Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಡವರ ಮಕ್ಕಳು ಐಎಎಸ್,ಐಪಿಎಸ್ ಆಗಬೇಕೆಂಬ ಕನಸು ನನಸಾಗಿಸಲು ಶ್ರಮ: ಜಿ. ಬಿ. ವಿನಯ್ ಕುಮಾರ್
ತಾಜಾ ಸುದ್ದಿ

ಬಡವರ ಮಕ್ಕಳು ಐಎಎಸ್,ಐಪಿಎಸ್ ಆಗಬೇಕೆಂಬ ಕನಸು ನನಸಾಗಿಸಲು ಶ್ರಮ: ಜಿ. ಬಿ. ವಿನಯ್ ಕುಮಾರ್

Dinamaana Kannada News
Last updated: March 18, 2025 11:55 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಬಡವರ ಮಕ್ಕಳು ಐಎಎಸ್, ಐಪಿಎಸ್ ಆಗಬೇಕೆಂಬ ಕನಸು ಕಂಡಿದ್ದೇನೆ. ಹಾಗಾಗಿ, ರಾಜ್ಯದ ಪ್ರತಿ ಜಿಲ್ಲೆಗಳಿಗೂ ಹೋಗುತ್ತಿದ್ದೇನೆ. ಗ್ರಾಮೀಣ ಪ್ರದೇಶದ ಮಕ್ಕಳು ಯಾವುದೇ ಅವಕಾಶಗಳಿಂದ ವಂಚಿತರಾಗಬಾರದು. ಉಜ್ವಲ ಭವಿಷ್ಯ ಅವರದ್ದಾಗಬೇಕು. ಈ ನಿಟ್ಟಿನಲ್ಲಿ ಪ್ರವಾಸ ಮಾಡಿ ಶಿಕ್ಷಣದ ಮಹತ್ವ ಕುರಿತಂತೆ ಜಾಗೃತಿ ಮೂಡಿಸುತ್ತಿದ್ದೇನೆ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆಯ ಸಂಸ್ಥಾಪಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಹೇಳಿದರು.

ಜಿಲ್ಲೆಯ ಹರಿಹರ ತಾಲ್ಲೂಕಿನ ಸುಕ್ಷೇತ್ರ ಯಲವಟ್ಟಿಯ ಶ್ರೀ ಗುರು ಸಿದ್ಧಾಶ್ರಮದಲ್ಲಿ ನಡೆದ ವೈರಾಗ್ಯನಿಧಿ ಶ್ರೀ ಶಿವಾನಂದ ಮಹಾಸ್ವಾಮಿಗಳವರ 20ನೇ ವರ್ಷದ ಪುಣ್ಯಾರಾಧನಾ ಹಾಗೂ ಜ್ಞಾನನಿಧಿ ಶ್ರೀ ನಿತ್ಯಾನಂದ ಮಹಾಸ್ವಾಮಿಗಳವರ 18ನೇ ವರ್ಷದ ಪುಣ್ಯಾರಾಧನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರತಿಯೊಬ್ಬ ಮಕ್ಕಳೂ ಒಳ್ಳೆಯ ಶಿಕ್ಷಣ ಪಡೆಯುವಂತಾಗಬೇಕು. ಆಗ ಮಾತ್ರ ಪ್ರಪಂಚದ ಯಾವುದೇ ಮೂಲೆಯಲ್ಲಾದರೂ ಹೋಗಿ ಸ್ವಾವಲಂಬನೆ ಜೀವನ ಸಾಗಿಸಬಹುದು. ಧೈರ್ಯವೂ ಬರುತ್ತದೆ. ಸ್ವಾಭಿಮಾನದ ಬದುಕು ಸಾಗಿಸಬಹುದು. ಉಜ್ವಲ ಅವಕಾಶ ಸಿಗಲಿದೆ. ಭವಿಷ್ಯವೂ ಉತ್ತಮ ಆಗಿರುತ್ತದೆ. ಶೈಕ್ಷಣಿಕ ಕ್ರಾಂತಿಗಾಗಿ ರಾಜ್ಯ ಸುತ್ತಾಡುತ್ತಿದ್ದೇನೆ. ಗ್ರಾಮೀಣ ಪ್ರದೇಶದ ಶಾಲೆಗಳು, ಕಾಲೇಜುಗಳಿಗೆ ಹೋಗಿ ಶಿಕ್ಷಣದ ಮಹತ್ವದ ಕುರಿತಂತೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಇದಕ್ಕೆ ಮಠಗಳು ಹಾಗೂ ಶ್ರೀಗಳ ಆಶೀರ್ವಾದ, ಸಹಕಾರ ಬೇಕು ಎಂದು ಪ್ರತಿಪಾದಿಸಿದರು.

