Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಅಂತರಾಷ್ಟ್ರೀಯ ಯೋಗ ದಿನಾಚರಣೆ |ದೇಹ-ಮನಸ್ಸುಗಳ ಸಾಂಗತ್ಯವೇ ಯೋಗ, ಧ್ಯಾನ
Blog

ಅಂತರಾಷ್ಟ್ರೀಯ ಯೋಗ ದಿನಾಚರಣೆ |ದೇಹ-ಮನಸ್ಸುಗಳ ಸಾಂಗತ್ಯವೇ ಯೋಗ, ಧ್ಯಾನ

Dinamaana Kannada News
Last updated: June 21, 2025 12:43 am
Dinamaana Kannada News
Share
Davanagere
Davanagere
SHARE

ಪ್ರತಿಯೊಬ್ಬರು ತಮ್ಮ ದೇಹಾರೋಗ್ಯಕ್ಕೆ, ಶಾಂತಿ, ನೆಮ್ಮದಿಗಾಗಿ ಭಾರತೀಯ ಸಂಸ್ಕøತಿಯ ಪ್ರತೀಕವಾದ ಯೋಗ, ಧ್ಯಾನ ಹಾಗೂ ಪ್ರಾಣಾಯಮಕ್ಕೆ ಹೆಚ್ಚಿನ ಮಹತ್ವ ಕೊಡುವುದು ಅತ್ಯಂತ ಜರೂರಿನ ಸಂಗತಿಯಾಗಿದೆ. `ಯೋಗ’ ಎಂದರೆ ಕೇವಲ ಆಸನಗಳು, ಪ್ರಾಣಾಯಮ, ಧ್ಯಾನ ಹಾಗೂ ತಪಸ್ಸು ಎಂಬ ಕಲ್ಪನೆಯೇ ಆಗಿದೆ.

`ಯೋಗ’ ಎಂದರೆ ಅದೊಂದು ಬದುಕಿನ ಕಲೆ.yoga is a art of life  ನಾವು ಬದುಕುವುದು ಏಕೆ? ಬದುಕುವುದು ಹೇಗೆ? why to live ? How to live  ಎಂದು ತಿಳಿಸುವ ಬದುಕಿನ ಕಲೆಯೇ ಯೋಗ ಎಂದು ತಿಳಿಯಬಹುದು. `ಯುಜ್ಯತೇ ಇತಿಯೋಗ’: ಈ ಯೋಗದ ಶಬ್ದ ವ್ಯಾಪಕ ಅರ್ಥದಲ್ಲಿ ಗಮನಿಸಬಹುದು. ಉದ್ಯೋಗ ಸಿಕ್ಕರೂ ಯೋಗ, ವಿವಾಹವಾದರೂ ಯೋಗ, ಲಾಟರಿ ಹೊಡೆದರೂ ಯೋಗ, ಮನೆ ಕಟ್ಟಿಸಿದರೂ ಯೋಗ, ಆಸ್ತಿ ಖರೀದಿಸಿದರೂ ಯೋಗ, ಹೀಗೆ ಎಲ್ಲವೂ ಯೋಗವೇ. ನಮ್ಮ ಚಂಚಲ ಮನಸ್ಸು, ವೇಗ ಹಾಗೂ ಸೂಕ್ಷ್ಮತೆಗಳನ್ನು ಜಡವಾದ ಶರೀರದೊಡನೆ ಸೇರಿಸುವುದು `ಯೋಗ’ವೇ ಆಗಿದೆ.

