Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ
ತಾಜಾ ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ

Dinamaana Kannada News
Last updated: February 12, 2025 4:41 am
Dinamaana Kannada News
Share
davanagere
DAVANAGERE ADDITIONAL DISTRICT AND SESSIONS COURT FTSC-1 -davanagere
SHARE
ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ, 38  ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಹರಿಹರ ನಗರದ ಜೆ.ಅನಿಲ್ ಕೊಟ್ರೇಶ್ (27) ಶಿಕ್ಷೆಗೆ ಒಳಗಾದ ಆರೋಪಿ. 15  ವರ್ಷದ ಅಪ್ರಾಪ್ತ ಬಾಲಕಿ 9ನೇ ತರಗತಿ ಓದುತ್ತಿದ್ದಳು. ಆರೋಪಿ ಅನಿಲ್ ಶಾಲೆಗೆ ಹೋಗುವಾಗ ಪರಿಚಯ ಮಾಡಿಕೊಂಡು ಶಾಲೆಗೆ ತನ್ನ ಆಟೋದಲ್ಲಿಯೇ ಕರೆದುಕೊಂಡು ಹೋಗಿ ಬಿಟ್ಟು ಬರುತ್ತಿದ್ದ.
ಒಂದು ದಿನ ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ ಎಂದು ನಂಬಿಸಿ ಸುಮಾರು 9 ತಿಂಗಳ ಹಿಂದೆ ಆಟೋದಲ್ಲಿ ಕರೆದುಕೊಂಡು ಹೋಗಿ ಬೇಡವೆಂದರೂ ನಾನು ನಿನ್ನನ್ನು ಮದುವೆಯಾಗುತ್ತೇನೆ ಎಂದು ಬಲವಂತವಾಗಿ ಅತ್ಯಾಚಾರ ಮಾಡಿದ್ದ. ಈ ವಿಚಾರ ನಿಮ್ಮ ತಂದೆ-ತಾಯಿಗೆ ತಿಳಿಸಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೆದರಿಸಿದ್ದ.
2022 ರ ಫೆಬ್ರವರಿ 10 ರಂದು ನನಗೆ ಹೊಟ್ಟೆನೋವು ಬರುತ್ತಿದೆ ಎಂದು ಮಗಳು ತಂದೆಗೆ ತಿಳಿಸಿದ್ದಾಳೆ. ಕೂಡಲೇ ತಂದೆ ಆಸ್ಪತ್ರೆಗೆ ಕರೆದುಕೊಂಡು ಪರೀಕ್ಷೆ ಮಾಡಿಸಿದ್ದಾರೆ. ಆಗ ವೈದ್ಯರು ಏಳು ತಿಂಗಳು ಗರ್ಭಿಣಿ ಆಗಿರುವುದಾಗಿ ತಿಳಿಸಿದ್ದಾರೆ.
ಬಳಿಕ ನಡೆದ ಘಟನೆ ಬಗ್ಗೆ ತಂದೆಗೆ ಮಗಳು ವಿವರಿಸಿದ್ದಾಳೆ. ಕೂಡಲೇ ಹರಿಹರ ನಗರ ಪೊಲೀಸ್ ಠಾಣೆಗೆ 2022 ರ ಫೆಬ್ರವರಿ 11 ರಂದು ನನ್ನ ಮಗಳಿಗೆ ಹೆದರಿಸಿ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ಅನಿಲ್ ವಿರುದ್ಧ ಫೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿದ್ದರು.
ತನಿಖೆ ನಡೆಸಿದ ಸಿಪಿಐ ಯು. ಸತೀಶ್‌ಕುಮಾರ್ ಆರೋಪಿ ಅನಿಲ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಸಂಬಂಧ ಮಂಗಳವಾರ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ವಿಚಾರಣೆ ನಡೆಸಿದಾಗ ಆರೋಪ ಸಾಬೀತಾಗಿದ್ದರಿಂದ ಆರೋಪಿಗೆ 20 ವರ್ಷ ಕಾರಾಗೃಹ ಶಿಕ್ಷೆ ಮತ್ತು 38 ಸಾವಿರ ರೂ. ದಂಡ ಹಾಗೂ  ದಂಡದ ಮೊತ್ತ 38 ಸಾವಿರ ರೂ. ಪ್ರಕರಣದ ಸಂತ್ರಸ್ತೆಗೆ ನೀಡುವಂತೆ ಹಾಗೂ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.
ಪರ‍್ಯಾದಿ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ನ್ಯಾಯ ಮಂಡನೆ ಮಾಡಿದ್ದಾರೆ.
ತನಿಖೆ ನಡೆಸಿ ತನಿಖಾಧಿಕಾರಿ ಸಿಪಿಐ ಯು.ಸತೀಶ್‌ಕುಮಾರ್ ಮತ್ತು ಸಿಬ್ಬಂದಿ, ಪರ‍್ಯಾದಿ ಪರವಾಗಿ ನ್ಯಾಯ ಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ಅವರಿಗೆ ಎಸ್ಪಿ ಉಮಾ ಪ್ರಶಾಂತ್ ಅಭಿನಂದನೆ ಸಲ್ಲಿಸಿದ್ದಾರೆ.
Read also : Davanagere | ನಾಟಿ ಕೋಳಿ ಮರಿಗಳಿಗೆ ಅರ್ಜಿ  ಆಹ್ವಾನ
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ನಾಟಿ ಕೋಳಿ ಮರಿಗಳಿಗೆ ಅರ್ಜಿ  ಆಹ್ವಾನ
Next Article Davanagere ರಾಜ್ಯದ ಮೇಲೆ‌ 3D ನೀತಿ ಅನುಸರಿಸಿದ ಕೇಂದ್ರ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

22 ಕೆರೆಗಳ ಅಭಿವೃದ್ಧಿ- ಭದ್ರಾ ಕಾಲುವೆಗಳ ಆಧುನೀಕರಣಕ್ಕೆ ಅನುದಾನ ಬಿಡುಗಡೆಗೆ ಶಾಸಕ ಬಸವಂತಪ್ಪ ಮನವಿ

ದಾವಣಗೆರೆ (Davanagere): ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯಲ್ಲಿ 22 ಕೆರೆಗಳ ಏತ ನೀರಾವರಿ ಯೋಜನೆ ಹೊಸ ಪೈಪ್ ಲೈನ್ ಕಾಮಗಾರಿ ಮತ್ತು…

By Dinamaana Kannada News

ಟೈಲರ್ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಸ್ಥಾಪನೆಗೆ ಆಗ್ರಹ

ದಾವಣಗೆರೆ :  ಟೈಲರ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಸಹಾಯಕ ಕಾರ್ಮಿಕ ಆಯುಕ್ತರ…

By Dinamaana Kannada News

DAVANAGERE :ಸಮಾಜ ಸುಧಾರಣೆ ಚಿಂತನೆ ಸಿದ್ಧರಾಮ ಸಂಸ್ಕೃತಿ ನೆಲೆಯೂರಲು ಕಾರಣ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ದಾವಣಗೆರೆ ಜು.5 (DAVANAGERE ):  ಸಿದ್ಧರಾಮರ ವ್ಯಕ್ತಿತ್ವ ಹಲವು ಮುಖಗಳಲ್ಲಿ ಅರಳಿದೆ. ಸಮೇಜೋಧರ‍್ಮಿಕ ಮಹಾನ್ ಸಾಹಸಿಯಾಗಿ, ಮಹಾ ಅನುಭಾವಿಯಾಗಿ, ಸಮಾಜಚಿಂತಕನಾಗಿ,…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?