Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಬಾಲ್ಯವಿವಾಹ ಪ್ರಕರಣ ಶೂನ್ಯಕ್ಕೆ ತರುವಲ್ಲಿ ಪ್ರತಿಯೊಬ್ಬರೂ ಶ್ರಮವಹಿಸಿ : ಸಿಇಒ
ತಾಜಾ ಸುದ್ದಿ

ದಾವಣಗೆರೆ | ಬಾಲ್ಯವಿವಾಹ ಪ್ರಕರಣ ಶೂನ್ಯಕ್ಕೆ ತರುವಲ್ಲಿ ಪ್ರತಿಯೊಬ್ಬರೂ ಶ್ರಮವಹಿಸಿ : ಸಿಇಒ

Dinamaana Kannada News
Last updated: July 10, 2025 11:44 am
Dinamaana Kannada News
Share
Davangere
SHARE

ದಾವಣಗೆರೆ : ಜಿಲ್ಲೆಯಲ್ಲಿ ಬಾಲ್ಯವಿವಾಹ, ಪೋಕ್ಸೋ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮವಹಿಸಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಜಿ. ಪಂ. ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ “ಬಾಲ್ಯವಿವಾಹ ನಿಷೇದಾಧಿಕಾರ ಮತ್ತು ಕರ್ತವ್ಯ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧ ತಡೆ ಕಾಯ್ದೆ – 2012ರ” ಕುರಿತು ಆಯೋಜಿಸಲಾದ ಕಾರ್ಯಗಾರ ಉದ್ಘಾಟಿಸಿ  ಮಾತನಾಡಿದರು.

ಬಾಲ್ಯವಿವಾಹ ಪ್ರಕರಣಗಳು ಗ್ರಾಮೀಣ ಭಾಗದಲ್ಲೇ ಹೆಚ್ಚಾಗಿದ್ದು, ಇದಕ್ಕೆ ಪ್ರಮುಖ ಕಾರಣ ಶಿಕ್ಷಣದ ಕೊರತೆ. ಬಾಲ್ಯವಿವಾಹ ಮಾಡುವುದರಿಂದ ಮಕ್ಕಳ ಮೇಲೆ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುವುದಲ್ಲದೇ ತಾಯಿ ಮತ್ತು ಶಿಶು ಮರಣ ದರ ಉಂಟಾಗಲಿದೆ. ಆದ್ದರಿಂದ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮೀಣ ಮಟ್ಟದಲ್ಲಿ ಬಾಲ್ಯವಿವಾಹ, ಮಹಿಳೆ ಮತ್ತು ಮಕ್ಕಳ ಸುರಕ್ಷತಾ ಕುರಿತು ಶಿಕ್ಷಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಇಲಾಖೆ ವತಿಯಿಂದ ಮತ್ತಷ್ಟು ಜಾಗೃತಿ ಮೂಡಿಸಬೇಕು ಎಂದರು.

ಮಹಿಳೆಯರು ಪ್ರಸ್ತುತ ಹಲವಾರು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿ ಯಶಸ್ಸನ್ನು ಕಾಣುತ್ತಿದ್ದಾರೆ. ಅದಕ್ಕೆ ಸೂಕ್ತ ಉದಾಹರಣೆ ದೇಶದ ಅತ್ಯುನ್ನತ ಹುದ್ದೆ ಅಲಂಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು. ಇದೆಲ್ಲವೂ ಶಿಕ್ಷಣದಿಂದ ಮಾತ್ರ ಸಾಧ್ಯ. ಆದ್ದರಿಂದ ಶಿಕ್ಷಣ ಮಹತ್ವ ಸಾರುವ ಮೂಲಕ ಗುಣಮಟ್ಟದ ಶಿಕ್ಷಣ ನೀಡುವಂತೆ ಪೋಷಕರಿಗೂ ಅರಿವು ಮೂಡಿಸಿ, ಪ್ರೋತ್ಸಾಹಿಸಬೇಕು. ಆದರೂ ಬಾಲ್ಯವಿವಾಹ, ಪೋಕ್ಸೋ ಮಹಿಳೆ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಕಂಡು ಬಂದಲ್ಲಿ ಅಧಿಕಾರಿಗಳು ತಂಡೋಪ ತಂಡವಾಗಿ ತುರ್ತಾಗಿ ಕಾರ್ಯಪ್ರವೃತ್ತರಾಗಿ ಸಂಬಂಧಪಟ್ಟವರ ಮೇಲೆ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಬೇಕು ಎಂದರು,

ಬಾಲ್ಯವಿವಾಹ ಮತ್ತು ಪೋಕ್ಸೋ ಕಾಯ್ದೆ ಅತ್ಯಂತ ಕಠಿಣವಾಗಿದ್ದು, ಇಂತಹ ಪ್ರಕರಣಗಳಲ್ಲಿ ಸಿಲುಕಿದವರಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಹಾಗಾಗಿ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮೀಣ ಭಾಗದಲ್ಲಿ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಈ ಮೂಲಕ ಪ್ರತಿಯೊಬ್ಬರೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದರಿಂದ ಗಣನೀಯವಾಗಿ ಪ್ರಕಣಗಳ ಸಂಖ್ಯೆ ತಗ್ಗಿಸಲು ಸಾಧ್ಯ ಎಂದರು.