ಮನಸ್ಸನ್ನು ನಿಯಂತ್ರಿಸುವುದೇ ಯೋಗ 

ಯೋಗ ಪಿತಾಮಹ ಪತಂಜಲಿ ಮುನಿಗಳು ತಿಳಿಸುವಂತೆ “ಚಿತ್ತವೃತ್ತಿಗಳ ನಿರೋಧ ಅಥವಾ ನಿಯಂತ್ರಿಸುವುದೇ ಯೋಗ” ಎಂದಿರುವರು. ಹಾಗೆಯೇ ಮನಸ್ಸನ್ನು ಪ್ರಶಮನಗೊಳಿಸುವ, ಶಾಂತಗೊಳಿಸುವ ಉಪಾಯವೇ ಯೋಗ. ಒಟ್ಟಾರೆ `ಯೋಗವು’ ಒಂದು ಶುದ್ಧ ಮನಃಶಾಸ್ತ್ರ. ಯೋಗದಲ್ಲಿ ನಾಲ್ಕು ಪಥಗಳಿವೆ, ಜ್ಞಾನಯೋಗ, ಭಕ್ತಿಯೋಗ, ಕರ್ಮಯೋಗ ಹಾಗೂ ರಾಜಯೋಗ. ಶಾರೀರಕ ದೃಢತೆ ಮತ್ತು ಮಾನಸಿಕ ಸ್ಥಿರತೆ ಈ ಎರಡನ್ನು ಯೋಗಾಸನಗಳು ನೀಡುತ್ತವೆ. ಶರೀರದ ಜೊತೆಗೆ ಮನಸ್ಸನ್ನು ಪಳಗಿಸುವ ಕ್ರಿಯೆ ಇಲ್ಲಿದೆ. ಅಭ್ಯಾಸಕ್ಕೆ ಅನುಗುಣವಾಗಿ ಆಸನಗಳನ್ನು ಬೆನ್ನಿನ ಮೇಲೆ ಮಲಗಿ, ಹೊಟ್ಟೆಯ ಮೇಲೆ ಮಲಗಿ, ಕುಳಿತು ಹಾಗೂ ನಿಂತು ಮಾಡುವ ಆಸನಗಳೆಂದು ನಾಲ್ಕು ವಿಧಗಳಿವೆ. ಪರಿಣಾಮದ ದ್ರಷ್ಠಿಯಿಂದ ಆಸನಗಳನ್ನು ನಿರ್ಮಾಣಾತ್ಮಕ, ಧ್ಯಾನಾತ್ಮಕ ಹಾಗೂ ವಿಶ್ರಾಂತಿದಾಯಕ ಆಸನಗಳೆನ್ನಬಹುದು. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ನಿಧಾನಗತಿ, ಸೂಕ್ಷ್ಮಗಮನ, ಪ್ರಸನ್ನತೆ, ಉಸಿರಾಟದೊಡನೆ ಅಭ್ಯಾಸ ಹಾಗೂ ಅಂತಿಮ ಸ್ಥಿತಿ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಸೂರ್ಯನಮಸ್ಕಾರದಿಂದ ಆರಂಭವಾಗಿ ಶವಾಸನದವರೆಗೆ 43 ಆಸನಗಳಿವೆ. ಘೇರುಂಡ ಸಂಹಿತೆಯಲ್ಲಿ 84 ಪ್ರಕಾರಗಳನ್ನು ತಿಳಿಸಿದೆ.

ಯೋಗ ನಮ್ಮ ಸಂಸ್ಕøತಿಯ ಪ್ರತೀಕ

.`ಯೋಗ’ ನಮ್ಮ ದೇಶದ ವಿಶಿಷ್ಟ ಕೊಡುಗೆ, ಸಂಸ್ಕøತಿಯ ಪ್ರತೀಕ. ಇಂದು ಜಾಗತಿಕ ಮಹತ್ವ ದೊರಕಿರುವುದು ಸಂತಸದ ಸಂಗತಿ. ಈ ಕುರಿತು ಅನೇಕ ಪ್ರಾಚೀನ ಗ್ರಂಥಗಳು ಪ್ರಕಟವಾಗಿವೆ. ಇದು ಏನನ್ನೂ ತೊರೆಯಬೇಕೆಂದು ಹೇಳುವ ತತ್ವವಲ್ಲ. ಮನಸ್ಸನ್ನು ನಿಯಂತ್ರಿಸುವ, ಏಕಾಗ್ರತೆ ಸಾಧಿಸಲು ಉಪಯುಕ್ತವಾದದ್ದು. ಅಭ್ಯಾಸ, ಪ್ರಯತ್ನಗಳಿಂದ ಶರೀರದ ಬೇರೆ ಬೇರೆ ಅಂಗಗಳಿಗೆ, ಸ್ಯಾಯುಗಳಿಗೆ ಮತ್ತು ನರನಾಡಿಗಳಿಗೆ ಸುಖವ್ಯಾಯಮದಿಂದ ಹೊಸ ಚೈತನ್ಯ ನೀಡಬಹುದೆಂಬುದನ್ನು ಯೋಗವು ವೈಜ್ಞಾನಿಕ ವಿಧಾನದಲ್ಲಿ ತಿಳಿಸುತ್ತದೆ. ಪತಂಜಲಿ, ಘೋರಂಡ ಮುಂತಾದ ಯೋಗ ವಿಜ್ಞಾನಿಗಳು ತಿಳಿಸುವಂತೆ ಯೋಗಾಸನಗಳಲ್ಲಿ ಸ್ಥಿರಸುಖ ಇರಬೇಕು ಎಂದು, ಸ್ಥಿರತೆ ಮತ್ತು ಸುಖತ್ವಗಳು ಯೋಗಾಸನದ ಲಕ್ಷಣಗಳು. ಇದು `ಪ್ರಯತ್ನ ಶೈಥಿಲ್ಯ’ ವಿರಬೇಕು.

