Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಉಸಿರು ಕಟ್ಟುವ ಸ್ಥಳದಲ್ಲಿ ಮಕ್ಕಳಿಗೆ ಪಾಠ ! ಮಂಡಕ್ಕಿ ಭಟ್ಟಿ ಲೇಔಟ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ
ತಾಜಾ ಸುದ್ದಿ

ಉಸಿರು ಕಟ್ಟುವ ಸ್ಥಳದಲ್ಲಿ ಮಕ್ಕಳಿಗೆ ಪಾಠ ! ಮಂಡಕ್ಕಿ ಭಟ್ಟಿ ಲೇಔಟ್ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ

Dinamaana Kannada News
Last updated: July 31, 2025 3:15 am
Dinamaana Kannada News
Share
A lesson for children in a breathtaking place Davanagere
SHARE
ದಾವಣಗೆರೆ: ‘ಶಾಲೆಯ ಸುತ್ತಲೂ ಕಪ್ಪು ಹೋಗೆ ಸೂಸುವ ವಿಷಪೂರಿತ ಮಂಡಕ್ಕಿ ಭಟ್ಟಿಗಳು, ಕಸ, ಧೂಳುನಿಂದ ಕೂಡಿದ ಗಾಳಿ ವಾತಾವರಣ, ಇಂತಹ ಉಸಿರು ಕಟ್ಟುವ ವಾತಾವರಣದಲ್ಲಿ ಮಕ್ಕಳ ವಿದ್ಯಾಭ್ಯಾಸ.’!
ಇದು, ದಾವಣಗೆರೆ ಉತ್ತರ ವಲಯದ ಮಂಡಕ್ಕಿ ಭಟ್ಟಿ ಲೇಔಟ್‌ನಲ್ಲಿರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿ. ಶಾಲೆಯನ್ನು ನೋಡಿದರೆ ಕಾಡು ಪ್ರಾಣಿಗಳು ವಾಸ ಮಾಡಲು ಇಚ್ಛಿಸುವುದಿಲ್ಲ. ಅಂತಹ ಕೆಟ್ಟ ಜಿಡ್ಡು ಹಿಡಿದು ನಾರುತ್ತಿರುವ ಶಾಲೆ.

ದುರ್ವಾಸನೆಯಲ್ಲೇ ಮಕ್ಕಳಿಗೆ ಪಾಠ:

 

1ನೇ ತರಗತಿಯಿಂದ ೫ನೇ ತರಗತಿಯವರೆಗೆ ಇರುವ ಈ ಶಾಲೆಯಲ್ಲಿ ಅಲ್ಪಸಂಖ್ಯಾತರ ಕೂಲಿ ಕಾರ್ಮಿಕರು, ಬೀಡಿ ಕಾರ್ಮಿಕರ ೬೦ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ದುರ್ವಾಸನೆ ಬೀರುವ ಈ ವಾತಾವರಣದಲ್ಲೇ ಪಾಠ, ಪ್ರವಚನ ಕಲಿಯುವ ದುಸ್ಥಿತಿ ಇದೆ.
Read also : ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ
ದುರ್ವಾಸನೆ ಬೀರುವ ಚರಂಡಿಗಳು:
ಪ್ರತಿವರ್ಷ ಮಳೆ ಬಂದಾಗ ಆಟದ ಮೈದಾನದಲ್ಲಿ ಹೊಂಡಗಳ ರೂಪದಲ್ಲಿ ನಿಂತಿರುವ ನೀರು, ಚರಂಡಿಗೆ ಹರಿಯದೆ ನಿಂತಲ್ಲಿ ನಿಂತು ಪಾಚಿಗಟ್ಟಿ ದುರ್ವಾಸನೆಯಿಂದ ಬೀರುತ್ತದೆ. ಮಂಡಕ್ಕಿ ಭಟ್ಟಿಯ ಕಸದಿಂದ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ಈ ಅವ್ಯವಸ್ಥೆ ನಿರ್ಮಾಣವಾಗಿದೆ.
A lesson for children in a breathtaking place Davanagere

ಆರೋಗ್ಯದ ಮೇಲೆ ದುಷ್ಪರಿಣಾಮ: 

 

