Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಾಲೆಗಳ ಜೀರ್ಣೋದ್ಧಾರಕ್ಕೆ ದಾನಿಗಳು ಮುಂದೆ ಬನ್ನಿ : ಶಾಸಕ ಕೆ.ಎಸ್.ಬಸವಂತಪ್ಪ ಮನವಿ
ತಾಜಾ ಸುದ್ದಿ

ಶಾಲೆಗಳ ಜೀರ್ಣೋದ್ಧಾರಕ್ಕೆ ದಾನಿಗಳು ಮುಂದೆ ಬನ್ನಿ : ಶಾಸಕ ಕೆ.ಎಸ್.ಬಸವಂತಪ್ಪ ಮನವಿ

Dinamaana Kannada News
Last updated: January 12, 2025 12:29 pm
Dinamaana Kannada News
Share
Davangere
Davangere
SHARE

ದಾವಣಗೆರೆ (Davanagere): ಶಿಕ್ಷಣ ಪ್ರೇಮಿಗಳು ಕೊಡುಗೆ ನೀಡುವುದರಿಂದ ಶೈಕ್ಷಣಿಕವಾಗಿ ಗ್ರಾಮೀಣ ಪ್ರದೇಶದ ಮಕ್ಕಳು ಪ್ರಗತಿ ಸಾಧಿಸಲು ಸಹಾಯಕವಾಗುತ್ತದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ತಾಲೂಕಿನ ಕೋಲ್ಕುಂಟೆ ಗ್ರಾಮದಲ್ಲಿ ಭಾನುವಾರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಆಹ್ವಾನ ಫೌಂಡೇಶನ್ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಶಾಲೆಯ ನಾಲ್ಕು ಹೈಟೆಕ್ ಕೊಠಡಿ ಮತ್ತು ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೇವಲ ಸರ್ಕಾರ ಹಾಗೂ ಇಲಾಖೆಗಳ ಅನುದಾನದಿಂದ ಸಾಧ್ಯವಿಲ್ಲ, ಸಂಘ-ಸಂಸ್ಥೆಗಳು, ಎನ್‍ಜಿಒಗಳು ಹಾಗೂ ಸಹಕಾರದಿಂದ ಸಾಧ್ಯವಿದೆ. ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಸರ್ಕಾರಿ ಶಾಲೆಗಳು ಶಿಥಿಲಗೊಂಡು ದುಸ್ಥಿತಿಯಲ್ಲಿವೆ. ಮಳೆ ಬಂದರೆ ಸೋರುತ್ತವೆ. ಇಂತಹ ಕಟ್ಟಡಗಳನ್ನು ಪುನರ್ ನಿರ್ಮಾಣ ಮಾಡಲು ಸಂಘ-ಸಂಸ್ಥೆಗಳು, ಎನ್‍ಜಿಒಗಳು ಮತ್ತು ದಾನಿಗಳು ಮುಂದೆ ಬಂದು ಶಾಲಾ ಕೊಠಡಿಗಳನ್ನು ನಿರ್ಮಿಸಿದರೆ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧಿಸುವ ಜೊತೆಗೆ ಸರ್ಕಾರಕ್ಕೆ ಆರ್ಥಿಕ ಹೊರೆ ತಪ್ಪಲಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದ ಬಡ ಮಕ್ಕಳು ಶಿಕ್ಷಣ ಪಡೆಯುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಉದ್ದೇಶದಿಂದ ರಾಷ್ಟ್ರೀಯ ಆಹ್ವಾನ ಫೌಂಡೇಶನ್ ವತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಶಾಲಾ ಕೊಠಡಿ, ಶೌಚಾಲಯ ನಿರ್ಮಿಸಲಾಗುತ್ತಿದೆ. ಇಂತಹದೊಂದು ಸತ್ಕಾರ್ಯ ಮಾಡುವ ಮೂಲಕ ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಆಸರೆಯಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