ಮಠಮಾನ್ಯಗಳು ಶೈಕ್ಷಣಿಕ ರಂಗದಲ್ಲಿ ಅಚ್ಚಳಿಯದ ಕೈಂಕರ್ಯ ಮಾಡಿವೆ. ಅನ್ನದಾನ, ವಿದ್ಯಾದಾನ ಮಾಡಿವೆ. ಲಕ್ಷಾಂತರ ಮಕ್ಕಳ ಭವಿಷ್ಯ ರೂಪಿಸಿವೆ. ಮಠಗಳಿಂದ ಆಗಿರುವ ಸೇವಾ ಕಾರ್ಯಗಳು ಅನನ್ಯ. ನೈತಿಕತೆ, ಪ್ರಾಮಾಣಿಕತೆ ಉಳಿಯಬೇಕಾದರೆ ಇಂಥ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುವಂತಾಗಬೇಕು. ಸೇವಾ ಕಾರ್ಯಗಳು ಜನಮಾನಸದಲ್ಲಿ ಉಳಿದಾಗ ಮಾತ್ರ ಧರ್ಮ ಉಳಿಯುತ್ತದೆ. ಧರ್ಮಕಾರ್ಯಗಳು ನೆನಪಿನಲ್ಲಿರುತ್ತವೆ ಎಂದು ಆಶಯ ವ್ಯಕ್ತಪಡಿಸಿದರು.

ಇಡೀ ದೇಶವೇ ತಿರುಗಿ ನೋಡುವಂತೆ ಇನ್ ಸೈಟ್ಸ್ ಐಎಎಸ್ ಸಂಸ್ಥೆ ಕಟ್ಟಿ ಬೆಳೆಸಿದ್ದೇನೆ. ಇದು ಸಾಧ್ಯವಾಗಿಸುವಲ್ಲಿ ಹಲವು ಏಳು ಬೀಳುಗಳನ್ನು ಕಂಡಿದ್ದೇನೆ. ಸಮಾಜ ಸೇವೆ ಮಾಡಬೇಕೆಂಬ ಕನಸು ಹೊತ್ತು ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧೆ ಮಾಡಿದ್ದೆ. ಜನರು ತೋರಿದ ಪ್ರೀತಿಗೆ ನಾನು ಎಂದಿಗೂ ಚಿರಋಣಿಯಾಗಿರುತ್ತೇನೆ ಎಂದು ಹೇಳಿದರು.

ಬೆಂಗಳೂರು, ದಾವಣಗೆರೆಯಂಥ ನಗರಗಳಲ್ಲಿ ವಾಸ ಮಾಡುವ ನಾವೂ ನಿತ್ಯವೂ ಒತ್ತಡದಲ್ಲಿ ಜೀವನ ಸಾಗಿಸುತ್ತೇವೆ. ಆದ್ರೆ, ಮಠಕ್ಕೆ ಬಂದ ಬಳಿಕ ಇಲ್ಲಿನ ವಾತಾವರಣ, ಭಜನೆ, ಧಾರ್ಮಿಕ ಕಾರ್ಯಕ್ರಮಗಳನ್ನು ನೋಡುತ್ತಿದ್ದರೆ ಮನಸ್ಸಿಗೆ ಆನಂದವಾಗುತ್ತದೆ ಎಂದು ಜಿ. ಬಿ. ವಿನಯ್ ಕುಮಾರ್ ಅವರು ತಿಳಿಸಿದರು.