· ನಿಶ್ಚಲ ಮನಸ್ಸಿನ ಸ್ಥಾಪನೆ

ಯೋಗದಿಂದ ಮನಸ್ಸಿನ ಕ್ಲೇಶವನ್ನು ನಿವಾರಿಸಲು ಪತಂಜಲಿ ಮಾರ್ಗ ಸೂಕ್ತವಾಗಿದೆ. ಅಭ್ಯಾಸ – ಪ್ರಯತ್ನಗಳಿಂದ ನಿಶ್ಚಲವಾದ ಮನಸ್ಸನ್ನು ಸ್ಥಾಪಿಸಿಕೊಳ್ಳುವುದು ಯೋಗದ ಪ್ರಮುಖ ಭೂಮಿಕೆ. `ಯೋಗ’ ಎಂಬುದು ಉದ್ಧೇಶ ಮತ್ತು ಹಾದಿಗಳೆರಡನ್ನು ಸೂಚಿಸುವ ಪದ. ಏನನ್ನು ಪಡೆಯಬೇಕೋ ಅದು ಯೋಗ; ಅದನ್ನು ಪಡೆಯಲು ಇರುವ ಸಾಧನವೂ ಯೋಗ. ಅಭ್ಯಾಸ ಮಾಡುವವರ ತಪ್ಪಿನಿಂದಾಗಿ ಯೋಗಶಾಸ್ತ್ರದ ಫಲವಂತಿಕೆಯ ಬಗ್ಗೆ `ಯೋಗ’ ಕುರಿತ ಅನುಮಾನಗಳಿವೆ.

ಮೆದುಳಿನ ಬಲಭಾಗಕ್ಕೆ ಉತ್ತೇಜನ

ದೇಹ ಮತ್ತು ಮನಸ್ಸನ್ನು ಸಮತೋಲನಗೊಳಿಸುವ ಯೋಗದ ಸಾಧನೆಗೆ ಧ್ಯಾನವು ಒಂದು ಪರಿಕರ ಎನ್ನಬಹುದು. ಧ್ಯಾನಕ್ಕೆ ವಿಶಿಷ್ಟ ಸ್ಥಾನವಿದೆ. ಶರೀರವು ಗಡಸುತನವನ್ನು ಬಿಟ್ಟುಕೊಟ್ಟು, ಮನಸ್ಸು ವ್ಯಥಾ ಅಲೆಯುವುದನ್ನು ತಪ್ಪಿಸಿ, ಏಕತಾನತೆಯನ್ನು ಮೈಗೂಡಿಸಿಕೊಳ್ಳುವುದೇ ಧ್ಯಾನ. ಯೋಗದ ಒಂದು ಭಾಗ ಧ್ಯಾನವಾಗಿದೆ. ಮಿದುಳಿನ ಬಲಭಾಗವನ್ನು ಉತ್ತೇಜನಗೊಳಿಸುವುದು ಧ್ಯಾನದ ಆಶಯ.

ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ

ಸದೃಡ ಆರೋಗ್ಯವಂತ ಶರೀರಹೊಂದಲು ಶಾರೀರಿಕ ಪರಿಶ್ರಮ ಅಗತ್ಯ. ನಗರವಾಸಿಗಳು ಅಂತಹ ಅವಕಾಶಗಳಿಂದ ವಂಚಿತರಾಗಿದ್ದಾರೆ. ಮಾನಸಿಕ ಪರಿಶ್ರಮಕ್ಕಿರುವ ಆದ್ಯತೆ ದೇಹಶ್ರಮಕ್ಕಿಲ್ಲ. ಸಮಯದ ಅಭಾವ, ಯಂತ್ರಗಳನ್ನು ಬಳಸುವುದು, ಕಲುಷಿತ ವಿಷಕಾರಕ ವಸ್ತುಗಳ ಸೇವನೆ, ಅಶುದ್ಧಗಾಳಿ, ನೀರು ಹೀಗೆ ಹಲವು ಕಾರಣಗಳು ಇದರಿಂದ ಹಲವು ರೋಗಗಳಿಗೆ ನಾವು ತುತ್ತಾಗುತ್ತಿದ್ದೇವೆ. ಪ್ರತಿದಿನ ಒಂದು ಗಂಟೆ ಯೋಗಭ್ಯಾಸ ಕ್ರಮದಲ್ಲಿ ತೊಡಗಿಕೊಂಡರೆ ಅಂಗಾಂಗಗಳಿಗೂ ಸೂಕ್ತವಾದ ವ್ಯಾಯಾಮ ದೊರೆತು ಆರೋಗ್ಯವರ್ಧನೆಗೆ ಪೂರಕವಾಗುತ್ತದೆ. ವಿವಿಧ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿ ಯೋಗಭ್ಯಾಸ ಕ್ರಮದಲ್ಲಿ ಅಡಗಿದೆ ಎಂಬುದನ್ನು ಅಂತರ್‍ರಾಷ್ಟ್ರೀಯ ಯೋಗದಿನವಾದ ಇಂದು ಇದರ ಮಹತ್ವ ಅರಿತು – ಆಚರಿಸೋಣ, ಉತ್ತಮ ಆರೋಗ್ಯಕ್ಕೆ ಚಿಂತನಶೀಲರಾಗೋಣ.

Read also : ವಿಶ್ವಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಶುದ್ಧತೆಗೆ ಆದ್ಯತೆ ಇರಲಿ

ಯೋಗ, ಧ್ಯಾನ, ನೈತಿಕಶಿಕ್ಷಣ ಅಗತ್ಯ

ಸದೃಢ ಶರೀರ ಹಾಗೂ ಸ್ವಸ್ಥ ಮನಸ್ಸಿಗೆ ಯೋಗ – ಧ್ಯಾನ ಮಾರ್ಗ ಮಹತ್ವದ್ದು. ಯೋಗ, ಧ್ಯಾನ ಮತ್ತು ನೈತಿಕ ಶಿಕ್ಷಣ ವಿದ್ಯಾರ್ಥಿದಿಸೆಯಿಂದಲೇ ಆರಂಭಗೊಳ್ಳಬೇಕು, ಅಂದಾಗ ಸುಸ್ಥಿರ ಸಮಾಜದ ಬುನಾದಿ ಆಗಬಲ್ಲದು. ವೈದ್ಯಕೀಯ ಕ್ಷೇತ್ರದ ಬೆಳವಣೆಗೆಯೊಂದಿಗೆ ಜನರ ಅನಾರೋಗ್ಯ ವ್ಯವಸ್ಥೆ ದ್ವಿಗುಣಗೊಳ್ಳುತ್ತಿದೆ, ಇದಕ್ಕೆ ಕಾರಣ ಹಲವು. ನಮ್ಮ ಗ್ರಾಮೀಣರು ಶತಾಯುಷಿಗಳಾಗಿ ಒಂದು ದಿನವು ವೈದ್ಯರ ಹತ್ತಿರ ಹೋಗದೇ ಬದುಕಿಬಾಳಿದ್ದು ನೆನಪಿಸಿಕೊಳ್ಳೋಣ. ಕಾರಣ ದೈಹಿಕಶ್ರಮ, ನಗರವಾಸಿಗಳಾದ ನಮಗೆ ಹಲವು ಬಗೆಯ ಒತ್ತಡಗಳಿವೆ. ದಿನನಿತ್ಯದ ಬದುಕಿನ ಒತ್ತಡ, ಉದ್ವೇಗ, ಅತೃಪ್ತಿಗಳಿಗೆ ನಿಯಂತ್ರಣ ಸಾಧಿಸುವಲ್ಲಿ ಯೋಗ ಮತ್ತು ಧ್ಯಾನ ಪರಿಹಾರ ಒದಗಿಸಬಲ್ಲದು ಎಂಬುದು ನನ್ನ ಆಶಯ.

