Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸವಾಲುಗಳ ಮೀರಿ ಜ್ಞಾನ, ಕೌಶಲ್ಯ ಪಡೆದು ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಿ : ಎಸ್.ಆರ್. ಶಂಕಪಾಲ್  
ತಾಜಾ ಸುದ್ದಿ

ಸವಾಲುಗಳ ಮೀರಿ ಜ್ಞಾನ, ಕೌಶಲ್ಯ ಪಡೆದು ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಿ : ಎಸ್.ಆರ್. ಶಂಕಪಾಲ್  

Dinamaana Kannada News
Last updated: November 23, 2024 1:20 pm
Dinamaana Kannada News
Share
GMIT DAVANAGERE
GMIT DAVANAGERE
SHARE

ದಾವಣಗೆರೆ  (Davanagere):  ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ ಶನಿವಾರ 19 ಮತ್ತು 20ನೇ ಪದವಿ ಪ್ರದಾನ ಸಮಾರಂಭದಲ್ಲಿ 2022-23 ಹಾಗೂ 2023-24ನೇ ಸಾಲಿನ ಸೇರಿ ಒಟ್ಟು 1061 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮತ್ತು ಪಿಹೆಚ್ ಡಿಯಿಂದ 6 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

19ನೇ ಪದವಿ ಪ್ರದಾನ : ಪಿಹೆಚ್ ಡಿಯಿಂದ ನಾಲ್ವರು ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಹಾಗೂ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಬಯೋಟೆಕ್ನಾಲಜಿ, ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಂಬಿಎ ಸೇರಿದಂತೆ ಈ 7 ವಿಭಾಗಗಳಿಂದ 2022-23ನೇ ಸಾಲಿನ ಒಟ್ಟು 495 ವಿದ್ಯಾರ್ಥಿಗಳಿಗೆ ಜಿಎಂ ವಿಶ್ವವಿದ್ಯಾಲಯದ ಕುಲಪತಿಗಳಾದ ಎಸ್.ಆರ್. ಶಂಕಪಾಲ್ ಪದವಿ ಪ್ರದಾನ ಮಾಡಿದರು.

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಎಸ್.ಆರ್. ಶಂಕಪಾಲ್, ವಿದ್ಯಾರ್ಥಿಗಳು ಜ್ಞಾನ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ನಿಮಗೆ ಎಲ್ಲ ತರಹ ಪೂರಕ ಸವಲತ್ತುಗಳ ನೀಡಲಾಗಿದೆ. ಕಾಲೇಜು, ಉದ್ಯೋಗ, ವೈವಾಹಿಕ ಬದುಕು ಹೀಗೆ ಜೀವನದ ಪ್ರತಿಯೊಂದು ಹಂತದಲ್ಲೂ ಸಣ್ಣ ಪುಟ್ಟ ಸಮಸ್ಯೆ, ಸವಾಲುಗಳು ಎದುರಾಗುವುದು ಸಹಜ. ಹಾಗಾಗಿ ನೀವು ವಿದ್ಯಾರ್ಥಿ ಹಂತದಲ್ಲಿ ಬರುವ ಸವಾಲು, ಸಮಸ್ಯೆಗಳ ಮೀರಿ ಜ್ಞಾನ ಮತ್ತು ಕೌಶಲ್ಯವನ್ನು ಪಡೆದು ಉಜ್ವಲ ಭವಿಷ್ಯ ನಿಮ್ಮದಾಗಿಸಿಕೊಳ್ಳಬೇಕು ಎಂಬುದಾಗಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಶ್ರೀಶೈಲ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಜಿ.ಎಂ. ಪ್ರಸನ್ನ ಕುಮಾರ್ ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ನಿರ್ದೇಶಕರಾದ ಡಾ. ಬಿ. ಬಕ್ಕಪ್ಪ, ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಡಾ. ಕೆ. ದಿವ್ಯಾನಂದ, ಕುಲಸಚಿವರಾದ ಡಾ. ಬಿ.ಎಸ್. ಸುನಿಲ್ ಕುಮಾರ್, ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ ಉಪಸ್ಥಿತರಿದ್ದರು. ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಪೆÇ್ರಫೇಸರ್ ಜೆ. ಪ್ರವೀಣ್ ಸ್ವಾಗತಿಸಿದರು.

20ನೇ ಪದವಿ ಪ್ರದಾನ : ಪಿಹೆಚ್ ಡಿಯಿಂದ ಇಬ್ಬರು ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಹಾಗೂ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಇನ್ಫರ್ಮೇಷನ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅಂಡ್ ಮಿಷನ್ ಲನಿರ್ಂಗ್, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಬಯೋಟೆಕ್ನಾಲಜಿ, ಸಿವಿಲ್ ಇಂಜಿ

GMIT DAVANAGERE
GMIT DAVANAGERe

ನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಂಬಿಎ ಸೇರಿದಂತೆ ಈ 8 ವಿಭಾಗಗಳಿಂದ 2023-24ನೇ ಸಾಲಿನ ಒಟ್ಟು 566 ವಿದ್ಯಾರ್ಥಿಗಳಿಗೆ ಜಿಎಂ ವಿಶ್ವವಿದ್ಯಾಲಯದ ಸಹ ಕುಲಪತಿಗಳಾದ ಡಾ. ಎಚ್.ಡಿ. ಮಹೇಶಪ್ಪ ಪದವಿ ಪ್ರದಾನ ಮಾಡಿದರು.

