Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾದಕ ವಸ್ತುಗಳ ಪಿಡುಗು ನಿರ್ಮೂಲನೆಗೆ ಒಟ್ಟಾಗಿ : ಮಹಾವೀರ ಮ. ಕರೆಣ್ಣನವರ್
ತಾಜಾ ಸುದ್ದಿ

ಮಾದಕ ವಸ್ತುಗಳ ಪಿಡುಗು ನಿರ್ಮೂಲನೆಗೆ ಒಟ್ಟಾಗಿ : ಮಹಾವೀರ ಮ. ಕರೆಣ್ಣನವರ್

Dinamaana Kannada News
Last updated: April 30, 2025 4:36 am
Dinamaana Kannada News
Share
ದಾವಣಗೆರೆ
ದಾವಣಗೆರೆ
SHARE

ದಾವಣಗೆರೆ (Davangere) : ಮಾದಕ ದ್ರವ್ಯಗಳು ಮತ್ತು ಮನೋವಿಕೃತ ಪದಾರ್ಥಗಳ ಅಕ್ರಮ ಸ್ವಾದೀನ, ಮಾರಾಟ, ಸಾಗಾಣೆ ಮತ್ತು ಸೇವನೆಯ ನಿಯಂತ್ರಣ, ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ ಕಠಿಣ ನಿಬಂಧನೆಗಳನ್ನು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ 1985ರಲ್ಲಿ ಸ್ಥಾಪಿಸಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ  ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣನವರ್ ತಿಳಿಸಿದರು.

ಬಾಪೂಜಿ ವಿದ್ಯಾಸಂಸ್ಥೆ (ರಿ.), ಆರ್.ಎಲ್. ಕಾನೂನು ಕಾಲೇಜು, ದಾವಣಗೆರೆ, ಜಿಲ್ಲಾ  ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ  ತಂಬಾಕು ನಿಯಂತ್ರಣ ಕೋಶ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಯೋಗದೊಂದಿಗೆ ಇಂದು ಆರ್.ಎಲ್. ಲಾ ಕಾಲೇಜಿನಲ್ಲಿ “ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ 1985” ರ ಕುರಿತು ಕಾನೂನು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಹಲುವ ಪೀಡೆಗಳ ಸಮಾಧಿಯ ಮೇಲೆ ಸದೃಢ ಸಮೃದ್ಧ ಭಾರತವನ್ನು ಕಟ್ಟಬೇಕಾಗಿದೆ. ಸಾರ್ವಜನಿಕರು ಮಾದಕ ವಸ್ತುಗಳ ಪಿಡುಗನ್ನು ನಿರ್ಮೂಲನೆ ಮಾಡಲು ಒಟ್ಟಾಗಿ ಈ ಪಿಡುಗಿನ ವಿರುದ್ಧ ಕೈಜೋಡಿಸಬೇಕೆಂದು ತಿಳಿಸಿದರು.

ಈ ಕಾಯ್ದೆಗೆ ಇನ್ನೂ ಹೆಚ್ಚಿನ ಬಲ ನೀಡಲು ಹಲವಾರು ತಿದ್ದುಪಡಿಗಳನ್ನು ತರಲಾಗಿದೆ ಎಂದರು. ಎನ್‍ಡಿಪಿಎಸ್ ಕಾಯ್ದೆ ಅತ್ಯಂತ ಪ್ರಬಲ ಕಾಯ್ದೆಯಾಗಿದ್ದು, ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಇದರಲ್ಲಿ ಒಳಗೊಂಡಿವೆ ಈ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ಸಾಬೀತಾದರೆ ಆರೋಪಿಗೆ ಕನಿಷ್ಟ 1 ಲಕ್ಷ ದಂಡ ಹಾಗೂ 10 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಎಲ್. ಎಚ್. ಅರುಣಕುಮಾರ್ ಮಾತನಾಡಿ,  ಭಾರತದ ಯುವಸಮೂಹವನ್ನು ಕಂಡು ಬೇರೆ ದೇಶಗಳು ಬೆರಗಾಗಿವೆ. ಬಹುರಾಷ್ಟ್ರೀಯ ಕಂಪನಿಗಳಲ್ಲಿ ಭಾರತೀಯ ಯುವಕರಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಸುಭದ್ರ ಸದೃಢ ರಾಷ್ಟ್ರವನ್ನು ಕಟ್ಟಲು ಯುವಕರ ಪಾತ್ರ ಬಹಳ ಮುಖ್ಯವಾಗಿದೆ. ಆದರೆ ಯಾವ ಯುವಶಕ್ತಿ ದೇಶವನ್ನಾಳಬೇಕೋ, ದೇಶದ ಆಸ್ತಿಯಾಗಬೇಕೋ ಅದೇ ಯುವಜನತೆ ಮಾದಕ ಪದಾರ್ಥಗಳ ವ್ಯಸನಿಗಳಾಗುತ್ತಿರುವುದು ವಿಷಾದನೀಯ ಎಂದರು.

