Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬಿತ್ತನೆ ಬೀಜ, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ : ಅಂಗಡಿ ತಪಾಸಣೆಗೆ ಸೂಚನೆ
ತಾಜಾ ಸುದ್ದಿ

ಬಿತ್ತನೆ ಬೀಜ, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ : ಅಂಗಡಿ ತಪಾಸಣೆಗೆ ಸೂಚನೆ

Dinamaana Kannada News
Last updated: July 19, 2025 6:31 am
Dinamaana Kannada News
Share
Davanagere
SHARE

ದಾವಣಗೆರೆ :   ಜಿಲ್ಲೆಯಲ್ಲಿನ ಖಾಸಗಿ ಮಾರಾಟಗಾರರಿಂದ ಹೆಚ್ಚಿನ ಬೆಲೆಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ, ಕೀಟನಾಶಕ ಮಾರಾಟವಾಗಂತೆ ಅಂಗಡಿಗಳನ್ನು ತಪಾಸಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆತ್ಮ ಚಾಲನಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿತ್ತನೆ ಅವಧಿ ಮತ್ತು ಬೆಳೆಗಳಿಗೆ ಮೇಲುಗೊಬ್ಬರವನ್ನು ಹಾಕುವಾಗ ಹೆಚ್ಚು ಬೇಡಿಕೆ ಇರುವ ಸಮಯದಲ್ಲಿ ಖಾಸಗಿ ಮಾರಾಟಗಾರರು ಅಧಿಕ ಬೆಲೆಗೆ ಮಾರಾಟ ಮಾಡುವುದನ್ನು ಗಮನಿಸಲಾಗಿದೆ. ಹೆಚ್ಚಿನ ಬೆಲೆಯನ್ನು ತೆಗೆದುಕೊಳ್ಳುವವರು ನೈಜ ಬಿಲ್ಲನ್ನು ನೀಡದೇ ಬಿಳಿಹಾಳೆಯಲ್ಲಿ ಮತ್ತು ಕೊನೆಯಲ್ಲಿ ಒಟ್ಟು ಮೊತ್ತದಲ್ಲಿ ಬಿಲ್ಲನ್ನು ಸೇರಿಸುವುದನ್ನು ಗಮನಿಸಲಾಗಿದೆ. ಇದಕ್ಕಾಗಿ ಕೃಷಿ ಇಲಾಖೆಯಲ್ಲಿನ ಜಾಗೃತದಳದವರು ಅಂಗಡಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲು ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಜಂಟಿ ಕೃಷಿ ನಿರ್ದೇಶಕರಾದ ಜಿಯಾವುಲ್ಲಾ ಕೆ.ಮಾತನಾಡಿ ಜಿಲ್ಲೆಯಲ್ಲಿ ಕೃಷಿಗೆ ಸಂಬಂಧಿಸಿದಂತೆ ರಸಗೊಬ್ಬರ, ರಾಸಾಯಿನಿಕ, ಬಿತ್ತನೆ ಬೀಜ ಮಾರಾಟ ಮಾಡಲು 3569 ಖಾಸಗಿ ಅಂಗಡಿಯವರಿಗೆ ಪರವಾನಗಿ ನೀಡಲಾಗಿದೆ. ಕೃಷಿ ಜಾಗೃತ ದಳವಿದ್ದು 24/7 ಮಾದರಿಯಲ್ಲಿ ತಪಾಸಣೆ ಮಾಡುವರು. ಈ ತಂಡಕ್ಕೆ ತಪಾಸಣೆ ಮಾಡಿ ತಪ್ಪು ಕಂಡುಬಂದಲ್ಲಿ ದಂಡವಿಧಿಸಲು ಅಧಿಕಾರ ನೀಡಿದ್ದು ತಿಂಗಳಿಗೆ ನಿರ್ಧಿಷ್ಟ ಗುರಿ ನಿಗದಿ ಮಾಡಲಾಗಿದೆ ಎಂದರು.

ರೈತ ಸಂಪರ್ಕ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶನಕ್ಕೆ ಸೂಚನೆ; ಜಿಲ್ಲೆಯಲ್ಲಿನ 20 ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ, ಗೊಬ್ಬರ, ರಾಸಾಯಿಕವನ್ನು ರಿಯಾಯಿತಿ ದರದಲ್ಲಿ ರೈತರಿಗೆ ಮಾರಾಟ ಮಾಡಲಾಗುತ್ತಿದೆ. ದರಪಟ್ಟಿಯನ್ನು ಎಲ್ಲಾ ಆರ್.ಎಸ್.ಕೆ.ಗಳಲ್ಲಿ ರೈತರಿಗೆ ಕಾಣುವಂತೆ ಪ್ರದರ್ಶನ ಮಾಡಬೇಕೆಂದು ಸೂಚನೆ ನೀಡಿ ಅನಿರೀಕ್ಷಿತ ಭೇಟಿ ನೀಡಿದಾಗ ಇವೆಲ್ಲವನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದರು.

