ದಾವಣಗೆರೆ (Davanagere): ಬಾಬಾಸಾಹೇಬ ಅಂಬೇಡ್ಕರ್ ಬರಹಗಳ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಅರಿವೇ ಅಂಬೇಡ್ಕರ್’ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
ದಾವಣಗೆರೆ ವಿಶ್ವವಿದ್ಯಾನಿಲಯ ಇಂಗ್ಲಿಷ್ ಅಧ್ಯಯನ ವಿಭಾಗ, ಮಾನವ ಬಂಧುತ್ವ ವೇದಿಕೆ ಮತ್ತು ಈದಿನ ಡಾಟ್ ಕಾಮ್ ಸಹಯೋಗದಲ್ಲಿ ಜೂನ್ 20ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಕುಲಪತಿ ಪ್ರೊ.ಬಿ.ಡಿ.ಕುಂಬಾರ ಉದ್ಘಾಟಿಸಲಿದ್ದಾರೆ. ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ.ಎ.ಬಿ.ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಲೇಖಕ ವಿ.ಎಲ್.ನರಸಿಂಹಮೂರ್ತಿ, ವಕೀಲರಾದ ರಾಜಲಕ್ಷಿö್ಮ ಅಂಕಲಗಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು.
Read also : Davanagere | ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕುಲಸಚಿವ ಶಬ್ಬೀರ ಬಾಷಾ ಗಂಟಿ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ರವಿಚಂದ್ರ, ಇಂಗ್ಲಿಷ್ ಅಧ್ಯಯನ ವಿಭಾಗದ ಸಂಯೋಜನಾಧಿಕಾರಿ ಡಾ.ಫಕ್ಕೀರೇಶ ಹಳ್ಳಳ್ಳಿ ಈದಿನ ಡಾಟ್ ಕಾಮ್ ಕೇಂದ್ರ ಸಂಯೋಜಕ ಅನಿಲ್ ಚಿಕ್ಕದಾಳವಟ್ಟ, ಪತ್ರಕರ್ತ ವಿನಾಯಕ ಚಿಕ್ಕಂದವಾಡಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.