Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಣದಲ್ಲಿನ ಅಸಮಾನತೆ ಹೋಗಲಾಡಿಸುವುದೇ ನನ್ನ ಜೀವನದ ಗುರಿ: ಜಿ. ಬಿ. ವಿನಯ್ ಕುಮಾರ್
ತಾಜಾ ಸುದ್ದಿ

ಶಿಕ್ಷಣದಲ್ಲಿನ ಅಸಮಾನತೆ ಹೋಗಲಾಡಿಸುವುದೇ ನನ್ನ ಜೀವನದ ಗುರಿ: ಜಿ. ಬಿ. ವಿನಯ್ ಕುಮಾರ್

Dinamaana Kannada News
Last updated: July 5, 2025 3:19 am
Dinamaana Kannada News
Share
Davangere
SHARE
ದಾವಣಗೆರೆ : ಶಿಕ್ಷಣದಲ್ಲಿನ ಅಸಮಾನತೆ ಹೋಗಲಾಡಿಸುವುದೇ ನನ್ನ ಜೀವನದ ಗುರಿ ಎಂದು ಇನ್ ಸೈಟ್ಸ್ ಐಎಎಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರೂ ಆದ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ. ಬಿ. ವಿನಯ್ ಕುಮಾರ್ ಅವರು ಘೋಷಿಸಿದರು.

ನಗರದ ನಿಟುವಳ್ಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಗತ್ ಸಿಂಗ್ ಯುವ ಬ್ರಿಗೇಡ್ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ನೋಟ್ ಬುಕ್ ವಿತರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಎಸ್ ಎಸ್ ಆಸ್ಪತ್ರೆ ವೈದ್ಯ ಸಿಬ್ಬಂದಿಯಿಂದ ಮಕ್ಕಳಿಗೆ ಉಚಿತ ದಂತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶಿಕ್ಷಣದಲ್ಲಿನ ಅಸಮಾನತೆ ಹೋಗಬೇಕಿದೆ. ಸರ್ಕಾರಿ ಶಾಲೆಗಳು ಹಾಗೂ ಖಾಸಗಿ ಶಾಲೆಗಳಿಗೂ ಶಿಕ್ಷಣ ಗುಣಮಟ್ಟದಲ್ಲಿ ವ್ಯತ್ಯಾಸ ಇರುತ್ತದೆ. ಎಲ್ಲರೂ ಭಾರತಾಂಬೆಯ ಮಕ್ಕಳು. ಅಂಬಾನಿ, ಅದಾನಿಗೂ ಒಂದೇ ಮತ. ಸಾಮಾನ್ಯ ಪ್ರಜೆಗೂ ಒಂದೇ ಮತ. ಇದು ಪ್ರಜಾಪ್ರಭುತ್ವಕ್ಕೆ ಇರುವ ಶಕ್ತಿ. ಈ ಮೂಲಕ ರಾಜಕೀಯದಲ್ಲಿ ಸಮಾನತೆ ಇದೆ. ರಾಜಕಾರಣದಲ್ಲಿರುವ ಸಮಾನತೆಯಂತೆ ಶಿಕ್ಷಣದಲ್ಲಿ ಯಾಕೆ ಇಲ್ಲ. ಅಂಬಾನಿ ಮಕ್ಕಳಿಗೆ ಸಿಗುವ ಶಿಕ್ಷಣ ನಿಮಗೂ ಸಿಗಬೇಕು ಎಂದು ಪ್ರತಿಪಾದಿಸಿದರು.

