Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆಯಲ್ಲಿ ಅಕ್ರಮ : ಡಿಸಿ ಕಚೇರಿ ಎದುರು ಪ್ರತಿಭಟನೆ
ತಾಜಾ ಸುದ್ದಿ

ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆಯಲ್ಲಿ ಅಕ್ರಮ : ಡಿಸಿ ಕಚೇರಿ ಎದುರು ಪ್ರತಿಭಟನೆ

Dinamaana Kannada News
Last updated: January 7, 2025 1:29 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಚನ್ನಗಿರಿ ತಾಲೂಕಿನ ನಲ್ಲೂರು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆಸಿದ  ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹಿಸಿ ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಪ್ರತಿಭಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಸಂಘಕ್ಕೆ ಚುನಾವಣೆಗೆ ಸಿದ್ಧಪಡಿಸಿರುವ ಮತದಾರರ ಪಟ್ಟಿಯನ್ನು ಅಧಿಕಾರಿಗಳು ತಿದ್ದಿದ್ದಾರೆ. ಆದ್ದರಿಂದ ಈ ಕೂಡಲೇ ಅಕ್ರಮ ಎಸಗಿದ ಅಧಿಕಾರಿಗಳನ್ನು ಅಮಾನತು ಮಾಡಿ ಚುನಾವಣೆ ರದ್ದು ಮಾಡುವಂತೆ ಆಗ್ರಹಿಸಿದರು.

ಚನ್ನಗಿರಿ ತಾಲೂಕಿನ ನಲ್ಲೂರು ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜ.12ರಂದು ಚುನಾವಣೆ ನಡೆಯಲಿದ್ದು, ಸಹಕಾರ ಸಂಘದ ಆಡಳಿತ ಮಂಡಳಿ, ಅಧಿಕಾರಿಗಳು ಸೇರಿ ಸಭೆಗೆ ಹಾಜರಾಗದಿ ರುವ ಸಾಕಷ್ಟು ಸದಸ್ಯರ ಸಹಿ ಅವರೇ ಮಾಡಿದ್ದಾರೆ. ಅμÉ್ಟೀ ಅಲ್ಲದೇ ಮೂರು ಸಭೆಗಳಿಗೆ ಹಾಜರಾಗದೇ ಇರುವ ಜಾಗದಲ್ಲಿ ವೈಟ್ನರ್ ಹಾಕಿ ತಿದ್ದಿದ್ದಾರೆಂದು ಆರೋಪಿಸಿದರು.

ಸೋಮವಾರ ಇದೇ ವಿಷಯವಾಗಿ ಎರಡು ಬಣಗಳ ನಡುವೆ ಸಹಕಾರ ಸಂಘದಲ್ಲಿ ವಾಗ್ವಾದ ನಡೆದಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದರು.

ಆದ್ದರಿಂದ ಅಕ್ರಮ ಮಾಡಿದ ನಾಲ್ಕು ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸೊಸೈಟಿ ಸೂಪರ್ ಸೀಡ್ ಮಾಡಿ, ಚುನಾವಣೆ ರದ್ದು ಮಾಡಬೇಕು ಜತೆಗೆ ಸೊಸೈಟಿಯಲ್ಲಿ ನಡೆದ ಅಕ್ರಮದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಧಾವಿಸಿ ಶಾಸಕ ಶಿವಗಂಗಾ ಬಸವರಾಜ್ ಮನವೊಲಿಸಲು ಪ್ರಯತ್ನಪಟ್ಟರು. ನಂತರ ಸದಸ್ಯ ಚುನಾವಣೆ ಮುಂದೂಡುವ ಭರವಸೆ ನೀಡಿದ ನಂತರ ಶಾಸಕ ಮತ್ತವರ ಬೆಂಬಲಿಗರು ಪ್ರತಿಭಟನೆಯಿಂದ ಹಿಂದೆ ಸರಿದರು.

ಒಂದು ವೇಳೆ ಅಕ್ರಮ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದರೇ ಅವರ ವಿರುದ್ಧ ಕ್ರಮ ಆಗುವವರೆಗೂ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ಶಾಸಕ ಬಸವರಾಜ್ ಶಿವಗಂಗಾ ನೀಡಿದರು.

Read also : ಕೊಂಡಜ್ಜಿ ಕೆರೆಯಲ್ಲಿ  ಜಲ ಸಾಹಸ ಕ್ರೀಡೆ : ಡಿಸಿ, ಸಿಇಓ ಭಾಗಿ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕೊಂಡಜ್ಜಿ ಕೆರೆಯಲ್ಲಿ  ಜಲ ಸಾಹಸ ಕ್ರೀಡೆ : ಡಿಸಿ, ಸಿಇಓ ಭಾಗಿ
Next Article mailara jatare ಮೈಲಾರ ಜಾತ್ರೆ : ಫೆ. 14 ರಂದು ಕಾರ್ಣಿಕೋತ್ಸವ, ಭಕ್ತಿ, ಭಕ್ತರ ಭಾವನೆಗಳಿಗೆ ಪ್ರಾಮುಖ್ಯತೆ : ಡಿಸಿ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಒಳಮೀಸಲಾತಿ ವಿಷಯ ಸದನದಲ್ಲಿ ಪ್ರಸ್ತಾಪಿಸಿ : ಡಿಎಸ್‍ಎಸ್ ಒತ್ತಾಯ

ದಾವಣಗೆರೆ (Davanagere): ಪ.ಜಾತಿಯಲ್ಲಿನ ಒಳ ಮೀಸಲಾತಿ ಸುಪ್ರೀಂ ಕೋರ್ಟ್ ಆದೇಶ ಮೇರೆಗೆ ಜಾರಿಗೊಳಿಸುವಂತೆ ಚಳಿಗಾಲದ ಅಧಿವೇಶನ ದಲ್ಲಿ ಪ್ರಸ್ತಾಪಿಸಬೇಕೆಂದು ಒತ್ತಾಯಿಸಿ…

By Dinamaana Kannada News

ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere) : ಮಕ್ಕಳಿಗೆ ನಿರಂತರ ಅಭ್ಯಾಸ ಮಾಡಿಸುವ ಮೂಲಕ. ಅವರ ಸಾಧನೆಗೆ ಶಕ್ತಿನೀಡಬೇಕು.ಮಕ್ಕಳಲ್ಲೂ ಅನೇಕ‌ ನೂನ್ಯತೆಗಳಿರುತ್ತವೆ ಅವುಗಳನ್ನು ಸರಿಯಾದ…

By Dinamaana Kannada News

ಯುಪಿಎಸ್ಸಿ ಪರೀಕ್ಷೆಯಲ್ಲಿ 101 ನೇ ರ್‍ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠಗೆ ಸನ್ಮಾನ

ದಾವಣಗೆರೆ ಏ.17 :   ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್ಸಿ ನಡೆಸುವ ಯುಪಿಎಸ್ಸಿ ಪರೀಕ್ಷೆಯಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?