Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: November 21, 2024 12:47 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere):  ಬಡ ಕೂಲಿ ಕಾರ್ಮಿಕರು, ರೈತರಿಗೆ ವರದಾನ ಆಗಬೇಕಾದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯು ಶಾಪವಾಗಿದೆ. ಹೃದಯಘಾತಕ್ಕೆ ಒಳಗಾಗಿ ತುರ್ತು ಚಿಕಿತ್ಸೆಗೆ ಬರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆಯ ಲಾಭ ಸಿಗದೆ ಲಕ್ಷಾಂತರ ರೂ. ಹಣ ತೆರಬೇಕಾಗಿದೆ ಎಂದು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಕ್ರಮ ವಹಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಮನವಿ ಮಾಡಿದರು.

 

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಯೋಜನೆಯು ಬಡವರಿಗೆ ವರದಾನವಾಗಿದೆ. ಆದರೆ ಹೃದಯಘಾತಕ್ಕೆ ಒಳಗಾಗುವ ಕೂಲಿ ಕಾರ್ಮಿಕರು, ಬಡವರು, ರೈತರು ಈ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದರೆ, ತುರ್ತು ಚಿಕಿತ್ಸೆ ನೀಡದೆ, ಈ ಯೋಜನೆ ಅನುಷ್ಠಾನ ವಿಳಂಬ ಆಗುತ್ತದೆ. ಹೀಗಾಗಿ ಕೂಡಲೇ ಆಪರೇಷನ್ ಮಾಡಿದರೆ ಮಾತ್ರ ರೋಗಿ ಬದುಕುತ್ತಾನೆ, ಇಲ್ಲಂದ್ರೆ ಕಷ್ಟ. ಈ ಆಪರೇಷನ್‌ಗೆ ಇಷ್ಟು ಹಣ ಕಟ್ಟಿದರೆ ಮಾತ್ರ ಆಪರೇಷನ್ ಮಾಡುತ್ತೇವೆ ಎಂದು ವೈದ್ಯರು ಹೇಳುತ್ತಾರೆ.

 

ಲಕ್ಷಾಂತರ ರೂಪಾಯಿ ಎಲ್ಲಿಂದ ತರಬೇಕು. ಆಯುಷ್ಮಾನ್ ಯೋಜನೆಯಿಂದ ೫ ಲಕ್ಷ ರೂ.ವರೆಗೆ ಲಾಭ ಪಡೆಯಬಹುದು ಎಂದು ಸರ್ಕಾರ ಹೇಳುತ್ತದೆ. ಆದರೆ ತುರ್ತು ಸಂದರ್ಭದಲ್ಲಿ ಈ ಯೋಜನೆ ಉಪಯೋಗಕ್ಕೆ ಬಾರದಿದ್ದರೆ, ಈ ಯೋಜನೆ ಜಾರಿಗೆ ತಂದಿದ್ದಾದರೂ ಏಕೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

 

ಹೃದಯಘಾತಕ್ಕೆ ಒಳಗಾದ ರೋಗಿ ಆಸ್ಪತ್ರೆಗೆ ದಾಖಲಾದರೆ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಈ ಯೋಜನೆ ಅನುಷ್ಠಾನ ಮಾಡಿದ ಬಳಿಕ ಆಪರೇಷನ್ ಮಾಡಲಿ ಅಥವಾ ರೋಗಿಗೆ ಆಪರೇಷನ್ ಮಾಡಿ ನಂತರ ಈ ಯೋಜನೆ ಅನುಷ್ಠಾನ ಮಾಡುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಈ ಬಗ್ಗೆ ಗಂಭೀರ ಚರ್ಚೆ ನಡೆಸಿ ಖಾಸಗಿ ಆಸ್ಪತ್ರೆಗಳಿಗೆ ಕಟ್ಟಿನಿಟ್ಟಿನ ಆದೇಶ ನೀಡಬೇಕೆಂದು ಮನವಿ ಮಾಡಿದರು.

 

ಶಾಸಕ ಕೆ.ಎಸ್.ಬಸವಂತಪ್ಪ ಅವರ ಮನವಿ ಸ್ಪಂದಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ಗಂಭೀರ ಚರ್ಚೆ ನಡೆಸಿ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಯೋಜನೆಯಡಿ ದಾಖಲಾಗುವ ರೋಗಿಗಳಿಂದ ಯಾವುದೇ ರೀತಿಯ ಖರ್ಚು ಭರಿಸಿಕೊಳ್ಳದೆ ಉಚಿತವಾಗಿ ತುರ್ತು ಚಿಕಿತ್ಸೆ ನೀಡುವ ಕುರಿತು ಸುತ್ತೋಲೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.

 

Read also : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
Next Article District Collector G.M. Gangadharaswamy Davanagere | ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 50 : ಸಂತೈಸುವವರಿಲ್ಲ..

Kannada News | Sanduru Stories | Dinamaana.com | 10-06-2024 ಸಿಟ್ಟು ಮೌನಕ್ಕೆ (Sanduru Stories) ಹೌದು, ಯಾವ…

By Dinamaana Kannada News

ನ್ಯಾಮತಿ ಎಸ್‍ಬಿಐ ದರೋಡೆ ಪ್ರಕರಣ : 17.5 ಕೆಜಿ ಚಿನ್ನಾಭರಣ ವಶಕ್ಕೆ, ಆರೋಪಿಗಳ ಸೆರೆ

ದಾವಣಗೆರೆ (Davanagere) : ನ್ಯಾಮತಿ ಪಟ್ಟಣದ ಎಸ್‍ಬಿಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸರುವ ದಾವಣಗೆರೆ ಪೊಲೀಸರು 13 ಕೋಟಿ ರೂ.…

By Dinamaana Kannada News

ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ. ಫೆ.11 (Davanagere); ರಾಷ್ಟ್ರೀಯ ಹೆದ್ದಾರಿ-173  ಮೂಡಿಗೆರೆಯಿಂದ ಹೊಳಲ್ಕೆರೆವರೆಗೆ ಇದ್ದು NH 369 ಬಳಿ ಮುಕ್ತಾಯಗೊಂಡಿದೆ.ಇದೇ ಹೆದ್ದಾರಿಯನ್ನು ಹೊಳಲ್ಕೆರೆಯಿಂದ  ಚಿಕ್ಕಜಾಜೂರಿನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?