ವರದಿಯೊಂದರ ಪ್ರಕಾರ ಮಾದಕ ವ್ಯಸನಿಗಳಲ್ಲಿ ಶೇ. 50ಕ್ಕೂ ಹೆಚ್ಚು 10 ರಿಂದ 20 ವರ್ಷಗಳ ವಿದ್ಯಾರ್ಥಿಗಳು ಇದ್ದಾರೆ ಎನ್ನುವುದು ದುರಂತದ ವಿಷಯವಾಗಿದೆ. ಯುವಜನತೆ ಹಲವಾರು ಕ್ಷೇತ್ರಗಳಲ್ಲಿ ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸುತ್ತಿರುವ ಈಗಿನ ದಿನಗಳಲ್ಲಿ ದುಶ್ಚಟಗಳು ಅವರನ್ನು ಅವನತಿಯ ಹಂತಕ್ಕೆ ತಲುಪಿಸುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.

Read also : Ranebennur | ರಷ್ಯಾದಲ್ಲಿ ಡಾ. ನಾಗರಾಜ ಎಸ್. ಕೆ ಅವರಿಗೆ ಗ್ಲೋಬಲ್‌ ಅಚಿವರ್ಸ್ ಪ್ರಶಸ್ತಿ  

ಸಹಾಯಕ ಕಾನೂನು ನೆರವು ಅಭಿರಕ್ಷಕರದಾ ಮಹಾದೇವಿ ಸಿ. ಹಿರೇಮಠ ಮಾತನಾಡಿದರು. ಜಿಲ್ಲಾ ತಂಬಾಕು  ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಸತೀಶ್ ಕಲಹಾಲ್‍ರವರು ಮಾತನಾಡಿದರು.

ಸಹಾಯಕ ಪ್ರಾಧ್ಯಾಪಕರಾದ ಪ್ರದೀಪ್ ಕೆ.ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರ

ಆರ್.ಎಲ್. ಕಾನೂನು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪವನ್ ಹೆಚ್.ಆರ್. ಹಾಗೂ ಸಹಾಯಕ ಪ್ರಾಧ್ಯಾಪಕ ವಿದ್ಯಾಧರ ವೇದವರ್ಮ ಟಿ. ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ranebennuru Ranebennur | ರಷ್ಯಾದಲ್ಲಿ ಡಾ. ನಾಗರಾಜ ಎಸ್. ಕೆ ಅವರಿಗೆ ಗ್ಲೋಬಲ್‌ ಅಚಿವರ್ಸ್ ಪ್ರಶಸ್ತಿ  
Next Article World Workers' Day ವಿಶ್ವ ಕಾರ್ಮಿಕರ ದಿನಾಚರಣೆ | ಬದುಕಿಗಾಗಿ ಹೋರಾಟ – ಹೋರಾಟಕ್ಕಾಗಿ ಬದುಕು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere Judgement news | ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ.ಸೆ.17 (Davanagere): ಜಮೀನು ವಿವಾದದಿಂದ ಕೋಪಗೊಂಡು ತನ್ನ ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ ಮತ್ತು 20…

By Dinamaana Kannada News

ಕ್ರೂರ ವರ್ತಮಾನದಲ್ಲೂ ತಣ್ಣಗಿನ ಉಭಯ ಕುಶಲೋಪರಿ ಮಾದರಿಯ ಬರೆಹ  

Violence is the integral part of Hindutva Ideology ಎಂದ ಎಂ.ಎಸ್.ಗೊಲ್ವಾಲ್ಕರ್  "violence should be used as…

By Dinamaana Kannada News

LG Havanur | ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಎಲ್.ಜಿ.ಹಾವನೂರು

ಸಂವಿಧಾನದ 16 (4) ನೇ ವಿಧಿಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ನಿಗದಿಪಡಿಸುವ ಅವಕಾಶವನ್ನು ಪ್ರಭುತ್ವಕ್ಕೆ ನೀಡಲಾಗಿದೆ.ಇದನ್ನು ಬಳಸಿಕೊಂಡು  ಮುಖ್ಯಮಂತ್ರಿ ದೇವರಾಜ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?