Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > Harihara | ಅಕ್ರಮ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಡಿಎಸ್‍ಎಸ್ ಮನವಿ
Blog

Harihara | ಅಕ್ರಮ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಡಿಎಸ್‍ಎಸ್ ಮನವಿ

Dinamaana Kannada News
Last updated: December 4, 2024 1:07 pm
Dinamaana Kannada News
Share
Harihara
Harihara
SHARE

ಹರಿಹರ (Harihara):  ಹರಿಹರ ತಾಲ್ಲೂಕಿನ ವಿವಿಧ ಗ್ರಾಮಗಳ ಪಟ್ಟಾ ಹಾಗೂ ಸರ್ಕಾರಿ ಜಮೀನುಗಳಲ್ಲಿ ನಡೆಯುತ್ತಿರುವ ಅವ್ಯಾಹತ ಅಕ್ರಮ ಮಣ್ಣು ಗಣಿಗಾರಿಕೆಯನ್ನು ತಡೆಯಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ)ಯಿಂದ ಇಲ್ಲಿನ ತಾಲ್ಲೂಕು ಕಚೇರಿ ಶಿರಸ್ತೆದಾರ್ ಸುನೀತಾರವರಿಗೆ ಮನವಿ ಸಲ್ಲಿಸಲಾಯಿತು.

ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ತಾಲ್ಲೂಕಿನ ಗುತ್ತೂರು, ಹರ್ಲಾಪುರ, ಸಾರಥಿ, ಪಾಮೇನಹಳ್ಳಿ, ದೀಟೂರು, ಚಿಕ್ಕಬಿದರಿ, ಕರಲಹಳ್ಳಿ, ಬುಳ್ಳಾಪುರ, ರಾಜನಹಳ್ಳಿ, ಧೂಳೆಹೊಳೆ, ಇಂಗಳಗೊಂದಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿನ ಪಟ್ಟಾಹಾಗೂ ಸರ್ಕಾರಿ ಜಮೀನುಗಳಲ್ಲಿ ಅಕ್ರಮ ಮಣ್ಣಿನ ಗಣಿಗಾರಿಕೆ ಈ ಹಿಂದಿನ ವರ್ಷಗಳಲ್ಲಿ ಅವ್ಯಾಹತವಾಗಿ ನಡೆಸಲಾಗಿದೆ. ಈ ವರ್ಷವೂ ಆ ಭಾಗದಲ್ಲಿಗಣಿಗಾರಿಕೆಗೆ ಸಿದ್ಧತೆ ನಡೆಸಲಾಗಿದೆ. ನದಿ ದಡದ ಈ ಗ್ರಾಮಗಳಲ್ಲಿ 20 ರಿಂದ 40 ಅಡಿಗಳ ಆಳದವರೆಗೆ ಜೆಸಿಬಿ, ಹಿಟಾಚಿಯಂತಹ ಬೃಹತ್ ಯಂತ್ರಗಳಿಂದ ಗುಂಡಿಗಳನ್ನು ತೋಡುತ್ತಾ ಅಕ್ರಮ ಮಣ್ಣು ಗಣಿಗಾರಿಕೆ ನಡೆಸಲಾಗಿದೆ ಎಂದು ಹೇಳಿದರು.

ರಾಜನಹಳ್ಳಿ ಗ್ರಾಮದಲ್ಲಿ ಅಂದಾಜು 2 ಎಕರೆಯಷ್ಟು ಸರ್ಕಾರದಿಂದ ಮಂಜೂರಾದ ಪರಿಶಿಷ್ಟ ಜನಾಂಗದವರ ರುದ್ರಭೂಮಿಯಲ್ಲೂ ಗಣಿಗಾರಿಕೆ ನಡೆಸಿ ಮೃತರ ಅಂತ್ಯ ಸಂಸ್ಕಾರ ನಡೆಸದಂತಾಗಿದೆ, ಅಲ್ಲಿನ ಪರಿಶಿಷ್ಟರು ಮೃತಪಟ್ಟರೆ ನದಿ ದಡ, ರಸ್ತೆ ಅಕ್ಕಪಕ್ಕವೇ ಅಂತ್ಯ ಸಂಸ್ಕಾರ ಮಾಡುವ ದುಸ್ಥಿತಿ ಇದೆ ಎಂದರು.

3 ಅಡಿಯಷ್ಟು ಮಾತ್ರ ಜಮೀನುಗಳನ್ನು ಸಮತಟ್ಟ ಮಾಡಲು ಅನುಮತಿಯೊಂದಿಗೆ ಅವಕಾಶವಿದೆ, 3 ಅಡಿಗಿಂತ ಹೆಚ್ಚು ಮಣ್ಣನ್ನು ತೆಗೆದರೆ ಅಂತಹ ಪಟ್ಟಾ ಜಮೀನುಗಳನ್ನು ಸರ್ಕಾರ ತನ್ನ ಸುಪರ್ದಿಗೆ ಪಡೆಯಲು ಅವಕಾಶವಿದ್ದರೂ ತಾಲ್ಲೂಕು, ಜಿಲ್ಲಾಡಳಿತ, ಪರಿಸರ ಮತ್ತು ಕೃಷಿ ಇಲಾಖೆಗಳು ಕಣ್ಣು ಮುಚ್ಚಿ ಕುಳಿತಿವೆ. ಮಣ್ಣು ಗಣಿಗಾರಿಕೆ ಈಗ ಆರಂಭಿಸಲು ಪಟ್ಟಭದ್ರರು ಈಗಾಗಲೆ ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳನ್ನು ಸಂಪರ್ಕಿಸಿ ವ್ಯಾಪಾರ ಕುದುರಿಸುತ್ತಿದ್ದಾರೆ. ಈ ಹಿಂದಿನ ಹತ್ತಾರು ವರ್ಷಗಳ ಕಾಲ ನಡೆಸಿರುವ ಅಕ್ರಮ ಮಣ್ಣುಗಣಿಗಾರಿಕೆಯಿಂದ ತಾಲ್ಲೂಕಿನ ಪರಿಸರ ನಲುಗಿರುವುದು ಸಾಕಾಗಿದೆ.

