Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು : ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌
ತಾಜಾ ಸುದ್ದಿ

Davanagere | ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು : ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌

Dinamaana Kannada News
Last updated: December 3, 2024 10:59 am
Dinamaana Kannada News
Share
Davanagere(
Davanagere(
SHARE
ಬೆಂಗಳೂರು/ ದಾವಣಗೆರೆ  : ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರಗಳಲ್ಲಿ ಮರಳು ಸಿಗಲಿ ಎಂಬ ಉದ್ದೇಶದಿಂದ ಮರಳು ನೀತಿ ಜಾರಿಗೊಳಿಸಿದ್ದು, ಆಯವ್ಯಯದಲ್ಲಿ ಘೋಷಿಸಿರುವಂತೆ ಈ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್‌. ಮಲ್ಲಿಕಾರ್ಜುನ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಮರಳು ನೀತಿಯಂತೆ ಈಗಾಗಲೇ ಸಾರ್ವಜನಿಕ ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ಬೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು I, II ಮತ್ತು III ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಬ್ದಾರಿಯನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ವಹಿಸಿ, ಪ್ರತಿ ಮೆ.ಟನ್‌ ಮರಳಿನ ಮಾರಾಟ ಬೆಲೆಯನ್ನು ರೂ.300/-ಗಳನ್ನು ನಿಗದಿಪಡಿಸಲಾಗಿದೆ ಮತ್ತು ಸದರಿ ವ್ಯವಸ್ಥೆಯು ಪ್ರಸ್ತುತ ಜಾರಿಯಲ್ಲಿರುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
IV, V ಮತ್ತು ಉನ್ನತ ಶ್ರೇಣಿಗಳ ಹಳ್ಳ / ನದಿಗಳ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ ಗಳನ್ನು ಸರ್ಕಾರದಿಂದ ಅಧಿಸೂಚಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಸರ್ಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಇದೆ ರೀತಿ ಸಾರ್ವಜನಿಕ/ ಖಾಸಗಿ ಸಂಸ್ಥೆಗಳಿಗೆ  ಟೆಂಡರ್ ಮೂಲಕ ಮರಳು ಬ್ಲಾಕ್‌ಗಳನ್ನು ವಿಲೇಪಡಿಸುವ ನಿಯಮದಲ್ಲಿ ತಿದ್ದುಪಡಿ ಮಾಡಲಾಗಿದೆ.  ನೂತನ ನೀತಿಯಂತೆ  ಮರಳು ಬ್ಲಾಕ್‌ಗಳ ಟೆಂಡರ್‌ನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಲಾಗುವ ಮರಳು ಬ್ಲಾಕ್‌ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್‌ ಪದ್ಧತಿಯಡಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯಾದ್ಯಂತ ಪ್ರತಿ ಮೆ.ಟನ್‌ ಮರಳು ಏಕ ರೂಪ ಮಾರಾಟ ದರ ರೂ. 850/- ನ್ನು ನಿಗದಿಪಡಿಸಲಾಗಿದೆ. ಸರ್ಕಾರವು ನಿಗದಿಪಡಿಸುವ ಮಾರಾಟ ಬೆಲೆಯ ಮೊತ್ತದ ಶೇಕಡ 50 ರಷ್ಟುನ್ನು Ceiling price ಎಂದು ಹಾಗೂ Ceiling Price ನ ಶೇಕಡ 60ರಷ್ಟನ್ನು Cut-off Price ಎಂದು ನಿಗದಿಪಡಿಸಲಾಗಿರುತ್ತದೆ.  Ceiling Price ಮತ್ತು Cut-off Price ಗೆ ಸಮನಾದ ಅಥವಾ ನಡುವೆ ಸಲ್ಲಿಸುವ ಕಡಿಮೆ ಟೆಂಡರ್‌ ಮೊತ್ತವನ್ನು ನಮೂದಿಸಿದವರನ್ನು ಯಶಸ್ವಿ ಬಿಡ್ಡುದಾರರೆಂದು ಪರಿಗಣಿಸಲಾಗುವುದು.
ಒಂದಕ್ಕಿಂತ ಹೆಚ್ಚು ಟೆಂಡರ್‌ದಾರರು ಏಕ ರೂಪ ಟೆಂಡರ್‌ ದರವನ್ನು ನಮೂದಿಸಿದಲ್ಲಿ ಲಾಟರಿ ಮೂಲಕ ಯಶಸ್ವಿ ಬಿಡ್ಡುದಾರನನ್ನು ಆಯ್ಕೆ ಮಾಡಲಾಗುವುದು. ಟೆಂಡರ್‌ ಪ್ರಕ್ರಿಯೆಯನ್ನು e-Portal ನಲ್ಲಿ ನಡೆಸಲಾಗುತ್ತಿದ್ದು, ಸದರಿ Portal ಮೂಲಕ ಆಸಕ್ತ ವ್ಯಕ್ತಿ/ಖಾಸಗಿ ಕಂಪನಿ/ಸಂಸ್ಥೆಯವರು ಅರ್ಜಿ ಸಲ್ಲಿಸಲು ಜಿಲ್ಲಾವಾರು ಅಧಿಸೂಚನೆ ಜಾರಿ ಮಾಡಲಾಗುವುದು ಎಂದು ಸಚಿವರು ಪ್ರಕಟಣೆ ಮೂಲಕ ವಿವರಿಸಿದ್ದಾರೆ.
ಈ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಮತ್ತು ಟೆಂಡರ್‌ ಡಾಕ್ಯುಮೆಂಟ್‌ ನ್ನು ಎಲ್ಲಾ ಜಿಲ್ಲಾ ಕಛೇರಿಗಳಿಗೆ ನೀಡಲಾಗಿದ್ದು, ಸರ್ಕಾರದಿಂದ ಜಾರಿ ಮಾಡಿರುವ ಮರಳು ನೀತಿಯನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ನಿರ್ದೇಶಿಸಲಾಗಿದೆ ಮಾಹಿತಿಗಾಗಿ  ಗಣಿ ಇಲಾಖಾ ಕಚೇರಿಯನ್ನು ಸಂಪರ್ಕಿಸಲು ಕೋರಿದ್ದಾರೆ.

