Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಡಿಯೋ : ಕಬೀರ್ ಅಹ್ಮದ್ ಖಾನ್ ಬಂಧನ
ಅಪರಾಧ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಡಿಯೋ : ಕಬೀರ್ ಅಹ್ಮದ್ ಖಾನ್ ಬಂಧನ

Dinamaana Kannada News
Last updated: April 13, 2025 1:34 pm
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ವಿಧೇಯಕ ಜಾರಿ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟು, “ರೈಲು,ವಾಹನ ಬಸ್ಸಿಗೆ ಬೆಂಕಿ ಇಡಬೇಕು, ದಂಗೆ ಏಳಬೇಕು” ಎಂಬ ದುಷ್ಕೃತ್ಯದ ಹೇಳಿಕೆ ನೀಡಿದ್ದ ಪಾಲಿಕೆಯ ಕಾಂಗ್ರೆಸ್ ಪಕ್ಷದ ಮಾಜಿ ಸದಸ್ಯ ಕಬೀರ್ ಅಹ್ಮದ್ ಖಾನ್ ನನ್ನು ರಾಜಸ್ತಾನದ ಅಜ್ಮೀರ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.‌
ವಿವಾದಿತ ವೀಡಿಯೋ ಹರಿಬಿಟ್ಟಿದ್ದ  ಪಾಲಿಕೆ ಮಾಜಿ ಸದಸ್ಯ ಆರೋಪಿ ಕಬೀರ್  “ವಕ್ಫ್ ಮಸೂದೆಗೆ ತಿದ್ದುಪಡಿ ಮಾಡಿರುವುದನ್ನು ನಾವು ಒಪ್ಪುವುದಿಲ್ಲ. ಕೇವಲ ಪ್ರತಿಭಟನೆ ನಡೆಸಿದರೆ, ಬ್ಯಾನರ್ ಹಿಡಿದು ಓಡಾಡಿದರೆ ಏನೂ ಆಗಲ್ಲ. ಸಿಎಂ, ಡಿಸಿಎಂ, ಡಿಸಿಗೆ ಮನವಿ ಕೊಟ್ಟರೆ ಬೇಡಿಕೆ ಈಡೇರಲ್ಲ. ಎಲ್ಲರೂ ರಸ್ತೆಗೆ ಇಳಿಯಬೇಕು. ಏನ್ ಬೇಕಾದರೂ ಮಾಡಿ. ಬೆಂಕಿ ಇಡಿ, ಸಾಯಿರಿ. ಜೀವಗಳನ್ನು ಬಲಿ ಕೊಡಬೇಕು” ಎಂದು ಹೇಳಿದ್ದ.
“ಬಸ್ ಗೆ, ರೈಲಿಗೆ ಬೆಂಕಿ ಇಡಬೇಕು. ಕೆಲವನ್ನು ಹೇಳದೆಯೇ ಮಾಡಬೇಕು. ಯೋಜನೆ ರೂಪಿಸಿ ಮಾಡುವುದಲ್ಲ. ಊರಿನ ಪ್ರಮುಖರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಭಾರತದಲ್ಲಿ ನಮಗೆ ಯಾವ ನಾಯಕ ಇಲ್ಲ. ಯುವಕರು ಮನಸ್ಸು ಮಾಡಿದರೆ ಏನು ಬೇಕಾದರೂ ಮಾಡಬಹುದು. ಬಂದ್ ಮಾಡಿ, ಬೆಂಕಿ ಇಡಿ, ಒಡೆದು ಹಾಕಿ, ಮುರಿದು ಹಾಕಿ. ಏನೇ ಆದರೂ ತಲೆಕೆಡಿಸಿಕೊಳ್ಳಬೇಡಿ. ಗ್ರಾಮದಲ್ಲಿ 10ರಿಂದ 15 ಜನ ಸಾಯಬೇಕು. ತಲೆಹೊಡೆಯೋ ಕೆಲಸ ಮಾಡಬೇಕು” ಎಂದು ಸಾಮಾಜಿಕ ಜಾಲತಾಣದಲ್ಲಿ ಹೇಳುವ ಮೂಲಕ ವಿವಾದದ ಕಿಡಿ ಎಬ್ಬಿಸಿದ್ದ.
ತಿದ್ದುಪಡಿ ಮಸೂದೆ ವಿರೋಧಿಸುವ ವೇಳೆ ಸಮಾಜದಲ್ಲಿ ಅಶಾಂತಿ ಉಂಟುಮಾಡುವ, ಸಾಮರಸ್ಯಕ್ಕೆ ಧಕ್ಕೆ ತರುವ ಕಬೀರ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕವಾಗಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಲು ಒತ್ತಾಯ ಕೇಳಿಬಂದಿತ್ತು. ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆರೋಪಿ ಮೊಬೈಲ್ ಸ್ವಿಚ್ ಆಫ್ ಮಾಡಿ ಪೊಲೀಸರ ಕೈಗೆ ಸಿಗದೇ ಪರಾರಿಯಾಗಿದ್ದ. ಅಲರ್ಟ್ ಆಗಿದ್ದ ಪೊಲೀಸರು ಕೂಡ ಮಾಹಿತಿ ಸಂಗ್ರಹಿಸುತ್ತಿದ್ದರು.
ಪೊಲೀಸರು ಆರೋಪಿಯ ಬಂಧನಕ್ಕೆ ಮಾಹಿತಿ ಕಲೆಹಾಕಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಜ್ಮೀರ್ ನಲ್ಲಿರುವ ಕುರಿತು ಮಾಹಿತಿ ದೊರೆತಿತ್ತು. ಕೂಡಲೇ ಪೊಲೀಸ್ ಹಿರಿಯ ಅಧಿಕಾರಿಗಳು ಮತ್ತು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನಿರ್ದೇಶನದಂತೆ ರಾಜಸ್ಥಾನದ  ಅಜ್ಮೀರ್ ಗೆ ತೆರಳಿದ ದಾವಣಗೆರೆ ನಗರದ ಆಜಾದ್ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿಗಳು ಆರೋಪಿ ಕಬೀರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ದಾವಣಗೆರೆಗೆ ಕರೆತಂದಿದ್ದಾರೆ. ಮತ್ತು ವಿಡಿಯೋ ಹರಿಬಿಟ್ಟ ಕುರಿತಂತೆ ವಿಚಾರಣೆಯನ್ನು ನಡೆಸಿದ್ದಾರೆ.

