Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 22 ಕೆರೆ ಏತ ನೀರಾವರಿ ಯೋಜನೆ: ಹೊಸ ಪೈಪ್‌ಲೈನ್ ಗೆ ಶೀಘ್ರವೇ ಚಾಲನೆ
ತಾಜಾ ಸುದ್ದಿ

22 ಕೆರೆ ಏತ ನೀರಾವರಿ ಯೋಜನೆ: ಹೊಸ ಪೈಪ್‌ಲೈನ್ ಗೆ ಶೀಘ್ರವೇ ಚಾಲನೆ

Dinamaana Kannada News
Last updated: July 28, 2025 9:12 am
Dinamaana Kannada News
Share
22 Lake Lift Irrigation Project
SHARE
ದಾವಣಗೆರೆ : 22  ಕೆರೆಗಳ ಏತ ನೀರಾವರಿ ಯೋಜನೆಯ ಹೊಸ ಪೈಪ್‌ಲೈನ್ ಕಾಮಗಾರಿಗೆ 18 ಕೋಟಿ ರೂ. ಬಿಡುಗಡೆಗೊಳಿಸಿ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು  ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಬಾವಿ ತಿಳಿಸಿದ್ದಾರೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ನೀರಾವರಿ ನಿಗಮದ ಕಚೇರಿಯಲ್ಲಿ ಇತ್ತೀಚೆಗೆ ಭೇಟಿ ನೀಡಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅವರೊಂದಿಗೆ ಶಾಸಕ ಕೆ.ಎಸ್.ಬಸವಂತಪ್ಪ 22 ಕೆರೆಗಳ ಅಭಿವೃದ್ಧಿ ಕುರಿತು ಗಂಭೀರ ಚರ್ಚೆ ನಡೆಸಿದರು.
ಈ ವೇಳೆ ಎಂಡಿ ರಾಜೇಶ್ ಅಮ್ಮಿನಬಾವಿ, ಈಗಾಗಲೇ ಹೊಸ ಪೈಪ್‌ಲೈನ್ ಕಾಮಗಾರಿಗೆ  18 ಕೋಟಿ ರೂ. ಹಣ ಬಿಡುಗಡೆಯಾಗಿದ್ದು,  ಟೆಂಡರ್ ಪ್ರಕ್ರಿಯೆ ನಡೆದಿದೆ. ಇನ್ನು ಹೆಚ್ಚುವರಿ 75  ಕೋಟಿ ರೂ. ಹಣ ಬಿಡುಗಡೆಗೆ  ಕ್ರಮ ತೆಗೆದುಕೊಳ್ಳಲಾಗುವುದು. ಅದಷ್ಟು ಬೇಗ ಈ ಹಣವನ್ನು ಬಿಡುಗಡೆಗೊಳಿಸಿ  22  ಕೆರೆಗಳನ್ನು ಅಭಿವೃದ್ಧಿಗೊಳಿಸುವುದಾಗಿ  ಶಾಸಕರಿಗೆ ಭರವಸೆ ನೀಡಿದ್ದಾರೆ.
ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಹೋರಾಟದ ಫಲವಾಗಿ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದಲ್ಲಿ 22 ಕೆರೆ ಏತ ನೀರಾವರಿ ಯೋಜನೆಯ ಪೈಪ್‌ಲೈನ್ ಕಾಮಗಾರಿಯನ್ನು ಪ್ರತಿಷ್ಠಿತ ಎಲ್ ಅಂಡ್ ಟಿ ಕಂಪನಿ ನಡೆಸಿತ್ತು. ಆದರೆ ಹಿಂದೆ ನಡೆಸಿದ ಕಳಪೆ ಕಾಮಗಾರಿಯಿಂದ ಪೈಪ್‌ಲೈನ್ ಪದೇ ಪದೇ ಒಡೆದು ನೀರು ವ್ಯರ್ಥವಾಗಿ ಹರಿದಿದ್ದು ಬಿಟ್ಟರೆ ಒಂದೂ ಕೆರೆಯೂ ಭರ್ತಿಯಾಗುತ್ತಿಲ್ಲ. 22  ಕೆರೆ ಏತ ನೀರಾವರಿ ಯೋಜನೆಯಿಂದಾಗಿ ಈ ಭಾಗದ ರೈತರಲ್ಲಿ ಆಶಾಭಾವನೆ ಮೂಡಿತ್ತು. ಯೋಜನೆ ಚಾಲನೆಗೊಳಿಸಿ ಕೆಲವೇ ದಿನಗಳಲ್ಲಿ ಪೈಪ್‌ಲೈನ್ ಅಲ್ಲಲ್ಲಿ ಒಡೆದು ಕಳಪೆ ಕಾಮಗಾರಿ ಅನಾವರಣಗೊಂಡು ರೈತರ ಆಸೆಗೆ ತಣ್ಣೀರು ಎರಚಿತು.
Read also : ದಾವಣಗೆರೆ|ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ
ಈ ಬಾರಿ ಮುಂಗಾರು ಆರಂಭದಿಂದ ಜಿಲ್ಲೆಯಲ್ಲಿ ಉತ್ತಮ ಮಳೆ ಬರುತ್ತಿದೆ. ಆದರೆ ಕೆರೆಗಳು ತುಂಬುವಂತಹ ಮಳೆ ಬರುತ್ತಿಲ್ಲ. ಇದರಿಂದ ರೈತರು ಆತಂಕದಲ್ಲಿದ್ದಾರೆ. ಅಲ್ಲದೇ ಪ್ರಸ್ತುತ ತುಂಗಭದ್ರಾ ನದಿ ಮೈದುಂಬಿ ಹರಿದರೂ ಕೆರೆಗಳನ್ನು ಭರ್ತಿ ಮಾಡಿಕೊಳ್ಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ ಮೋಟಾರ್ ಆನ್ ಮಾಡುತ್ತಿದ್ದಂತೆ ಎರಡ್ಮೂರು ಕೆರೆ ಪೈಪ್‌ಲೈನ್ ಒಡೆದು ನೀರು ಪೋಲಾಗುತ್ತಿದೆ. ಗುಣಮಟ್ಟದ ಹೊಸ ಪೈಪ್‌ಲೈನ್ ಕಾಮಗಾರಿ ನಡೆಸಿ ಕೆರೆಗಳಿಗೆ ನೀರು ತುಂಬಿಸಬೇಕೆಂದು ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಅನೇಕ ಬಾರಿ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದೆ. ಅಲ್ಲದೇ ಮುಖ್ಯಮಂತ್ರಿಗಳು ಮತ್ತು ಡಿಸಿಎಂ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೂ ಚರ್ಚೆ ನಡೆಸಿ ಮನವಿ ಸಲ್ಲಿಸಲಾಗಿತ್ತು. ಕೂಡಲೇ 22 ಕೆರೆಗಳನ್ನು ಅಭಿವೃದ್ಧಿಗೊಳಿಸಿ ರೈತರ ಹಿತ ಕಾಯಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಿದ್ದಾರೆ.
ತುರ್ತು ದುರಸ್ತಿಗೆ ಹಣ ತೆಗೆದಿಡಿ…
ಮೋಟಾರ್ ಆನ್ ಮಾಡಿದ ತಕ್ಷಣ ಅಲ್ಲಲ್ಲಿ ಹಳೆಯ ಪೈಪ್ ಲೈನ್ ಒಡೆದು ನೀರು ಸೋರಿಕೆಯಾಗುತ್ತದೆ. ಹೊಸ ಪೈಪ್ ಲೈನ್ ಕಾಮಗಾರಿ ಆರಂಭಿಸುವವರೆಗೂ ಹಳೆಯ ಪೈಪ್ ಲೈನ್ ನಿರ್ವಹಣೆಗೆ ಹಣ ಬಿಡುಗಡೆ ಮಾಡಿಸಬೇಕು. ಪೈಪ್ ಲೈನ್ ಒಡೆದ ಕೂಡಲೇ ತುರ್ತು ದುರಸ್ತಿ ಮಾಡಿಸಿ ನಿರಂತರವಾಗಿ ನೀರು ಹರಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ನೀರಾವರಿ ನಿಗಮದ ಎಂಡಿ ರಾಜೇಶ್ ಅಮ್ಮಿನಬಾವಿ ಅವರಲ್ಲಿ ಮನವಿ ಮಾಡಿದ್ದಾರೆ.
TAGGED:22 Lake Lift Irrigation Project22 ಕೆರೆ ಏತ ನೀರಾವರಿ ಯೋಜನೆDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Tungabhadra river ದಾವಣಗೆರೆ|ಅಪಾಯಮಟ್ಟ ಮೀರಿ ಹರಿಯುತ್ತಿದೆ ತುಂಗಭದ್ರಾ ನದಿ
Next Article Dr. Basavaprabhu Swamiji ದಾವಣಗೆರೆ|ವೈಚಾರಿಕವಾಗಿ ಆಚರಣೆ ಮಾಡೋಣ : ಡಾ.ಬಸವಪ್ರಭು ಸ್ವಾಮೀಜಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

