Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಕ್ಕಳ ದೌರ್ಜನ್ಯದ ವಿರುದ್ಧ ಮಾಧ್ಯಮಗಳು ಧ್ವನಿಯಾಗಬೇಕು : ಪ್ರೊ.ಕುಂಬಾರ ಅಭಿಮತ
ತಾಜಾ ಸುದ್ದಿ

ಮಕ್ಕಳ ದೌರ್ಜನ್ಯದ ವಿರುದ್ಧ ಮಾಧ್ಯಮಗಳು ಧ್ವನಿಯಾಗಬೇಕು : ಪ್ರೊ.ಕುಂಬಾರ ಅಭಿಮತ

Dinamaana Kannada News
Last updated: December 17, 2024 1:09 pm
Dinamaana Kannada News
Share
Davanagere vvv
Davanagere vvv
SHARE

ದಾವಣಗೆರೆ (Davanagere):  ಮಕ್ಕಳು ತಮ್ಮ ಹಕ್ಕುಗಳ ರಕ್ಷಣೆಗಾಗಿ ಹೋರಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ, ಮಕ್ಕಳ ಹಕ್ಕುಗಳನ್ನು ಕಾಪಾಡಲು ಮಾಧ್ಯಮಗಳು ಜೊತೆಗೂಡಬೇಕು, ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ.ಕುಂಬಾರ ತಿಳಿಸಿದರು.

ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ಯುನಿಸೆಫ್ ಹಾಗೂ ಮೈಸೂರು ವಿಶ್ವವಿದ್ಯಾನಿಲಯ ಮತ್ತು ದಾವಣಗೆರೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಪರ್ತಕರ್ತರಿಗಾಗಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳು, ಆರೋಗ್ಯ ಹಾಗೂ ರಕ್ಷಣೆ ಕುರಿತಾದ ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಈಗಿನ ದಿನಮಾನಗಳಲ್ಲಿ ಮಕ್ಕಳು ಹಲವಾರು ಸಮಸ್ಯೆ, ಶೋಷಣೆ, ಅಪೌಷ್ಠಿಕತೆಗಳನ್ನು ಎದುರಿಸುತ್ತಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಆರೋಗ್ಯ ವಿಚಾರಕ್ಕೆ ಒತ್ತು ನೀಡಬೇಕಾದ ಅನಿವಾರ್ಯ ನಿರ್ಮಾಣವಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆ ಕೇವಲ ಯುನಿಸೆಫ್ ಜವಾಬ್ದಾರಿ ಅಲ್ಲ, ಅದು ಪ್ರತಿಯೊಬ್ಬ ನಾಗರೀಕರ ಜಬಾವ್ದಾರಿ ಆಗಿದೆ, ಮಕ್ಕಳ ಮೇಲೆ ಮಾನಸಿಕ ಹಾಗೂ ದೈಹಿಕ ದೌರ್ಜನ್ಯ ಪ್ರಕರಣ ಹೆಚ್ಚುತ್ತಿವೆ. ಇಂದೆಲ್ಲಾ ಮಕ್ಕಳಿಗಾಗಿ ಪತ್ರಿಕೆಗಳಲ್ಲಿ ವಿಶೇಷ ಪುಟಗಳು ಬರುತ್ತಿದ್ದವು, ಆದರೆ ಈಗ ಮಕ್ಕಳ ಮೇಲಾಗುವ ದೌರ್ಜನ್ಯಗಳ ಸುದ್ದಿಗಳೇ ಹೆಚ್ಚಾಗಿವೆ ಎಂದು ವಿಷಾದ ವ್ಯಕ್ತಪಡಿಸಿದರು.

ಲಿಂಗ ಸಮಾನತೆ ಕಾಯ್ದುಕೊಳ್ಳಲು ಜಾಗತೀಕ ಮಟ್ಟದಲ್ಲಿ ಪ್ರಯತ್ನಗಳು ನಡೆದಿದೆ. ಆದರೆ ನಮ್ಮ ದೇಶದಲ್ಲಿ ಗಂಡು ಸಂತಾನದ ವ್ಯಾಮೋಹದಿಂದ ಮತ್ತು ಹೆಣ್ಣು ಮಗು ಕುಟುಂಬಕ್ಕೆ ಭೂಷಣವಲ್ಲ ಎಂಬ ಮೂಡನಂಬಿಕೆಯಿಂದ ಹೆಣ್ಣು ಭ್ರೂಣ ಹತ್ಯೆಗಳು ಹೆಚ್ಚಾಗಿ ನಡೆಯುತ್ತಿವೆ, ಇದರಿಂದಾಗಿ ಲಿಂಗ ಅಸಮಾನತೆ ಉಂಟಾಗಿದ್ದು ರೈತಾಪಿ ವರ್ಗದವರಿಗೆ ಹೆಣ್ಣು ಸಿಗದ ಪರಿಸ್ಥಿತಿ ಉದ್ಬವಿಸಿದೆ, ಭ್ರೂಣ ಹತ್ಯೆ, ಬಾಲ್ಯ ವಿವಾಹ, ಬಾಲಕಾರ್ಮಿಕ ಹಾಗೂ ಲಿಂಗ ತಾರತಮ್ಯಗಳ ತೊಲಗಿಸಲು ಜನರಿಗೆ ಅರಿವು ಮೂಡಿಸುವ ಕೆಲಸ ಮಾಧ್ಯಮಗಳಿಂದಾಗಬೇಕು ಎಂದು ಹೇಳಿದರು.