10 ರೂ. ದಾನ ಮಾಡಿದರೆ, ದೇವಸ್ಥಾನ ಮುಂದೆ ದೊಡ್ಡ ಬೋರ್ಡ್ ಹಾಕಿಕೊಳ್ಳುತ್ತಾರೆ. ಅಂತಹ ದಾನ ಕೊಟ್ಟು ಪ್ರಚಾರ ತೆಗೆದುಕೊಳ್ಳುತ್ತಾರೆ. 1 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಶಾಲೆ ಕಟ್ಟಿಸುತ್ತಿರುವ ಬ್ರಜ ಕಿಶೋರ್ ಪ್ರಧಾನ್ ಅವರು ಎಲೆಮರೆ ಕಾಯಿಯಂತಿದ್ದಾರೆ. ಕ್ಷೇತ್ರದ ವ್ಯಾಪ್ತಿಯ ತ್ಯಾವಣಿಗಿ ಮೊರಾರ್ಜಿ ಶಾಲೆ ವಸತಿಯಲ್ಲಿ ಜಾಗದ ಸಮಸ್ಯೆ ಇದೆ. ಕೂಡಲೇ ಆ ಸಮಸ್ಯೆಗೆ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರಿಗೆ ಮನವಿ ಮಾಡಿದ್ದೇವು.

ಎರಡೇ ದಿನಗಳಲ್ಲಿ ಖಾತೆ ಮಾಡಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ ಮಾಡಿಸಿ ಸಮಸ್ಯೆ ಬಗೆಹರಿಸಿದ್ದರು. ಇಂತಹ ದಕ್ಷ ಜಿಲ್ಲಾಧಿಕಾರಿ ಇರುವುದು ನಮಗೆ ಹೆಮ್ಮೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮೀಣ ಜನರ ನಾಡಿ ಮಿಡಿತ ಅರಿತ ಮತ್ತು ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಸರಳ, ಸಜ್ಜನಿಕ ಯಾರಾದರೂ ಶಾಸಕರಿದ್ದರೆ, ಅದು ಶಾಸಕ ಕೆ.ಎಸ್.ಬಸವಂತಪ್ಪ ಅವರೇ. ನನಗೆ ಗೊತ್ತಿರಲಿಲ್ಲ, ಅವರ ಹೆಸರೇನು ಎಂದರೆ ‘ಆಂಬ್ಯುಲೆನ್ಸ್’ ಎಂದು ಕರೆಯುತ್ತಾರೆ. ಕಷ್ಟದಲ್ಲಿದ್ದಾಗ ಯಾರೂ ಫೋನ್ ತೆಗೆದುಕೊಳ್ಳುತ್ತಾರೋ, ಇಲ್ಲವೋ ಗೊತ್ತಿಲ್ಲ. ಆದರೆ ಯಾರಾದರೂ ಫೋನ್ ಮಾಡಿದರೆ ಕೂಡಲೇ ಫೋನ್ ತೆಗೆದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ, ಅದು ಬಸವಂತಪ್ಪ ಅವರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಎಲ್ಲಿ ಮಹಿಳೆಯರ ಸಬಲೀಕರಣ ಆಗುತ್ತದೆ, ಅಲ್ಲಿ ಸಮೃದ್ಧಿಯ ನೆಲೆಬೀಡಾಗುತ್ತದೆ. ಮಕ್ಕಳಲ್ಲಿ ನಾವು ದೇವರನ್ನು ಕಾಣುತ್ತೇವೆ. ಹೀಗಾಗಿ ಈ ಮಕ್ಕಳಿಗಾಗಿ ಆಹ್ವಾನ ಫೌಂಡೇಶನ್ ವತಿಯಿಂದ ನಾವು ಇಲ್ಲಿ ದೇವಸ್ಥಾನ ಕಟ್ಟುತ್ತಿದ್ದೇವೆ. ಗ್ರಾಮಸ್ಥರ್ಯಾರು ಅಡ್ಡಿಪಡಿಸಬಾರದು. ಒಳ್ಳೆಯ ಕೆಲಸ ಮಾಡುವವರಿಗೆ ಬೆನ್ನು ತಟ್ಟಬೇಕು. ಆಗ ಗ್ರಾಮ ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಕೊಟ್ರೇಶ್, ಕೋಲ್ಕುಂಟೆ ಗ್ರಾಮಾಭ್ಯುದಯ ಸಂಘದ ಗೌರವಾಧ್ಯಕ್ಷ ಸುಚೇಂದ್ರ ಪ್ರಸಾದ್, ಆಹ್ವಾನ ಫೌಂಡೇಶನ್‍ನ ಬ್ರಜ ಕಿಶೋರ್ ಪ್ರಧಾನ್, ಪತ್ನಿ ಮಾನಸಿ, ಶಾಲೆಯ ಮುಖ್ಯ ಶಿಕ್ಷಕ ಚಂದ್ರಪ್ಪ, ಓಂಕಾರಪ್ಪ, ಚಂದ್ರಪ್ಪ, ಪಿಡಿಒ ಇಸ್ರತ್, ಅಶೋಕ್, ಲೋಕೇಶ್, ಎಸ್‍ಡಿಎಂಸಿ ಸದಸ್ಯರು, ಮಕ್ಕಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Read also : ಇಂದಿನ ಒತ್ತಡದ ಬದುಕಿಗೆ ನಿತ್ಯ ಯೋಗಾಭ್ಯಾಸ ಸಹಕಾರಿ : ಪ್ರಸನ್ನಕುಮಾರ್ 

