Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ : ನೌಕರರ ಪ್ರತಿಭಟನಾ ಮತಪ್ರದರ್ಶನ.
ತಾಜಾ ಸುದ್ದಿ

ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಒತ್ತಾಯಿಸಿ : ನೌಕರರ ಪ್ರತಿಭಟನಾ ಮತಪ್ರದರ್ಶನ.

Dinamaana Kannada News
Last updated: March 11, 2025 1:29 pm
Dinamaana Kannada News
Share
ಬ್ಯಾಂಕ್ ನೌಕರರ ಪ್ರತಿಭಟನಾ ಮತಪ್ರದರ್ಶನ
ಬ್ಯಾಂಕ್ ನೌಕರರ ಪ್ರತಿಭಟನಾ ಮತಪ್ರದರ್ಶನ Davanagere
SHARE

ದಾವಣಗೆರೆ (Davanagere): ಬ್ಯಾಂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರ ನೇಮಕಾತಿ ಮಾಡಬೇಕು, 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ತರಬೇಕು, ತಾತ್ಕಾಲಿಕವಾಗಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸಬೇಕು ಎಂದು ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯ ಜಿಲ್ಲಾ ಸಂಚಾಲಕ ಹಾಗೂ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ರಾಷ್ಟ್ರೀಯ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ ಸರ್ಕಾರವನ್ನು ಒತ್ತಾಯಿಸಿದರು.

ಮಂಗಳವಾರ ದೇಶದಾದ್ಯಂತ ಎಲ್ಲ ಬ್ಯಾಂಕುಗಳ ಪ್ರಾದೇಶಿಕ ಕಛೇರಿಗಳ ಮುಂಭಾಗ ಪ್ರತಿಭಟನಾ ಮತಪ್ರದರ್ಶನ ನಡೆಸಲು ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆಯು ಕರೆ ನೀಡಿರುವ ಹಿನ್ನಲೆಯಲ್ಲಿ ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ ಕೆನರಾ ಬ್ಯಾಂಕಿನ ಪ್ರಾದೇಶಿಕ ಕಛೇರಿಯ ಮುಂಭಾಗ ಆಯೋಜಿಸಿದ್ದ ಪ್ರತಿಭಟನಾ ಮತಪ್ರದರ್ಶನದಲ್ಲಿ ಮಾತನಾಡುತ್ತಿದ್ದರು.

ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಪ್ರಾದೇಶಿಕ ಕಾರ್ಯದರ್ಶಿ ಪ್ರದೀಪ್ ಪಾಟೀಲ್ ಮಾತನಾಡಿ, ಬ್ಯಾಂಕುಗಳಲ್ಲಿ ಅಗತ್ಯ ಪ್ರಮಾಣದ ನೇಮಕಾತಿ ಮಾಡುವ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಬೇಕು ಹಾಗೂ ಐದು ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಬರಬೇಕು ಎನ್ನುವುದು ನಮ್ಮ ಹಲವಾರು ವರ್ಷಗಳ ಬೇಡಿಕೆಯಾಗಿದೆ. ಈ ಬಗ್ಗೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಹಾಗೂ ಕಾರ್ಮಿಕ ಸಂಘಟನೆಗಳ ನಡುವೆ ಈಗಾಗಲೇ ಒಪ್ಪಂದ ಆಗಿದ್ದರೂ ಸಹ ಕೇಂದ್ರ ಸರಕಾರ ಈ ಕುರಿತು ಮೌನ ತಾಳಿದೆ ಎಂದು ಆರೋಪಿಸಿದರು.

ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಕಾರ್ಯದರ್ಶಿ ಹೆಚ್.ಎಸ್.ತಿಪ್ಪೇಸ್ವಾಮಿ ಮಾತನಾಡಿ,  ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದರೆ ಮಾರ್ಚ್ 24 ಮತ್ತು 25 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರ ನಡೆಯಲಿದೆ ಎಂದು ಎಚ್ಚರಿಸಿದರು.