Read also : Crime news | ಸರಗಳ್ಳತನ: 2.80 ಲಕ್ಷ ಮೌಲ್ಯದ ಸ್ವತ್ತು ವಶ

ಈ ಸಂದರ್ಭದಲ್ಲಿ ಸದ್ಗುರು ಶ್ರೀ ಯೋಗಾನಂದ ಮಹಾಸ್ವಾಮೀಜಿ ಅವರು ವಿನಯ್ ಕುಮಾರ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಿ ಆಶೀರ್ವದಿಸಿದರು.

ಚಿತ್ರದುರ್ಗದ ಶ್ರೀ ಸದ್ಗುರು ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು.  ದಾವಣಗೆರೆಯ ಶ್ರೀ ಜಡೆಸಿದ್ಧ ಶಿವಯೋಗೀಶ್ವರ ಮಠದ ಶ್ರೀ ಶಿವಾನಂದ ಮಹಾಸ್ವಾಮೀಜಿ, ಹದಡಿಯ ಚಂದ್ರಗಿರಿ ಸಂಸ್ಥಾನ ಮಠದ ಶ್ರೀ ಮುರುಳೀಧರ ಮಹಾಸ್ವಾಮೀಜಿ, ಹೋತನಹಳ್ಳಿಯ ಶ್ರೀ ಸಿದ್ಧಾರೂಢ ಮಠದ ಶ್ರೀ ಶಂಕರಾನಂದ ಮಹಾಸ್ವಾಮೀಜಿ, ಚಿತ್ರಭಾನುಕೋಟೆಯ ಶ್ರೀ ಕೃಷ್ಣಾನಂದ ಭಾರತಿ ಮಹಾಸ್ವಾಮೀಜಿ, ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಹನಗವಾಡಿ ವೀರೇಶ್ ಮತ್ತು ಹಲವಾರು ಮುಖಂಡರು ವೇದಿಕೆಯಲ್ಲಿ ಹಾಜರಿದ್ದರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article maykonda Crime news | ಸರಗಳ್ಳತನ: 2.80 ಲಕ್ಷ ಮೌಲ್ಯದ ಸ್ವತ್ತು ವಶ
Next Article Davanagere crime news | ವರದಕ್ಷಿಣೆ ಆಸೆಗಾಗಿ ಹೆಂಡತಿ ಉಸಿರುಗಟ್ಟಿಸಿ ಸಾಯಿಸಿದ ಗಂಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davanagere | ಕರ್ನಾಟಕ ಪೊಲೀಸರು ದೇಶಕ್ಕೆ ಮಾದರಿ : ಸುರೇಶ್ ಬಿ.ಇಟ್ನಾಳ್

ದಾವಣಗೆರೆ  (Davanagere) : ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ವಿಚಾರದಲ್ಲಿ ಕರ್ನಾಟಕ ಪೊಲೀಸರು ದೇಶದಲ್ಲಿಯೇ ಮಾದರಿಯಾಗಿದ್ದಾರೆಎಂದು ಜಿಪಂ ಸಿಇಒ ಸುರೇಶ್…

By Dinamaana Kannada News

ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಪ್ರವಾಸ ಕೈಗೊಂಡು ಸ್ವಾಭಿಮಾನದ ಕ್ರಾಂತಿ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ಕರ್ನಾಟಕ ರಾಜ್ಯದ ಎಲ್ಲಾ ತಾಲೂಕುಗಳಿಗೂ ಭೇಟಿ ನೀಡಿ, ಸ್ವಾಭಿಮಾನಿ ಕ್ರಾಂತಿ ಮೊಳಗಿಸಲಾಗುತ್ತದೆ. ಕೃಷಿ, ಶಿಕ್ಷಣ, ಆರೋಗ್ಯ ಮತ್ತು…

By Dinamaana Kannada News

ಅಪ್ರಾಪ್ತ ಬಾಲಕಿ ಅಪಹರಿಸಿ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿ ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಕಠಿಣ…

By Dinamaana Kannada News

You Might Also Like

Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dr. Basavaprabhu Swamiji
ತಾಜಾ ಸುದ್ದಿ

ದಾವಣಗೆರೆ|ವೈಚಾರಿಕವಾಗಿ ಆಚರಣೆ ಮಾಡೋಣ : ಡಾ.ಬಸವಪ್ರಭು ಸ್ವಾಮೀಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?