Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಇಸ್ರೋಗಿದೆ ವಿಜ್ಞಾನ-ತಂತ್ರಜ್ಞಾನ ಉತ್ತೇಜಿಸುವ ಗುರಿ : ಇಸ್ರೋ ವಿಜ್ಞಾನಿ ಪಿ.ವಿ.ಎನ್.ಮೂರ್ತಿ
ತಾಜಾ ಸುದ್ದಿ

Davanagere | ಇಸ್ರೋಗಿದೆ ವಿಜ್ಞಾನ-ತಂತ್ರಜ್ಞಾನ ಉತ್ತೇಜಿಸುವ ಗುರಿ : ಇಸ್ರೋ ವಿಜ್ಞಾನಿ ಪಿ.ವಿ.ಎನ್.ಮೂರ್ತಿ

Dinamaana Kannada News
Last updated: October 23, 2024 12:03 pm
Dinamaana Kannada News
Share
davanagere
davanagere
SHARE

ದಾವಣಗೆರೆ (Davanagere) : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ವಿಜ್ಞಾನ ಮತ್ತು ತಂತ್ರಜ್ಞಾನ  ಉತ್ತೇಜಿಸುವ ಗುರಿ ಮತ್ತು ಉದ್ದೇಶ ಹೊಂದಿದ್ದು, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಂಡು ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಬೇಕೆಂದು ಇಸ್ರೋ ವಿಜ್ಞಾನಿ ಪಿ.ವಿ.ಎನ್.ಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಬುಧವಾರ ಇಸ್ರೋ ಮತ್ತು ಶ್ರೀಸತ್ಯಸಾಯಿ ವಿದ್ಯಾವಾಹಿನಿ ಜಂಟಿಯಾಗಿ ಆಯೋಜಿಸಿದ್ದ ಸ್ಪೇಸ್ ಆನ್‌ವೀಲ್ಸ್ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನಗಳ ಬಗ್ಗೆ ಹೆಚ್ಚು ಹೆಚ್ಚು ಜ್ಞಾನ ಸಂಪಾದಿಸುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಸಲಹೆ ನೀಡಿದರು.

ಜಿಪಂ ಸಿಇಒ ಸುರೇಶ್ ಬಿ.ಇಟ್ನಾಳ್ ಮಾತನಾಡಿ , ನಮ್ಮ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವುದು ಒಂದಾಗಿದೆ. ಕೇವಲ ಅಧಿಕಾರ, ಹಣ ಗಳಿಸುವುದು ಯಶಸ್ಸಲ್ಲ. ನಾವು ಮಾಡುವ ಕೆಲಸವನ್ನು ಸಂತೋಷವಾಗಿ, ಪರಿಣಾಮಕಾರಿಯಾಗಿ ನಿರ್ವಹಿಸಿದರೆ ಅದೇ ಯಶಸ್ಸು. ವಿದ್ಯಾವಂತರು ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉದ್ಯೋಗ ಸಂಪಾದಿಸುವ ಗುರಿಯನ್ನು ಹೊಂದಿದ್ದಾರೆ. ಆದರೆ ಮೂಲ ವಿಜ್ಞಾನವನ್ನು ಅಧ್ಯಯನ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಇಸ್ರೋದಲ್ಲಿ ವಿಜ್ಞಾನಿಗಳಾಗಿ ಆಯ್ಕೆಯಾಗಬೇಕು ಎಂದು ಸಲಹೆ ನೀಡಿದರು.