ಈ ವರ್ಷವೂ ಗಣಿಗಾರಿಕೆಗೆ ಅವಕಾಶ ನೀಡಿದರೆ ತಾಲ್ಲೂಕಿನ ಭೌಗೋಳಿಕ ರಚನೆ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಒಂದು ಜಮೀನಿನ ರೈತತನ್ನಜಮೀನಿನ ಮಣ್ಣನ್ನು ಮಾರಿಕೊಂಡು 20 ಅಡಿ ಗುಂಡಿ ಸೃಷ್ಟಿಸಿದರೆ ಪಕ್ಕದ ಜಮೀನಿನ ಬಡ ರೈತನಿಗೆ ಕೃಷಿ ಕಾಯಕ ನಡೆಸಲು ಹೇಗೆ ಸಾಧ್ಯವಾಗುತ್ತದೆ.ಇದು ತಾಲ್ಲೂಕಿನ ನದಿ ದಡದ ಜೈವಿಕ, ಭೌಗೋಳಿಕ ಸ್ಥಿತಿಗಳನ್ನು ಏರುಪೇರು ಮಾಡುವ ಅಪಾಯವಿದೆ.

ಈವರೆಗೆ ನಡೆದಿರುವ ಅಕ್ರಮಗಣಿಗಾರಿಕೆ ಗಮನಿಸಿದರೆ ಹರಿಹರವು ರಿಪಬ್ಲಿಕ್‍ಆಫ್‍ಬಳ್ಳಾರಿ ಯಂತೆ ತಪ್ಪು ಹೆಜ್ಜೆಯತ್ತ ಸಾಗುತ್ತಿದೆಯೆ ಎಂಬ ದಟ್ಟ ಅನುಮಾನ ಮೂಡುತ್ತಿದೆ. ಕೂಡಲೆರಾಜ್ಯ ಸರ್ಕಾರವು ತಾಲ್ಲೂಕಿನ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸಲು ದ್ರೋಣ್ ಯಂತ್ರದ ಸಹಾಯ ಪಡೆಯಬೇಕು, ಇದಕ್ಕೆ ಸಹಕಾರ ನೀಡಿದ ಆರೋಪ ಇರುವ ಕಂದಾಯ, ಪರಿಸರ, ಪೆÇಲೀಸ್, ಕೃಷಿ ಇಲಾಖೆಗಳ ಹಿಂದಿನ, ಈಗಿನ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಅವರು ಆಗ್ರಹಿಸಿದರು.

ಸಾಕಮ್ಮ, ಬಸವರಾಜಪ್ಪ, ಸಂಜೀವ್, ಸುನೀತಾ, ಶೈಲು, ಅಣ್ಣಪ್ಪ, ರೇಣುಕಮ್ಮ, ಬಸವರಾಜ್, ಹರೀಶ್, ಶಿವಣ್ಣ, ಹನುಮಮತಪ್ಪ, ಹಾಲಮ್ಮ, ಮುಬೀನಾ, ವೀರೇಶ್, ಸಂತೋಷ, ಪರಮೇಶ್, ನಾಗಪ್ಪ, ನಾಗರಾಜ್, ಮಂಜು, ನೀಲಪ್ಪ, ಹಾಲಮ್ಮ, ಲಕ್ಷ್ಮಣ ರೆಡ್ಡಿ ಇದ್ದರು.

Read also : kannada short story: ಸಿಂಧು

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article kannada short story: ಸಿಂಧು
Next Article Davanagere vv ರಕ್ತದಾನದಿಂದ ಜೀವರಕ್ಷಣೆ : ಪ್ರೊ.ಕುಂಬಾರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಉಗ್ರರ ದಾಳಿ ಖಂಡಿಸಿ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ

ಹರಿಹರ (Harihara) : ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಂನಲ್ಲಿ ಉಗ್ರರ ದಾಳಿ ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಹರಿಹರ ತಾಲ್ಲೂಕು…

By Dinamaana Kannada News

Davanagere | ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ದಾವಣಗೆರೆ (Davanagere): ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸಿರುವ ದಾಳಿಯನ್ನು ಖಂಡಿಸಿ ದಾವಣಗೆರೆಯಲ್ಲಿ ಸಿಪಿಐ, ಸಿಪಿಐ(ಎಂ), ಎಸ್.ಯು.ಸಿ. ಐ, ಕರ್ನಾಟಕ…

By Dinamaana Kannada News

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ಪ್ರಸಕ್ತ ಸಾಲಿನಲ್ಲಿ 02 ವರ್ಷಗಳ ಐ.ಟಿ.ಐ, ದ್ವಿತೀಯ ಪಿಯುಸಿ(ವಿಜ್ಞಾನ), ದ್ವಿತಿಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?