Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕ್ರಾಂತಿಕಾರಿ ರಥಯಾತ್ರೆಗೆ ಅಡ್ಡಿ ಖಂಡಿಸಿ ಪ್ರತಿಭಟನೆ
ತಾಜಾ ಸುದ್ದಿ

ಕ್ರಾಂತಿಕಾರಿ ರಥಯಾತ್ರೆಗೆ ಅಡ್ಡಿ ಖಂಡಿಸಿ ಪ್ರತಿಭಟನೆ

Dinamaana Kannada News
Last updated: May 28, 2025 5:35 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಪ.ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವುದೂ ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟುಕೊAಡು ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಕ್ರಾಂತಿಕಾರಿ ರಥಯಾತ್ರೆಗೆ ಅಡ್ಡಿಪಡಿಸಿ, ಹೋರಾಟಗಾರರನ್ನು ಬಂಧಿಸಿದ ಪೊಲೀಸರ ಕ್ರಮ ಖಂಡಿಸಿ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿಯಿಂದ ನಗರದಲ್ಲಿ  ಸಾಂಕೇತಿಕ ಪ್ರತಿಭಟನೆ ನಡೆಸಿ, ಉಪ ವಿಭಾಗಾಧಿಕಾರಿ ಕಚೇರಿಯ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಲಾಯಿತು.

ಕ್ರಾಂತಿಕಾರಿ ರಥಯಾತ್ರೆ ಪ್ರಯುಕ್ತ ಮೇ.25 ರಂದು ಮೈಸೂರಿನ ಚಾಮುಂಡಿ ಬೆಟ್ಟದಿಂದ ಅರೆಬೆತ್ತಲೆಯಾಗಿ ಶಾಂತಿಯುತ ಪಾದಯಾತ್ರೆ ಕೈಗೊಂಡಿದ್ದ ವೇಳೆ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕಾರು ಜನ ಕಲ್ಲು ತೂರಲು ಪ್ರಯತ್ನಿಸಿದ್ದು, ಅಂತಹವರನ್ನು ಕಾನೂನು ಪ್ರಕಾರ ಬಂಧಿಸುವ ಬದಲು ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿ ಮುಖಂಡರು, ಕಾರ್ಯಕರ್ತರನ್ನು ಬಂಧಿಸಿದ್ದು ಏಕೆ ಎಂಬ ಪ್ರಶ್ನೆಗೆ ಪೊಲೀಸ್ ಇಲಾಖೆ ಉತ್ತರಿಸಬೇಕು ಎಂದು ಸಮಿತಿ ಮುಖಂಡರು ಒತ್ತಾಯಿಸಿದರು.

ಬಂಧನಕ್ಕೆ ನಿಖರ ಕಾರಣವನ್ನು ಪೊಲೀಸ್ ಇಲಾಖೆ ನೀಡುತ್ತಿಲ್ಲ. ಪಾದಯಾತ್ರೆಗೆ ಅಡ್ಡಿ ಮಾಡುವವರನ್ನು ಬಂಧಿಸಿ, ಕಾನೂನು ಕ್ರಮ ಜರುಗಿಬೇಕಾಗಿದ್ದ ಪೊಲೀಸ್ ಇಲಾಖೆಯು ರಥಯಾತ್ರೆಗೆ ಅಡ್ಡಿಪಡಿಸಿದೆ. ತಪ್ಪಿತಸ್ಥರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕು. ಟ್ರಾಫಿಕ್ ಸಮಸ್ಯೆ ನೆಪವೊಡ್ಡಿ, ಕ್ರಾಂತಿಕಾರಿ ರಥಯಾತ್ರೆಯಲ್ಲಿದ್ದವರನ್ನು ಕಾರಣವಿಲ್ಲದೆ ಬಂಧಿಸಿದ್ದು ಸರಿಯಲ್ಲ. ಪೊಲೀಸರು ಹೋರಾಟಗಾರರ ಮೇಲೆ ಬಲಪ್ರಯೋಗ ಮಾಡಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಒಳ ಮೀಸಲಾತಿ ಜಾರಿಯಾಗುವವರೆಗೆ ಬಡ್ತಿ ಮೀಸಲಾತಿ ತಡೆಹಿಡಿಯಬೇಕು. ತುಳಿತಕ್ಕೊಳಗಾದ ಮಾದಿಗ ಸಮಾಜಕ್ಕೆ ಸೂಕ್ತ ರಕ್ಷಣೆ ನೀಡಬೇಕು. ಮಾದಿಗರ ಹೋರಾಟ ಹತ್ತಿಕ್ಕುವ ದುಸ್ಸಾಹಸವನ್ನು ಯಾರೂ ಮಾಡಬಾರದು. ಹೋರಾಟವನ್ನು ದಮನ ಮಾಡಲು ಯತ್ನಿಸಿದರೆ ಜೂನ್ 9 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿ ನೇತೃತ್ವದ ಐತಿಹಾಸಿಕ, ಬೃಹತ್ ಸಮಾವೇಶದ ಮೂಲಕ ರಾಜ್ಯ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಾಗುವುದು. ಕ್ರಾಂತಿಕಾರಿ ರಥಯಾತ್ರೆ ಮುಗಿಯುವವರೆಗೂ ರಾಜ್ಯ ಸರ್ಕಾರ ಸೂಕ್ತ ಭದ್ರತೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದರು.