ಈಶ್ವರಮ್ಮ ಶಾಲಾಡಳಿತ ಮಂಡಳಿ ಅಧ್ಯಕ್ಷರಾದ ಕೆ.ಆರ್.ಸುಜಾತಕೃಷ್ಣ ಮಾತನಾಡಿ, ಪುಟ್ಟಪರ್ತಿಯ ಶ್ರೀಸತ್ಯಸಾಯಿ ವಿದ್ಯಾವಾಹಿನಿಯ ಸಹಯೋಗದೊಂದಿಗೆ ಈಶ್ವರಮ್ಮ ಶಾಲೆಯಲ್ಲಿ ಸ್ಪೇಸ್ ಆನ್ ವೀಲ್ಸ್ ಪ್ರದರ್ಶನ ಬೃಹತ್ ಕಾರ್ಯಕ್ರಮ ಏರ್ಪಡಿಸಿದ್ದೇವೆ. ಪಿ.ವಿ.ಎನ್.ಮೂರ್ತಿ ಅವರು ಇಸ್ರೋದ ಶ್ರೇಷ್ಠ ವಿಜ್ಞಾನಿಗಳು. ಭಾರತ ದೇಶ ವಿಶ್ವವೇ ಗುರುತಿಸುವ ಇಂತಹ ಮಹಾನ್ ವ್ಯಕ್ತಿಗಳ ಸಾಧನೆಯಿಂದ ವಿಶ್ವ ಗುರುವಾಗಿದೆ. ಸಮಾಜ ನಮಗೇನು ಕೊಟ್ಟಿದೆ ಎಂದು ಕೇಳುವ ಬದಲು ಸಮಾಜಕ್ಕಾಗಿ ನಾವೇನು ಕೊಡುಗೆಯನ್ನು ಕೊಟ್ಟಿದ್ದೇವೆ ಎಂದು ಚಿಂತಿಸ ಬೇಕೆಂದು  ತಿಳಿಸಿದರು.

Read also : Davanagere news | ಕಿತ್ತೂರಿನಲ್ಲಿ ನಡೆದ ಮೊದಲ ಕಾಳಗವೇ ಸ್ವಾತಂತ್ರ‍್ಯ ಸಂಗ್ರಾಮದ ಮುನ್ನುಡಿ ; ಡಾ.ಪ್ರಭಾ ಮಲ್ಲಿಕಾರ್ಜುನ್

ಇದೇ ಸಂದರ್ಭದಲ್ಲಿ ಇಸ್ರೋದ ಹಿರಿಯ ವಿಜ್ಞಾನಿಗಳಾದ ಪಿ.ವಿ.ಎನ್. ಮೂರ್ತಿ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಿಡಿಪಿಐ ಜಿ.ಕೊಟ್ರೇಶ್, ತಹಸೀಲ್ದಾರ್ ಡಾ.ಅಶ್ವತ್, ಈಶ್ವರಮ್ಮ ಟ್ರಸ್ಟ್ ಅಧ್ಯಕ್ಷರಾದ ಎ.ಆರ್.ಉಷಾರಂಗನಾಥ್, ಕಾರ್ಯದರ್ಶಿ ಜಿ.ಆರ್.ವಿಜಯಾನಂದ್, ಈಶ್ವರಮ್ಮ ಶಾಲಾಡಳಿತÀ ಮಂಡಳಿ ಖಜಾಂಚಿ ಎ.ಪಿ.ಸುಜಾತ, ಶ್ರೀಸತ್ಯಸಾಯಿ ವಿದ್ಯಾವಾಹಿನಿ ಸಂಸ್ಥೆಯ ಸದಸ್ಯರು ಹಾಗೂ ದಾವಣಗೆರೆ ಖಾಸಗಿ ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್ ಅಗಡಿ, ಶ್ರೀಸತ್ಯಸಾಯಿ ವಿದ್ಯಾವಾಹಿನಿಯ ಸಂಚಾಲಕರಾದ ಸುಬ್ರಮಣ್ಯ, ಗೌತಮ್, ವೆಂಕಟೇಶ್

ಬಡಿಗೇರ್, ಈಶ್ವರಮ್ಮ ಶಾಲೆಯ ಪ್ರಾಂಶುಪಾಲ ಕೆ.ಎಸ್.ಪ್ರಭುಕುಮಾರ್, ಉಪಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ ಇದ್ದರು. ಶಿಕ್ಷಕಿ ರಂಜನಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿ.ಸುನೀತಾ ನಿರೂಪಿಸಿದರು. ಕೆ.ಎಸ್.ಪ್ರಭುಕುಮಾರ್ ವಂದಿಸಿದರು.