Read also : ಭದ್ರಾ ಜಲಾಶಯದಲ್ಲಿ 178.9 ಅಡಿ ನೀರು

ಜಿಲ್ಲೆಗೆ ಅಗತ್ಯವಿರುವ ರಸಗೊಬ್ಬರವನ್ನು ದಾಸ್ತಾನಿಡಲು ಸೂಚನೆ ನೀಡಿ ಈಗ ರೈತರು ಮೆಕ್ಕೆಜೋಳಕ್ಕೆ ಯೂರಿಯಾ ಬಳಕೆ ಮಾಡುವರು ಎಂದಾಗ 10 ಸಾವಿರ ಮೆಟ್ರಿಕ್ ಟನ್ ಯೂರಿಯಾ ಬೇಡಿಕೆ ಇದ್ದು 7666 ಮೆಟ್ರಿಕ್ ಟನ್ ದಾಸ್ತಾನಿದೆ. ಇನ್ನೂ ರೇಖ್ ಬರಬೇಕಾಗಿದೆ. ರೈತರಿಗೆ ಡಿಎಪಿ ಮತ್ತು ಯೂರಿಯಾ ಮೇಲಿನ ಅವಲಂಭನೆ ತಗ್ಗಿಸಲು ನ್ಯಾನೋ ಯೂರಿಯಾ, ಕಾಂಪೋಸ್ಟ್ ಗೊಬ್ಬರ ಬಳಕೆಗೆ ಶಿಫಾರಸು ಮಾಡಲಾಗುತ್ತಿದೆ ಎಂದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಮಮತ ಹೊಸಗೌಡರ್, ಕೃಷಿ ಇಲಾಖೆ ಅಧಿಕಾರಿಗಳು ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere NewsDinamana.comದಾವಣಗೆರೆ ಜಿಲ್ಲೆ .ದಿನಮಾನ.ಕಾಂಬಿತ್ತನೆ ಬೀಜ
Share This Article
Twitter Email Copy Link Print
Previous Article Bhadra dam ಭದ್ರಾ ಜಲಾಶಯದಲ್ಲಿ 178.9 ಅಡಿ ನೀರು
Next Article Davanagere police ಶಾಲಾ ಸಂಸತ್ತು ಕೇವಲ ಹಕ್ಕಲ್ಲ ಜವಾಬ್ದಾರಿ : ಎಸ್ಪಿ ಉಮಾ ಪ್ರಶಾಂತ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ ರಂಗಾಯಣದಿಂದ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

ದಾವಣಗೆರೆ, ಸೆ. 10, 2025: ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣವು ತನ್ನ ರಂಗಚಟುವಟಿಕೆಗಳನ್ನು ತೀವ್ರಗೊಳಿಸಲು 12…

By Dinamaana Kannada News

Davanagere | ಬೈಕ್‌ ಕಳ್ಳತನ ಪ್ರಕರಣ : ಕಾನೂನು ಸಂಘರ್ಷಕ್ಕೋಳಗಾದ ಇಬ್ಬರು ಬಾಲಕರು ವಶಕ್ಕೆ

ದಾವಣಗೆರೆ  (Davanagere): ವಿವಿಧಡೆ  ಬೈಕ್‌ ಕಳುವು ಮಾಡಿದ್ದ ಇಬ್ಬರು ಕಾನೂನು ಸಂಘರ್ಷಕ್ಕೋಳಗಾದ ಬಾಲಕರನ್ನು  ಕೆಟಿಜೆ ನಗರ ಪೊಲೀಸರು ವಶಕ್ಕೆ ಪಡೆದು,…

By Dinamaana Kannada News

ದಲಿತ ಸಮುದಾಯ ಮಹಿಳೆಯರಿಗೆ ಅವಮಾನ : ಶಾಸಕ ಯತ್ನಾಳ ಬಂಧನಕ್ಕೆ ಒತ್ತಾಯ

ದಾವಣಗೆರೆ : ದಲಿತ ಮಹಿಳೆಯರು ದಸರಾ ಉದ್ಘಾಟನೆ ಮಾಡಲು ಅಧಿಕಾರವಿಲ್ಲ ಎಂದು ಹೇಳಿಕೆ ನೀಡುವ ಮೂಲಕ ಇಡೀ ದಲಿತ ಸಮುದಾಯ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?