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಂವಹನ ವಿಭಾಗದ ಅಧ್ಯಕ್ಷೆ ಸ್ವಪ್ನಾನಾಯ್ಕ್ ಮಾತನಾಡಿ, ಕೊರೋನ ನಂತರದ ದಿನಗಳಲ್ಲಿ ಮಕ್ಕಳನ್ನು ನಿರ್ಲಕ್ಷ್ಯವಾಗಿ ಕಾಣಲಾಗುತ್ತಿದೆ ಎಂಬುದು ಯುನೆಸ್ಕೋ ವಾದವಾಗಿದೆ, ಮಕ್ಕಳೊಂದಿಗೆ ಒಡನಾಟ ಕಡಿಮೆಯಾಗುವುದರಿಂದ ಅವರಿಗೆ ಮಾನಸಿಕ ಕಿನ್ನತೆಗಳು ಆರಂಭವಾಗುತ್ತದೆ. ಈ ಕುರಿತಾಗಿ ಮಕ್ಕಳ ಮಾನಸಿಕ ಆರೋಗ್ಯದ ಅಧ್ಯಯನ ನಡೆಯಬೇಕಿದೆ. ಜೊತೆಗೆ ಮಕ್ಕಳು ಡಿಜಿಟಲ್ ಮಾಧ್ಯಮಗಳನ್ನು ಹೆಚ್ಚಾಗಿ ಅವಲಂಭಿಸುತ್ತಿದ್ದು ಈ ವಿಚಾರದ ಬಗ್ಗೆಯೂ ಚರ್ಚೆ ಆಗಬೇಕಿದೆ, ಮಕ್ಕಳ ವಿಚಾರದಲ್ಲಿ ಪತ್ರಿಕೆಗಳಲ್ಲಿ ಸಂಪಾದಕೀಯ ಕೂಡ ಬರುತ್ತವೆ ಆದರೆ ಮಕ್ಕಳ ರಕ್ಷಣೆ ಮತ್ತು ಹಕ್ಕುಗಳ ಕುರಿತಾಗಿ ವರದಿ ಮಾಡುವವರು ಅದರ ಬಗೆಗೆ ಹೆಚ್ಚಿನ ತಿಳುವಳಿಕೆ ಹೊಂದುವುದು ಸೂಕ್ತ ಎಂದು ಹೇಳಿದರು.

ಯುನಿಸೆಫ್ ಹೈದರಾಬಾದ್‍ನ ಪ್ರೊಸುನ್‍ಸೇನ್ ಮಾತನಾಡಿ, ಈಗಿನ ಮಕ್ಕಳು ಅತಿಹೆಚ್ಚು ಒತ್ತಡವನ್ನು ಹೊಂದುವ ಮೂಲಕ ಅವರ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ಪೋಷಕರು ತಮ್ಮ ಮಕ್ಕಳ ಆರೋಗ್ಯದ ಕಡೆ ಗಮನಹರಿಸಬೇಕಿದೆ, ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳು ಸಹ ಅನೇಕ ರೋಗಗಳಿಗೆ ಬಲಿಯಾಗುತ್ತಿದ್ದಾರೆ ಎಂದರು.

ದಾವಣಗೆರೆಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಂವಹನ ವಿಭಾಗದ ಅಧ್ಯಕ್ಷರಾದ ಪ್ರೊ.ಶಿವಕುಮಾರಕಣಸೋಗಿ ಮಾತನಾಡಿದರು. ಮಂಜುನಾಥಸುಬೇದಾರ್ ಕಾರ್ಯಕ್ರಮ ನಿರೂಪಿಸಿದರು.

Read also : ಪಾಲಿಕೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರಿಗೆ ಕನಕ ನೌಕರರ ಬಳಗದಿಂದ ಸನ್ಮಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Kanaka Employees Union ಪಾಲಿಕೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದವರಿಗೆ ಕನಕ ನೌಕರರ ಬಳಗದಿಂದ ಸನ್ಮಾನ
Next Article Davanagere crime news | ಮನೆ ಕಳ್ಳತನ ಪ್ರಕರಣ ಆರೋಪಿತರ ಸೆರೆ : 16 ಲಕ್ಷ ರೂ. ಮೌಲ್ಯದ ಸ್ವತ್ತು ವಶಕ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸೌಲಭ್ಯ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ

ದಾವಣಗೆರೆ,ಏಪ್ರಿಲ್.01  ಲೋಕಸಭಾ ಚುನಾವಣೆ ನಡೆಯುತ್ತಿದ್ದು ಹಿರಿಯ ನಾಗರಿಕರು, ವಿಶೇಷಚೇತನರು ಹಾಗೂ ಅಗತ್ಯ ಸೇವಾ ಇಲಾಖೆಯಲ್ಲಿ ಕೆಲಸ ಮಾಡುವವರು ಮತದಾನದಿಂದ ದೂರ…

By Dinamaana Kannada News

ಅಬಕಾರಿ ಇಲಾಖಾ ಅಧಿಕಾರಿಗಳ ಅಮಾನತು ಆದೇಶಕ್ಕೆ ತಡೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೆಎಟಿ  

ದಾವಣಗೆರೆ :      ಬಾರ್‌ಗೆ ಪರವಾನಿಗೆ ನೀಡಲು ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದು ಸಸ್ಪೆಂಡ್‌ ಆಗದಂತೆ ಕೆಎಟಿ…

By Dinamaana Kannada News

Harihara | ಅಪೂರ್ಣವಾದ ಚರಂಡಿ ಶೀಘ್ರವಾಗಿ ನಿರ್ಮಿಸಲು : ಎಸ್ ಡಿ ಪಿ ಐ ಆಗ್ರಹ 

ಹರಿಹರ (Harihara):  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹರಿಹರ ವಿಧಾನಸಭಾ ಕ್ಷೇತ್ರ ಸಮಿತಿ ವ್ಯಾಪ್ತಿಯ ಕಾಳಿದಾಸ ನಗರ ಬ್ರಾಂಚ್…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?