ಮಕ್ಕಳೊಂದಿಗೆ  ಸಂವಾದ…
ಸ್ಪೇಸ್ ಆನ್ ವೀಲ್ಸ್ ಪ್ರದರ್ಶನ ಕಾರ್ಯಕ್ರಮದಲ್ಲಿ ದಾವಣಗೆರೆಯ ವಿವಿಧ ಶಾಲೆಗಳಿಂದ ಸುಮಾರು 3000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ನಡೆದ ಸ್ಪೇಸ್ ಆನ್ ವಿಲ್ಸ್ ಪ್ರದರ್ಶನ ಕಾರ್ಯಕ್ರಮದಲ್ಲಿ ಮಕ್ಕಳು ಇಸ್ರೋ ಪ್ರಾರಂಭವಾದಾಗಿಗಿನಿಂದ   ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಅವುಗಳ ಪ್ರಾಯೋಗಿಕ ಅನ್ವಯಗಳ ಕ್ಷೇತ್ರಗಳಲ್ಲಿ ದೇಶವು ಮಾಡಿದ ಪ್ರಮುಖ ಪ್ರಗÀತಿಗಳನ್ನು ಸ್ಪೇಸ್ ಆನ್ ವೀಲ್ಸ್ ಸಂಚಾರಿ ಪ್ರದರ್ಶನ ಬಸ್ಸ್ನ ಮೂಲಕ ವಿವಿಧ ಸ್ಥಳಗಳಿಗೆ ಪ್ರಯಾಣಿಸಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಬಾಹ್ಯಾಕಾಶ ಸಂಶೋಧನೆ ಮತ್ತು ಇಸ್ರೋದ ಸಾಧನೆೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಲಾಯಿತು. ನಂತರ ಇಸ್ರೋದ ವಿಜ್ಞಾನಿಗಳೊಂದಿಗೆ ಶಾಲಾ ವಿದ್ಯಾರ್ಥಿಗಳು ಸಂವಾದದ ಮೂಲಕ ವಿಜ್ಞಾನಿಗಳಿಂದ ಮಾಹಿತಿ ಪಡೆದುಕೊಂಡರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere news | ಕಿತ್ತೂರಿನಲ್ಲಿ ನಡೆದ ಮೊದಲ ಕಾಳಗವೇ ಸ್ವಾತಂತ್ರ‍್ಯ ಸಂಗ್ರಾಮದ ಮುನ್ನುಡಿ ; ಡಾ.ಪ್ರಭಾ ಮಲ್ಲಿಕಾರ್ಜುನ್
Next Article davanagere Davanagere | ಪೋಕ್ಸೋ , ಬಾಲ್ಯ ವಿವಾಹ ನಿಷೇಧ ಕಾಯಿದೆ ಜಾಗೃತಿ ಹೆಚ್ಚಿಸಲು ಡಿಸಿ ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಳೆಗಾಗಿ ದೇವರುಗಳಿಗೆ ನೀರಿನ ಅಭಿಷೇಕ

ದಾವಣಗೆರೆ:  ಮಳೆಗಾಗಿ ಪ್ರಾರ್ಥಿಸಿ ತಾಲ್ಲೂಕಿನ ಕೊಗ್ಗನೂರು ಗ್ರಾಮದಲ್ಲಿ ಯುವಕರು ಮತ್ತು ರೈತರು ಗ್ರಾಮದಲ್ಲಿರುವ ದೇವಸ್ಥಾನಗಳ ದೇವರುಗಳಿಗೆ ನೀರಿನ ಅಭಿಷೇಕ ಮಾಡಿದರು.…

By Dinamaana Kannada News

Davanagere news | ಹೆಣ್ಣು ಮಕ್ಕಳ ಹಕ್ಕುಗಳ ಸಂರಕ್ಷಣೆ ಎಲ್ಲಾರ ಜವಾಬ್ದಾರಿ : ನ್ಯಾ.ಮಹಾವೀರ ಮ.ಕರೆಣ್ಣವರ

ದಾವಣಗೆರೆ (Davanagere ) :  ಭೂಮಿ ತಾಯಿ ಸಕಲ ಜೀವಿಗಳಿಗೆ ಬದುಕಲು ನೆಲ, ಜಲ, ಗಾಳಿ  ನೀಡುತ್ತದೆ, ಇದೇ ಸ್ಥಾನ…

By Dinamaana Kannada News

Davanagere news | ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದಾವಣಗೆರೆ,ಸೆ.18 (Davanagere) ; ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ. ಮತ್ತು ಸಮನಾಂತರ,  ಸಾಮಾನ್ಯ ಪದವಿ ಮತ್ತು ಸಂಯೋಜಿತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?