Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಲು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ
ತಾಜಾ ಸುದ್ದಿ

ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಲು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

Dinamaana Kannada News
Last updated: January 28, 2025 1:27 pm
Dinamaana Kannada News
Share
davanagere
davanagere
SHARE
ದಾವಣಗೆರೆ (Davanagere): ದೇವದಾಸಿ ಮಹಿಳೆಯರ ಮಕ್ಕಳಿಗೆ ನಿವೇಶನ ಮತ್ತು ಮನೆ ನಿರ್ಮಿಸಿಕೊಳ್ಳಲು ಸರ್ಕಾರ 10  ಲಕ್ಷ ರೂ. ನೀಡಬೇಕು ಎಂದು  ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಜಾತಿಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಬೇಕು. ವೈಜ್ಞಾನಿಕವಾಗಿ ದೇವದಾಸಿ ಮಹಿಳೆಯರ ಸ್ಥಿತಿಗತಿ ಬಗ್ಗೆ ಸಮೀಕ್ಷೆ ನಡೆಸಬೇಕು. ಆದರೆ ಅಧಿಕಾರಿಗಳು ಈ ಕೆಲಸ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಗಮನ ತಂದರು.
ದೇವದಾಸಿ ಮಹಿಳೆಯರ ಮಕ್ಕಳಿಗೆ ಮನೆ ನಿರ್ಮಿಸಿಕೊಳ್ಳಲು ಸರ್ಕಾರ ಪ್ರಸ್ತುತ 2 ಲಕ್ಷ ರೂ. ಹಣ ನೀಡುತ್ತಿದೆ. ಆದರೆ ೨ ಲಕ್ಷ ರೂ.ಗೆ ಸಿಮೆಂಟ್, ಮರಳು ತರಲು ಆಗುವುದಿಲ್ಲ. ಮನೆ ಕಟ್ಟಿಕೊಳ್ಳುವುದು ಕನಸಿನ ಮಾತು. ಹೀಗಾಗಿ ಸರ್ಕಾರ ಕನಿಷ್ಠ 10 ಲಕ್ಷ ರೂ. ನೀಡಿದರೆ ಒಂದು ಸೂರು ಕಟ್ಟಿಕೊಳ್ಳಲು ಸಾಧ್ಯವಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.
ಸ್ಥಳೀಯ ಸಂಸ್ಥೆಗಳು ಮತ್ತು ನಗರಾಭಿವೃದ್ಧಿ ಪ್ರಾಧಿಕಾರಗಳಿಂದ ಸಾರ್ವಜನಿಕರಿಗೆ ನಿವೇಶನಗಳಿಗೆ ಅರ್ಜಿ ಆಹ್ವಾನಿಸಿದ ಸಂದರ್ಭದಲ್ಲಿ ದೇವದಾಸಿ ಮಕ್ಕಳಿಗೆ ಶೇ.5ರಷ್ಟು ನಿವೇಶನ ಮೀಸಲಿಡಬೇಕು. ಶಾಲಾ ಕಾಲೇಜು ಮತ್ತು ಪ್ರತಿಷ್ಠಿತ ವಸತಿ ನಿಲಯಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆದ ಮಕ್ಕಳಿಗೆ ಸರ್ಕಾರಿ ಹುದ್ದಗಳಿಗೆ  ನೇರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ದಾವಣಗೆರೆ, ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿ ಇನ್ನೂ ದೇವದಾಸಿ ಪದ್ಧತಿ ಮುಂದುವರಿದಿದೆ. ಇದನ್ನು ತಡೆಯಲು ಅಧಿಕಾರಿಗಳು ಮುಂದಾಗುತ್ತಿಲ್ಲ. ನರದೌರ್ಬಲ್ಯದಿಂದ ಮಹಿಳೆಯರಿಗೆ ಕೂದಲು ಗಂಟು ಬೀಳುತ್ತವೆ. ಇದು ದೇವರ ಮುಡಿ ಎಂದು ಬಿಟ್ಟುಕೊಳ್ಳುತ್ತಾರೆ. ಈ ಬಗ್ಗೆ ಅಧಿಕಾರಿಗಳು ಅಂತಹ ಮಹಿಳೆಯರಿಗೆ ವೈಜ್ಞಾನಿಕವಾಗಿ ಅದರಿಂದ ಹೊರ ಬರಲು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿಲ್ಲ. ಜೊತೆಗೆ ನಕಲಿ ಜಾತಿ ಪ್ರಮಾಣ ಸೃಷ್ಟಿ ಮಾಡುವುದು ಹೆಚ್ಚಾಗುತ್ತಿದ್ದರೂ ಅಧಿಕಾರಿಗಳು ತಲೆಕಡಿಸಿಕೊಳ್ಳುವುದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕೆಂದರು.
ದೇವದಾಸಿ ಪದ್ಧತಿ ಯಾವುದೇ ಜಿಲ್ಲೆಗಳಲ್ಲಿ ನಡೆದರೆ ಅದಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೇ ನೇರ ಹೊಣೆ. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಈ ಕುರಿತು ಯಾವುದೇ ದೂರಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸಬೇಕು. ಜೊತೆಗೆ ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

