Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ | ಅಜ್ಞಾನವನ್ನು ಹೊಡೆದೋಡಿಸುವವರೇ ಗುರು : ಡಾ.ಬಸವಪ್ರಭು ಶ್ರೀ
ತಾಜಾ ಸುದ್ದಿ

ದಾವಣಗೆರೆ | ಅಜ್ಞಾನವನ್ನು ಹೊಡೆದೋಡಿಸುವವರೇ ಗುರು : ಡಾ.ಬಸವಪ್ರಭು ಶ್ರೀ

Dinamaana Kannada News
Last updated: July 13, 2025 11:44 am
Dinamaana Kannada News
Share
Dr. Basavaprabhu Sri
SHARE
ದಾವಣಗೆರೆ :  “ಗು” ಎಂದರೆ ಅಜ್ಞಾನ, “ರು” ಎಂದರೆ ಹೊಡೆದೋಡಿಸುವುದು ಎಂದರ್ಥ. ಅಜ್ಞಾನವನ್ನು ಹೊಡೆದೋಡಿಸುವವರೇ ಗುರು. ಗುರು ಎನ್ನುವುದು ಶಕ್ತಿ, ಸಿದ್ಧಾಂತವಾಗಿದೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಹೇಳಿದರು.
ನಗರದ ದೊಡ್ಡಪೇಟೆಯ ವಿರಕ್ತಮಠದಲ್ಲಿರುವ ಎಸ್‌ಜೆಎಂ ಶಾಲೆಯಲ್ಲಿ  ಹಿಮಾಲಯನ್ ಅಡ್ವೆಂಚರ್ ಅಂಡ್ ನೇಚರ್ ಅಕಾಡೆಮಿಯಿಂದ ಗುರುಪೌರ್ಣಿಮೆ ಅಂಗವಾಗಿ ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮ ಹಾಗೂ ಅಕಾಡೆಮಿಯ ಘಟಕ ಸ್ಥಾಪನೆ ಕಾರ್ಯಕ್ರಮದ ಸಾನಿಧ್ಯವಹಿಸಿ ಶ್ರೀಗಳು ಮಾತನಾಡಿದರು.
ಮಾನವನ ಜೀವನದ ಗುರಿಯನ್ನು ತಿಳಿಸಲು ಜೀವನದಲ್ಲಿ ಗುರು ಬೇಕು. ಬಹಳ ಜನರಿಗೆ ನಾವು ಏತಕ್ಕಾಗಿ ಮನುಷ್ಯರಾಗಿ ಹುಟ್ಟಿದ್ದೇವೆ ಎಂಬುದೇ ಗೊತ್ತಿಲ್ಲ. ಈ ಮಾನವ ಜನ್ಮ ಇರುವುದೇ ಖುಷಿಯಾಗಿದ್ದು, ಸಂತೋಷದಿಂದ ಇದ್ದು ಹೋಗಲು ಎಂದು ತಿಳಿದುಕೊಂಡಿದ್ದಾರೆ. ಖುಷಿಯಾಗಿ ಜೀವನ ಸಾಗಿಸಿ ಆದರೆ ಜೊತೆಗೆ ಧರ್ಮದ, ಪುಣ್ಯದ ಒಳ್ಳೆಯ ಕಾರ್ಯಗಳನ್ನು ಮಾಡಿರಿ. ಜೀವನ ಎಂಬುದು ನೀರ ಮೇಲಿನ ಗುಳ್ಳಿಯಿಂದ್ದoತೆ. ಗಾಳಿಗೆ ಹಚ್ಚಿಟ್ಟ ದೀಪದಂತೆ. ಬೀದಿ, ಗಾಳಿಯಲ್ಲಿ ದೀಪ ಹಚ್ಚಿಟ್ಟರೆ ಅದು ಯಾವಾಗ ಆರುತ್ತೆ ಎಂಬುದು ಗೊತ್ತಿಲ್ಲ. ಹಾಗೆಯೇ ಮಾನವನ ಆಯುಷ್ಯ ಎಂಬುದು ಯಾವಾಗ ದೇವರು ನಮ್ಮನ್ನು ಕರೆದುಕೊಳ್ಳುತ್ತಾನೆ ಎಂಬುದು ಗೊತ್ತಿಲ್ಲ. ಇರುವುದರೊಳಗೆ ಒಳ್ಳೆಯ ಸತ್ಕಾರ್ಯಗಳನ್ನು ಮಾಡಬೇಕು. ಮಹಾತ್ಮರು ದೇವರನ್ನು ಮಾನವರಲ್ಲಿ ಕಾಣಿರಿ ಎಂದು ಹೇಳಿದ್ದಾರೆ. ಮಾನವರನ್ನು ದೇವರ ರೂಪದಲ್ಲಿ ಕಂಡಾಗ ಜಗತ್ತಿನಲ್ಲಿ ಯುದ್ಧ, ಜಗಳ, ಗಲಭೆಗಳು ನಡೆಯಲು ಸಾಧ್ಯವಿಲ್ಲ.
ನಾವೂ ಕೂಡಾ ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂದರೆ ಕ್ರಿಯಾಶೀಲರಾಗಬೇಕು ಎಂದರು.
ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾವುಗಳು ಜೀವನದಲ್ಲಿ ಏನಾದರೂ ಸಾಧಿಸಬೇಕೆಂದರೆ ಮುಂದೆ ಗುರಿ, ಛಲ ಇರಬೇಕು, ಹಿಂದೆ ಗುರು ಇರಬೇಕು, ಇಚ್ಛಾಶಕ್ತಿ ಇರಬೇಕು. ಸಾಹಸ ತರಬೇತುದಾರ ಎನ್.ಕೆ.ಕೊಟ್ರೇಶ್ ನಿಮ್ಮ ಶಾಲೆಯಲ್ಲಿ ಸಾಹಸ ಕ್ರೀಡೆ, ಸಾಹಸ ಚಟುವಟಿಕೆಗಳನ್ನು ತಿಳಿಸಿ ಕೊಡುವ ಘಟಕವನ್ನು ನಿಮ್ಮ ಶಾಲೆಯಲ್ಲಿ ಮಾಡುತ್ತಿದ್ದಾರೆ ಎಂದರು.
Read also : ದಾವಣಗೆರೆ | ಹೃದಯಘಾತಕ್ಕೆ ಉದ್ಯಮಿ ಬಲಿ
ನಾನು, ನಮ್ಮ ಮನೆ, ನಮ್ಮ ಕುಟುಂಬ ಚೆನ್ನಾಗಿರಬೇಕು ಎಂಬ ಸ್ವಾರ್ಥದ ಪ್ರಪಂಚದಲ್ಲಿ ಇಡೀ ಪ್ರಪಂಚವೇ ಚೆನ್ನಾಗಿರಬೇಕು ಎಂದು ಬಯಸುವಂತಹ ಸಂಸ್ಕಾರ, ಸಂಸ್ಕೃತಿ ಇರುವ ದೇಶ ಎಂದರೆ ಅದು ನಮ್ಮ ಭಾರತ. ಇಡೀ ಪ್ರಪಂಚಕ್ಕೆ ನಮ್ಮ ಭಾರತ ದೇಶ ವಿಶ್ವಗುರು ಎನಿಸಿಕೊಂಡಿದೆ ಎಂದು ಹೇಳಿದರು.
ಅಕಾಡೆಮಿ ಕಾರ್ಯದರ್ಶಿ, ಸಾಹಸ ತರಬೇತುದಾರ ಎನ್.ಕೆ.ಕೊಟ್ರೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಓದಿನ ಜೊತೆಗೆ ಸಾಹಸ ಕ್ರೀಡಗಳ ಬಗ್ಗೆ ಅರಿವು ಅಗತ್ಯವಾಗಿದೆ. ಸಾಹಸ ಕ್ರೀಡೆಗಳ ಬಗ್ಗೆ ತಿಳಿದಿದ್ದರೆ ತುರ್ತು ಸಂದರ್ಭದಲ್ಲಿ ರಕ್ಷಣೆಗೆ ಸಹಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ಅಕಾಡೆಮಿಯಿಂದ ಡಾ.ಬಸವಪ್ರಭು ಸ್ವಾಮೀಜಿಯವರಿಗೆ ಸನ್ಮಾನಿಸಿ ಅಭಿನಂದನಾ ಪತ್ರವನ್ನು ನೀಡಿ ಗುರುವಂದನೆ ಸಲ್ಲಿಸಲಾಯಿತು.
ಶುಭಶ್ರೀ ಮತ್ತು ಸಂಗಡಿಗರು ಪ್ರಾರ್ಥಿಸಿದರೆ, ಉಪನ್ಯಾಸಕ ಓ.ಅಜ್ಜಯ್ಯ ಸ್ವಾಗತಿಸಿದರು. ಎಸ್‌ಜೆಎಂ ಪಪೂ ಕಾಲೇಜಿನ ಪ್ರಾಚಾರ್ಯ ರೋಷನ್ ಜಮೀರ್ ವಂದಿಸಿದರು.
ಅಕಾಡೆಮಿ ಅಧ್ಯಕ್ಷ ರಾಜಶೇಖರ ಕೊಂಡಜ್ಜಿ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿವಯೋಗಾಶ್ರಮ ಟ್ರಸ್ಟಿನ ಟಿ.ಎಂ. ವೀರೇಂದ್ರ, ಚಂದ್ರಮೌಳಿ, ಕಾಶೀನಾಥ್, ಬೇತೂರು ಪ್ರಕಾಶ, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
TAGGED:Dinamana.comKannada Newsದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article heart attack ದಾವಣಗೆರೆ | ಹೃದಯಘಾತಕ್ಕೆ ಉದ್ಯಮಿ ಬಲಿ
Next Article Davanagere ದಾವಣಗೆರೆ | ಜಾಂಡೀಸ್ ಇಂಜಕ್ಷನ್ ಕೊರತೆ : ಶಾಸಕ ಬಸವಂತಪ್ಪ ಅಧಿಕಾರಿಗೆ ತರಾಟೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಬಿಎಸ್ಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಪೂರ್ವ ಪೀಠಿಕೆ ಯಥಾವತ್ತಾಗಿ ಜಾರಿ