DAVANAGERE NEWS : ಅಪ್ಸರಾ ಐಸ್ ಕ್ರೀಂನಿಂದ ʼಮುಸ್ಕಾನ್ʼ ಬಿಡುಗಡೆ

ದಾವಣಗೆರೆ (DAVANAGERE) : ಅಪ್ಸರಾ ಐಸ್ ಕ್ರೀಮ್ಸ್ 53ನೇ ವಾರ್ಷಿಕೋತ್ಸವದಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ಮುಸ್ಕಾನ್ ಎಂಬ ವಿಶಿಷ್ಟ…

By Dinamaana Kannada News

ಡಾ.ಬಿ.ಆರ್.ಅಂಬೇಡ್ಕರ್ ನಿಜವಾದ ರಾಷ್ಟ್ರೀಯವಾದಿ ನಾಯಕ

ಹರಿಹರ:  ದಲಿತರು ಹಾಗೂ ಮಹಿಳೆಯರ ಪರ ಧ್ವನಿ ಎತ್ತಿದ ಡಾ.ಬಿ.ಆರ್.ಅಂಬೇಡ್ಕರ್ ನಿಜವಾದ ರಾಷ್ಟ್ರೀಯವಾದಿ ನಾಯಕ ಎಂದು ಕರ್ನಾಟಕ ದಲಿತ ಸಂಘರ್ಷ…

By Dinamaana Kannada News

ಕ್ರಾಂತಿಕಾರಿ ರಥಯಾತ್ರೆಗೆ ಅಡ್ಡಿ ಖಂಡಿಸಿ ಪ್ರತಿಭಟನೆ

ದಾವಣಗೆರೆ (Davanagere) : ಪ.ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವುದೂ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊAಡು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಕ್ರಾಂತಿಕಾರಿ ರಥಯಾತ್ರೆಗೆ…

By Dinamaana Kannada News

You Might Also Like

Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dr. Basavaprabhu Swamiji
ತಾಜಾ ಸುದ್ದಿ

ದಾವಣಗೆರೆ|ವೈಚಾರಿಕವಾಗಿ ಆಚರಣೆ ಮಾಡೋಣ : ಡಾ.ಬಸವಪ್ರಭು ಸ್ವಾಮೀಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?