Read also : ಮಕ್ಕಳಲ್ಲಿ‌ ಸೃಜನಶೀಲತೆ – ಉತ್ತಮ‌ ಮೌಲ್ಯಗಳ ಬಿತ್ತಬೇಕು‌ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article davanagere ಮಕ್ಕಳಲ್ಲಿ‌ ಸೃಜನಶೀಲತೆ – ಉತ್ತಮ‌ ಮೌಲ್ಯಗಳ ಬಿತ್ತಬೇಕು‌ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Next Article Davanagere ಒಳ‌ಮೀಸಲಾತಿ ಜಾರಿಗೊಳಿಸದಿದ್ದರೆ ಕುರ್ಚಿ ಖಾಲಿ ಮಾಡಿ : ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘ ಎಚ್ಚರಿಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಪುಟ್ಟರಾಜ ಗವಾಯಿಗಳ ಕೀರ್ತಿ ಮತ್ತಷ್ಟು ಬೆಳಗಿಸಲು ಈ ಅಭಿಯಾನ

ದಾವಣಗೆರೆ: ಪಂ. ಪುಟ್ಟರಾಜ ಗವಾಯಿಗಳ 'ಸಾವಿರದ ಸಾಹಿತ್ಯ' ಪುಸ್ತಕಗಳನ್ನು ಸಾವಿರಾರು ಮನೆಗಳಿಗೆ ತಲುಪಿಸುವ ಅಭಿಯಾನವನ್ನು ಸಮಿತಿಯಿಂದ ನಡೆಸಲಾಗುತ್ತಿದೆ ಎಂದು ಡಾ.…

By Dinamaana Kannada News

ಕಾಮಗಾರಿ ಪೂರ್ಣಗೊಳಿಸಲು ಶಾಸಕ ಬಸವಂತಪ್ಪ ತಾಕೀತು

ದಾವಣಗೆರೆ:  ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಈ ಭಾಗದ ಜನರಿಗೆ ಆರೋಗ್ಯ ಸೇವೆ ಒದಗಿಸಬೇಕೆಂದು ಸಂಬಂಧಪಟ್ಟ…

By Dinamaana Kannada News

ಅಂಕು, ಡೊಂಕುಗಳನ್ನು ತಿದ್ದಲು ಕವನಗಳು ಉತ್ತಮ ಅಸ್ತ್ರ

ಹರಿಹರ: ಲೇಖನಿಯು ಖಡ್ಗಕ್ಕಿಂತ ಹರಿತ ಎಂಬ ಗಾದೆ ಮಾತಿನಂತೆ ಚುಕುಟು ಕವನಗಳು ಸಾಹಿತ್ಯ ಕ್ಷೇತ್ರದ ಪ್ರಭಾವಿ ಪ್ರಕಾರವಾಗಿದೆ ಎಂದು ಸಾಹಿತಿ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?