ಜೀವನ ಶೈಲಿ ಬದಲಿಸಿಕೊಳ್ಳಬೇಕು. ಉತ್ತಮ ಸಂಸ್ಕಾರ ಪಡೆಯಬೇಕು, ಒಳ್ಳೆಯ ವ್ಯಕ್ತಿತ್ವ, ಆಕರ್ಷಕ ಗುಣಗಳನ್ನು ನೀವು ಹೊಂದುವ ಜೊತೆಗೆ ಬೇರೆಯವರಿಂದ ಹೇಳಿಸಿಕೊಳ್ಳದೇ ಸ್ವಯಂಪ್ರೇರಿತರವಾಗಿ ನಿರ್ಧರಿಸಿ ಪಠ್ಯ. ಪಠ್ಯೇತರ. ಸಾಹಿತ್ಯ ಸೇರಿದಂತೆ ಇತರೆ ಪುಸ್ತಕಗಳನ್ನು ಓದಿ ಜ್ಞಾನ ಪಡೆದರೆ ಯಶಸ್ಸು ಸಾಧ್ಯವಾಗುತ್ತದೆ. ಇನ್ ಸೈಟ್ಸ್ ಸಂಸ್ಥೆ ದೇಶದ ಮೂಲೆ ಮೂಲೆಗಳಲ್ಲಿ ಇದೆ. ನಾನು ಐಎಎಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡೆ. ಆದ್ರೆ, ಆಗಲಿಲ್ಲ. ಕೆಎಎಎಸ್ ಅಧಿಕಾರಿಯಾದೆ. ಪಿಡಿಒ ಆಗಿದ್ದೆ. ಐಎಎಸ್ ಆಗದಿದ್ದರೂ ಸಾವಿರಾರು ಮಕ್ಕಳನ್ನು ಐಎಎಸ್ ಅಧಿಕಾರಿಗಳನ್ನಾಗಿ ಮಾಡಿದ್ದೇನೆ ಎಂಬ ಆತ್ಮತೃಪ್ತಿ ಇದೆ. ಈ ಶಾಲೆಯ ಐವರು ವಿದ್ಯಾರ್ಥಿಗಳು ಮುಂದೆ ಬಂದರೆ ಉಚಿತವಾಗಿ ಐಎಎಸ್ ಕೋಚಿಂಗ್ ನೀಡುತ್ತೇನೆ. ಲಕ್ಷಾಂತರ ರೂಪಾಯಿ ಖರ್ಚಾದರೂ ಪರವಾಗಿಲ್ಲ. ನಾಲ್ಕೈದು ವಿದ್ಯಾರ್ಥಿಗಳಲ್ಲಿ ಆಸಕ್ತಿ ಇದ್ದರೂ ಉಚಿತವಾಗಿ ತರಬೇತಿ ನೀಡುತ್ತೇನೆ ಎಂದು ತಿಳಿಸಿದರು.

Read also : ದಾವಣಗೆರೆ | ವಿಪ ಸದಸ್ಯ ಎನ್. ರವಿಕುಮಾರ್ ಅನರ್ಹಗೊಳಿಸಿ : ಮಹಿಳಾ ಕಾಂಗ್ರೆಸ್ ಒತ್ತಾಯ
ಮನೆಯಲ್ಲಿ ಬಡತನ ಇದೆ, ತಂದೆ ತಾಯಿ ಕೂಲಿ ಕೆಲಸ ಮಾಡುತ್ತಾರೆ, ಅನುಕೂಲ ಇಲ್ಲ ಎಂದುಕೊಳ್ಳಬೇಡಿ. ಸಮಾಜದಲ್ಲಿ ಒಳ್ಳೆಯ ಮನಸುಗಳಿವೆ. ಸಹಾಯ ಮಾಡಲು ದೊಡ್ಡ ವ್ಯಕ್ತಿಗಳಿದ್ದಾರೆ. ನಿಟುವಳ್ಳಿಯ ಈ ಶಾಲೆಯ ಪ್ರಾಂಶುಪಾಲರು, ಶಿಕ್ಷಕರ ಶ್ರಮದಿಂದ ಈ ಶಾಲೆಯ ಇಷ್ಟೊಂದು ಉತ್ತಮವಾಗಿ ಇದೆ.  ಬಣ್ಣ ಬಣ್ಣದ ಬಟ್ಟೆ ಹಾಕಿಕೊಳ್ಳುವುದು ಫ್ಯಾಷನ್. ಆಳವಾದ ಆಸಕ್ತಿ ಹೊಂದುವುದು ಪ್ಯಾಷನ್. ಫ್ಯಾಷನ್ ಜೊತೆಗೆ ಪ್ಯಾಷನ್ ನಿಮ್ಮಲ್ಲಿರಬೇಕು. ಶಿಕ್ಷಕರು ಅತಿವಾದ ಆಸಕ್ತಿಯಿಂದ ಕಲಿಸುತ್ತಿದ್ದಾರೆ. ವಿದ್ಯಾರ್ಥಿಗಳು ಯಶಸ್ಸು ಕಾಣುತ್ತಿದ್ದಾರೆ. ಯಾವುದೇ ಮುಜುಗರ, ಹಿಂಜರಿಕೆ ಇಲ್ಲದೇ ಶಾಲೆಗೆ ಯಾರೇ ಬಂದರೂ ಸಹಾಯ ಕೇಳಿ ಬಂದ ಅನುದಾನವು ದುರುಪಯೋಗವಾಗದೇ ಸದ್ಬಳಕೆಯಾಗುತ್ತಿದೆ.ಇದು ಸಂತಸದ ವಿಚಾರ ಎಂದು ಜಿ. ಬಿ. ವಿನಯ್ ಕುಮಾರ್ ಅವರು ತಿಳಿಸಿದರು.

