Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್
ತಾಜಾ ಸುದ್ದಿ

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

Dinamaana Kannada News
Last updated: May 20, 2025 2:31 pm
Dinamaana Kannada News
Share
Davanagere
Davanagere
SHARE
ಚನ್ನಗಿರಿ : ಕಳೆದ ಸಾಲಿನ ಆ. 1ರಂದು ಒಳಮೀಸಲಾತಿ ಆಯಾ ರಾಜ್ಯಗಳು ಜಾರಿಗೊಳಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ಮಾಡಿದೆ. ಆದರೆ 1 ವರ್ಷವಾದರೂ  ಸರ್ಕಾರ  ಜಾರಿಗೊಳಿಸದೇ ಮೀನಮೇಷ ಮಾಡುತ್ತಿದೆ’ ಎಂದು ರಾಜ್ಯ ಮಾದಿಗ ಸಮಾಜದ ಹಿರಿಯ ಮುಖಂಡ ಬಿ.ಆರ್. ಭಾಸ್ಕರ್ ಪ್ರಸಾದ್ ತಿಳಿಸಿದರು.
ಪಟ್ಟಣದ ಗಾಂಧಿ ವೃತ್ತದಲ್ಲಿ ಮಂಗಳವಾರ ಒಳಮೀಸಲಾತಿಗಾಗಿ ಕ್ರಾಂತಿಕಾರಿ ರಥಯಾತ್ರೆಯ ನೇತೃತ್ವ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಮಾದಿಗ ಸಮಾಜ ಒಳಮೀಸಲಾತಿ ವಿಷಯದಲ್ಲಿ ತುಂಬಾ ಅನ್ಯಾಯಕ್ಕೊಳಗಾಗಿದೆ. ನಮ್ಮ ಸಮುದಾಯಕ್ಕೆ ಒಳಮೀಸಲಾತಿ ಸಿಗದಂತೆ ಮಾಡಲು ರಾಜ್ಯ ಸಚಿವ ಸಂಪುಟದಲ್ಲಿರುವ ಎಚ್.ಸಿ. ಮಹಾದೇವಪ್ಪ, ಪ್ರಿಯಾಂಕ ಖರ್ಗೆ, ಆರ್.ಬಿ. ತಿಮ್ಮಾಪುರ ಹಾಗೂ ಕೆ.ಎಚ್. ಮುನಿಯಪ್ಪ ಅಡ್ಡಗಾಲು ಹಾಕುತ್ತಿದ್ದಾರೆ. ಇದೇ ಏ. 5ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಳಮೀಸಲಾತಿ ನಮ್ಮ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲು ಬದ್ಧವಾಗಿದೆ ಎಂದು ವೇದಿಕೆಯಲ್ಲಿ ತಿಳಿಸಿದ್ದರು. ಆದರೆ ಇದುವರೆಗೂ ಒಳಮೀಸಲಾತಿ ಜಾರಿಗೊಳಿಸಲು ಈ ಸರ್ಕಾರಕ್ಕೆ ಸಾಧ್ಯವಾಗಿರುವುದಿಲ್ಲ ಎಂದರು.
Read also : ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ
ಹಾಗಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೊಣೆಗೇಡಿ ಹಾಗೂ ನಂಬಿಕೆದ್ರೋಹಿ ಮುಖ್ಯಮಂತ್ರಿಯಾಗಿದ್ದಾರೆ. ಕ್ರಾಂತಿಕಾರಿ ರಥಯಾತ್ರೆ ಪ್ರಾರಂಭಿಸಿ ಇಂದಿಗೆ 80 ದಿನಗಳಾಗಿವೆ. ಇಡೀ ರಾಜ್ಯಾದ್ಯಾಂತ ರಥಯಾತ್ರೆ ಪ್ರವಾಸ ಮಾಡುತ್ತಿದೆ. ಒಳಮೀಸಲಾತಿ ಜಾರಿಗೊಳಿಸದೇ ಬಡ್ತಿ ಹಾಗೂ ನೇಮಕಾತಿ ಮಾಡುವುದಿಲ್ಲ ಎಂದು ಹೇಳಿದ ಸರ್ಕಾರ ಮಾತಿಗೆ ತಪ್ಪಿ ಬಡ್ತಿ ಹಾಗೂ ಒಳಮೀಸಲಾತಿ ಇಲ್ಲದೇ ನೇಮಕಾತಿ ಪ್ರಕ್ರಿಯೆಯನ್ನು ನಡೆಸಿದೆ. ಒಳಮೀಸಲಾತಿಯನ್ನು ಜಾರಿಗೊಳಿಸದೇ ಹೋದರೇ ಜೂನ್ 9ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಕೂಡಾ ಹಮ್ಮಿಕೊಳ್ಳಲಾಗಿದೆ ಎಂದರು.
ಮಾದಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಕೋಗಲೂರು ಪ್ರಕಾಶ್, ಗೌರವಾಧ್ಯಕ್ಷ ಬಿ. ಮಂಜುನಾಥ್, ಮುಖಂಡರಾದ ದೀಪಕ್ ಕುಮಾರ್, ಎಚ್.ಎನ್. ಮೂರ್ತಿ, ಎಸ್. ಆನಂದ್, ಪ್ರಭಾಕರ್, ಶಿವಲಿಂಗಪ್ಪ, ಶಿವಣ್ಣ, ರುದ್ರಪ್ಪ, ಕುಬೇಂದ್ರಸ್ವಾಮಿ ಉಪಸ್ಥಿತರಿದ್ದರು.
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಭತ್ತ ಕಟಾವು ಯಂತ್ರಕ್ಕೆ, ಬಾಡಿಗೆ ದರ ನಿಗದಿ : ಡಿಸಿ
Next Article davanagere ವೈದ್ಯನಿಗೆ ಆನ್‌ಲೈನ್ ವಂಚನೆ : ಎಫ್‌ಐಆರ್ ದಾಖಲು ಬರೋಬ್ಬರಿ 2.40 ಕೋಟಿ ರೂ. ಪಂಗನಾಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

 ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸಿ 

ದಾವಣಗೆರೆ, ಜೂ.28  :  ನಮ್ಮ ಸಣ್ಣ ನಿರ್ಲಕ್ಷ್ಯ ಕೂಡ ಡೆಂಗಿಜ್ವರದಿಂದ ನರಳುವಂತೆ ಮಾಡಬಹುದು, ಆದ್ದರಿಂದ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸೊಳ್ಳೆ…

By Dinamaana Kannada News

ಅಂತರಾಷ್ಟ್ರೀಯ ಯೋಗ ದಿನಾಚರಣೆ : 5 ರಿಂದ 6 ಸಾವಿರ ಜನರು ಭಾಗಿ

ದಾವಣಗೆರೆ .ಜೂ.19    : ಸ್ವಂತ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷವಾಕ್ಯದಡಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ…

By Dinamaana Kannada News

ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ: ಸಿಎಂ ಸಿದ್ದರಾಮಯ್ಯ

ಶಿರಸಿ ಮಾ 6: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?