Read also : ಲಕ್ಷ್ಮೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹನುಮನ ಜಯಂತಿ : ಜಿ. ಬಿ. ವಿನಯ್ ಕುಮಾರ್ ಭಾಗಿ

ಈ ಕುರಿತು ಮಾಹಿತಿ ನೀಡಿದ ಪೂರ್ವವಲಯ ಪೊಲೀಸ್ ಮಹಾನಿರ್ದೇಶಕರಾದ ಡಾ.ರವಿಕಾಂತೇಗೌಡ “ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ಆರೋಪಿ ಕಬೀರ್ ಖಾನ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪ್ರಕರಣದ ಮಾಹಿತಿ ಕಲೆ ಹಾಕಲಾಗಿದೆ. ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ” ಎಂದು ಖಚಿತಪಡಿಸಿದರು.
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಲಕ್ಷ್ಮೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ, ಹನುಮನ ಜಯಂತಿ : ಜಿ. ಬಿ. ವಿನಯ್ ಕುಮಾರ್ ಭಾಗಿ
Next Article P.R. Venkatesh poem | ಚೂರೇಚೂರು ಮಾನವೀಯತೆ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಅನ್ನದಾನದಿಂದ ಮಾತ್ರ ತೃಪ್ತಿಪಡಿಸಲು ಸಾಧ್ಯ : ಡಾ. ಡಿ.ವೀರೇಂದ್ರ ಹೆಗ್ಗಡೆ

ದಾವಣಗೆರೆ (DAVANAGERE):  ದಾನ ಕೊಟ್ಟ ತೃಪ್ತಿಪಡಿಸಲು ಸಾದ್ಯವಿದ್ದರೆ ಅದು ಅನ್ನದಾನದಿಂದ ಮಾತ್ರ ಸಾಧ್ಯ” ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.…

By Dinamaana Kannada News

DAVANAGERE NEWS : ಹಿಂದುಳಿದ ವರ್ಗದ ಸಮುದಾಯದಗಳಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳ ಅರ್ಜಿ ಆಹ್ವಾನ

ದಾವಣಗೆರೆ.ಆ.02  (Davangere district )   ಪ್ರಸಕ್ತ ಸಾಲಿನಲ್ಲಿ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು -10: ವೇಷಗಾರರ ಸಂಕಟ  

ಗಣಿಗಾರಿಕೆಯನ್ನೆ ನಂಬಿ ಬದುಕಿದ್ದ ಕುಟುಂಬಗಳು ಒಂದು ಕಡೆಯಾದರೆ ಅಂತಹ ಕುಟುಂಬಗಳನ್ನೆ ಅವಲಂಬಿಸಿ ಬದುಕುತ್ತಿದ್ದ ಸಾವಿರಾರು ಕೂಲಿ ಕಾರ್ಮಿಕರ ಕುಟುಂಬಗಳೂ ಇದ್ದವು.…

By Dinamaana Kannada News

You Might Also Like

Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dr. Basavaprabhu Swamiji
ತಾಜಾ ಸುದ್ದಿ

ದಾವಣಗೆರೆ|ವೈಚಾರಿಕವಾಗಿ ಆಚರಣೆ ಮಾಡೋಣ : ಡಾ.ಬಸವಪ್ರಭು ಸ್ವಾಮೀಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?