Read also  : ಗುರುಕಾರುಣ್ಯ ಒಂದಿದ್ದರೆ ಸಾಕು ಜೀವನ ಸಾರ್ಥಕ : ಗಾಯಕಿ ಸಂವೇದಿತಾ ಸುಭಾಷ್

ಜಿಲ್ಲಾದ್ಯಂದ ಕಳೆದ ವರ್ಷ 75 ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಶಸ್ವಿಯಾಗಿ ಕಾರ್ಯನಿರ್ವಹಿಸಿದೆ. ಬಾಲ್ಯವಿವಾಹಕ್ಕೆ ಸಂಬಂಧಿಸಿದಂತೆ 7 ಪ್ರಕರಣಗಳಿಗೆ ಎಫ್‌ಐರ್ ದಾಖಲಿಸಲಾಗಿದ್ದು, ಇನ್ನೂ 2 ಪ್ರಕರಣ ಬಾಲ್ಯ ವಿವಾಹ ಮಾಡಲು ಮುಂದಾಗಿದ್ದು ತಡೆಯಲಾಗಿದೆ. ಬಾಲ್ಯವಿವಾಹ ಮಾಡುವುದು ಕಾನೂನು ಬಾಹಿರ ಎಂದು ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹಾಗೆಯೇ ಜಿಲ್ಲೆಯಲ್ಲಿ 98 ಪೋಕ್ಸೊ ಪ್ರಕರಣ ದಾಖಲಾಗಿವೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ತಿಳಿಸಿದರು.

ಕೊಪ್ಪಳದ ಯುನಿಸೆಫ್ ಸಂಸ್ಥೆ ಸಂಯೋಜಕ ರಾಘವೇಂದ್ರ ಭಟ್ “ಬಾಲ್ಯವಿವಾಹ ನಿಷೇದಾಧಿಕಾರ ಮತು ಕರ್ತವ್ಯ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಪರಾಧ ತಡೆ ಕಾಯ್ದೆ – 2012ರ” ಕುರಿತು ಉಪನ್ಯಾಸ ನೀಡಿದರು.

ಕಾರ್ಯಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಾನಯ್ಕ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗೇಂದ್ರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಷಣ್ಮುಖಪ್ಪ, ಡಿವೈಎಸ್ಪಿ ಶರಣಬಸವ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಗುರುಕಾರುಣ್ಯ ಒಂದಿದ್ದರೆ ಸಾಕು ಜೀವನ ಸಾರ್ಥಕ : ಗಾಯಕಿ ಸಂವೇದಿತಾ ಸುಭಾಷ್
Next Article Direct interview ದಾವಣಗೆರೆ | ಜುಲೈ 15 ರಂದು ನೇರ ಸಂದರ್ಶನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

ದಾವಣಗೆರೆ (Davanagere): ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ರಾಜ್ಯಪಾಲರಿಂದ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ಹೇಳಿ 2,78,720/-ರೂ ಹಣ…

By Dinamaana Kannada News

ಪರಿವರ್ತನೆಯ ದಿನಗಳಲ್ಲಿ ಸಂವಿಧಾನದ ಆಶಯ ಕಾಪಾಡಬೇಕು:ವಿನಯ್ ಬಾಳಾ ಸಾಹೇಬ್

ದಾವಣಗೆರೆ (Davanagere): ಇಂದಿನ ಪರಿವರ್ತನಾ ದಿನಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸವನ್ನು ವಕೀಲರು ಮಾಡಬೇಕಿದೆ ಎಂದು ರಾಜ್ಯ ವಕೀಲರ ಪರಿಷತ್…

By Dinamaana Kannada News

Davanagere | ರಾಷ್ಟ್ರೀಯ ಅಹಿಂದ ಒಕ್ಕೂಟದ ದಾವಣಗೆರೆ ಜಿಲ್ಲಾಧ್ಯಕ್ಷರಾಗಿ ರವಿ.ಆ‌ರ್.

ದಾವಣಗೆರೆ (Davanagere):  ರಾಷ್ಟ್ರೀಯ ಅಹಿಂದ ಒಕ್ಕೂಟದ ದಾವಣಗೆರೆ ಜಿಲ್ಲಾಧ್ಯಕ್ಷರನ್ನಾಗಿ ದಾವಣಗೆರೆ ಕನ್ನಡಿಗ ಪತ್ರಿಕೆಯ ಸಂಪಾದಕರಾದ ರವಿ.ಆರ್‌.ಇವರನ್ನು ನೇಮಕಮಾಡಲಾಗಿದೆ ಎಂದು ರಾಷ್ಟ್ರೀಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?