Read also : ಎಸ್ಸಿ ಪಟ್ಟಿಗೆ ವೀರಶೈವ ಜಂಗಮರು ಸೇರ್ಪಡೆ: ತಡೆಯಲು ವಕೀಲರು ಆಗ್ರಹ

ಸಮಿತಿ ಜಿಲ್ಲಾಧ್ಯಕ್ಷ ಸಿ.ಬಸವರಾಜ, ಮುಖಂಡರಾದ ಹೆಗ್ಗೆರೆ ರಂಗಪ್ಪ, ದುಗ್ಗಪ್ಪ, ಹೆಚ್.ಡಿ.ಉದಯಪ್ರಕಾಶ, ಡಿ.ನಾಗರಾಜ, ಕೆ.ಸಿ.ನಿರಂಜನಮೂರ್ತಿ, ಬಿ.ಮಂಜುನಾಥ, ಕೆ.ಕಿರಣ, ಹನುಮಂತಪ್ಪ, ಅಂಜಿನಪ್ಪ, ಸಂತೋಷ, ಕೆ.ಮಂಜುನಾಥ, ಜಿಗಳಿ ಹಾಲೇಶ, ಸದಾನಂದ ಚಿಕ್ಕನಹಳ್ಳಿ, ಬಿ.ಮಂಜುನಾಥ ಇತರರು ಹಾಜರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಎಸ್ಸಿ ಪಟ್ಟಿಗೆ ವೀರಶೈವ ಜಂಗಮರು ಸೇರ್ಪಡೆ: ತಡೆಯಲು ವಕೀಲರು ಆಗ್ರಹ
Next Article Applications invited ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕವಿ ಯಾರು? (Who is the Poet?)

​ಕವಿ ಎಂದರೆ ಕೇವಲ ಪದಗಳನ್ನು ಜೋಡಿಸುವವನಲ್ಲ. ಆತನು ಕಲ್ಪನೆಯ ಲೋಕದಲ್ಲಿ ವಿಹರಿಸುತ್ತಾ, ಜೀವನದ ಸಾರವನ್ನು ಅಕ್ಷರಗಳ ಮೂಲಕ ಅಭಿವ್ಯಕ್ತಿಸುವ ಸೃಷ್ಟಿಕರ್ತ.…

By Dinamaana Kannada News

ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಸೂಚನೆ

ದಾವಣಗೆರೆ:  ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳ್ಳಿ ಹಾಗೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನಲ್ಲಿ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ…

By Dinamaana Kannada News

ದಾವಣಗೆರೆ ಜಿಲ್ಲೆಗೆ ಜೂ. 27 ರಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ

ದಾವಣಗೆರೆ : ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ನ ನೂತನ ಅಧ್ಯಕ್ಷ ಮಂಜುನಾಥ್ ಗೌಡ ಅವರು ಜೂ. 27 ರಂದು ಜಿಲ್ಲೆಗೆ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?