Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಭಿಪ್ರಾಯ > ಕುಟುಂಬ ರಾಜಕಾರಣದ ವಿರುದ್ಧ ಬಹಿರಂಗ ಅಭಿಪ್ರಾಯ ಬದಲಾವಣೆ ಪರ್ವದ ಸಂಕೇತ: ಜಿ.ಬಿ.ವಿನಯ್ ಕುಮಾರ್
ಅಭಿಪ್ರಾಯ

ಕುಟುಂಬ ರಾಜಕಾರಣದ ವಿರುದ್ಧ ಬಹಿರಂಗ ಅಭಿಪ್ರಾಯ ಬದಲಾವಣೆ ಪರ್ವದ ಸಂಕೇತ: ಜಿ.ಬಿ.ವಿನಯ್ ಕುಮಾರ್

Dinamaana Kannada News
Last updated: February 17, 2025 5:37 am
Dinamaana Kannada News
Share
gb vinaykumar davangere
SHARE

ದಾವಣಗೆರೆ: ಕುಟುಂಬ ರಾಜಕಾರಣದ ವಿರುದ್ಧ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದು ಬದಲಾವಣೆಯ ಪರ್ವದ ಸಂಕೇತ. ವೈಚಾರಿಕತೆ ಬೀಜ ಬಿತ್ತಬೇಕೆಂಬುದು ನಮ್ಮ ಉದ್ದೇಶವೇ ಹೊರತು ದಾವಣಗೆರೆಯ ಕುಟುಂಬವೊಂದರ ವಿರುದ್ಧ ಮಾಡುತ್ತಿರುವ ಆಂದೋಲನ ಅಲ್ಲ. ಭಾರತದ ರಾಜಕೀಯ ವ್ಯವಸ್ಥೆಯಲ್ಲಿ ಕುಟುಂಬ ರಾಜಕಾರಣ ಹಾಸುಹೊಕ್ಕಾಗಿದ್ದು, ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ (GB Vinay Kumar) ಪ್ರತಿಪಾದಿಸಿದರು.

ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಿವಯೋಗ ಮಂದಿರದಲ್ಲಿ ಸ್ವಾಭಿಮಾನಿ ಬಳಗವು ಏರ್ಪಡಿಸಿದ್ದ ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ? ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ವಿಚಾರ ಸಂಕ್ರಾಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 34 ಕುಟುಂಬಗಳು ಬಲಿಷ್ಠವಾಗಿ ಬೆಳೆದು 140 ಕೋಟಿ ಜನರನ್ನು ನಿಯಂತ್ರಿಸುತ್ತಿವೆ. ಅವರೆಲ್ಲಾ ರಾಜ, ರಾಣಿಯಂತೆ ಬದುಕುತ್ತಿದ್ದಾರೆ. ಈ ವ್ಯವಸ್ಥೆ ಬದಲಾಗಬೇಕಿದೆ ಎಂದು ಪ್ರತಿಪಾದಿಸಿದರು.

ಹಣವಿದ್ದವರು ಚುನಾವಣೆಯಲ್ಲಿ ಗೆದ್ದ ಮೇಲೆ ಗದರುತ್ತಾರೆ

ಹಣವಿದ್ದವರು ಚುನಾವಣೆಯಲ್ಲಿ ಗೆದ್ದ ಮೇಲೆ ಗದರುತ್ತಾರೆ, ಜೋರು ಮಾಡುತ್ತಾರೆ. ದುರಹಂಕಾರ ತೋರುತ್ತಾರೆ. ವಿನಯತೆಯೇ ಇರುವುದಿಲ್ಲ. ಯಾಕೆಂದರೆ ಚುನಾವಣೆಯಲ್ಲಿ ತನ್ನ ಎದುರಾಳಿ ಖರ್ಚು ಮಾಡುವ ಹಣಕ್ಕಿಂತ ದುಪ್ಪಣ ಹಣ ಕೊಟ್ಟು ಗೆಲ್ಲುತ್ತೇವೆಂಬ ಆತ್ಮವಿಶ್ವಾಸ ಅವರಲ್ಲಿ ಇರುವ ಕಾರಣ ಈ ವರ್ತನೆ ಬಂದಿದೆ. ಗೆದ್ದ ಮೇಲೆ ಒಂದು ಫ್ಯಾಕ್ಟರಿ ಇದ್ದದ್ದು ಮೂರು, ಒಂದು ಮಿಲ್ ಇದ್ದದ್ದು ಹತ್ತು ಮಿಲ್ ಆಗುತ್ತದೆ. ಇಂಥ ವ್ಯವಸ್ಥೆ ಸೃಷ್ಟಿಯಾಗಿದೆ. ಆದ್ರೆ ನಾವು ನೋಡಿಕೊಂಡು, ಸಹಿಸಿಕೊಂಡು ಗೊತ್ತಿದ್ದರೂ ಮಾತನಾಡದೇ ಹೋಗುತ್ತಿದ್ದೇವೆ. ಇದರ ವಿರುದ್ದ ಹೋರಾಡುವ ಧೈರ್ಯ ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Read Also: Political analysis | ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ

ಕುಟುಂಬ ರಾಜಕಾರಣದ ವಿರುದ್ಧ ಮಾತನಾಡಲು ಹಿಂದೇಟು ಹಾಗೂ ಭಯಪಡುವ ಇಂಥ ವಾತಾವರಣದಲ್ಲಿ ವಿದ್ಯಾರ್ಥಿಗಳು ಮುಕ್ತವಾಗಿ ಮಾತನಾಡಿರುವುದು ಒಳ್ಳೆಯ ಬೆಳವಣಿಗೆ. ದಾವಣಗೆರೆ ವ್ಯಾಪಾರ ಕೇಂದ್ರೀತ ನಗರ. ಸಾಂಸ್ಕೃತಿಕ, ವಿಚಾರವಂತ, ಬುದ್ಧವಂತ ನಗರವನ್ನಾಗಿ ಪರಿವರ್ತಿಸಬೇಕೆಂಬುದು ನಮ್ಮ ಉದ್ದೇಶ. ಪ್ರಜಾಪ್ರಭುತ್ವದಲ್ಲಿ ಅನಿಸಿಕೆಯನ್ನು ಅಂಜಿಕೆ, ಅಳುಕು ಇಲ್ಲದೇ ವ್ಯಕ್ತಪಡಿಸಬೇಕು. ಕುಟುಂಬ ರಾಜಕಾರಣದ ಬಗ್ಗೆ ರಾಷ್ಟ್ರ, ರಾಜ್ಯ, ಜಿಲ್ಲೆ, ಊರು, ಮನೆಮನೆಗಳಲ್ಲಿಯೂ ಚರ್ಚೆಯಾಗಬೇಕು ಎಂದು ಅಭಿಪ್ರಾಯಪಟ್ಟರು.

ಲೋಕಸಭೆ ಚುನಾವಣೆಗೆ ಮುನ್ನ 650 ಕಿಲೋಮೀಟರ್ ಪಾದಯಾತ್ರೆ

ಲೋಕಸಭೆ ಚುನಾವಣೆಗೆ ಮುನ್ನ 650 ಕಿಲೋಮೀಟರ್ ಪಾದಯಾತ್ರೆ ನಡೆಸಿ 900 ಹಳ್ಳಿಗಳಿಗೆ ಭೇಟಿ ನೀಡಿದ್ದೆ. ಪ್ರತಿಯೊಬ್ಬರ ಬಳಿ ವಿಶ್ವಾಸ ಗಳಿಸಿ ನ್ಯಾಯಯುತ, ಪ್ರಜಾಸತ್ತಾತ್ಮಕವಾಗಿ ಟಿಕೆಟ್ ಪಡೆಯಲು ಯತ್ನ ಮಾಡಿದೆ. ಟಿಕೆಟ್ ಸಿಗುವ ಆಶಾಭಾವನೆ ಇತ್ತು, ಆದ್ರೆ ಸಿಗಲಿಲ್ಲ. ರಾಜಕೀಯ ಕುಟುಂಬದ ಹಿನ್ನೆಲೆ ಹೊಂದಿದವರು ನೇರವಾಗಿ ಹೋಗಿ ಟಿಕೆಟ್ ತಂದರು.

