Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಿಸಿಯೂಟ ತಯಾರಕರ ಗೌರವಧನದಲ್ಲಿ ಕೇಂದ್ರದ ಪಾಲು ಹೆಚ್ಚಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹ
ತಾಜಾ ಸುದ್ದಿ

ಬಿಸಿಯೂಟ ತಯಾರಕರ ಗೌರವಧನದಲ್ಲಿ ಕೇಂದ್ರದ ಪಾಲು ಹೆಚ್ಚಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

Dinamaana Kannada News
Last updated: December 16, 2024 4:19 pm
Dinamaana Kannada News
Share
MP Dr. Prabha Mallikarjun
MP Dr. Prabha Mallikarjun
SHARE
ನವದೆಹಲಿ (Davanagere):  ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಪಿ.ಎಂ ಪೋಶನ್ ಯೋಜನೆ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ ಪಾಲಿನಲ್ಲಿ  ಅಡುಗೆ ತಯಾರಕರ ಗೌರವಧನದ  ವ್ಯತ್ಯಾಸವನ್ನು ಮನಗಂಡು ಶೀಘ್ರವೇ ಕರ್ನಾಟಕ ರಾಜ್ಯ ಸರ್ಕಾರದ ಮಾದರಿಯಲ್ಲಿ ಸರಿದೂಗಿಸುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸದನಕ್ಕೆ ಆಗ್ರಹಿಸಿದರು.
ದೇಶಾದ್ಯಂತ 1.27 ಮಿಲಿಯನ್ ಶಾಲೆಗಳಲ್ಲಿ 120 ಮಿಲಿಯನ್ ಮಕ್ಕಳಿಗೆ, ಮಕ್ಕಳ ದಾಖಲಾತಿ ಹಾಗೂ ಅವರಲ್ಲಿನ ಪೌಷ್ಠಿಕತೆಯನ್ನು ಹೆಚ್ಚಿಸಲು ಸರ್ಕಾರಿ ಶಾಲೆಗಳು, ಅಂಗನವಾಡಿ ಹಾಗೂ ಮದರಸಗಳಲ್ಲಿ ಉಚಿತ ಆಹಾರ ನೀಡಲಾಗುತ್ತಿದೆ. ಈ ಯೋಜನೆಯು ವಿಶ್ವದಾದ್ಯಂತ ಅತ್ಯಂತ ಪ್ರಮುಖ ಹಾಗೂ ವಿಶೇಷವಾಗಿದೆ.
ಬಿಸಿಯೂಟ ತಯಾರಕರಿಗೆ  ಗೌರವಧನದಲ್ಲಿ ಕೇಂದ್ರದ ಪಾಲು 60% ಮತ್ತು ರಾಜ್ಯದ ಪಾಲು 40% ಗೌರವಧನವನ್ನು ಬಿಸಿಯೂಟ ತಯಾರಕರಿಗೆ ನೀಡಲಾಗುತ್ತಿದ್ದು, ಮುಖ್ಯ ಅಡುಗೆ ತಯಾರಕರಿಗೆ  ರೂ.3700 ಹಾಗೂ ಸಹಾಯಕರಿಗೆ ರೂ.3600  ಪಾವತಿಸಲಾಗುತ್ತಿದೆ. ಈ ಪೈಕಿ ರಾಜ್ಯ ಸರ್ಕಾರವು ರೂ.3000 ಭರಿಸುತ್ತಿದ್ದು, ಕೇಂದ್ರ  ಸರ್ಕಾರವು ಕೇವಲ ರೂ.600 ಭರಿಸುತ್ತಿದೆ.  ರಾಜ್ಯ ಸರ್ಕಾರವು ಯೋಜನೆಯ ಪ್ರಾರಂಭದಿಂದಲೂ ಗೌರವಧನ್ನು ರೂ 400 ರಿಂದ ಹೆಚ್ಚಿಸುತ್ತಾ ಬಂದಿದ್ದು, ಪ್ರಸ್ತುತ ಪ್ರತಿ ತಿಂಗಳು ರೂ.3000 ಮುಟ್ಟಿರುತ್ತದೆ. ಆದರೆ ಕೇಂದ್ರದ ಪಾಲು ಕೇವಲ ರೂ. 600ರಲ್ಲಿಯೇ ಸ್ಥಗಿತವಾಗಿದ್ದು, ಯಾವುದೇ ರೀತಿಯ ಗೌರವಧನದಲ್ಲಿ ಹೆಚ್ಚಳವನ್ನು ಮಾಡಿರುವುದಿಲ್ಲ.
ಯೋಜನೆಯ ಪ್ರಾರಂಭದಿಂದಲು ಅಡುಗೆ ತಯಾರಕರನ್ನು  ಕೇವಲ ಸ್ವಯಂ ಸೇವಕರೆಂದು ಪರಿಗಣಿಸಲಾಗಿದೇಯೇ ಹೊರತು ಪಿಂಚಣಿ ಮತ್ತು ಭವಿಷ್ಯ ನಿಧಿ ಸೌಲಭ್ಯಗಳನ್ನು ಪಡೆಯುವ ಉದ್ಯೋಗಿಗಳೆಂದು ಪರಿಗಣಿಸಿಲ್ಲ‌.  ಇದರಿಂದ ಬಡತನ  ರೇಖೆಗಿಂತ ಕೆಳಗಿನ ಕುಟುಂಬಗಳಾಗಿರುವ ಈ ವರ್ಗಕ್ಕೆ  ಜೀವನ ನಿರ್ವಹಣೆ ಕಷ್ಟಕರವಾಗಿದೆ.
ರೂ. 3700 ರೂಪಾಯಿ ಗೌರವಧನದಿಂದ ಅಗತ್ಯ ಸೇವೆಗಳನ್ನು ಪೂರೈಸಿಕೊಳ್ಳಲು ಬಿಸಿಯೂಟ ತಯಾರಕರಿಗೆ ಆಗುತ್ತಿಲ್ಲ. ಇದನ್ನು ಮನಗಂಡು ಕೇಂದ್ರ ಸರ್ಕಾರದ ಪಾಲಾದ 60% ಗೌರವಧನವನ್ನು ರಾಜ್ಯ ಸರ್ಕಾರಗಳ ಅನುಗುಣವಾಗಿ ಅತೀ ಶೀಘ್ರವೇ ಹೆಚ್ಚಿಸಿ ಸರಿದೂಗಿಸಲು ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಒತ್ತಾಯಿಸಿದರು.
Read also : ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ
Next Article Kanaka Employees Union ಪಾಲಿಕೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರಿಗೆ ಕನಕ ನೌಕರರ ಬಳಗದಿಂದ ಸನ್ಮಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮೌಲ್ಯಯುತ ಶಿಕ್ಷಣದ ಅನಿವಾರ್ಯತೆಯಿದೆ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ:  ಭಾರತವನ್ನು 21 ನೇ ಶತಮಾನದಲ್ಲಿ ಮುನ್ನಡೆಸಲು ಯುವಕರು ಶಕ್ತಿ ಕೇಂದ್ರವಾಗಿದ್ದು, ಉನ್ನತ ಶಿಕ್ಷಣದ ಮೂಲಕ ಸಮರ್ಥ ಜೀವನ ರೂಪಿಸಿಕೊಳ್ಳಬೇಕು…

