Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davangere | ನಗರದ ಮೂಲಸೌಕರ್ಯಕ್ಕೆ ಅನುದಾನ ಕಲ್ಪಿಸಲು ಸಿಎಂಗೆ ಮನವಿ : ಮೇಯರ್‌ 
ತಾಜಾ ಸುದ್ದಿ

Davangere | ನಗರದ ಮೂಲಸೌಕರ್ಯಕ್ಕೆ ಅನುದಾನ ಕಲ್ಪಿಸಲು ಸಿಎಂಗೆ ಮನವಿ : ಮೇಯರ್‌ 

Dinamaana Kannada News
Last updated: October 30, 2024 4:50 pm
Dinamaana Kannada News
Share
Mahanagara Palike Davangere
SHARE

ದಾವಣಗೆರೆ (Davangere) :  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ವಿವಿಧ ಕಾಮಗಾರಿಗಳಿಗೆ ಅನುದಾನ ಮಂಜೂರು  ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್.ಮಲ್ಲಿಕಾರ್ಜನ್‌ ನೇತೃತ್ವದಲ್ಲಿ ಪಾಲಿಕೆಯ ಸದಸ್ಯರ ನಿಯೋಗ ಸಿಎಂ ಅವರಲ್ಲಿ ಮನವಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮೇಯರ್‌ ಚಮನಸಾಬ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸುಗಮ ಸಂಚಾರ, ಉತ್ತಮವಾದ ರಸ್ತೆಗಳು, ಮಳೆ ನೀರು ಮತ್ತು ಒಳಚರಂಡಿ, ಬೀದಿ ದೀಪಗಳು, ನಗರದ ಸ್ವಚ್ಛತೆ ಮತ್ತು ನಾಗರೀಕರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಕಸಾಯಿ ಖಾನೆ ಮತ್ತು ಅವಶ್ಯಕತೆ ಇರುವ ಹೆಚ್ಚಿನ ಪೌರ ಕಾರ್ಮಿಕರ ನೇಮಕಾತಿಗಾಗಿ ಮನವಿ ಮಾಡಲಾಯಿತು ಎಂದು ಹೇಳಿದರು.

2023-24 ನೇ ಸಾಲಿನ ಎಸ್.ಎಫ್.ಸಿ. ವಿಶೇಷ ಅನುದಾನದಡಿ ದಾವಣಗೆರೆ ದಕ್ಷಿಣ ಹಾಗೂ ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರದಿಂದ ರೂ.32.46 ಕೋಟಿ ಮಂಜೂರಾಗಿರುತ್ತದೆ. ಅದರಲ್ಲಿ 62 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಕೆಲವು ಕಾಮಗಾರಿಗಳು ಮುಕ್ತಾಯಗೊಂಡಿರುತ್ತವೆ ಹಾಗೂ ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಎಸ್.ಎಫ್.ಸಿ. ವಿಶೇಷ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಯಿತು.

ನಗರದಲ್ಲಿ ವಾಹನ ದಟ್ಟಣಿ  ಕಡಿಮೆ ಮಾಡಲು ಪಿ.ಬಿ. ರಸ್ತೆ ಗೋಶಾಲೆಯಿಂದ ಬಸಾಪುರ ಮೂಲಕವಾಗಿ ಬೇತೂರು ರಸ್ತೆಯವರೆಗೆ ರಿಂಗ್ ರಸ್ತೆ ನಿರ್ಮಾಣಕ್ಕೆ  ರೂ.120.00 ಕೋಟಿಗಳ ವಿಶೇಷ ಅನುದಾನ ,  ಪಾಲಿಕೆ ವ್ಯಾಪ್ತಿಯಲ್ಲಿ ಹೊರವಲಯದ ಬಡಾವಣೆಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕ್ಕೆ ರೂ.200.00 ಕೋಟಿಗಳ ಎಸ್.ಎಫ್.ಸಿ. ವಿಶೇಷ ಅನುದಾನ ನೀಡಬೇಕು, ಪಾಲಿಕೆಯ ಒಳಚರಂಡಿ ವಲಯ-2 ರ ಒಳಚರಂಡಿ ಹಾಗೂ ಎಸ್.ಟಿ.ಪಿ. ಘಟಕದ ನಿರ್ಮಾಣ ಕಾಮಗಾರಿಯು ಅವಶ್ಯಕತೆ ಇದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳ (KUWSDB) ಯಿಂದ ಸರ್ವೆ ಮಾಡಿ ರೂ.142.00 ಕೋಟಿ  ವಿಸ್ತುತ ಯೋಜನಾ ವರದಿಯನ್ನು ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಗೊಳಿಸುವುದು. ಸುಸಜ್ಜಿತ ಕಸಾಯಿ ಖಾನೆ , ಬೀದಿ ದೀಪ , 417 ಖಾಯಂ ಪೌರಕಾರ್ಮಿಕರಿದ್ದು, 440 ಪೌರಕಾರ್ಮಿಕರ ಕೊರತೆಯಿರುತ್ತದೆ. ಸ್ವಚ್ಛತಾ ಕಾರ್ಯವನ್ನು ಹೊರಗುತ್ತಿಗೆ ಮೂಲಕ ನಿರ್ವಹಿಸುವುದನ್ನು ಸ್ಥಗಿತಗೊಳಿಸಿ ಆದೇಶಿಸಿರುವುದರಿಂದ, ಘನತ್ಯಾಜ್ಯ ನಿರ್ವಹಣಾ ನಿಯಮಗಳು 2016 ರ ಅನುಷ್ಠಾನ, ಸ್ವಚ್ಛ ಭಾರತ ಮಿಷನ್ ಸಂಬಂಧಿತ ಚಟುವಟಿಕೆಗಳಾದ ಸ್ಮಚ್ಛ ಸರ್ವೇಕ್ಷಣ, ಗಾರ್ಬೇಜ್ ಫೀಸಿಟಿ ರೇಟಿಂಗ್ ಗಳಲ್ಲಿ ಪ್ರಗತಿ ಸಾಧಿಸಲು ಕಷ್ಟವಾಗುತ್ತಿದ್ದು, ಅಗತ್ಯವಿರುವ 440 ಪೌರಕಾರ್ಮಿಕರನ್ನು ಹೊರಗುತ್ತಿಗೆ ಮೂಲಕ ನಿರ್ವಹಿಸಲು ಅನುಮತಿ ಮನವಿ ಸಲ್ಲಿಸಲಾಯಿತು ಎಂದು ಹೇಳಿದರು.