ಜನರ ಮಧ್ಯೆ ವ್ಯಕ್ತಿತ್ವ ಇಟ್ಟು, ಸಮಸ್ಯೆ ಆಲಿಸಿ ಟಿಕೆಟ್ ತರುವ ವಾತಾವರಣ ಇಲ್ಲ. ಚುನಾವಣೆಗೆ ಸ್ಪರ್ಧಿಸಬೇಕಾದರೆ ಹಣ ಮತ್ತು ಪ್ರಬಲ ಜಾತಿ ಮುಖ್ಯ ಎಂಬ ವಾತಾವರಣ ನಿರ್ಮಾಣವಾಗಿದೆ. ನಾನು ಚುನಾವಣೆಗೆ ಟಿಕೆಟ್ ಕೇಳಿದಾಗ ಸಿಎಂ, ಡಿಸಿಎಂ, ರಾಜಕೀಯ ಮುಖಂಡರು ಕೇಳಿದ್ದು ಒಂದೇ ಮಾತು, ನಿನ್ನ ಬಳಿ ದುಡ್ಡಿದೆಯಾ ಎಂದು. ಯಾರು ನೀನು? ವ್ಯಕ್ತಿತ್ವ ಏನು? ಜನರೊಡನೆ ಬೆರೆತ ಬಗೆ, ಸಮಸ್ಯೆಗಳ ಬಗ್ಗೆ ಕೇಳಲಿಲ್ಲ. ದುಡ್ಡು ಇಟ್ಟಿದೆಯಾ ಓಡಾಡು, ಭೇಟಿಯಾಗು ಎಂದರು. ಕೇವಲ ಹದಿನೈದು ದಿನಗಳಲ್ಲಿ ಟಿಕೆಟ್ ತಂದು ಚುನಾವಣೆಯಲ್ಲಿ ಹಣ ಖರ್ಚು ಮಾಡಿ ಗೆದ್ದು ಹೋಗುತ್ತಾರೆ, ಆಮೇಲೆ ಜನರನ್ನೇ ಮರೆತುಬಿಡುತ್ತಾರೆ ಎಂದು ಹೇಳಿದರು.

ಗೆದ್ದವರು ಅವರ ಕುಟುಂಬದ ಏಳಿಗೆ ಅಷ್ಟೇ ಗಮನಕೇಂದ್ರೀಕರಿಸುತ್ತಾರೆ. ಕ್ಷೇತ್ರದ ಅಭಿವೃದ್ದಿ ಬೇಕಿಲ್ಲ. ನಗರ ಪ್ರದೇಶದವರಿಗಿಂತ ಹಳ್ಳಿಗಳ ಜನರು ಪರಾವಲಂಬಿಗಳಾಗಬೇಕು. ಆದ್ರೆ, ದೊಡ್ಡ ಸಮಾವೇಶ ನಡೆಯುವುದು ಕುರ್ಚಿ ಗಟ್ಟಿಮಾಡಲು ಹೊರತು ಶೋಷಿತರ ಅಭಿವೃದ್ಧಿಗಲ್ಲ. ಸಹಿಸಿಕೊಂಡು ಹೋಗುತ್ತಿದ್ದೇವೆ. ಇಂದಿನ ಯುವಕರು, ಯುವತಿಯರು ಗಟ್ಟಿಯಾಗಿ ಅಭಿಪ್ರಾಯ ವ್ಯಕ್ತಪಡಿಸಬೇಕು. ನಿರ್ಭೀತಿಯಿಂದ ನಡೆಯಬೇಕು ಎಂದು ಕಿವಿಮಾತು ಹೇಳಿದರು.

ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ಕಾರ್ಯಕ್ರಮ ಮಾಡಿಲ್ಲ. ನನ್ನ ರೀತಿ 100 ಜನರು ಬೆಳೆಯಬೇಕು. ರಾಜ್ಯ, ಜಿಲ್ಲೆಯಲ್ಲಿ ಈ ರೀತಿ ಬೆಳೆದರೆ ಅಧಿಕಾರ ವಿಕೇಂದ್ರೀಕರಣ ಆಗುತ್ತದೆ. ಒಬ್ಬ ವ್ಯಕ್ತಿ ಮೇಲೆ ವ್ಯವಸ್ಥೆ ಸೃಷ್ಟಿಯಾಗಬಾರದು. ನಾಯಕತ್ವವೂ ಬೇಕು. ಪ್ರಜಾಪ್ರಭುತ್ವ ಆಶಯವೂ ಉಳಿಯಬೇಕು. ಎಲ್ಲರಿಗೂ ಸಮಾನ ಅವಕಾಶ ಸಿಗುವಂತಾಗಬೇಕು ಎಂದು ಜಿ. ಬಿ. ವಿನಯ್ ಕುಮಾರ್ ಪ್ರತಿಪಾದಿಸಿದರು.