ಕಲುಷಿತ ವಾತಾವರಣದಲ್ಲಿ ಮಕ್ಕಳಿಗೆ ಜ್ವರ, ಶೀತ, ಕೆಮ್ಮು, ನೆಗಡಿ ಅಸ್ತಮಾದಂತಹ ಕಾಯಿಲೆಗಳು ಮಕ್ಕಳಲ್ಲಿ ಹಾಗೂ ಶಿಕ್ಷಕರಲ್ಲಿ ಕಾಣಿಸುತ್ತಿವೆ. ಮಾತ್ರವಲ್ಲ, ಶಾಲೆಯಲ್ಲಿಯೇ ಅಂಗನವಾಡಿ ನಡೆಯುತ್ತಿದ್ದು ಅಂಗನವಾಡಿಯಲ್ಲಿ ಚಿಕ್ಕ ಮಕ್ಕಳು ಬಾಣಂತಿಯರು, ಗರ್ಭಿಣಿಯರು ಹೊಲಸು ನಾರುವ ವಾತಾವರಣದಲ್ಲಿ ಬಂದು ಆಹಾರ ಪದಾರ್ಥಗಳನ್ನು ಸೇವಿಸುವಂತಹ ಪರಿಸ್ಥಿತಿ ಉಂಟಾಗಿದೆ.
ಸಾಂಕ್ರಾಮಿಕ ರೋಗಗಳ ಭೀತಿ:
ಮೊದಲೇ ಕಲುಷಿತ ವಾತಾವರಣ ಜೊತೆಗೆ ಶಾಲೆಯ ಕಾಂಪೌಂಡ್‌ಗೆ ಹೊಂದಿಕೊಂಡಂತೆ ಕಟ್ಟಿರುವ ದನ, ಕರುಗಳ ಗಂಜಲ ಹಾಗೂ ಸಗಣಿಯ ವಾಸನೆ, ಸೊಳ್ಳೆಗಳ ಹಾವಳಿಯಿಂದ ಡೆಂಘಿ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇಲಿನ ನಿವಾಸಿಗಳು, ಶಾಲೆಯ ಮಕ್ಕಳು, ಶಿಕ್ಷಕರನ್ನು ಕಾಡುತ್ತಿದೆ.
ನಿರ್ವಹಣೆ ಇಲ್ಲದ ಶೌಚಾಲಯ:
ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಮಕ್ಕಳಿಗೆ ಸುಸಜ್ಜಿತ ಶೌಚಾಲಯ ಇಲ್ಲ. ಇರುವ ಒಂದು ಶೌಚಾಲಯವಿದ್ದರೂ ಸರಿಯಾದ ನಿರ್ವಹಣೆ ಇಲ್ಲ. ಜೊತೆಗೆ ಶಾಲೆಯ ಕಾಂಪೌಂಡ್ ಪಕ್ಕದಲ್ಲೇ ಇರುವ ವಿದ್ಯುತ್ ಪರಿವರ್ತಕದಿಂದ ಪ್ರಾಣಾಪಾಯ ಹೆಚ್ಚಿದೆ. ಇಷ್ಟಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸದಿರುವುದು ಇಲ್ಲಿನ ನಿವಾಸಿಗಳನ್ನು ಕೆರಳಿಸಿದೆ.
ಜಿಲ್ಲಾಡಳಿತ ಇತ್ತ ಗಮನ ಹರಿಸಲಿ:
ಪಠ್ಯ ಚಟುವಟಿಕೆ ಕೈಗೊಳ್ಳಲು ಸೂಕ್ತ ಕೊಠಡಿಗಳನ್ನು ನೀಡಿ ಆವರಣವನ್ನು ಸ್ವಚ್ಛಗೊಳಿಸಿ ಶಾಲೆಯ ಸುತ್ತಲಿನ ವಾತಾವರಣವನ್ನು ಪರಿಶುದ್ಧವಾಗಿಟ್ಟುಕೊಳ್ಳಲು ಜಿಲ್ಲಾಡಳಿತ,  ಶಾಲಾ ಶಿಕ್ಷಣ ಇಲಾಖೆ, ಮಹಾನಗರಪಾಲಿಕೆ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಆಯೋಗ ಇತ್ತ ಗಮನ ಹರಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಆಗ್ರಹಿಸಿದೆ.
ಹೊರ ರಾಜ್ಯಗಳಲ್ಲಿ ಶಾಲಾ ಕೊಠಡಿಗಳು ಕುಸಿದು ಬಿದ್ದು ಮಕ್ಕಳು ಸಾವು ಕಾಣುವ ದುರ್ಘಟನೆಗಳು ನಡೆಯುತ್ತಿವೆ. ನಮ್ಮ ಜಿಲ್ಲೆಯಲ್ಲಿ ಸಂಭವಿಸುವ ಮುನ್ನ ಮಕ್ಕಳ ಜೀವ ರಕ್ಷಣೆ ಹಿತದೃಷ್ಟಿಯಿಂದ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ನಿರಾಳವಾಗಿ  ಸರ್ಕಾರಿ ಶಾಲೆಗೆ ಕಳುಹಿಸಲು ವ್ಯವಸ್ಥೆ ನಿರ್ಮಾಣ ಮಾಡುವ ಅಗತ್ಯತೆ ಇದೆ.
-ಎಂ.ಲಿಂಗರಾಜು, ಗಾಂಧಿನಗರ.
ಕರ್ನಾಟಕ ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ
TAGGED:Davanagere NewsDinamana.comThe poor condition of Urdu Lower Primary Schoolಉರ್ದು ಕಿರಿಯ ಪ್ರಾಥಮಿಕ ಶಾಲೆಯ ದುಸ್ಥಿತಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ದಾವಣಗೆರೆ | ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ಅರ್ಜಿ ಆಹ್ವಾನ
Next Article MP Dr. Prabha ದಾವಣಗೆರೆ ಜಿಲ್ಲೆಗೆ ಯೂರಿಯಾ ರಸಗೊಬ್ಬರ ಸಮರ್ಪಕ ಪೂರೈಕೆಗೆ ಸಂಸದೆ ಡಾ.ಪ್ರಭಾ ಮನವಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere school news | ಮಳೆಗೆ ಉದುರಿದ ಸರ್ಕಾರಿ ಶಾಲೆ ಹಂಚುಗಳು : ಪೋಷಕರಲ್ಲಿ ಆತಂಕ  

