ದಾವಣಗೆರೆ : ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘದ ನೇತೃತ್ವದಲ್ಲಿ ಪಾಲಿಕೆ ಅವರಣದಲ್ಲಿ ನೌಕರರು ಬುಧವಾರ ಪ್ರತಿಭಟನೆ ನಡೆಸಿದರು.
ಕೆ.ಎಸ್.ಗೋವಿಂದರಾಜು ಮಾತನಾಡಿ, ರಾಜ್ಯದ ಪಾಲಿಕೆಗಳ ಎಲ್ಲಾ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. 7ನೇ ವೇತನ ಆಯೋಗದ ಸೌಲಭ್ಯಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ನೀಡಿದಂತೆ ಪಾಲಿಕೆ ಅಧಿಕಾರಿ, ನೌಕರರಿಗೂ ಯಥಾವತ್ ಜಾರಿಗೊಳಿಸಬೇಕು. ಸರ್ಕಾರವು ಆರ್ಥಿಕ ಇಲಾಖೆಯಿಂದಲೇ ಪೂರ್ಣ ಅನುದಾನ ಬಿಡುಗಡೆ ಮಾಡಬೇಕು ಎಂದರು.
ಎಲ್ಲಾ ಪಾಲಿಕೆಗಳ ವೃಂದ ಮತ್ತು ನೇಮಕಾತಿ ನಿಯಮ-2011ಕ್ಕೆ ಕಳೆದ 14 ವರ್ಷಗಳಿಂದ ತಿದ್ದುಪಡಿ ಮಾಡಿಲ್ಲ. ತಕ್ಷಣ ತಿದ್ದುಪಡಿ ಮಾಡಿ, ಅಧಿಸೂಚನೆ ಹೊರಡಿಸಬೇಕು. ನಗರಸಭೆ, ಪುರಸಭೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಚೇರಿ ವ್ಯವಸ್ಥಾಪಕರಿಗೆ ಮತ್ತು ಕಂದಾಯಾಧಿಕಾರಿಗಳಿಗೆ ಕೆಎಂಎಎಸ್ ಮುಖ್ಯಾಧಿಕಾರಿ ಶ್ರೇಣಿ-1ಕ್ಕೆ ಮುಂಬಡ್ತಿ ನೀಡುತ್ತಿದ್ದು, ಅದರಂತೆ ಪಾಲಿಕೆಯ ಕಚೇರಿ ವ್ಯವಸ್ಥಾಪಕರು, ಸಹಾಯಕ ಕಂದಾಯ ಅಧಿಕಾರಿಗಳಿಗೆ ಕೆಎಂಎಎಸ್ ಮುಖ್ಯಾಧಿಕಾರಿ ಶ್ರೇಣಿ-1ಕ್ಕೆ ಮುಂಬಡ್ತಿ ನೀಡಬೇಕು ಎಂದು ಅವರು ಒತ್ತಾಯಿಸಿದರು.
Read also : ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳ ಪುರಪ್ರವೇಶ: ಆರ್ಯವೈಶ್ಯ ಸಮಾಜ ಬಾಂಧವರಿಂದ ಬೈಕ್ ರ್ಯಾಲಿ
ಸರ್ಕಾರಿ ನೌಕರರಿಗೆ ಜಾರಿಗೊಳಿಸಿದ ನಗದು ರಹಿತ ಆರೋಗ್ಯ ಸೌಲಭ್ಯದ ಜ್ಯೋತಿ ಸಂಜೀವಿನಿ ಅಥವಾ ಆರೋಗ್ಯ ಸಂಜೀವಿನಿ ಯೋಜನೆಯನ್ನು ಮಹಾ ನಗರ ಪಾಲಿಕೆ ಅಧಿಕಾರಿ, ನೌಕರರು, ಪೌರ ಕಾರ್ಮಿಕರನ್ನು ಒಳಗೊಂಡAತೆ ಇತರೆ ಎಲ್ಲಾ ನೌಕರರು ಮತ್ತು ಅವಲಂಭಿತರಿಗೂ ಜಾರಿಗೊಳಿಸಬೇಕು. ಪಾಲಿಕೆಗಳಲ್ಲಿ ಹೊರ ಗುತ್ತಿಗೆ ಆದಾರಿತ ವಾಹನ ಚಾಲಕರು, ಯುಜಿಡಿ ಹೆಲ್ಪರ್ಸ್, ಲೋಡರ್ಸ್, ಹೆಲ್ಪರ್ಸ್, ಗಾರ್ಡನರ್ಸ್, ಡಾಟಾ ಎಂಟ್ರಿ ಆಪರೇಟರ್ಸ್, ವಾಲ್ವ್ಮನ್, ಸ್ಮಶಾನ ಕಾವಲುಗಾರರು ಇತರೆ ನೌಕರರನ್ನು ನೇರ ಪಾವತಿಗೆ ಒಳಪಡಿಸಿ, ಸಂಪೂರ್ಣವಾಗಿ ಶೇ.100ರಷ್ಟು ಸರ್ಕಾರದಿಂದಲೇ ವೇತನ ನೀಡಬೇಕು ಎಂದು ಅವರು ಮನವಿ ಮಾಡಿದರು.
ಈ ವೇಳೆ ಸಂಘದ ಅಧ್ಯಕ್ಷ ಕೆ.ಎಸ್.ಗೋವಿಂದರಾಜು, ಪ್ರಧಾನ ಕಾರ್ಯದರ್ಶಿ ಕೆ.ಎಸ್.ಪಾಂಡುರಾಜ್, ಕಾರ್ಯದರ್ಶಿ ಡಿ.ಸಿ.ಬಸವರಾಜಯ್ಯ ಇತರರ ನೇತೃತ್ವದಲ್ಲಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಯುಕ್ತರಾದ ರೇಣುಕಾ ಹಾಗೂ ಸಂಜೆ ಜಿಲ್ಲಾ ಉಸ್ತುವಾಗಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಂಘದ ಉಪಾಧ್ಯಕ್ಷೆ ಎನ್.ನಾಗರತ್ನಮ್ಮ, ಸಹ ಕಾರ್ಯದರ್ಶಿ ನಾಮದೇವ, ಖಜಾಂಚಿ ಎಂ.ಅಸ್ಲA, ಪೌರ ಕಾರ್ಮಿಕರ ಸಂಘದ ಎಲ್.ಎಂ.ಹನುಮAತಪ್ಪ, ಎನ್.ನೀಲಗಿರಿಯಪ್ಪ, ಎಲ್.ಎಂ.ಎಚ್.ಸಾಗರ್, ಚಾಲಕರ ಸಂಘದ ಅಧ್ಯಕ್ಷ ವೀರೇಶ, ಸುರೇಶ ಪಾಟೀಲ, ಎಇಇ ಜಗದೀಶ, ಚೌಹಾಣ್, ಮಂಜುಳಾ ದೇವಿ, ದಿಲ್ಷಾದ್ ಬೇಗ್, ಶ್ರೇಯಾಂಕ, ಮಂಜಪ್ಪ ನಾಯ್ಕ, ಬಸವಣ್ಣ, ಸುನಿಲ್, ಪ್ರಶಾಂತ, ಮದನ್, ಪ್ರಕಾಶ, ಹರೀಶ ಇತರರು ಇದ್ದರು.
ನಂತರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಮನವಿ ಅರ್ಪಿಸಿದರು.