ಯಾವ ಪಕ್ಷದೊಳಗೂ ಪ್ರಜಾಪ್ರಭುತ್ವವೇ ಇಲ್ಲ

ಯಾವ ಪಕ್ಷದೊಳಗೂ ಪ್ರಜಾಪ್ರಭುತ್ವವೇ ಇಲ್ಲದಂತಾಗಿದೆ. ಚುನಾವಣೆ ಆದ ಮೇಲೆ ನಾನು ವಿಶ್ರಾಂತಿ ಪಡೆಯಬಹುದಿತ್ತು. ಆದ್ರೆ, ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ. ಬೀದರ್, ರಾಯಚೂರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಗೆ ಹೋಗಿ ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಪ್ರಜ್ಞೆ ಮೂಡಿಸುತ್ತಿದ್ದೇನೆ. ಜನರು ಕುಟುಂಬ ಆಧಾರಿತ ರಾಜಕೀಯ ಕೈಹಿಡಿಯುತ್ತಾರೆಂದು ಭ್ರಮನಿರಸನಕ್ಕೊಳಗಾಗಿ ಕೂರಲಿಲ್ಲ. ಮುಂಬರುವ ದಿನಗಳಲ್ಲಿ ಯಶಸ್ಸು ಸಿಗುತ್ತದೆ ಎಂಬ ವಿಶ್ವಾಸ ಇದೆ ಎಂದರು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ಪಟೇಲ್ ಮಾತನಾಡಿ, ದಾವಣಗೆರೆ ಜಿಲ್ಲೆಯನ್ನಾಗಿಸಿದ್ದು ನಮ್ಮ ದೊಡ್ಡಪ್ಪ ಜೆ. ಹೆಚ್. ಪಟೇಲ್ ಅವರು. ದಾವಣಗೆರೆ ಜಿಲ್ಲೆಯನ್ನಾಗಿಸಿದ ಸಮಾಜವಾದಿ ನಾಯಕನ ಆಶಯ ಈಡೇರಿಲ್ಲ ಎಂಬ ನೋವು ಇದೆ. ಇದಕ್ಕೆಲ್ಲಾ ರಾಜಕೀಯ ಪಕ್ಷಗಳು ಕಾರಣವೆಂದರೆ ಖಂಡಿತ ಅಲ್ಲ. ಪ್ರತಿಯೊಬ್ಬರದ್ದೂ ಇದರಲ್ಲಿ ಪಾತ್ರವಿದೆ.  ಮತದಾರ ಜಾಗೃತನಾಗದ ಹೊರತು ಪ್ರಜಾಪ್ರಭುತ್ವ ಯಶಸ್ವಿ ಆಗಲ್ಲ ಎಂದು ಹೇಳಿದರು.

ನಾವು ಶಿವಮೊಗ್ಗ ಜಿಲ್ಲೆಗೆ ಸೇರಿದ್ದೆವು. ದೇವರಾಜ ಅರಸು ಕೃಷಿ ಸುಧಾರಣೆ ತಂದಾಗ ಶಿವಮೊಗ್ಗದಲ್ಲಿ ಕ್ರಾಂತಿಕಾರಕ ಬದಲಾವಣೆ ಆಯಿತು. ಜೆ. ಹೆಚ್. ಪಟೇಲ್ ಅವರು ತನ್ನ ತಂದೆ ಜಮೀನ್ದಾರರಾದರೂ ಗೇಣಿದಾರರ ಪರ ಹೋರಾಟ ನಡೆಸಿದರು. ಶಿವಮೊಗ್ಗದಲ್ಲಿದ್ದ ಇದ್ದ ಹೋರಾಟ ಮನೋಭಾವನೆ ಇಲ್ಲಿ ಕಂಡು ಬರುತ್ತಿಲ್ಲ. ದಾವಣಗೆರೆ ಜಿಲ್ಲೆಯು ಇಂದು ವ್ಯವಹಾರ ಜಿಲ್ಲೆಯಾಗಿದ್ದು, ಪಟೇಲರ ಆಶಯಕ್ಕೆ ಕೊಡಲಿ ಪೆಟ್ಟು ಬಿತ್ತು ಎಂಬ ನೋವು ಇದೆ ಎಂದರು.

