Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಯುವ ಪೀಳಿಗೆ ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗದಿರಿ : ಐಜಿಪಿ ರವಿಕಾಂತೇಗೌಡ
ತಾಜಾ ಸುದ್ದಿ

ದಾವಣಗೆರೆ | ಯುವ ಪೀಳಿಗೆ ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗದಿರಿ : ಐಜಿಪಿ ರವಿಕಾಂತೇಗೌಡ

Dinamaana Kannada News
Last updated: June 27, 2025 3:11 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಯುವ ಸಮುದಾಯ ಮದ್ಯ, ಮಾದಕ ವಸ್ತುಗಳ ಸೇವನೆಗೆ ಪ್ರೇರೇಪಣೆಯಾಗದೇ ದುಶ್ಚಟಗಳಿಗೆ ಬಲಿಯಾಗದಿರಿ ಎಂದು ಪೂರ್ವವಲಯ ಐಜಿಪಿ ರವಿಕಾಂತೇಗೌಡ ತಿಳಿಸಿದರು.

ನಗರದ ದೊಡ್ಡಬಾತಿ ಸಮೀಪದ ತಪೋವನ ಆಯುರ್ವೇದಿಕ್ ಮತ್ತು ಮೆಡಿಕಲ್ ಕಾಲೇಜ್ ಆವರಣದಲ್ಲಿ  ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ತಪೋವನ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ತಪೋವನ ಇನ್ಸ್ಟಿಟ್ಯೂಟ್ ಆಫ್ ನಸಿರ್ಂಗ್ ಕಾಲೇಜ್ ಹಾಗೂ ಹರಿಹರದ ಸ್ಪಂದನ ಮದ್ಯವ್ಯಸನಿಗಳ ಪುನರ್ವಸತಿ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತುವಿನ ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತುವಿನ ವ್ಯಸನವನ್ನು ತಡೆಗಟ್ಟುವ ಕುರಿತು ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಪಂಚದಲ್ಲಿ ಪ್ರಮುಖವಾಗಿ ಭಯೋತ್ಪಾದನೆ ಮತ್ತು ಮಾದಕ ದ್ರವ್ಯ ವ್ಯಸನ ಈ ಎರಡು ಪ್ರಮುಖ ಸಮಸ್ಯೆಗಳನ್ನು ಕಾಣಬಹುದು. ಭಯೋತ್ಪಾದನೆ ಎಂಬುದು ಒಂದು ಪಿಡುಗು. ಇದು ಯಾವುದೋ ಒಂದು ಸ್ಥಳ, ಸಂಸ್ಥೆ, ಪ್ರದೇಶವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತದೆ. ಇದರಿಂದ ಮಾನವ ಸಂಪನ್ಮೂಲ ಮೂಭೂತ ಸೌಕರ್ಯಗಳು ಸಂಪೂರ್ಣವಾಗಿ ನಾಶವಾಗುತ್ತದೆ. ಆದರೆ ಮಾದಕ ದ್ರವ್ಯ ವ್ಯಸನ ಇಡೀ ಪ್ರಪಂಚವನ್ನೇ ಕಾಡುತ್ತಿರುವ ಮತ್ತೊಂದು ದೊಡ್ಡ ಸಾಮಾಜಿಕ ಪಿಡುಗಾಗಿದೆ. ಈ ವ್ಯಸನಗಳಿಗೆ ಬಲಿಯಾದ ವ್ಯಕ್ತಿ ಪ್ರತಿಯೊಂದು ಕ್ಷಣವೂ ಜೀವನ್ಮರಣ ಹೋರಾಟ ನಡೆಸುತ್ತಾನೆ ಎಂದರು.

ಭಯೋತ್ಪಾದಕರು ನಡೆಸಿದ ಕೃತ್ಯಕ್ಕೆ ಆ ಭಯೋತ್ಪಾದಕ ಬಲಿಯಾಗುತ್ತಾನೆ. ಆದರೆ ಯಾವುದೇ ಒಂದು ದೇಶವನ್ನು ನಾಶ ಮಾಡಲು ಯುದ್ದ ಮಾಡುವ ಅವಶ್ಯಕತೆ ಇಲ್ಲಾ, ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ಯುವಕರಿಗೆ ಮದ್ಯ, ಮಾದಕ ದ್ರವ್ಯಗಳು ಲಭ್ಯವಾಗುವಂತೆ ಮಾಡುವ ಮೂಲಕ ಕೆಲವು ದೇಶಗಳು ದೇಶವನ್ನು ನಾಶಪಡಿಸುತ್ತಿವೆ ಎಂದರು.