 

Read also : ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ಮುಕುಟ ಮಣಿ’ ಪ್ರಶಸ್ತಿ ಪ್ರದಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಡಾ.ಎನ್.ಪರಶುರಾಮ್‍ಗೆ ‘ಕರ್ನಾಟಕ ಮುಕುಟ ಮಣಿ’ ಪ್ರಶಸ್ತಿ ಪ್ರದಾನ
Next Article Sharan Sahitya Parishad Nagarghataka ದಲಿತ, ಶೋಷಿತ ವ್ಯಕ್ತಿಗಳ ಅಂತರಂಗದ ನುಡಿಗಳೇ ಶರಣ ಸಾಹಿತ್ಯ : ಡಾ. ಮಂಜುನಾಥ ಕುರ್ಕಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನೆಲದ ನೋವಿಗೆ ಧ್ವನಿಯಾದ ಪ್ರತಿಬಿಂಬವೇ ‘ಬಿಸಿಲ ಮಳೆ’

ನೆಲಮೂಲದ ಸಾಹಿತ್ಯ ಯಾವಾಗಲೂ ಚಲನಶೀಲವಾಗಿರುತ್ತದೆ. ಅದು ನಿತ್ಯ ನೂತನ. ವರ್ತಮಾನದ ತಲ್ಲಣಗಳಿಗೆ ಮುಖಾಮುಖಿಯಾಗುವ ಅನೇಕ ಸಾಹಿತಿಗಳು ಈ ನೆಲದ ನೋವನ್ನು…

By Dinamaana Kannada News

Recruitment rally | ನೇಮಕಾತಿ ರ‍್ಯಾಲಿ

ದಾವಣಗೆರೆ ಜ.21 (Davanagere): ಭಾರತೀಯ ವಾಯುಪಡೆಯಲ್ಲಿನ ಏರ್‍ಮ್ಯಾನ್ ಗ್ರೂಪ್ ವೈ ತಾಂತ್ರಿಕವಲ್ಲದ ಹಾಗೂ ವೈದ್ಯಕೀಯ ಸಹಾಯಕ ವೃತ್ತಿಗೆ ನೇಮಕಾತಿ ರ‍್ಯಾಲಿಯನ್ನು…

By Dinamaana Kannada News

Harihara | ಜ.5 ರಂದು 537ನೇ ಕನಕದಾಸರ ಜಯಂತ್ಯೋತ್ಸವ

ಹರಿಹರ (Harihara) : ದಾವಣಗೆರೆಯಲ್ಲಿ ಜಿಲ್ಲಾ ಮಟ್ಟದ 537ನೇ ಕನಕದಾಸರ ಜಯಂತ್ಯೋತ್ಸವವನ್ನು ಜಿಲ್ಲಾ ಕುರುಬ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ…

By Dinamaana Kannada News

You Might Also Like

Chitradurga
ತಾಜಾ ಸುದ್ದಿ

Chitradurga | ಗರಗ ಗ್ರಾಮದ ತಿಪ್ಪೇಶ್ ಕಾಣೆ

By Dinamaana Kannada News
Dr. Prabha Mallikarjun
ತಾಜಾ ಸುದ್ದಿ

ಆಪರೇಷನ್ ಸಿಂಧೂರ್ ಯಶಸ್ಸು; ನಗರದೇವತೆಗೆ ಸಂಸದರಿಂದ ವಿಶೇಷ ಪೂಜೆ

By Dinamaana Kannada News
Davanagere
Blogತಾಜಾ ಸುದ್ದಿ

Davanagere | ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜಿ ಆರ್  ಕುಸುಮಗೆ ರಾಗಾಆವಿವಿವಿ ದಿಂದ ಡಾಕ್ಟರೇಟ್ ಪದವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?