Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

Dinamaana Kannada News
Last updated: June 24, 2025 3:12 am
Dinamaana Kannada News
Share
Davanagere
SHARE

ದಾವಣಗೆರೆ (Davanagere): ಕೆ.ಆರ್. ರಸ್ತೆಯಲ್ಲಿರುವ ಎಸ್.ಎಸ್. ಜನರಲ್ ಆಸ್ಪತ್ರೆ, ದಾವಣಗೆರೆ ದಕ್ಷಿಣದ ಜನರಿಗೆ ವಾಸಿಸುವ ಜನರಿಗೆ ಕೈಗೆಟುಕುವ, ಸುಲಭವಾಗಿ ಸಿಗುವ ಆರೋಗ್ಯ ಸೇವೆ ಒದಗಿಸಲು ಮುಂದಾಗಿದೆ.

ಶಾಸಕರು, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ|| ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿ ಮಾತನಾಡಿ,  ಈಗಾಗಲೇ ಹೊರರೋಗಿಗಳ ವಿಭಾಗ, ಡಯಾಲಿಸಿಸ್ ಕೇಂದ್ರ ಸೇರಿದಂತೆ ವಿವಿಧ ಆರೋಗ್ಯ ಸೇವೆಯನ್ನು ನೀಡುತ್ತಿರುವ ಈ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದಿನಿಂದ ಮಹಿಳೆಯರು ಮತ್ತು ಮಕ್ಕಳಿಗೆ ಕೈಗೆಟುಕುವ ಒಳರೋಗಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪೂರೈಸುವ ಉದ್ದೇಶದಿಂದ 50 ಹಾಸಿಗೆಗಳ ಒಳರೋಗಿ ವಿಭಾಗವನ್ನು ಆರಂಭಿಸಲಾಗುತ್ತಿದೆ ಎಂದರು.

ಸಮುದಾಯ ವೈದ್ಯಕೀಯ ವಿಭಾಗದಿಂದ ನಡೆಸುವ ಕ್ಯಾನ್ಸರ್ ಪತ್ತೆ ಪರೀಕ್ಷಾ ಕ್ಲಿನಿಕ್, ಉಚಿತ ಡಯಾಲಿಸಿಸ್ ಸೇವೆಗಳು, ರಕ್ತದಲ್ಲಿನ ಸಕ್ಕರೆ, ಹಿಮೋಗ್ಲೋಬಿನ್, ಮೂತ್ರಪಿಂಡದ ಕಾರ್ಯ ಪರೀಕ್ಷೆಗಳು ಮತ್ತು ಮೂತ್ರ ಪರೀಕ್ಷೆಗಳಂತಹ ಮೂಲಭೂತ ಪ್ರಯೋಗಾಲಯ ಪರೀಕ್ಷೆಗಳು ನಡೆಯುತ್ತಿದ್ದು, ಆಸ್ಪತ್ರೆಯಲ್ಲಿ ಇಲ್ಲಿನ ಜನರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಒಳರೋಗಿಗಳ ವಿಭಾಗವನ್ನು ಆರಂಬಿಸಿದ್ದು, ಈ ಭಾಗದ ಜನರು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

ಒಳರೋಗಿ ವಿಭಾಗದ ಸೇವೆಗಳನ್ನು ಬೆಂಬಲಿಸುವ ಉದ್ದೇಶದಿಂದ, ಅಲ್ಟ್ರಾಸೌಂಡ್ ಮತ್ತು ಎಕ್ಸ್-ರೇ, ಡಯೊಗ್ನೊಸ್ಟಿಕ್ ಸೇರಿದಂತೆ ಇತರೆ ಆರೋಗ್ಯ ಸೇವೆಗಳನ್ನೂ ಪರಿಚಯಿಸಿ ರಿಯಾಯಿತಿ ದರದಲ್ಲಿ ಒದಗಿಸಲಾಗುವುದು, ಯಾವುದೇ ರೋಗಿಯನ್ನು ವೆಚ್ಚದ ಕಾರಣದಿಂದಾಗಿ ವಾಪಾಸ್ ಕಳಿಸುವುದಿಲ್ಲ ಎಂದು ಭರವಸೆ ನೀಡಿದರು.

Read also : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಸಾರ್ವಜನಿಕರಿಗೆ ಹೆಚ್ಚಿನ ನೆರವು ನೀಡಲು ಎಸ್.ಎಸ್.ಕೇರ್ ಟ್ರಸ್ಟ್ ಕೂಡ ನಮ್ಮೊಂದಿಗೆ ಕೈಜೋಡಿಸಿದೆ ಎಂದು ತಿಳಿಸಿದರು.

ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ,  2019ರಿಂದ ಆರಂಭವಾದ ಎಸ್.ಎಸ್.ಕೇರ್ ಟ್ರಸ್ಟ್ ಅನೇಕ ಆರೋಗ್ಯ ಸೇವೆಗಳನ್ನು ಒದಗಿಸಲು ಡಾ|| ಶಾಮನೂರು ಶಿವಶಂಕರಪ್ಪನವರ ಪ್ರೇರಣೆಯೇ ಸಾಕ್ಷಿ ಎಂದರು.

ಬಾಪೂಜಿ ಆಡಳಿತ ಮಂಡಳಿಯ ಸದಸ್ಯರಾದ ಅಥಣಿ ವೀರಣ್ಣ , ಶ್ರೀಮತಿ ಕಿರುವಾಡಿ ಗಿರಿಜಮ್ಮ, ಸಂಪನ್ನ ಮುತಾಲಿಕ್, ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕ ಪ್ರೊ|| ಬಕ್ಕಪ್ಪ, ಎಸ್‍ಎಸ್‍ಐಎಂಎಸ್‍ಆರ್‍ಸಿ ಪ್ರಾಂಶುಪಾಲ ಡಾ. ಪ್ರಸಾದ್, ಎಸ್‍ಎಸ್‍ಐಎಂಎಸ್‍ಆರ್‍ಸಿ ವೈದ್ಯಕೀಯ ನಿರ್ದೇಶಕ ಡಾ. ಅರುಣಕುಮಾರ್ ಅಜ್ಜಪ್ಪ, ಬಾಪೂಜಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ  ಡಾ. ಕುಮಾರ್, ಸತ್ಯನಾರಾಯಣ, ಡಾ|| ಪ್ರಶಾಂತಕುಮಾರಿ, ಡಾ|| ಶ್ರೇಷ್ಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ದಾದು ಸೇಠ್, ಚಮನ್ ಸಾಬ್, ಮುನ್ನಾ ಪೈಲ್ವಾನ್, ಮುದೇಗೌಡ್ರು ಗಿರೀಶ್, ಜಿ.ಎಸ್.ಮಂಜುನಾಥ್ (ಗಡಿಗುಡಾಳ್) ಮತ್ತಿತರರಿದ್ದರು.

TAGGED:Davanagere NewsDinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Power outage ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
Next Article Davanagere Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

ದಾವಣಗೆರೆ : ಅಪ್ರಾಪ್ತ ಬಾಲಕಿ ಅಪಹರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಗೆ 2 ವರ್ಷ ಜೈಲು ಹಾಗೂ 5 ಸಾವಿರ ದಂಡ…

By Dinamaana Kannada News

ಖಾಸಗಿ ಕಾರ್ಯಕ್ರಮಕ್ಕೆ ಬಿ.ವಾಮದೇವಪ್ಪ ಅಧ್ಯಕ್ಷತೆ : ದಾವಣಗೆರೆ ಸಾಹಿತ್ಯ ವಲಯದಲ್ಲಿ ಅಸಮಾಧಾನ

ದಿನಮಾನ.ಕಾಂ, ದಾವಣಗೆರೆ : ಖಾಸಗಿ ಕಾಲೇಜುಗಳ ವಾಣಿಜ್ಯ ಕಾರ್ಯಕ್ರಮ ಒಂದಕ್ಕೆ ದಾವಣಗೆರೆ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ…

By Dinamaana Kannada News

Davanagere | ಡಿ.13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಡಿ.12 (Davanagere) : ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.13 ರಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿಜ್ಞಾನ -ಕಲಾ ವಸ್ತು ಪ್ರದರ್ಶನಗಳು ಮಕ್ಕಳ ಮುಂದಿನ ಶಿಕ್ಷಣಕ್ಕೆ ಸಹಕಾರಿ

By Dinamaana Kannada News
Davanagere
ತಾಜಾ ಸುದ್ದಿ

ಫೆ.8,9 ಮಹರ್ಷಿ ವಾಲ್ಮೀಕಿ ಜಾತ್ರೆ|ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸಿ:ಬಸವನಗೌಡ ದದ್ದಲ್

By Dinamaana Kannada News
ಬಿ.ಶ್ರೀನಿವಾಸ
ಅಭಿಪ್ರಾಯ

ದಿನಮಾನ-ಪುಸ್ತಕ ವಿಮರ್ಶೆ|ಮನುಷ್ಯನ ಮಹಾಯಾನ:ಬಿ.ಶ್ರೀನಿವಾಸ

By Dinamaana Kannada News ಬಿ.ಶ್ರೀನಿವಾಸ
POEM
ಅಭಿಪ್ರಾಯ

ಗಾಂಧಿ ಸ್ಮೃತಿ|ರಚನೆ:ಮಂಜುನಾಥ.ಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?