ಡಾ. ಎಚ್.ಡಿ. ಮಹೇಶಪ್ಪ ಮಾತನಾಡಿ, ಪದವಿ ಪಡೆಯುವ ತನಕ ಜೀವನದ ಪ್ರಯತ್ನದ ಒಂದು ಘಟ್ಟವಾದರೆ ಪಡೆದ ನಂತರ ಮಹತ್ವದ ಜವಾಬ್ದಾರಿ ನಿಮ್ಮ ಮೇಲಿರಲಿದ್ದು, ಓದ್ಯೋಗ ಕ್ಷೇತ್ರ ಮತ್ತು ಸಮಾಜದ ಉದ್ದಾರಕಾರು ನೀವಾಗಬೇಕು. ಈ ಎರಡು ಕ್ಷೇತ್ರಗಳ ಅಗತ್ಯತೆಗಳು, ಬೇಡಿಕೆಗಳ ಬಗ್ಗೆ ಅರಿವು ನಿಮ್ಮಲ್ಲಿರಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಜಿಎಂ ವಿಶ್ವವಿದ್ಯಾಲಯದ ಕುಲಾಧಿಪತಿ  ಜಿ.ಎಂ. ಲಿಂಗರಾಜು ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವರಾದ ಡಾ. ಬಿ.ಎಸ್. ಸುನಿಲ್ ಕುಮಾರ್, ಜಿ.ಎಂ. ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ನಿರ್ದೇಶಕರಾದ ಡಾ. ಬಿ. ಬಕ್ಕಪ್ಪ, ಆಡಳಿತ ಮಂಡಳಿ ಸದಸ್ಯರಾದ ಡಾ. ಕೆ. ದಿವ್ಯಾನಂದ, ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸ್ವಾಗತಿಸಿದರು.

 

Read also :  ಸಮಾಜದ ಅಭಿವೃದ್ಧಿಗೆ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ : ಅಜಯಕುಮಾರ್

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Dharmasthala Village Development Project ಸಮಾಜದ ಅಭಿವೃದ್ಧಿಗೆ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ : ಅಜಯಕುಮಾರ್
Next Article Davanagere ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political Analysis | ಬಿಜೆಪಿ ಬೆಕ್ಕಿಗೆ ಗಂಟೆ ಕಟ್ಟುವುದು ಹೇಗೆ?

ಕಳೆದ ವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ರಾಜ್ಯ ಬಿಜೆಪಿಯ ನಾಯಕರೊಬ್ಬರು ಭೇಟಿಯಾಗಿದ್ದಾರೆ.ಈ ಸಂದರ್ಭದಲ್ಲಿ ಯತ್ನಾಳ್…

By Dinamaana Kannada News

ಶೇ. 90 ರಷ್ಟು ಭಾರತೀಯ ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆ

ಬೆಂಗಳೂರು : ಒಬ್ಬ ಮನುಷ್ಯನಲ್ಲಿ 30 ng/ml ಗಿಂತ ಕಡಿಮೆ ಇದ್ದರೆ ವಿಟಮಿನ್ ಡಿ ಮಟ್ಟವು ಸಾಕಷ್ಟಿಲ್ಲ ಅಥವಾ ಇದರ…

By Dinamaana Kannada News

34 ದಿನಕ್ಕೆ ಕಾಲಿರಿಸಿದ ಸತ್ಯಾಗ್ರಹ

ರಾಯಚೂರ : ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ವಾಲ್ಮೀಕಿ ಸಮಾಜ ನಡೆಸುತ್ತಿರುವ ಹೋರಾಟ 34 ನೇ ದಿನಕ್ಕೆ ಕಾಲಿರಿಸಿದೆ. ಮಾ…

By Dinamaana Kannada News

You Might Also Like

A lesson for children in a breathtaking place Davanagere
ತಾಜಾ ಸುದ್ದಿ

ಉಸಿರು ಕಟ್ಟುವ ಸ್ಥಳದಲ್ಲಿ ಮಕ್ಕಳಿಗೆ ಪಾಠ ! ಮಂಡಕ್ಕಿ ಭಟ್ಟಿ ಲೇಔಟ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

By Dinamaana Kannada News
10 Permanent Driver Posts: Applications invited from ex-servicemen
ತಾಜಾ ಸುದ್ದಿ

ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By Dinamaana Kannada News
Vinaykumara G B
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?