ದಾವಣಗೆರೆ :    ಸಂವಿಧಾನದ ಪೂರ್ವ ಪೀಠಿಕೆಯನ್ನು ಯಥಾವತ್ತಾಗಿ ಜಾರಿ ಮಾಡುವುದೇ ಬಹುಜನ ಸಮಾಜ ಪಕ್ಷದ ಗ್ಯಾರಂಟಿ ಯೋಜನೆಯಾಗಿದ್ದು, ಮತದಾರರು ನಮ್ಮ…

By Dinamaana Kannada News

DAVANAGERE NEWS | ವರದಕ್ಷಿಣೆ ಸಾವು ಪ್ರಕರಣ: ಆರೋಪಿಗೆ 07 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere ): ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಪತ್ನಿ ಸಾವಿಗೆ ಕಾರಣರಾದ ಪತಿ ಮಂಜುನಾಥಗೆ  7 ವರ್ಷ ಕಠಿಣ…

By Dinamaana Kannada News

ದಾವಣಗೆರೆ | ಅಕ್ರಮ ಸಂಬಂಧಕ್ಕೆ ಅಡ್ಡಿ ಪತಿಯ ಕೊಲೆ : ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ : ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ  1ನೇ ಹೆಚ್ಚುವರಿ ಜಿಲ್ಲಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?