Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ರಕ್ತದಾನದಿಂದ ಜೀವರಕ್ಷಣೆ : ಪ್ರೊ.ಕುಂಬಾರ
ತಾಜಾ ಸುದ್ದಿ

ರಕ್ತದಾನದಿಂದ ಜೀವರಕ್ಷಣೆ : ಪ್ರೊ.ಕುಂಬಾರ

Dinamaana Kannada News
Last updated: December 4, 2024 1:22 pm
Dinamaana Kannada News
Share
Davanagere vv
Davanagere vv
SHARE

ದಾವಣಗೆರೆ (Davanagere): ರಕ್ತದಾನ ಶ್ರೇಷ್ಠವಾದದ್ದು, ಆರೋಗ್ಯವಂತ ವಿದ್ಯಾರ್ಥಿಗಳು ಕನಿಷ್ಠ ವರ್ಷಕ್ಕೆ ಎರಡು ಬಾರಿ ರಕ್ತದಾನ ಮಾಡುವುದು ಉತ್ತಮ, ಇದರಿಂದ ರಕ್ತದ ಅನಿವಾರ್ಯತೆ ಇರುವವರ ಪ್ರಾಣ ರಕ್ಷಣೆಗೆ ಸಹಕಾರಿಯಾಗಲಿದೆ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ್ ಸಲಹೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಬುಧವಾರ ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ಘಟಕ, ವಿದ್ಯಾನಗರ ರೋಟರಿ ಕ್ಲಬ್, ಹೆಚ್‍ಡಿಎಫ್‍ಸಿ ಬ್ಯಾಂಕ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಗಟೇರಿ ಆಸ್ಪತ್ರೆ ರಕ್ತ ಭಂಡಾರದ ಸಹಯೋಗದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ರಕ್ತವನ್ನು ಬಡವರು, ಗರ್ಭಿಣಿಯರು ಹಾಗೂ ತುರ್ತು ಪರಿಸ್ಥಿತಿಯಲ್ಲಿರುವವರಿಗೆ ಬಳಕೆಯಾಗಬೇಕು. ರಕ್ತದಾನದ ಕುರಿತು ವಿದ್ಯಾರ್ಥಿಗಳಲ್ಲಿ ಅಡಗಿರುವ ಭಯವನ್ನು ದೂರ ಮಾಡಿ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ, ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ, ಜನಪರ ಕಾಳಜಿ, ಮತ್ತು ಆರೋಗ್ಯದ ಬಗ್ಗೆ ಪ್ರಾಯೋಗಿಕವಾಗಿ ತಿಳಿವಳಿಕೆ ನೀಡುವುದು ರಕ್ತದಾನದ ಆಶಯವಾಗಿದೆ ಎಂದು ಹೇಳಿದರು.

ರಕ್ತದಾನದ ಹೆಸರಿನಲ್ಲಿ ಕೆಲವು ಖಾಸಗಿ ಸಂಸ್ಥೆಗಳು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ರಕ್ತವನ್ನು ಮಾರಾಟ ಮಾಡುತ್ತಿದ್ದ ಆರೋಪಗಳು ಕೇಳಿ ಬಂದಿದ್ದವು ಆದ್ದರಿಂದ ಅಂತಹ ಸಂಸ್ಥೆಗಳಿಗೆ ಅವಕಾಶ ನೀಡದೆ ಆರೋಗ್ಯ ಇಲಾಖೆ, ರೋಟರಿಯಂತಹ ಸಂಸ್ಥೆಗಳ ಸಹಯೋಗದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಗುತ್ತಿದೆ, ಇಲ್ಲಿ ಸಂಗ್ರಹಿಸಿದ ರಕ್ತವನ್ನು ಬಡವರು, ದುರ್ಬಲರಿಗೆ ಚಿಗಟೇರಿ ಆಸ್ಪತ್ರೆಯ ಮೂಲಕ ವಿತರಿಸುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಚಿಗಟೇರಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಅಧಿಕಾರಿ ಡಾ.ಗೀತಾ.ಡಿ.ಹೆಚ್ ಮಾತನಾಡಿ, ಪುರುಷರು ಮೂರು ತಿಂಗಳಿಗೊಮ್ಮೆ, ಮಹಿಳೆಯರು ನಾಲ್ಕು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಮೂವರ ಪ್ರಾಣ ರಕ್ಷಣೆ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.