By Dinamaana Kannada News

Harihara | ಹರಿಹರದ ಬ್ರದರ್ಸ್ ಜಿಮ್‍ಗೆ : 8 ಪದಕ

ಹರಿಹರ (harihara ): ಮೈಸೂರಿನಲ್ಲಿ ಈಚೆಗೆ ಮೈಸೂರು ದಸರಾ ಮಹೋತ್ಸವದ ಪಂಜ ಕುಸ್ತಿ (ಆರ್ಮ್ ರಸ್ಲಿಂಗ್) ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಹರಿಹರದ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 56 :  ಪ್ರಯೋಗವಸ್ತು

Kannada News | Sanduru Stories | Dinamaana.com | 16-06-2024 ಲಾರಿ ಡೈವರಿಗೆ ದಿನಕ್ಕೆ ಐದು ಸಾವಿರ ದುಡಿಮೆ…

By Dinamaana Kannada News

You Might Also Like

Applications invited
ತಾಜಾ ಸುದ್ದಿ

ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ

By Dinamaana Kannada News
10 Permanent Driver Posts: Applications invited from ex-servicemen
ತಾಜಾ ಸುದ್ದಿ

ದಾವಣಗೆರೆ |10 ಖಾಯಂ ಚಾಲಕ ಹುದ್ದೆ : ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

By Dinamaana Kannada News
Vinaykumara G B
ತಾಜಾ ಸುದ್ದಿ

ದೇಗುಲ ಕಟ್ಟುವ ಒಗ್ಗಟ್ಟಿನಂತೆ ಸುಸಜ್ಜಿತ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಅಗತ್ಯ: ಜಿ. ಬಿ. ವಿನಯ್ ಕುಮಾರ್

By Dinamaana Kannada News
MP Dr. Prabha Mallikarjun
ತಾಜಾ ಸುದ್ದಿ

ಇಎಸ್‌ಐ ಅರ್ಹತಾ ಮಿತಿಯನ್ನು ಪರಿಷ್ಕರಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?