ದಾವಣಗೆರೆ (Davanagere): ವಿದ್ಯಾರ್ಥಿ ಜೀವನದಲ್ಲಿ ಓದು ಬಹು ಮುಖ್ಯ. ಓದು ಜೀವನದ ಗುರಿಯಾಗಿರಬೇಕು. ಭವಿಷ್ಯದ ಕಡೆ ಚಿತ್ತ ಇರಬೇಕು. ಆಗ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ್ ಹೇಳಿದರು.
ನಗರದ ವನಿತಾ ಸಮಾಜದ ಸಭಾಂಗಣದಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಜಿಲ್ಲಾ ಸಮಿತಿ ವತಿಯಿಂದ ಎಸ್ಸೆಸ್ಸೆಲ್ಸಿ. ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾರ್ಮಿಕರ ಮಕ್ಕಳಿಗೆ ಹಮ್ಮಿಕೊಂಡಿದ್ದ ಏಳನೇ ವರ್ಷದ ಮಾರ್ಗದರ್ಶನ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಕೇವಲ ಸರ್ಕಾರವನ್ನೇ ದೂರುವುದು, ಸರ್ಕಾರದ ಕೆಲಸ ಎಂದು ಕೈಕಟ್ಟಿ ಕುಳಿತುಕೊಳ್ಳದೇ ಸರ್ಕಾರಿ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕಾಗಿದೆ ಈ ನಿಟ್ಟಿನಲ್ಲಿ ಕಾರ್ಮಿಕರ ಮಕ್ಕಳನ್ನು ಅಭಿನಂದಿಸಿ, ಪೆÇ್ರೀತ್ಸಾಹಿಸುವ ಸೌಲಭ್ಯಗಳ ಮಾಹಿತಿ ಪಡೆದು ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಮಕ್ಕಳನ್ನು ಅಭಿನಂದಿಸಿ, ಪ್ರೋತ್ಸಾಹಿಸುವ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಸರ್ಕಾರಿ ಇಲಾಖೆಗಳಲ್ಲಿ ಇರುವ ಸೌಲಭ್ಯಗಳ ಮಾಹಿತಿ ಕೊರತೆ ವಿದ್ಯಾರ್ಥಿಗಳಲ್ಲಿದೆ. ಸರ್ಕಾರಿ ಯೋಜನೆಗಳ ಮಾಹಿತಿ ತಿಳಿಯುವುದು ಸಹ ಪಾಲಕರ ಜವಾಬ್ದಾರಿ ಎಂದರು.
Read also : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಭವಿಷ್ಯದ ಬಗ್ಗೆ ಚಿಂತನೆ ಇರಬೇಕು. ಪುಸ್ತಕಗಳನ್ನೇ ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಕು. ಯಾವುದೇ ಪಠ್ಯ ಇರಲಿ ಅದನ್ನು ಚೆನ್ನಾಗಿ ಅರ್ಥಮಾಡಿಕೊಂಡು ಓದುವ ಅವಶ್ಯವಿದೆ. ವ್ಯಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣವನ್ನು ಒಳ್ಳೆಯ ಕೆಲಸಕ್ಕೆ ಬಳಕೆ ಮಾಡಿಕೊಳ್ಳಬೇಕು. ಮೊಬೈಲ್ ಬಿಡಿ, ಪುಸ್ತಕ ಹಿಡಿ ಎಂಬಂತೆ ಓದಿನ ಕಡೆ ಹೆಚ್ಚು ನಿಗಾ ಇರಲಿ ಎಂದು ಹಿತ ನುಡಿದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್ ಮಾತನಾಡಿ, ಸಮಾಜದಲ್ಲಿ ಶಿಕ್ಷಣ ಅತ್ಯಗತ್ಯ, ಶಿಕ್ಷಣದಿಂದಲೇ ಸಮಾಜ ಬದಲಾವಣೆ ಸಾಧ್ಯ. ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿದರೆ ಅದು ನಿಮಗಷ್ಟೇ ಅಲ್ಲದೇ ನಿಮ್ಮ ತಂದೆ-ತಾಯಿಗಳ ಗೌರವವನ್ನು ಹೆಚ್ಚಿಸುತ್ತದೆ. ಸಮಾಜದಲ್ಲಿ ಘನತೆಯಿಂದ ಬದುಕುವಂತೆ ಮಾಡುತ್ತದೆ ಎಂದರು.
ಸಿನಿಮಾ ಹಿರೋಗಳು ಮತ್ತು ಕ್ರಿಕೆಟ್ ಆಟಗಾರರು ಆದರ್ಶವಾಗದೇ, ನಮಗೆ ತಂದೆ-ತಾಯಿ, ಬುದ್ದ, ಬಸವ, ಅಂಬೇಡ್ಕರ್, ಪೆರಿಯರ್ ಮುಂತಾದ ಮಹಾನ್ ಪುರುಷರು ಆದರ್ಶವಾಗಬೇಕು. ನಮಗೆ ನಾವೇ ದಾರಿ ದೀಪವಾಗಬೇಕು. ಮೊಬೈಲ್ ಕಡೆ ಗಮನಹರಿಸುವುದನ್ನು ಬಿಟ್ಟು, ಸಾಹಿತ್ಯದ ಅಭ್ಯಾಸ ಮಾಡುವ ಕಡೆ ನಿಮ್ಮ ಚಿತ್ತ ಇರಲಿ ಎಂದು ಕರೆ ನೀಡಿದರು.
ಬಹಳಷ್ಟು ವಿದ್ಯಾರ್ಥಿಗಳಿಗೆ ಸರ್ಕಾರಿ ಇಲಾಖೆ ಕಾರ್ಯವೈಖರಿ, ಯೋಜನೆಗಳು, ಸಾಮಾನ್ಯ ಜನರ ಮತ್ತು ವಿದ್ಯಾರ್ಥಿಗಳಿಗೆ ಇರುವ ಸೌಲಭ್ಯಗಳ ಬಗ್ಗೆ ಅರಿವಿರುವುದಿಲ್ಲ. ಆದ್ದರಿಂದ ಪ್ರತಿಯೊಂದು ಇಲಾಖೆಯ ಮಾಹಿತಿ ಪಡೆದು ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಉದ್ಯೋಗ ವಿನಿಮಯ ಕಚೇರಿ ನಿವೃತ್ತ ಅಧಿಕಾರಿ ರಾಮಚಂದ್ರರಾವ್, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಸರೋವರ್ ಬೆಂಕಿಕೆರೆ, ಜನಶಕ್ತಿ ಸಂಘದ ಗೌರವಾಧ್ಯಕ್ಷ ಬಿ. ಖಲೀಲ್ ಮಾತನಾಡಿದರು.
ರಾಜ್ಯ ಕಾರ್ಯದರ್ಶಿ ಸತೀಶ್ ಅರವಿಂದ್. ಕಾರ್ಯದರ್ಶಿ ಪವಿತ್ರ ಮತ್ತಿತರರು ಉಪಸ್ಥಿತರಿದ್ದರು.