಿಸುವಂತೆ ಒತ್ತಾಯಿಸಿ…

By Dinamaana Kannada News

ಮಳೆಗಾಗಿ ದೇವರುಗಳಿಗೆ ನೀರಿನ ಅಭಿಷೇಕ

ದಾವಣಗೆರೆ:  ಮಳೆಗಾಗಿ ಪ್ರಾರ್ಥಿಸಿ ತಾಲ್ಲೂಕಿನ ಕೊಗ್ಗನೂರು ಗ್ರಾಮದಲ್ಲಿ ಯುವಕರು ಮತ್ತು ರೈತರು ಗ್ರಾಮದಲ್ಲಿರುವ ದೇವಸ್ಥಾನಗಳ ದೇವರುಗಳಿಗೆ ನೀರಿನ ಅಭಿಷೇಕ ಮಾಡಿದರು.…

By Dinamaana Kannada News

You Might Also Like

Dr. F.G. Halakatti
Blogಅಭಿಪ್ರಾಯ

Dr. F.G. Halakatti | ವಚನ ತವನಿಧಿಯ ಸಂರಕ್ಷಕ : ಡಾ. ಫ.ಗು. ಹಳಕಟ್ಟಿ

By Dinamaana Kannada News
Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?