Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ :ಡಿಸಿ
ತಾಜಾ ಸುದ್ದಿ

ಅಪಘಾತ ಪ್ರಮಾಣ ತಗ್ಗಿಸಲು ಜಿಲ್ಲೆಯ ರಸ್ತೆಗಳ ದುರಸ್ತಿ ಹಾಗೂ ಸುಧಾರಣೆಗೆ ವಿಶೇಷ ಗಮನ ನೀಡಿ :ಡಿಸಿ

Dinamaana Kannada News
Last updated: November 15, 2024 1:12 pm
Dinamaana Kannada News
Share
Davanagere
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ ನ.15  (Davanagere)  : ಅಪಘಾತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿ, ಸುಧಾರಣೆಗೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ.  ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಾವಣಗೆರೆ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ತಡೆಗಳಿಂದ ಅಪಘಾತಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಅಂತಹ ಸ್ಥಳಗಳನ್ನು ಗುರುತಿಸಿ ಕೂಡಲೆ ತೆರವುಗೊಳಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಆಯಾ ಪೋಲೀಸ್ ಠಾಣೆಯ ಅಧಿಕಾರಿಗಳೊಂದಿಗೆ ಜಂಟಿ ಪರಿವೀಕ್ಷಣೆಯನ್ನು ಮಾಡಿ ಅವಶ್ಯಕತೆ ಇದ್ದರೆ, ವೈಜ್ಞಾನಿಕ ವೇಗತಡೆಗಳನ್ನು ಅಳವಡಿಸಿ ಸೂಕ್ತ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ವೈಜ್ಞಾನಿಕ ವೇಗತಡೆಗಳಿಗೆ ಥರ್ಮೋಪ್ಲಾಸ್ಟಿಕ್ ಬಣ್ಣವನ್ನು ಅಳವಡಿಸುವುದರ ಜೊತೆಗೆ ವೇಗತಡೆ ಗೋಚರಿಸುವಂತೆ ರೋಡ್ ಸ್ಟಡ್‍ಗಳನ್ನು ಅಳವಡಿಸುವುದು ಮತ್ತು ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.

ದಾವಣಗೆರೆ ಜಿಲ್ಲಾ ವ್ಯಾಪ್ತಿಯ ತಾಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಗಳಿಗೆ ಸಂಪರ್ಕಿಸುವ ಎಲ್ಲಾ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಹೆಚ್ಚು ಮಳೆಯ ಆದ ಪರಿಣಾಮ ರಸ್ತೆಗಳು ಕಿತ್ತು ಹೋಗಿರುವುದು ಹಾಗೂ ಕೆಲವು ಸ್ಥಳಗಳಲ್ಲಿ ಗುಂಡಿಗಳು ಸಹ ನಿರ್ಮಾಣವಾಗಿದ್ದು. ಇದರಿಂದ ರಸ್ತೆ ಬಳಕೆದಾರರಾದ ಅದರಲ್ಲೂ ದ್ವಿಚಕ್ರ ವಾಹನ ಸವಾರರು ಹೆಚ್ಚಾಗಿ ಲಘು ಅಪಘಾತಗಳು, ಇಲ್ಲವೇ ಮಾರಣಾಂತಿಕ ಅಪಘಾತಗಳು ಅಗುವುದಕ್ಕೆ ಕಾರಣವಾಗಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಆಯಾ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಎಂದು ತಿಳಿಸಿದರು.

ನಗರದಲ್ಲಿ ಸಂಚರಿಸುವ ಆಟೋರಿಕ್ಷಾ ವಾಹನಗಳಿಗೆ ಕಡ್ಡಾಯವಾಗಿ  ಬಾಡಿಗೆ ದರ ಪಡೆಯಲು ಮೀಟರ್‍ನ್ನು ಅಳವಡಿಸಬೇಕು. ಅದೇ ರೀತಿ ಆಟೋರಿಕ್ಷಾ ಚಾಲಕನ ಸೀಟ್ ಹಿಂಭಾಗದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಾಹನ ಮತ್ತು ಚಾಲನಾ ಹಾಗೂ ಮಾಲೀಕರ ಪೂರ್ಣ ಮಾಹಿತಿಯನ್ನು ಒಳಗೊಂಡ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಒಂದು ವೇಳೆ ಕಾನೂನು, ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅವರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳಲು ಸೂಚಿಸಿ ಅನಧಿಕೃತ ಆಟೋ ಸ್ಟಾಂಡ್‍ಗಳನ್ನು ತೆರವುಗೊಳಿಸಬೇಕು ತಿಳಿಸಿದರು.

ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಹರಿಹರ ನಗರದಲ್ಲಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಹರಿಹರ ನಗರಸಭೆಯವತಿಯಿಂದ ಹಾಗೂ ಸುಗಮ ಸಂಚಾರಕ್ಕೆ ಬೇಕಾಗುವ ಸಿಗ್ನಲ್ ಲೈಟ್ಸ್, ಸಿಸಿ ಕ್ಯಾಮೆರಾ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಜಯ್‍ಕುಮಾರ್ ಎಂ.ಸಂತೋಷ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕರಾದ ವೀರೇಶ್, ಇಂಜಿನಿಯರ್ಸ್ , ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Read also : Davanagere | ಚಲಿಸುವ ರೈಲಿಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದ ವೃದ್ಧನ ಪ್ರಾಣ ರಕ್ಷಿಸಿದ ರೈಲ್ವೆ ಸಿಬ್ಬಂದಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಚಲಿಸುವ ರೈಲಿಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದ ವೃದ್ಧನ ಪ್ರಾಣ ರಕ್ಷಿಸಿದ ರೈಲ್ವೆ ಸಿಬ್ಬಂದಿ
Next Article Channagiri Police Station - Davanagere Davanagere | ತೋಟದ ಮನೆಯಲ್ಲಿ ಕಳ್ಳತನ : ಆರೋಪಿಗಳ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Political analysis | ಸಿದ್ಧು ಗೂಢಚಾರರ ರಹಸ್ಯ ಸಂದೇಶ

Kannada News | Dinamaana.com | 30-09-2024 ಕಳೆದ ಗುರುವಾರ ಬಿಜೆಪಿಯ ಹಿರಿಯ ನಾಯಕ ಕಟ್ಟಾಸುಬ್ರಮಣ್ಯ ನಾಯ್ಡು ಅವರ ಸದಾಶಿವನಗರ …

By Dinamaana Kannada News

ನನ್ನೂರಿನ ವಿದ್ಯಮಾನಗಳು  …

ನಾನು,ಹಾವೇರಿಯ ಕೋರ್ಟಿನಲ್ಲಿ ಕೆಲಸ ಮಾಡುತ್ತಿರುವಾಗ ಸವಣೂರಿನಲ್ಲಿ ಒಂದು ಮನಕಲಕುವಂತಹ ಘಟನೆ ನಡೆಯಿತು. ಊರ ಮಲವನ್ನು ತಲೆಮ್ಯಾಲೆ ಹೊತ್ತು ಸಾಗಿಸುವುದು ಅಪರಾಧವಾಗಿ…

By Dinamaana Kannada News

Harihara | ಒಳ ಮೀಸಲಾತಿ ಜಾರಿಯಾಗುವವರೆಗೂ ನೇಮಕಾತಿ ಬೇಡ : ಮಾದಿಗ ಯುವ ಪಡೆ

ಹರಿಹರ (Harihara): ಪ.ಜಾತಿ-ಪಂಗಡಗಳ ಒಳ ಮೀಸಲಾತಿ ಜಾರಿಗೆ ಸರ್ವೋಚ್ಚ ನ್ಯಾಯಾಲಯದ ಸಪ್ತ ನ್ಯಾಯಾಧೀಶರ ಸಂವಿಧಾನಿಕ ಪೀಠವು ಐತಿಹಾಸಿಕ ತೀರ್ಪನ್ನು ನೀಡಿದ್ದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ಸಂಚಾರಿ ನಿಯಮ ಉಲ್ಲಂಘನೆ : ಆಟೋಗಳ ಮೇಲೆ 07 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?