Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬೈಕ್, ಟ್ಯಾಕ್ಸಿ ಪರವಾದ ಧೋರಣೆ ವಿರುದ್ಧ ಧ್ವನಿಯೆತ್ತಲು ಸಂಸದೆ ಡಾ. ಪ್ರಭಾಗೆ ಮನವಿ
ತಾಜಾ ಸುದ್ದಿ

ಬೈಕ್, ಟ್ಯಾಕ್ಸಿ ಪರವಾದ ಧೋರಣೆ ವಿರುದ್ಧ ಧ್ವನಿಯೆತ್ತಲು ಸಂಸದೆ ಡಾ. ಪ್ರಭಾಗೆ ಮನವಿ

Dinamaana Kannada News
Last updated: July 10, 2025 4:38 am
Dinamaana Kannada News
Share
Davangere MP Dr. Prabha Mallikarjun
SHARE

ದಾವಣಗೆರೆ : ಕೇಂದ್ರ ಸರ್ಕಾರದ ಬೈಕ್ ಟ್ಯಾಕ್ಸಿ ಪರವಾದ ಧೋರಣೆಯ ವಿರುದ್ಧ ಧ್ವನಿಯೆತ್ತಲು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕರ್ನಾಟಕ ಚಾಲಕರ ಒಕ್ಕೂಟದಿಂದ ಮನವಿ ಸಲ್ಲಿಸಲಾಯಿತು.

ಇದೇ ವೇಳೆ ಕರ್ನಾಟಕ ಚಾಲಕರ ಒಕ್ಕೂಟದ ರಾಜ್ಯ ಸಂಚಾಲಕ ಡಿ.ಆರ್.‌ ಅರವಿಂದಾಕ್ಷ ಮಾತನಾಡಿ, ಕೇಂದ್ರ ಸರ್ಕಾರವು ಬೈಕ್ ಟ್ಯಾಕ್ಸಿಗೆ ಸಂಬಂಧಿಸಿದಂತೆ ನೂತನ ಮಾರ್ಗಸೂಚಿ ಹೊರಡಿಸಿದ್ದು, ಇದು ಆಟೋ ಮತ್ತು ಕಾರುಚಾಲಕರ ಬದುಕಿಗೆ ಮಾರಕವಾಗಿದೆ. ಕೇಂದ್ರ ಸರ್ಕಾರವು ಕನಿಷ್ಠ ಜ್ಞಾನ ಇಲ್ಲದ ರೀತಿ ಬೈಕ್ ಟ್ಯಾಕ್ಸಿ ವಿಚಾರದಲ್ಲಿ ವರ್ತಿಸುತ್ತಿದ್ದು, ಒಂದು ವೇಳೆ ಬೈಕ್ ಟ್ಯಾಕ್ಸಿಗಳ ಸಂಚಾರ ಅಧಿಕೃತವಾಗಿ ರಾಜ್ಯಾದ್ಯಂತ ಹಾಗೂ ರಾಷ್ಟ್ರಾದ್ಯಂತ ಶುರುವಾದರೆ ಈ ರಾಷ್ಟ್ರದ ಕೋಟ್ಯಾಂತರ ಹಾಗೂ ಈ ನಾಡಿನ ಲಕ್ಷಾಂತರ ಆಟೋ ಮತ್ತು ಟ್ಯಾಕ್ಸಿ ಚಾಲಕರ ಬದುಕು ದುಸ್ತರವಾಗಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಉದ್ಯೋಗ ಸೃಷ್ಟಿ ಹೆಸರಿನಲ್ಲಿ ಬೈಕ್ ಟ್ಯಾಕ್ಸಿಗೆ ಉತ್ತೇಜನ ನೀಡುತ್ತಿರುವುದು ಸರಿಯಲ್ಲ. ಬೈಕ್ ಟ್ಯಾಕ್ಸಿ ಬದಲು ದ್ವಿಚಕ್ರವಾಹನದಲ್ಲಿ ಊಟ, ಉಪಹಾರ ವಿತರಣೆ, ಔಷಧಿ, ತರಕಾರಿ, ನೀರಿನ ಸರಬರಾಜು ಸೇರಿದಂತೆ ಈ ತರಹದ ಸೇವೆಗೆ ಉತ್ತೇಜನ ನೀಡಲಿ. ಅದು ಬಿಟ್ಟು ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿ, ಉದ್ಯೋಗ ಸೃಷ್ಟಿ ಮಾಡುವ ಭರದಲ್ಲಿ ದೇಶದ ಹಾಗೂ ರಾಜ್ಯದ ಕೋಟ್ಯಾಂತರ ಚಾಲಕರ ಬದುಕುಗಳ ಆರ್ಥಿಕ ಭದ್ರತೆಯನ್ನು ಕಿತ್ತೆಸೆಯುವಂತಹ ಕೆಲಸ ಮಾಡುತ್ತಿರುವುದು ತರವಲ್ಲ ಎಂದರು.