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Adarsh __Yoga Foundation (R) Davangere ಇಂದಿನ ಒತ್ತಡದ ಬದುಕಿಗೆ ನಿತ್ಯ ಯೋಗಾಭ್ಯಾಸ ಸಹಕಾರಿ : ಪ್ರಸನ್ನಕುಮಾರ್ 
Next Article political about dk shivakumar ಸೋನಿಯಾ ಹೆಗಲಿಗೆ ಡಿ.ಕೆ. ಶಿವಕುಮಾರ್ ಗಂಟು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಭರತ್ಯನಾಟ್ಯ ಕಲಾವಿದೆ ಕು.ಮಂದಿರಾಗೆ ರಾಜ್ಯ ಮಟ್ಟದ ಸೇವಾ ರತ್ನ ಪ್ರಶಸ್ತಿ

ದಾವಣಗೆರೆ (Davanagere) : ದಾವಣಗೆರೆ ಭರತ್ಯನಾಟ್ಯ ಕಲಾವಿದರಾದ ಕು.ಮಂದಿರಾ ಇವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಹರ್ಷಿ ಶ್ರೀ ವಾಲ್ಮೀಕಿ ಗುರು…

By Dinamaana Kannada News

THE TEAM ACADEMY ವಿದ್ಯಾರ್ಥಿ ಫಕ್ಕಿರೇಶ್‌ ಟಿ ರಾಜ್ಯಕ್ಕೆ 160 ನೇ ರ‍್ಯಾಂಕ್

ದಾವಣಗೆರೆ :  2023-24 ನೇ ಸಾಲಿನಲ್ಲಿ ನಡೆಸಲಾದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ದಿ.ಟೀಮ್‌ ಅಕಾಡಮಿಯ ವಿದ್ಯಾರ್ಥಿ ಫಕ್ಕಿರೇಶ್‌ ಟಿ 160 ನೇ…

By Dinamaana Kannada News

Davanagere | ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ  ಆ.19  (Davanagere ) : ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ ಶಿಪ್ ಪಡೆಯಲು ಪೋಸ್ಟ್‌ -ಮೆಟ್ರಿಕ್ ತರಗತಿಗಳಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ

By Dinamaana Kannada News
Crime davanagere
ಅಪರಾಧ ಸುದ್ದಿತಾಜಾ ಸುದ್ದಿ

ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

By Dinamaana Kannada News
Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?