ರಕ್ತದಾನ ಮಾಡುವವರಿಗೆ ದೇಹದಲ್ಲಿ ಹಳೆ ರಕ್ತ ಹೋಗಿ ಹೊಸ ರಕ್ತ ಉತ್ಪತ್ತಿಯಾಗುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ, ರಕ್ತದೊತ್ತಡ ಹಾಗೂ ಪಾಶ್ರ್ವವಾಯುವಿನಂತಹ ಕಾಯಿಲೆಗಳಿಂದ ಮುಕ್ತರಾಗಬಹುದು ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ.ಎಸ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಿ.ಡಿ.ರಾಘವನ್, ರೋಟರಿ ಕ್ಲಬ್‍ನ ಅಧ್ಯಕ್ಷ ಎಸ್.ಎನ್.ಮಳವಳ್ಳಿ ಮಾತನಾಡಿದರು.

ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಡಾ.ಅಶೋಕ್‍ಕುಮಾರ್ ವೀ ಪಾಳೇದ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು, ಎನ್‍ಎಸ್‍ಎಸ್ ಕಾರ್ಯಕ್ರಮಾಧಿಕಾರಿ ಡಾ.ಸಿದ್ದಪ್ಪ ಕಕ್ಕಳಮೇಲಿ ಕಾರ್ಯಕ್ರಮ ನಿರೂಪಿಸಿದರು, ಹೆಚ್‍ಡಿಎಫ್‍ಸಿ ಬ್ಯಾಂಕ್ ಅಧಿಕಾರಿ ಪ್ರಕಾಶ್ ಗುಡಿಯಾರ ವಂದಿಸಿದರು.

Read also : Harihara | ಅಕ್ರಮ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಡಿಎಸ್‍ಎಸ್ ಮನವಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihara Harihara | ಅಕ್ರಮ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಡಿಎಸ್‍ಎಸ್ ಮನವಿ
Next Article Davanagere ಇನ್ಫೋಸಿಸ್ ಕ್ಯಾಂಪಸ್‍ನಲ್ಲಿ ಇಂದಿನಿಂದ ಚರ್ಚೆ : ಐಡಾ ಲವ್ಲೇಸ್ ಸಾಫ್ಟ್‍ವೇರ್ ಕಂಪನಿಗೆ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihar News | ಮಾನವ ಬಂಧುತ್ವ ವೇದಿಕೆಯಿಂದ ಸಾಮಾಜಿಕ ಬದಲಾವಣೆ : ಪತ್ರಕರ್ತ ಬಿ.ಎನ್.ಮಲ್ಲೇಶ್

ಹರಿಹರ (Davanagere) : ಸಚಿವ ಸತೀಶ್ ಜಾರಕಿಹೊಳಿ ರವರು ಮಾನವ ಬಂಧುತ್ವ ವೇದಿಕೆಯ ಚಟುವಟಿಕೆಗಳ ಮೂಲಕ ನಾಡಿನಲ್ಲಿ ಸಾಮಾಜಿಕ ಬದಲಾವಣೆ…

By Dinamaana Kannada News

ಸೈಬರ್ ಅಪರಾಧ ತಡೆಗೆ ತಾಂತ್ರಿಕ ತರಬೇತಿ ಕಡ್ಡಾಯ : ಗೃಹ ಸಚಿವ ಡಾ: ಜಿ.ಪರಮೇಶ್ವರ್

ದಾವಣಗೆರೆ  :  ಮನೆ-ಮನೆಗೆ ಪೊಲೀಸ್ ಪೊಲೀಸ್ ಅತ್ಯಂತ ಸರಳವಾಗಿ ಮನೆಗಳಿಗೆ ತಲುಪಿ ಜನಸ್ನೇಹಿಯಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ರೂಪಿಸಿದ ಯೋಜನೆ…

By Dinamaana Kannada News

ಅಪಘಾತ ಮೂವರ ಸಾವು

ದಾವಣಗೆರೆ : ನ್ಯಾಮತಿ ತಾಲೂಕಿನ ಚಿನ್ನಕಟ್ಟೆ -ಶಿವಪುರ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಓಮಿನಿ‌ ವ್ಯಾನ್ ಗೆ ksrtc ಬಸ್ ಡಿಕ್ಕಿ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?