ಜಿ. ಬಿ. ವಿನಯ್ ಕುಮಾರ್ ಅವರು ವಿಚಾರದಿಂದ ವಿಮುಖರಾಗಬಾರದು

ಜಿ. ಬಿ. ವಿನಯ್ ಕುಮಾರ್ ಅವರು ವಿಚಾರದಿಂದ ವಿಮುಖರಾಗಬಾರದು. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲಿ. ಕರ್ನಾಟಕದಲ್ಲಿ ಹೊಸ ರಾಜಕೀಯ ಶಕ್ತಿ ಅವಕಾಶ ಇದೆ ಎನಿಸುತ್ತಿದೆ. ಕಾಂಗ್ರೆಸ್ ಗೆ ಸಿದ್ದರಾಮಯ್ಯ, ಬಿಜೆಪಿಗೆ ಯಡಿಯೂರಪ್ಪ, ಜೆಡಿಎಸ್ ಗೆ ದೇವೇಗೌಡರ ಕುಟುಂಬ ಅನಿವಾರ್ಯ ಎಂಬ ವಾತಾವರಣ ಇದೆ. ಈ ಮೂವರು ನಾಯಕರ ಮೇಲೆ ಯಾರು ಎಂಬ ಪ್ರಶ್ನೆಗೆ ಉತ್ತರ ಇಲ್ಲ. ವೈಯಕ್ತಿಕ ವರ್ಚಸ್ಸು ಇಲ್ಲ, ಹಣಬಲದಿಂದಲೇ ಗೆಲ್ಲುತ್ತಿದ್ದಾರೆ.

ಹೊಸ ರಾಜಕೀಯ ಶಕ್ತಿ ಉದಯಕ್ಕೆ ಅವಕಾಶ ಇದ್ದು, ಸಾಮಾನ್ಯ ಜನರು ಮನಸ್ಸು ಮಾಡಿದರೆ ಹೊಸ ರಾಜಕೀಯ ಶಕ್ತಿ ಶಕ್ತಿಯುತವಾಗಲಿದೆ ಎಂದು ಅಭಿಪ್ರಾಯಪಟ್ಟ ಅವರು, ದುಡ್ಡಿಲ್ಲದೇ ಯಾವ ಕ್ಷೇತ್ರಗಳಲ್ಲಿಯೂ ಗೆಲ್ಲಲಾಗದು ಎಂಬ ಸ್ಥಿತಿಗೆ ಬಂದು ತಲುಪಿದ್ದೇವೆ. ಆರ್ಥಿಕ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಮತದಾನ ಹಾಕಬೇಕು. ಅಂತಾರಾಷ್ಟ್ರೀಯ, ದೇಶ, ರಾಜ್ಯ ಮತ್ತು ಜಿಲ್ಲೆಗಳ ವಿಚಾರಗಳಿಗೆ ಮತದಾರ ಆದ್ಯತೆ ಕೊಟ್ಟು ಹಕ್ಕು ಚಲಾಯಿಸಬೇಕು ಎಂದರು.

ವೇದಿಕೆಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್. ಹೆಚ್. ಅರುಣ್ ಕುಮಾರ್, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ್ ಎಸ್. ಬಡದಾಳ್, ವಕೀಲರಾದ ಸಿ. ಪಿ. ಅನಿತಾ, ಚಿತ್ರನಿರ್ದೇಶಕರು, ಉಪನ್ಯಾಸಕ ಮಾರುತಿ ಶಾಲೆಮನೆ, ಎಸ್. ಎಂ. ಕೃಷ್ಣ ಕಾೇಜಿನ ಪ್ರಾಂಶುಪಾಲರಾದ ಕೆ. ಎಸ್. ಗಂಗಾಧರ್ ಮತ್ತಿತರರು ಹಾಜರಿದ್ದರು.