Read also : ವಿಶೇಷಚೇತನರ ಮಾಸಿಕ ಪಿಂಚಣಿ :  ಸಂಸತ್ತಿನಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ 

ಪ್ರತಿಭಟನಾ ಮತಪ್ರದರ್ಶನದಲ್ಲಿ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ನಾಯಕರುಗಳಾದ   ಹೆಚ್.ಸುಗುರಪ್ಪ, ಅನುರಾಧಾ ಸಂಪನ್ನ ಮುತಾಲಿಕ್, ಪರಶುರಾಮ, ಕೆ.ಗಂಗಾಧರ್, ವಿನೋದ್ ವರ್ಣೇಕರ್, ಸಿದ್ದಲಿಂಗೇಶ್ ಕೋರಿ, ಎಸ್.ಪ್ರಶಾಂತ್, ಡಿ.ಹರ್ಷದ್, ಎಲ್.ಗೋಪಾಲಕೃಷ್ಣ, ವಿ.ಆರ್.ಹರೀಶ್, ಅನಿಲ್ ಟಿ.ಎಸ್., ಗೋಪಾಲಕೃಷ್ಣ, ಬಿ.ಎ.ಸುರೇಶ್, ರಶ್ಮಿ ನಾಗರಾಜ್, ಕೆ.ಜಯಲಕ್ಷ್ಮಿ, ವಿಶ್ವಚೇತನ್, ಆಶಾ ವಿದ್ಯಾಸಾಗರ್, ಸುಷ್ಮ ಜೋಷಿ, ರೋಹಿಣಿ ಮಂಡ್ರೆ, ಎಲ್.ಲತಾ, ನಾಗರತ್ನಮ್ಮ, ರೇಣುಕಮ್ಮ ಮತ್ತಿತರರು ಭಾಗವಹಿಸಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವಿಶೇಷಚೇತನರ ಮಾಸಿಕ ಪಿಂಚಣಿ :  ಸಂಸತ್ತಿನಲ್ಲಿ ಗಮನಸೆಳೆದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ 
Next Article RL Law College-davanagere ಮಕ್ಕಳು, ಮಹಿಳೆ ಮೇಲಿನ ದೌರ್ಜನ್ಯ ತಡೆ ಇನ್ನೂ ಸಾಧ್ಯವಾಗಿಲ್ಲ ; ರಾಜೇಶ್ವರಿ ಎನ್.ಹೆಗಡೆ ಬೇಸರ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಅಪ್ಪು ಕಪ್ ಸೀಸನ್ 2″ ಅಪ್ಪು ಸಂಭ್ರಮಕ್ಕೆ ಅದ್ದೂರಿ ಚಾಲನೆ  

ಬೆಂಗಳೂರು :  ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ…

By Dinamaana Kannada News

Davanagere : ದುರಂತ ನಾಯಕನಾಗಲು ಸಿದ್ದು ತಯಾರಿಲ್ಲ

Kannada News | Dinamaana.com | 05-08-2024 ಕರ್ನಾಟಕದ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದೆ.ಇಂತಹ ಬಿರುಗಾಳಿಗೆ ಮೂಲವಾದವರು ರಾಜ್ಯಪಾಲ ಥ್ಯಾವರಚಂದ್ ಗೆಹ್ಲೋಟ್…

By Dinamaana Kannada News

ದೇಶದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿ ಅಧಿಕಾರದಿಂದ ದೂರವಿಡಿ

ದಾವಣಗೆರೆ :   ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಐ.ಎನ್.ಡಿ.ಐ. ಒಕ್ಕೂಟದ ಭಾಗವಾಗಿರುವ ಭಾರತ ಕಮ್ಯುನಿಸ್ಟ್ ಪಕ್ಷವು ಬಿಜೆಪಿ ಹಾಗೂ ಎನ್‌ಡಿಎ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳಿಗೆ ಜ್ಞಾನ-ವಿಜ್ಞಾನದ ಜೊತೆಗೆ ಸುಜ್ಞಾನವೂ ಅಗತ್ಯ:ಎಂ.ವಿ. ಸತ್ಯನಾರಾಯಣ

By Dinamaana Kannada News
Davanagere
ತಾಜಾ ಸುದ್ದಿ

ಹೆಣ್ಣನ್ನು ಪೌರಾಣಿಕ ಕಾಲದಿಂದಲೂ ದ್ವಿತೀಯ ದರ್ಜೆಯಾಗಿ ಕಾಣಲಾಗುತ್ತಿದೆ: ಡಾ. ಎಚ್. ಎಲ್. ಪುಷ್ಪ ಕಳವಳ

By Dinamaana Kannada News
Davanagere
ತಾಜಾ ಸುದ್ದಿ

ಶ್ರೀ ಸತ್ಯ ಸಾಯಿ ಜನ್ಮ ಶತಮಾನೋತ್ಸ|ಯಶಸ್ವಿ ವ್ಯಕ್ತಿಗಳ ಸಂಗದಿಂದ ಯಶಸ್ಸು ಸಾಧ್ಯ: ಕೆ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಸಾರಿಗೆ ಇಲಾಖೆ : ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ವಿನಾಯಿತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?