Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಸಂತೋಷ್ ಪಾಟೀಲ್
ತಾಜಾ ಸುದ್ದಿ

ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಸಂತೋಷ್ ಪಾಟೀಲ್

Dinamaana Kannada News
Last updated: May 28, 2025 3:20 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಸಮಾಜದಲ್ಲಿ ಹೆಣ್ಣು ಮತ್ತು ಗಂಡು ಎಂಬ ಲಿಂಗತಾರತಮ್ಯ ಸಲ್ಲದಾಗಿದ್ದು ಪ್ರಸವ ಪೂರ್ವ ಮತ್ತು ನಂತರದಲ್ಲಿ ಹೆಣ್ಣು ಭ್ರೂಣ ಹತ್ಯೆ ಕಾನೂನುಬಾಹಿರವಾಗಿದೆ. ಯಾವುದೇ ಕಾರಣಕ್ಕೂ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್ ಸೂಚನೆ ನೀಡಿದರು.

ಬುಧವಾರ ಅವರ ಕಚೇರಿಯಲ್ಲಿ ನಡೆದ ಪಿ.ಸಿ ಮತ್ತು ಪಿಎನ್‍ಡಿಟಿ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸವ ಪೂರ್ವದಲ್ಲಿ ಭ್ರೂಣಲಿಂಗಪತ್ತೆ ಮಾಡುವುದು ಕಾನೂನು ಬಾಹಿರವಾಗಿದೆ. ಆದರೂ ಸಹ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಲಿಂಗಪತ್ತೆಯಂತಹ ಕೃತ್ಯಗಳು ನಡೆಯುತ್ತಿರುವ ವರದಿಯನ್ನು ಗಮನಿಸಲಾಗಿದೆ. ಜಿಲ್ಲೆಯಲ್ಲಿ ಯಾವುದೇ ಸ್ಕ್ಯಾನಿಂಗ್ ಸೆಂಟರ್‍ಗಳಲ್ಲಿ ಲಿಂಗಪತ್ತೆ ಮಾಡಿ ಭ್ರೂಣಹತ್ಯೆಗೆ ಸಹಕಾರ ನೀಡುವಂತಹ ಕೆಲಸವನ್ನು ಯಾವುದೇ ವೈದ್ಯರು ಮಾಡಬಾರದು ಎಂದರು.

ಜಿಲ್ಲೆಯಲ್ಲಿನ ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳು ಜಿಲ್ಲಾ ಮಟ್ಟದ ಸಲಹಾ ಸಮಿತಿಯಿಂದ ಅನುಮೋದನೆ ಪಡೆದುಕೊಂಡು ಪ್ರಾರಂಭಿಸಬೇಕು, ಆದರೆ ಕೆಲವು ಸೆಂಟರ್‍ಗಳಿಗೆ ಅನುಮೋದನೆ ನೀಡಿ ನಂತರ ಸಮಿತಿಯಿಂದ ಘಟನೋತ್ತರ ಅನುಮತಿ ಪಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಇದಕ್ಕೆ ಅವಕಾಶ ನೀಡುವುದಿಲ್ಲ. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಕಡ್ಡಾಯವಾಗಿ ರೇಡಿಯೋಲಾಜಿಸ್ಟ್ ವೈದ್ಯರು ಇರಲೇಬೇಕು ಮತ್ತು ಯಾವುದೇ ಕಾರಣಕ್ಕೂ ತಾಂತ್ರಿಕ ಸಹಾಯಕರು ಸ್ಕ್ಯಾನಿಂಗ್ ಮಾಡುವಂತಿಲ್ಲ, ಸ್ಕ್ಯಾನಿಂಗ್ ದರಗಳನ್ನು ಆಯಾ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶನ ಮಾಡಬೇಕೆಂದರು.

ಅನಿರೀಕ್ಷಿತ ಭೇಟಿ; ಮುಂದಿನ ದಿನಗಳಲ್ಲಿ ಸ್ಕ್ಯಾನಿಂಗ್ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ. ಒಂದು ವೇಳೆ ನಿಯಮಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದಲ್ಲಿ, ಅಂತಹ ಕೇಂದ್ರಗಳ ಪರವಾನಗಿ ರದ್ದು ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Read also : ಕೋವಿಡ್-19 ಜನರು ಆತಂಕಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿ : ಡಿಸಿ