ಪಿಎಂ ಶ್ರೀ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಂ. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಖ್ಯ ಶಿಕ್ಷಕ ಟಿ. ಎಸ್. ಗುರುಮೂರ್ತಿ, ಗುರುರಾಜ್, ಡಾ. ಬಿ. ಸ್ವಪ್ನಾ, ಜಿ. ಪಿ. ಸಚಿನ್ ಕುಮಾರ್, ವೈದ್ಯಾಧಿಕಾರಿ ಶಿವರುದ್ರಪ್ಪ, ಉಚ್ಚೆಂಗಪ್ಪ, ವಿನಯ್ ಕುಮಾರ್, ಭೀಮೇಶ್ ಕುಮಾರ್, ಬಿ. ಎಂ. ಸುರೇಶ್, ಟಿ. ಎಸ್. ಸ್ವಾಮಿ, ಎಂ. ಸುರೇಶ್ ಮತ್ತಿತರರು ಹಾಜರಿದ್ದರು. ಶಾಲಾ ಮಕ್ಕಳು ಪ್ರಾರ್ಥಿಸಿದರು. ಕೆ. ಟಿ. ಜಯಪ್ಪ ಸ್ವಾಗತಿಸಿದರು. ಜಿ. ಪಿ. ಸಚಿನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರತಿ ವರ್ಷ ಶಾಲೆಗೆ 50 ಸಾವಿರ ರೂ.: ಜಿ. ಬಿ. ವಿನಯ್ ಕುಮಾರ್

ಶಾಲೆಗೆ ಒಂದು ಕಂಪ್ಯೂಟರ್ ಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಇದನ್ನು ಕೊಡಿಸುತ್ತೇನೆ. ಪ್ರತಿ ವರ್ಷ ಈ ಶಾಲೆಗೆ 50 ಸಾವಿರ ರೂಪಾಯಿ ನೀಡುತ್ತೇನೆ. ಎಸ್ ಎಸ್ ಎಲ್ ಸಿಯಲ್ಲಿ ಶೇಕಡಾ 85ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ತಲಾ ಹತ್ತು ಸಾವಿರ ರೂಪಾಯಿ ಬಹುಮಾನ ರೂಪದಲ್ಲಿ ನೀಡುತ್ತೇನೆ. ಮುಂದಿನ ಓದಿಗೆ ಅನುಕೂಲವಾಗುತ್ತದೆ. ನಾನು ಸಂಸತ್, ವಿಧಾನಸಭೆಗೆ ಹೋಗಿ ಮತ್ತಷ್ಟು ಸೇವೆ ಮಾಡಬೇಕೆಂಬ ಆಸೆ ಇದೆ. ನೋಡೋಣ ಏನಾಗುತ್ತದೆ ಎಂದು. ಆದ್ರೆ, ಶಾಲೆಗೆ ಘೋಷಿಸಿರುವ ಅನುದಾನ ಕೇವಲ ಒಂದು ವರ್ಷಕ್ಕೆ ಮಾತ್ರ ಸೀಮಿತವಲ್ಲ, ಮುಂದಿನ 30 ವರ್ಷದವರೆಗೂ ಮುಂದುವರಿಯುತ್ತದೆ ಎಂದು ಭರವಸೆ ನೀಡಿದ ಜಿಬಿವಿ ಚೆನ್ನಾಗಿ ಓದಿ ದೊಡ್ಡ ವ್ಯಕ್ತಿಗಳಾಗಿ. ನೀವು ಎಂಜಿನಿಯರಿಂಗ್, ಮೆಡಿಕಲ್ ಓದಿ ಉನ್ನತ ಸ್ಥಾನಕ್ಕೆ ಹೋಗಿ ಎಂದು ಹಾರೈಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davangere ದಾವಣಗೆರೆ | ವಿಪ ಸದಸ್ಯ ಎನ್. ರವಿಕುಮಾರ್ ಅನರ್ಹಗೊಳಿಸಿ : ಮಹಿಳಾ ಕಾಂಗ್ರೆಸ್ ಒತ್ತಾಯ
Next Article Applications invited ದಾವಣಗೆರೆ | ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

90 ದಿನಗಳ ಮಧ್ಯಸ್ಥಗಾರಿಕೆ ಅಭಿಯಾನ ಸದ್ಬಳಕೆಗೆ ನ್ಯಾ. ಮಹಾವೀರ ಕರೆಣ್ಣವರ್ ಕರೆ

ದಾವಣಗೆರೆ : ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ…

By Dinamaana Kannada News

ದಾವಣಗೆರೆ | ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ :  ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್‍ಶಿಪ್ ಪಡೆಯಲು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ತರಗತಿಗಳಲ್ಲಿ ವಿದ್ಯಾಭ್ಯಾಸ…

By Dinamaana Kannada News

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

ದಾವಣಗೆರೆ :  ಕ್ರಿಕೇಟ್‍ಗೆ ಮಾತ್ರ ಹೆಚ್ಚು ಆದ್ಯತೆ ನೀಡದೇ ವೈಯಕ್ತಿಕ ಕ್ರೀಡೆಗಳತ್ತ ಆಸಕ್ತಿ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?