Read also  : Davanagere | ಪಟಾಕಿ ಹಾರಿಸುವಾಗ ಜಾಗೃತವಾಗಿರಿ : ಶಾಮನೂರು ಶಿವಶಂಕರಪ್ಪ

ಬಿ.ಬಿ.ಎಂ.ಪಿಯಲ್ಲಿ ಜಾರಿಗೆ ತಂದ One Time Settlement ಯೋಜನೆಯಂತೆ ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೇಬಾಕಿ ಆಸ್ತಿ ತೆರಿಗೆ ಮೊತ್ತವನ್ನು ಪಾವತಿಸಲು ದಂಡದ ಮೊತ್ತಕ್ಕೆ ವಿನಾಯಿತಿ ಹಾಗೂ ಕೈಗಾರಿಕೆ ಕಟ್ಟಡಗಳಿಗೆ ವಿನಾಯಿತಿ ಹೆಚ್ಚಿಸಲು ಸಾರ್ವಜನಿಕರಿಂದ ಮತ್ತು ಕೈಗಾರಿಕಾ ಉದ್ಯಮಿದಾರರು ಕೋರಿರುತ್ತಾರೆ.  ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ  ದಂಡ ಪಾವತಿಸಲು ವಿನಾಯಿತಿ ನೀಡಲು ಮತ್ತು ಕೈಗಾರಿಕ ಕಟ್ಟಡಗಳಗೆ ನೀಡಿರುವ ವಿನಾಯಿತಿಯನ್ನು ಹೆಚ್ಚಿಸಿ ತೆರಿಗೆ ಪಾವತಿಸಿಕೊಳ್ಳುವಂತೆ ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಕ ತಿದ್ದುಪಡಿ ತಂದು ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಲು  ಮನವಿ ಸಲ್ಲಿಸಲಾಗಿದೆ ಎಂದರು.

ಈ ವೇಳೆ ಉಪಮೇಯರ್‌ ಸೋಗಿ ಶಾಂತಕುಮಾರ, ಪಾಲಿಕೆ ಸದಸ್ಯರಾದ ಎ.ನಾಗರಾಜ, ಗಡಿಗುಡಾಳ ಮಂಜುನಾಥ, ಎಲ್‌.ಡಿ.ಗೋಣೆಪ್ಪ, ಮುಖಂಡರಾದ ಉಮೇಶ ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Firecrackers Welfare Association Davangere Davanagere | ಪಟಾಕಿ ಹಾರಿಸುವಾಗ ಜಾಗೃತವಾಗಿರಿ : ಶಾಮನೂರು ಶಿವಶಂಕರಪ್ಪ
Next Article Harihara Harihara |ಉದ್ಯೋಗ ಆಧಾರಿತ ಕೋರ್ಸ್ಗೆ ಆದ್ಯತೆ ನೀಡಿ : ಮೊಹಮ್ಮದ್ ನಸ್ರುಲ್ಲಾ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Crime News | ಸಾಲಬಾಧೆ : ರೈತ ಆತ್ಮಹತ್ಯೆ

ದಾವಣಗೆರೆ (Davanagere): ಸಾಲಬಾಧೆ ತಾಳಲಾರದೆ ಜೋಳಕ್ಕಿಡುವ ಗುಳಿಗೆ ನುಂಗಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಗುಮ್ಮನೂರು ಗ್ರಾಮದಲ್ಲಿ ಗುರುವಾರ…

By Dinamaana Kannada News

Davanagere | ಆಸ್ತಿ ತೆರಿಗೆ ಪರಿಷ್ಕರಣೆ, ಶೇ.3 ರಷ್ಟು ತೆರಿಗೆ ಹೆಚ್ಚಳ

ದಾವಣಗೆರೆ ಮಾ.06 (Davanagere)- 2025-26ನೇ ಸಾಲಿಗೆ ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿ  ತೆರಿಗೆಯನ್ನು ಪರಿಷ್ಕರಿಸಿದ್ದು ಶೇ.3 ರಷ್ಟು ಹೆಚ್ಚಿಸಲಾಗಿದೆ. ಆಸ್ತಿ ಮಾಲಿಕರು…

By Dinamaana Kannada News

Davangere | ಕಾಂಗ್ರೆಸ್ ನಾಯಕರ ಒಗ್ಗಟ್ಟಿನ ಪ್ರಯತ್ನದಿಂದ ಮೂರು ಕ್ಷೇತ್ರಗಳಲ್ಲಿ ಗೆಲವು  

ದಾವಣಗೆರೆ  (Davanagere): ರಾಜ್ಯದಲ್ಲಿ ಈಚೆಗೆ ನಡೆದ ಉಪಚುನಾವಣೆಯಲ್ಲಿ  ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿರುವುದು ಕಾಂಗ್ರೆಸ್ ಪಕ್ಷದ ಒಗ್ಗಟ್ಟಿನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?