ಮುಂದುವರಿಯಲಿದೆ ಪ್ರಬಂಧ ಸ್ಪರ್ಧೆ

ಜಾತಿ ರಾಜಕಾರಣ, ಅಂಬೇಡ್ಕರ್, ದೇಶದ ಅಭಿವೃದ್ಧಿ, ಜನರಿಗೆ ಹತ್ತಿರವಾಗುವ ವಿಚಾರಗಳ ಕುರಿತಂತೆ ಇನ್ನೆರಡು ತಿಂಗಳಿನಲ್ಲಿ ಪ್ರಬಂಧ ಸ್ಪರ್ಧೆ, ವಿಚಾರ ಸಂಕಿರಣ ಆಯೋಜಿಸಲಾಗುವುದು. ಸಂವಿಧಾನ ಸೇರಿದಂತೆ ಪ್ರಚಲಿತ ವಿಚಾರಗಳು ಪ್ರಜೆಗಳಲ್ಲಿ ನಿರಂತರವಾಗಿ ಚರ್ಚೆಯಾಗಬೇಕು ಎಂಬ ಆಲೋಚನೆ ದೃಷ್ಟಿಯಿಂದ ಆಯೋಜಿಸಲಾಗುವುದು ಎಂದು ಜಿ. ಬಿ. ವಿನಯ್ ಕುಮಾರ್ ತಿಳಿಸಿದರು.

TAGGED:Davangere NewsGB Vinay Kumarಕುಟುಂಬ ರಾಜಕಾರಣಜಿ.ಬಿ.ವಿನಯ್ ಕುಮಾರ್
Share This Article
Twitter Email Copy Link Print
Previous Article Davanagere Political analysis | ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ
Next Article Vinayakumara davanagere ಕುಟುಂಬ ರಾಜಕಾರಣ ಪ್ರಜಾಪ್ರಭುತ್ವ ಹಾಗೂ ಅಭಿವೃದ್ಧಿಗೆ ಮಾರಕವೇ?” ಪ್ರಬಂಧ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ (Davanagre) :  ಪ್ರಸಕ್ತ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ, ಮೈಸೂರು ಕಂದಾಯ ವಿಭಾಗಗಳಲ್ಲಿನ ಪೊಲೀಸ್ ಸಬ್ ಇನ್ಸ್ ಪೆಕ್ಟರ್…

By Dinamaana Kannada News

ಅಪ್ರಾಪ್ತ ಬಾಲಕಿ ಅತ್ಯಾಚಾರ ಮಾಡಿದ ಆರೋಪಿ, ಸಹಕರಿಸಿದವರಿಗೆ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು…

By Dinamaana Kannada News

ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ. ಫೆ.11 (Davanagere); ರಾಷ್ಟ್ರೀಯ ಹೆದ್ದಾರಿ-173  ಮೂಡಿಗೆರೆಯಿಂದ ಹೊಳಲ್ಕೆರೆವರೆಗೆ ಇದ್ದು NH 369 ಬಳಿ ಮುಕ್ತಾಯಗೊಂಡಿದೆ.ಇದೇ ಹೆದ್ದಾರಿಯನ್ನು ಹೊಳಲ್ಕೆರೆಯಿಂದ  ಚಿಕ್ಕಜಾಜೂರಿನ…

By Dinamaana Kannada News

You Might Also Like

World Environment Day
Blogಅಭಿಪ್ರಾಯ

ವಿಶ್ವಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಶುದ್ಧತೆಗೆ ಆದ್ಯತೆ ಇರಲಿ

By Dinamaana Kannada News
goutama budha kannada article dr vishwanath
ಅಭಿಪ್ರಾಯ

Gautama Buddha | ‘ಮನುಕುಲದ ಬೆಳಕು ತಥಾಗತ ಬುದ್ಧ’

By Dinamaana Kannada News
Davanagere
ಅಭಿಪ್ರಾಯ

ಶಾಂತಿ, ಸಮಾನತೆ, ಸಹೋದರತ್ವ ಬೋಧಿಸಿದ ಪರಮಜ್ಞಾನಿ ಗೌತಮ ಬುದ್ಧನ ಸ್ಮರಣೆ

By Dinamaana Kannada News
P.R. Venkatesh
ಅಭಿಪ್ರಾಯ

poem | ಚೂರೇಚೂರು ಮಾನವೀಯತೆ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?