ದಾವಣಗೆರೆ (Davangere):  ದಾವಣಗೆರೆ ತಾಲ್ಲೂಕಿನ ದೊಡ್ಡ ಬೂದಿಹಾಳ್ ಗ್ರಾಮದಲ್ಲಿ ಮಳೆಗೆ ಸರ್ಕಾರಿ ಶಾಲೆಯ ಹಂಚುಗಳು ಉದುರಿ ಬಿದಿದ್ದು, ಮಕ್ಕಳ ಪೋಷಕರಲ್ಲಿ…

By Dinamaana Kannada News

Davanagere | ಅತ್ಯಾಚಾರಕ್ಕೆ ಸಹಕಾರ: ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಎಸಗಲು ಸಹಕಾರ ನೀಡಿದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು…

By Dinamaana Kannada News

ರಾಮಾಯಣದಲ್ಲಿನ ತತ್ವಾದರ್ಶ, ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ.ಅ. 17 (Davanagere) ; ರಾಮಾಯಣದಲ್ಲಿನ ತತ್ವಾದರ್ಶ ಹಾಗೂ ಅದರಲ್ಲಿನ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು  ಸಂಸದೆ ಡಾ.…

By Dinamaana Kannada News

You Might Also Like

Power outage
Blog

ದಾವಣಗೆರೆ|ಆ.2 ರಂದು ವಿದ್ಯುತ್ ವ್ಯತ್ಯಯ

By Dinamaana Kannada News
reservation for Scheduled Castes
ತಾಜಾ ಸುದ್ದಿ

ದಾವಣಗೆರೆ|ಪ.ಜಾತಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Davanagere police
ತಾಜಾ ಸುದ್ದಿ

ಮನೆ ಬೀಗ ಮುರಿದು ಕಳ್ಳತನ : ಆರೋಪಿಗಳ ಬಂಧನ , 20 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣ ವಶಕ್ಕೆ

By Dinamaana Kannada News
City transport bus to Halebathi
ತಾಜಾ ಸುದ್ದಿ

ಹಳೇಬಾತಿಗೆ ನಗರಸಾರಿಗೆ ಬಸ್ : ಸಂಸದೆ ಡಾ.ಪ್ರಭಾ‌ ಮಲ್ಲಿಕಾರ್ಜುನ್ ಸ್ಪಂದನೆಗೆ ಗ್ರಾಮಸ್ಥರ ಸಂತಸ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?