Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನದಲ್ಲಿ ಮಕ್ಕಳು ಚಾಂಪಿಯನ್ ಆಗಬೇಕು : ಡಿಸಿ
ತಾಜಾ ಸುದ್ದಿ

ಪ್ಲಾಸ್ಟಿಕ್ ಮುಕ್ತ ಪರಿಸರ ಅಭಿಯಾನದಲ್ಲಿ ಮಕ್ಕಳು ಚಾಂಪಿಯನ್ ಆಗಬೇಕು : ಡಿಸಿ

Dinamaana Kannada News
Last updated: September 1, 2025 1:55 pm
Dinamaana Kannada News
Share
Davanagere
SHARE

ದಾವಣಗೆರೆ ಸೆ.01: ದೇಶದ ಭವಿಷ್ಯ ಮಕ್ಕಳು ಹಾಗೂ ಯುವ ಸಮುದಾಯದ ಮೇಲಿದೆ. ಭವಿಷ್ಯದ ಪೀಳಿಗೆಗೆ ಉತ್ತಮ ಪರಿಸರ, ಆರೋಗ್ಯ ಉಳಿಸಬೇಕಾದರೆ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸಲು ಮಕ್ಕಳು ಇದರ ಚಾಂಪಿಯನ್‍ಗಳಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಧರಸ್ವಾಮಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಅಮೃತ ವಿದ್ಯಾಲಯಂ ಸಹಯೋಗದಲ್ಲಿ ಸೋಮವಾರ ನಗರದ ಅಮೃತ ವಿದ್ಯಾಲಯಂ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಪ್ಲಾಸ್ಟಿಕ್ ಮುಕ್ತ ಅಭಿಯಾನದಡಿ ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಮತ್ತು ಆರೋಗ್ಯ ಉಳಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಹಲವಾರು ಯೋಜನೆ, ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಂತೆ ಸಾಗರ ಮಿತ್ರ ಅಭಿಯಾನದಡಿ 5 ರಿಂದ 9ನೇ ತರಗತಿ ಮಕ್ಕಳನ್ನು ಬಳಸಿಕೊಂಡು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಿಸಲು ಪಣತೊಡಲಾಗಿದೆ. ಸರ್ಕಾರದಿಂದ ಹಸಿ ಕಸ, ಒಣ ಕಸ ವಿಂಗಡಿಸಿ ಕೊಡಬೇಕೆಂಬ ಸುತ್ತೋಲೆ ಇದೆ. ಆದರೂ ಸಾರ್ವಜನಿಕರು ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದಿಲ್ಲ. ನಮ್ಮ ಮನೆ ಸುತ್ತ ಮುತ್ತ ಸರಿ ಇದ್ದರೆ ಸಾಕೆಂಬ ಮನಃಸ್ಥಿತಿ ಹಲವರಲ್ಲಿದೆ. ದಾವಣಗೆರೆ ನಗರದಲ್ಲ್ಲಿ ಸುಮಾರು 6 ರಿಂದ 6.5 ಲಕ್ಷ ಜನತೆ ಇದ್ದು, ಸ್ವಚ್ಛತೆಗೆ ಕೇವಲ 400 ಪೌರಕಾರ್ಮಿಕರಿದ್ದಾರೆ. ಯಾರೇ ಆಗಲಿ ಕಸ ಅಥವಾ ಇತರೆ ತ್ಯಾಜ್ಯ ರಸ್ತೆ ಬದಿ ಎಲ್ಲೆಂದರಲ್ಲಿ ಎಸೆಯುವುದು ಕಂಡಾಗ ಪ್ರಶ್ನಿಸುವ ಗುಣ ಬೆಳೆಸಿಕೊಳ್ಳಬೇಕು. ಹಾಗೆ ಮಾಡಲು ಆಗದಿದ್ದಲ್ಲಿ ಪ್ರಸ್ತುತ ಎಲ್ಲರೂ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣ ಬಳಸುವರು. ಅಂಥಹ ದೃಶ್ಯಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಸಂಬಂಧಿಸಿದ ಇಲಾಖೆಗೆ ಮಾಹಿತಿ ನೀಡಿದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಕ್ಕಳಿಗೆ ತಿಳಿ ಹೇಳಿದರು.