Read also : ಮಹಾಜ್ಞಾನಿ ವಚನಕಾರ, ಶಿವಶರಣ ಹಡಪದ ಅಪ್ಪಣ್ಣ

ಕೇಂದ್ರ ಸರ್ಕಾರವು ಸಹಕಾರ ಟ್ಯಾಕ್ಸಿ ಎಂಬ ಯೋಜನೆಯನ್ನು ಶೀಘ್ರದಲ್ಲೇ ಓಲಾ ಮತ್ತು ಉಬರ್ ಕಂಪನಿಗಳಿಗೆ ಸರಿಸಮನಾಗಿ ಆರಂಭಿಸಲಿದ್ದು, ಕರ್ನಾಟಕ ಚಾಲಕರ ಒಕ್ಕೂಟ ಇದನ್ನು ಸ್ವಾಗತಿಸುತ್ತದೆ. ಆದರೆ ಸಹಕಾರ ಟ್ಯಾಕ್ಸಿ ಯೋಜನೆಯಡಿ ಕೇಂದ್ರ ಸರ್ಕಾರವು ಬೈಕ್ ಟ್ಯಾಕ್ಸಿಗೂ ಸಹ ಅನುಮತಿ ನೀಡುವುದನ್ನು ನಮ್ಮ ಒಕ್ಕೂಟ ವಿರೋಧಿಸುತ್ತದೆ. ಆದ್ದರಿಂದ ತಾವು ಈ ಬಗ್ಗೆ ಕೇಂದ್ರದ ಗಮನಕ್ಕೆ ತರಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ, ದಾವಣಗೆರೆ ಜಿಲ್ಲಾಧ್ಯಕ್ಷರಾದ ಪಿ.ಬಿ. ಅಂಜುಕುಮಾರ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಕಾರ್ಯಾಧ್ಯಕ್ಷ ಜಯರಾಂ, ಕಾರ್ಯದರ್ಶಿ ವೀರೇಶ್, ಸಹಕಾರ್ಯದರ್ಶಿ ಗಂಗಾಧರ್, ಕಾರ್ಯದರ್ಶಿ ಶಿವಯೋಗಿ, ದಾ.ಹ. ಶಿವಕುಮಾರ್, ಗುರುರಾಜ್ ಎನ್., ಸಂತೋಷ್, ಚನ್ನಗಿರಿ ತಾಲೂಕು ಗೌರವಾಧ್ಯಕ್ಷ ಅಣ್ಣಪ್ಪ, ತಾಲೂಕು ಅಧ್ಯಕ್ಷ ಪೃಥ್ವಿ, ಪ್ರಧಾನ ಪ್ರಧಾನ ಕಾರ್ಯದರ್ಶಿ ಸಾಧಿಕ್, ಮಧುಪೂಜಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

TAGGED:Dinamana.comKannada NewsMP Dr. Prabha Mallikarjunದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article protest davanagere ದಾವಣಗೆರೆ | ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಾಲಿಕೆ ನೌಕರರಿಂದ ಪ್ರತಿಭಟನೆ
Next Article davanagere ಭದ್ರಾ ಜಲಾಶಯದಲ್ಲಿ 173 ಅಡಿ ನೀರು : ಭರ್ತಿಗೆ ಕೆಲವೇ ದಿನ ಬಾಕಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಬಸವನಗೌಡ ಯತ್ನಾಳ್ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕು : ಶಾಸಕ ಬಿ.ಪಿ. ಹರೀಶ್

ದಾವಣಗೆರೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅನುಭವದ ಕೊರತೆ ಇದೆ. ಹಾಗಾಗಿ, ರಾಜ್ಯಾಧ್ಯಕ್ಷರ ಬದಲಾವಣೆ ಆಗಲೇಬೇಕು. ಅವರ ಬದಲು ಹಿರಿಯರಾದ…

By Dinamaana Kannada News

DAVANAGER NEWS : ರಾಷ್ಟೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ  (Davangere Distric) :  ರಾಷ್ಟೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ…

By Dinamaana Kannada News

DAVANAGERE NEWS : ಅಪ್ಸರಾ ಐಸ್ ಕ್ರೀಂನಿಂದ ʼಮುಸ್ಕಾನ್ʼ ಬಿಡುಗಡೆ

ದಾವಣಗೆರೆ (DAVANAGERE) : ಅಪ್ಸರಾ ಐಸ್ ಕ್ರೀಮ್ಸ್ 53ನೇ ವಾರ್ಷಿಕೋತ್ಸವದಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ಮುಸ್ಕಾನ್ ಎಂಬ ವಿಶಿಷ್ಟ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?