ದಾವಣಗೆರೆ (Davanagere) : ಮನೆ ಕಳ್ಳತನ ಮತ್ತು ಬೈಕ್ ಗಳನ್ನು ಕಳ್ಳತನ ಮಾಡಿದ್ದ ಆರೋಪಿ ಹಾಗೂ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿತರಿಂದ 1,60,000/- ರೂ ಬೆಲೆಯ 06 ದ್ವಿ ಚಕ್ರ ವಾಹನಗಳು ಹಾಗೂ 60,000/- ರೂ ನಗದು ಹಣ ವಶ ಪಡಿಸಿಕೊಂಡಿದ್ದಾರೆ.
ಆರೋಪಿ ಆಸಿಫ್ಖಾನ್, ಇಬ್ಬರು ಅಪ್ರಾಪ್ತ ಬಾಲಕರ ಬಂಧಿತರು
ದೇವರಹಟ್ಟಿ ಗ್ರಾಮದ ಮಲ್ಲೀಕ್ ರಿಹಾನ್ ಗ್ರಾಮಾಂತರ ಠಾಣೆಗೆ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಎಸ್ಪಿ ಜಿ. ಮಂಜುನಾಥ ಮತ್ತು ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಿ.ಎಸ್ ಬಸವರಾಜ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆಯ ಪಿ.ಐ ಕಿರಣ್ ಕುಮಾರ್ ನೇತೃತ್ವದಲ್ಲಿ ಪಿಎಸ್ಐ ಜೋವಿತ್ ರಾಜ್ ಹಾಗೂ ಸಿಬ್ಬಂದಿ ನಾಗಭೂಷಣ್, ಮಹಮ್ಮದ್ ಯುಸೂಫ್ ಅತ್ತಾರ್, ವೀರೇಶ್ ಪಿ.ಎಂ, ಹನುಮಂತಪ್ಪ ತಂಡ ಮನೆಯಲ್ಲಿ ಕಳವು ಮಾಡಿದ್ದ 60 ಸಾವಿರ ರೂ ನಗದು ಮತ್ತು ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಕಳುವಾಗಿದ್ದ 01 ಬೈಕ್, ಹಾಗೂ ಬಡಾವಣೆ ಠಾಣಾ ಸರಹದ್ದಿನಲ್ಲಿ ಕಳವು ಮಾಡಿದ್ದ 03 ದ್ವಿ ಚಕ್ರ ವಾಹನಗಳು ಮತ್ತು ಗಾಂಧಿನಗರ ಪೊಲೀಸ್ ಠಾಣಾ ಸರಹದ್ದಿನ 01 ಬೈಕ್, ಕೆಟಿಜೆ ನಗರ ಪೊಲೀಸ್ ಠಾಣೆಯ ಸರಹದ್ದಿನ 01 ಬೈಕ್. 06 ದ್ವಿ ಚಕ್ರ ವಾಹನಗಳು ಒಟ್ಟು ಬೆಲೆ 1,60,000/- ರೂ ಮೌಲ್ಯ ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು. ಅಪ್ರಾಪ್ತ ಬಾಲಕರನ್ನು ರಿಮ್ಯಂಡ್ ಹೋಮ್ ಗೆ ಕಳಿಸಲಾಗಿದೆ.
Read also : ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ
ಪತ್ತೆ ಕಾರ್ಯದಲ್ಲಿ ಭಾಗಿಯಾದ ದಾವಣಗೆರೆ ಗ್ರಾಮಾಂತರ ಪೆÇಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಪಿ.ಐ ಕಿರಣ್ ಕುಮಾರ್ ಇ.ವೈ, ಪಿಎಸ್ಐ ಜೋವಿತ್ ರಾಜ್, ಹಾಗೂ ಠಾಣಾ ಸಿಬ್ಬಂದಿ ನಾಗಭೂಷಣ್, ಮಹಮ್ಮದ್ಯುಸುಫ್ ಅತ್ತಾರ್, ವೀರೇಶ್ ಪಿ.ಎಂ, ಹನುಮಂತಪ್ಪ ಇವರನ್ನು ಎಸ್ಪಿ ಉಮಾ ಪ್ರಶಾಂತ್ ಶ್ಲಾಘಿಸಿದ್ದಾರೆ.