ಡಾ. ಗಂಗಾಧರಯ್ಯ ಹಿರೇಮಠ
ವಿಶ್ರಾಂತ ಪ್ರಾಧ್ಯಾಪಕರು, ದಾವಣಗೆರೆ.
ಮೊ: 9880093613

TAGGED:International Yoga Dayಯೋಗ ದಿನಾಚರಣೆ
Share This Article
Twitter Email Copy Link Print
Previous Article Lokayukta Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ
Next Article Davanagere ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davangere | ದಾವಣಗೆರೆ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ದಾವಣಗೆರೆ, ನ.1 (Davangere) : ದಾವಣಗೆರೆ ಸ್ಮಾರ್ಟ್ ಸಿಟಿ ಕಛೇರಿಯಲ್ಲಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣಗೊಳಿಸುವುದರ ಮೂಲಕ 69ನೇ…

By Dinamaana Kannada News

ಗ್ರಾಮೀಣ ಗ್ರಂಥಾಲಯಗಳು ವಿದ್ಯಾರ್ಥಿಗಳಿಗೆ ಆಪ್ತವಾಗಲಿ : ರಾಮಕೃಷ್ಣ

ಹರಿಹರ:  ಗ್ರಾಮೀಣ ಭಾಗದಲ್ಲಿರುವ ಗ್ರಾಮ ಪಂಚಾಯ್ತಿಯ ಗ್ರಂಥಾಲಯಗಳಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಕ್ರಮ ವಹಿಸಬೇಕೆಂದು ತಾಲ್ಲೂಕು ಪಂಚಾಯ್ತಿ ಪ್ರಭಾರ…

By Dinamaana Kannada News

ಪೇಪರ್ ಬ್ಯಾಗ್‍ಗೆ ರೂ.10 ಪಡೆದುಕೊಂಡು ಶಾಪಿಂಗ್ ಮಾಲ್‍ಗೆ ರೂ.7ಸಾವಿರ ದಂಡ

ದಾವಣಗೆರೆ :  ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆದ ಶಾಪಿಂಗ್‌ ಮಾಲ್‌ಗೆ ಜಿಲ್ಲಾ…

By Dinamaana Kannada News

You Might Also Like

UPSC
Blog

Davanagere | ಅಲ್ಪಸಂಖ್ಯಾತರ ಇಲಾಖೆಯಿಂದ ಯುಪಿಎಸ್‍ಸಿ ಪರೀಕ್ಷಾ ಪೂರ್ವ ತರಬೇತಿ

By Dinamaana Kannada News
Political analysis
Blog

Political analysis | ಮುಂದಿನ ವರ್ಷ ನಾನೇ ಸಿಎಂ ಆಗಿರ್ತೀನಲ್ಲ?

By Dinamaana Kannada News
Davanagere
Blog

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಮುಖ್ಯೋಪಾಧ್ಯಾಯ ಆರ್.ಪ್ರಭು

By Dinamaana Kannada News
Shamanur Shivashankarappa
Blog

ಶಾಮನೂರು ಎಂಬುದು ಜಾತಿ ನಿರಸನದ ‘ಮೋಸ್ಟ್ ಸೆಕ್ಯುಲರ್’ ಬ್ರಾಂಡ್ ನೇಮ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?