ಭವಿಷ್ಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿದ್ದೀರಿ, ಸಮಾಜದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡುವ ಶಕ್ತಿ ನಿಮ್ಮಲ್ಲಿದೆ. ಮನಸ್ಸಿನ ಆರೋಗ್ಯ ಕಾಪಾಡಿಕೊಂಡಲ್ಲಿ ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಈ ಹಿನ್ನೆಲೆಯಲ್ಲಿ ದೇಶವು ವ್ಯಸನಮುಕ್ತ ರಾಷ್ಟ್ರವಾಗಲಿ,  ಹಾಗಾಗಿ ಯಾವ ದೇಶ ವ್ಯಸನಮುಕ್ತ ರಾಷ್ಟ್ರವಾಗುವುದೋ ಆ ದೇಶವೂ ಪ್ರಗತಿಶೀಲ ರಾಷ್ಟ್ರವಾಗುವುದು. ನಮ್ಮ ದೇಶವು ಮತ್ತಷ್ಟು ಬಲಿಷ್ಠವಾಗಿ ಬೆಳೆಯಬೇಕಾದರೆ ಇಂತಹ ದುಶ್ಚಟ, ವ್ಯಸನಗಳಿಗೆ ಬಲಿಯಾಗದೇ ಇದರ ವಿರುದ್ಧ ಹೋರಾಡೋಣ ಎಂದರು.

Read also : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತನಾಡಿ, ಮದ್ಯ, ಮಾದಕ ವ್ಯಸನದಿಂದ ವೈಯಕ್ತಿಕವಾಗಿ ಮತ್ತು ಸಾಮಾಜಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಇದು ಕೇವಲ ಒಬ್ಬ ವ್ಯಕ್ತಿಯ ಮೇಲೆ ದುಷ್ಪರಿಣಾಮ ಬೀರದೆ, ಇಡೀ ಕುಟುಂಬವೇ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಇಂತಹ ಕಾರ್ಯಕ್ರಮ ಈ ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ಕರ್ತವ್ಯದಲ್ಲಿ ತೊಡಿಗಿಸಿಕೊಂಡು ನಶಾ ಮುಕ್ತ ಸಮಾಜ ನಿರ್ಮಾಣಕ್ಕೆ ತಾವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸೋಣ ಎಂದು ತಿಳಿಸಿ ಮದ್ಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಕುರಿತು ಪ್ರತಿಜ್ಞಾವಿಧಿ ಭೋಧಿಸಿದರು.

ತಪೋವನ ಸಮೂಹ ಸಂಸ್ಥೆಯ ನಿರ್ದೇಶಕ ಡಾ.ಶಶಿಕುಮಾರ್ ವಿ ಮೆಹರ್ವಾಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ವಿಶೇಷಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಅಧಿಕಾರಿ ಡಾ. ಕೆ ಕೆ.ಪ್ರಕಾಶ್, ನಗರ ಸಿಇಎನ್ ಠಾಣಾ ಇನ್ಸ್‍ಪೆಕ್ಟರ್ ಹೆಚ್.ಸಿ.ವಸಂತ್, ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲರಾದ ಡಾ. ಕೆ. ಆರ್. ಅಶ್ವಿನಿ, ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲೆ ಡಾ. ಸುಮನಾ ಭಟ್, ತಪೋವನ ಇನ್ಸ್ಟಿಟ್ಯೂಟ್ ಆಫ್ ನಸಿರ್ಂಗ್ ಕಾಲೇಜ್ ಶೈಲಜಾ ಬಿ. ಆರ್. ಸೇರಿದಂತೆ ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Next Article UGC NET KSET TRAINING Davanagere | ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಭದ್ರಾ ಜಲಾಶಯ | ತುಂಬಲು  8.6 ಅಡಿ  ಬಾಕಿ

Bhadra dam water level today : ಮಲೆನಾಡು ಮತ್ತು ಬಯಲು ಸೀಮೆಯ ಜೀವನಾಡಿ ಶಿವಮೊಗ್ಗದ ಭದ್ರಾ ಜಲಾಶಯದಲ್ಲಿ ನೀರಿನ ಒಳಹರಿವು…

By Dinamaana Kannada News

ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಪಕ್ಷ ಕಾಂಗ್ರೆಸ್ : ಶಾಸಕ ಡಾ.ಶಾಮನೂರು ಶಿವಶಂಕರಪ್ಪ

ದಾವಣಗೆರೆ :  ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷವಾಗಿದ್ದು ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ…

By Dinamaana Kannada News

ದಾವಣಗೆರೆ | ಕಟ್ಟಡ ಕಾರ್ಮಿಕರ ಸೌಲಭ್ಯ ವಿಳಂಬ ನೀತಿ ತಪ್ಪಿಸಲು ಸಚಿವರಿಗೆ ಮನವಿ

ದಾವಣಗೆರೆ :   ಕಟ್ಟಡ ಕಾರ್ಮಿಕರ ಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ಕಾರ್ಮಿಕರಿಗೆ ನೀಡುವ ಸೌಲಭ್ಯಗಳ ವಿತರಣೆಯಲ್ಲಿ ವಿಳಂಬವಾಗುತ್ತಿದ್ದು, ಕಾರ್ಮಿಕ ಸಚಿವ ಸಂತೋಷ್…

By Dinamaana Kannada News

You Might Also Like

vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?