ದಾವಣಗೆರೆ (Davanagere): ವಿದ್ಯಾರ್ಥಿಗಳು ಹಿಂಜರಿಕೆಯ ಮನೋಭಾವದಿಂದ ಹೊರಬಂದು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೊಸ ಹೊಸ ವಿಚಾರಗಳನ್ನು ಅರಿತುಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಪ್ರೊ.ಸುಚಿತ್ರಾ.ಎಸ್ ಹೇಳಿದರು.
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತದಿಂದ ಪ್ರಾಯೋಜಿತ ವಿಶ್ವವಿದ್ಯಾನಿಲಯ ಮಟ್ಟದ ಸಹಾಕಾರ ವಿಷಯದ ಕುರಿತು ಚರ್ಚಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ಪರ್ಧೆಗಳಲ್ಲಿ ಸೋಲು ಗೆಲುವು ಸಹಜ, ಮಕ್ಕಳು ಸಕ್ರಿಯವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಮಕ್ಕಳಲ್ಲಿ ಅಡಗಿರುವ ಜ್ಞಾನ ಭಂಡಾರ ವೃದ್ಧಿಸುತ್ತದೆ, ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ವಿದ್ವತ್ತನ್ನು ಹೊರ ಹಾಕಲು ಸ್ಪರ್ಧೆಗಳು ಉತ್ತಮ ವೇದಿಕೆ ಎಂದರು.
ಸಹಕಾರ ಮಂಡಳಿಯ ನಿರ್ದೇಶಕ ಶ್ರೀನಿವಾಸ್ಮೂರ್ತಿ ಮಾತನಾಡಿ, ಸಹಕಾರ ಕ್ಷೇತ್ರ ಎಂಬುದು ಕೊನೆಯೇ ಇಲ್ಲದ ವಿಷಯ, ಯಾವ ವಿಷಯವಾದರೂ ಸಹಕಾರ ಕ್ಷೇತ್ರದ ಅಡಿಯಲ್ಲಿ ಬರುತ್ತವೆ, ಸಹಕಾರ ಕ್ಷೇತ್ರವು ಅನೇಕ ಆಯಾಮಗಳಲ್ಲಿ ಬೆಳವಣಿಗೆಯಾಗುತ್ತಿದೆ ಎಂದು ಹೇಳಿದರು.
ಕೊಟ್ಟೂರಿನ ಇಂದು ಪದವಿ ಕಾಜೀಜಿನ ಪ್ರಾಧ್ಯಾಪಕ ಹಾಗೂ ಸಾಹಿತಿ ಪದ್ಮಣ್ಣ ಹಿರೇಗಿಡ್ಡಪ್ಪನವರ ವಿಶೇಷ ಉಪನ್ಯಾಸ ನೀಡಿದರು.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.
ಕುಲಸಚಿವ ಪ್ರೊ.ರಮೇಶ.ಸಿ.ಕೆ ಮತ್ತು ಡಾ.ಯು.ಎಸ್.ಮಹಾಬಲೇಶ್ವರ ಮಾತನಾಡಿದರು. ಡಾ.ಸಿದ್ಧಪ್ಪ.ಭೀ.ಕಕ್ಕಳಮೇಲಿ ಸ್ವಾಗತಿಸಿದರು. ಡಾ.ನಾಗಭೂಷಣ್ಗೌಡ ಕಾರ್ಯಕ್ರಮ ನಿರೂಪಿಸಿದರು. ಹಣಕಾಸು ಅಧಿಕಾರಿ ಡಿ.ಮುದ್ದನಗೌಡ್ರ, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ಸಿಇಒ ಹಾಲಪ್ಪ ಕೋಡಿಹಳ್ಳಿ ಉಪಸ್ಥಿತರಿದ್ದರು.
Read also : ಕಾಲೇಜಿನ ಭೂಮಿ ಪರರ ಪಾಲಾಗದಂತೆ ಕಾಪಾಡಿ : ನಾಗರಾಜ ಎಸ್.ಬಡದಾಳ್