ಲಿಂಗಾನುಪಾತದಲ್ಲಿ 2 ನೇ ಸ್ಥಾನ; ದಾವಣಗೆರೆ ಜಿಲ್ಲೆಯು ನವಜಾತ ಶಿಶುಗಳ ಜನನದ ಲಿಂಗಾನುಪಾತದಲ್ಲಿ ರಾಜ್ಯದಲ್ಲಿ 2 ನೇಸ್ಥಾನದಲ್ಲಿದೆ. 2024 ರ ಏಪ್ರಿಲ್ ನಿಂದ 2025 ರ ಮಾರ್ಚ್ ವರೆಗಿನ ಅಂಕಿಅಂಶಗಳನ್ವಯ 21938 ನವಜಾತ ಶಿಶುಗಳ ಜನನವಾಗಿದ್ದು ಇದರಲ್ಲಿ 10765 ಹೆಣ್ಣು ಮತ್ತು 11173 ಗಂಡು ಮಗುವಿನ ಜನನವಾಗಿದೆ. ಇದು ರಾಜ್ಯದಲ್ಲಿ 2 ನೇ ಸ್ಥಾನದಲ್ಲಿದ್ದು ಮೊದಲು ಉಡುಪಿ, ರಾಮನಗರ 3 ನೇಸ್ಥಾನ ಮತ್ತು ಶಿವಮೊಗ್ಗ 4 ರಲ್ಲಿದೆ. ಜಿಲ್ಲೆಯಲ್ಲಿ ಸರ್ಕಾರಿ 7 ಮತ್ತು ಖಾಸಗಿ ಮತ್ತು ಇತರೆ ಸಂಸ್ಥೆಗಳಲ್ಲಿ 125 ಸೇರಿ ಒಟ್ಟು 132 ಸ್ಕ್ಯಾನಿಂಗ್ ಕೇಂದ್ರಗಳಿವೆ. ಇದರಲ್ಲಿ ಪ್ರಸ್ತುತ 113 ಕಾರ್ಯನಿರ್ವಹಿಸುತ್ತಿವೆ.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಷಣ್ಮುಖಪ್ಪ, ಮಕ್ಕಳ ತಜ್ಞರು ಹಾಗೂ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷರಾದ ಡಾ; ಎನ್.ಕೆ.ಕಾಳಪ್ಪನವರ್, ಜಿಲ್ಲಾ ಸಲಹಾ ಸಮಿತಿ ನೋಡಲ್ ಅಧಿಕಾರಿ ಡಾ; ರುದ್ರಸ್ವಾಮಿ ಎಂ.ಕೆ, ಹಿಮೋಪೋಲಿಯೋ ಸೊಸೈಟಿ ಡಾ; ಮೀರಾ ಹನಗವಾಡಿ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಪ್ರಸೂತಿ ತಜ್ಞೆ ಡಾ; ಪ್ರವೀಣ ಎಸ್.ಎನ್, ಚಿಗಟೇರಿ ಆಸ್ಪತ್ರೆ ರೇಡಿಯೋಲಾಜಿಸ್ಟ್ ಡಾ; ಸುಮಿತ್ರ ಎಲ್ ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ಕೋವಿಡ್-19 ಜನರು ಆತಂಕಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿ : ಡಿಸಿ
Next Article ಸೈಯದ್ ಖಾಲಿದ್ ಅಹ್ಮದ್ ಕಮಲ್ ಹಾಸನ್ ಕನ್ನಡಿಗರ ಬೇಷರತ್ ಕ್ಷಮೆಯಾಚಿಸಲೇಬೇಕು : ಸೈಯದ್ ಖಾಲಿದ್ ಅಹ್ಮದ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ ರಾಧಾಕೃಷ್ಣ ಜ್ಯುವೆಲರ್ಸ್‌ ನಿಂದ 1 ಲಕ್ಷ ರೂ. ಮೆಗಾ ಬಂಪರ್‌ ಬಹುಮಾನ ಗೆದ್ದ ವಿನಾಯಕ !

ದಾವಣಗೆರೆ: ನಗರದ ಪ್ರತಿಷ್ಠಿತ ಆಭರಣಗಳ ಮಾರಾಟ ಶೋರೂಮ್‌ ರಾಧಾಕೃಷ್ಣ ಜ್ಯುವೆಲರ್ಸ್‌ ನಿಂದ ಈ ಬಾರಿ ದಸರಾ-ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಕಿ…

By Dinamaana Kannada News

ಜಿ.ಎಸ್.ಟಿ. ನಿಯಮದನ್ವಯ ವ್ಯಾಪಾರ ವಹಿವಾಟು ನಡೆಸಲು ಡಿಸಿ ಸೂಚನೆ

ದಾವಣಗೆರೆ,ಮಾ.26 ಲೋಕಸಭಾ ಚುನಾವಣೆ ನಡೆಯುತ್ತಿದ್ದು ನೀತಿ ಸಂಹಿತೆ ಜಾರಿಯಲ್ಲಿದೆ. ಜವಳಿ, ಚಿನ್ನಬೆಳ್ಳಿ, ಕಿಚನ್ ವಸ್ತುಗಳ ವ್ಯಾಪಾರಿಗಳು ಸೇರಿದಂತೆ ಟ್ರಾನ್ಸ್ ಪೋರ್ಟ್…

By Dinamaana Kannada News

Davanagere Police Public School | ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ಕೊಡಿ : ಡಿವೈಎಸ್ಪಿ ಪ್ರಕಾಶ್

ದಾವಣಗೆರೆ (Davangere District) : ಹರಿಹರ ತಾಲೂಕು ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಹಾಕಿ ಮಾಂತ್ರಿಕ ಧ್ಯಾನ್ ಚಂದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?