ದಾವಣಗೆರೆ (Davangere) : ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ ಹಿನ್ನಲೆಯಲ್ಲಿ ಪೊಲೀಸರು ವಾಹನ ಮಾಲೀಕರಿಗೆ 25 ಸಾವಿರ ದಂಡ ವಿಧಿಸಿದ್ದಾರೆ.
ನಗರದ ಹೊಂಡದ ರಸ್ತೆ ಅರುಣ ಎಲ್.ಸಿ ಗೇಟ್ ಬಳಿ ಬಸವನಗರ ಪೊಲೀಸ್ ಠಾಣೆ ಪಿಐ ನಂಜುಂಡಸ್ವಾಮಿ ಎಂ, ಸಿಬ್ಬಂದಿಗಳೊಂದಿಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಐಎಂವಿ ಪ್ರಕರಣಗಳನ್ನು ದಾಖಲು ಮಾಡುತ್ತಿರುವ ಸಮಯದಲ್ಲಿ ಹೊಂಡಾ ಆಕ್ಟಿವಾ ಸ್ಕೂಟರ್ನ್ನು ಅಪ್ರಾಪ್ತ ಬಾಲಕ ಚಲಾಯಿಸಿಕೊಂಡು ಬಂದಿದ್ದು ಸಾರ್ವಜನಿಕ ರಸ್ತೆ ಮೇಲೆ ಚಲಾಯಿಸಲು ದ ಹಿನ್ನಲೆಯಲ್ಲಿ ಆಕ್ಟಿವ್ ಹೊಂಡ ಬೈಕ್ ಅನ್ನು ಜಪ್ತು ಮಾಡಿ ಬಸವನಗರ ಪೊಲೀಸ್ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ. 1ನೇ ACJ & JMFC ದಾವಣಗೆರೆ ನ್ಯಾಯಾಲಯಕ್ಕೆ ಆಕ್ಟಿವ್ ಹೊಂಡ ಬೈಕ್ ಮಾಲೀಕರ ಮೇಲೆ ದೋಷಾರೋಪಣೆ ಪತ್ರ ಸಲ್ಲಿಸಲಾಗಿತ್ತು.
ನ್ಯಾಯಾಲಯವು ಅಪ್ರಾಪ್ತ ವಯಸ್ಕನಿಗೆ ಚಾಲನೆ ಮಾಡಲು ಕೊಟ್ಟಿದ್ದಕ್ಕೆ ವಾಹನದ ಮಾಲಿಕರಿಗೆ ಒಂದು ದಿನ ಸಾದಾ ಸಜೆ ಮತ್ತು 25000/-ರೂ ದಂಡ ಹಾಗು ವಾಹನದ ನೊಂದಣಿಯನ್ನು1 ವರ್ಷದವರೆಗೆ ರದ್ದು ಪಡಿಸಿದೆ. ವಾಹನ ಚಾಲನೆ ಮಾಡಿಕೊಂಡು ಬಂದ ಅಪ್ರಾಪ್ತ ಬಾಲಕನಿಗೆ 25ವರ್ಷ ತುಂಬುವರೆಗೂ ಚಾಲನಾ ಪರವಾನಿಗೆಯನ್ನು ನೀಡದಂತೆ ಶಿಕ್ಷೆ ವಿದಿಸಲಾಗಿದೆ.
ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ರವರ ಸೂಚನೆಯಂತೆ ನಗರದ ಡಿವೈಎಸ್ಪಿ ಶರಣಬಸವೇಶ್ವರ ಬೀಮರಾವ್ ರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು.
ಆದ್ದರಿಂದ ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ಚಾಲನೆ ಮಾಡಲು ಕೊಡುವ ಪಾಲಕರಿಗೆ / ವಾಹನ ಮಾಲೀಕರಿಗೆ ದಾವಣಗೆರೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿ ಅರಿವು ಮೂಡಿಸಿದ್ದಾರೆ, ಇದೇ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಜರುಗಿಸಲಾಗುವುದು ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
Read also : lokayukta | ನಿವೇಶನ ಖಾತೆ ವರ್ಗಾವಣೆಗೆ ಲಂಚ : ಲೋಕಾ ಬಲೆಗೆ ಪಾಲಿಕೆ ನೌಕರ