Read also : ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಗಳ ನೇಮಕಾತಿ, ಶಿಕ್ಷಣದಲ್ಲಿ ಹೆಚ್ಚಿನ ಮೀಸಲಾತಿ ಅಗತ್ಯ; ಕೆ.ಎಸ್.ಬಸವಂತಪ್ಪ

ಗಣೇಶ ವಿಗ್ರಹ ವಿಸರ್ಜನೆ ವೇಳೆ ಆಗುವ ತ್ಯಾಜ್ಯ ಕಡಿಮೆಗೊಳಿಸಿ ಪರಿಸರ ಸಂರಕ್ಷಿಸಬೇಕು. ಮುಂದಿನ ದಿನಗಳಲ್ಲಿ ರಸ್ತೆ ಬದಿಗಳಲ್ಲಿ ಕಸ ಎಸೆಯುವ ವ್ಯಕ್ತಿ ಮನೆ ಮುಂದೆ ಡಂಗೂರ ಒಡೆಯುವ ಕೆಲಸ ಮಾಡಲಿದ್ದೇವೆ ಎಂದ ಅವರು, ಮನೆಯಲ್ಲಿ ಬಳಸಿ ಬಿಸಾಡುವ ಏಕ ಬಳಕೆ ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯ ಸಂಗ್ರಹಿಸಿ ವಾರಕ್ಕೊಮ್ಮೆ ಶಾಲೆ, ಕಾಲೇಜಗಳ ಮುಖೇನ ಸ್ಥಳೀಯ ಸಂಸ್ಥೆಗಳಿಗೆ ನೀಡಿ ಪರಿಸರ ಮಾಲಿನ್ಯ ತಪ್ಪಿಸಬೇಕು. ಸಮಾಜದಲ್ಲಿ ಆರೋಗ್ಯವಂತರಾಗಿ ಬದುಕಬೇಕಾದರೆ ಇಂತಹ ಒಳ್ಳೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು. ಉತ್ತಮ ಕೆಲಸ ಮಾಡಬೇಕಾದರೆ ತೊಂದರೆ ಸಹಜ, ಅವುಗಳನ್ನು  ನಿಭಾಯಿಸಿ ಯಶಸ್ಸು ಕಾಣಬೇಕು. ಇಂತಹ ಕೆಲಸ ತಮ್ಮ ಮನೆಗಳಿಂದಲೇ ಮೊದಲು ಆರಂಭವಾಗಬೇಕು. ಪ್ಲಾಸ್ಟಿಕ್ ಮುಕ್ತ ಅಭಿಯಾನದಲ್ಲಿ ನೀವೆಲ್ಲ ಚಾಂಪಿಯನ್ ಆಗಬೇಕು ಎಂದರು.

ಇದೇ ಸಂದರ್ಭದಲ್ಲಿ ಮಕ್ಕಳು ಸಂಗ್ರಹಿಸಿ ತಂದಿದ್ದ ಪ್ಲಾಸ್ಟಿಕ್ ಮತ್ತು ಇತರೆ ತ್ಯಾಜ್ಯವನ್ನು ಸ್ವತಃ ಜಿಲ್ಲಾಧಿಕಾರಿಗಳೇ ಚೀಲಕ್ಕೆ ತುಂಬಿಕೊಂಡು ಪ್ಲಾಸ್ಟಿಕ್ ಮುಕ್ತ ಅಭಿಯಾನದಡಿ ಮಕ್ಕಳಿಗೆ ಜಾಗೃತಿ ಮೂಡಿಸಿದರು.

ಕಾರ್ಯಗಾರದಲ್ಲಿ ಡಿಡಿಪಿಐ ಕೊಟ್ರೇಶ್, ಅಮೃತ ವಿದ್ಯಾಲಯಂ ಶಾಲೆಯ ಪ್ರಾಂಶುಪಾಲರಾದ ಎನ್.ಸಿ.ವಿವೇಕ್, ಎನ್.ಪ್ರತಿಭಾ, ಪ್ರತೀಕ್ ಹಾಗೂ ವಿದ್ಯರ್ಥಿಗಳು ಸೇರಿದಂತೆ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಗಳ ನೇಮಕಾತಿ, ಶಿಕ್ಷಣದಲ್ಲಿ ಹೆಚ್ಚಿನ ಮೀಸಲಾತಿ ಅಗತ್ಯ; ಕೆ.ಎಸ್.ಬಸವಂತಪ್ಪ
Next Article Davanagere crime news Crime|ಅನೈತಿಕ ಸಂಬಂಧಕ್ಕೆ ವಿರೋಧ : ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ತುರ್ತು ಪರಿಸ್ಥಿತಿ : ನಾಗರಿಕ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನ

ದಾವಣಗೆರೆ  (Davanagere):  ವೈಮಾನಿಕ ದಾಳಿ ಎದುರಾದಾಗ ಸ್ಥಳೀಯ ಜನರು ಭಯಭೀತರಾಗದೇ ತುರ್ತು ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುವ…

By Dinamaana Kannada News

ಆರ್.ರವಿಗೆ ‘ಎಂ.ನಾಗೇಂದ್ರರಾವ್’ ಪ್ರಶಸ್ತಿ

ದಾವಣಗೆರೆ:  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿವರ್ಷ ಕೊಡ ಮಾಡುವ ಕೆಯುಡಬ್ಲ್ಯೂಯುಜೆ ದತ್ತಿನಿಧಿ ಪ್ರಶಸ್ತಿಗಳನ್ನು ಗುರುವಾರ ಘೋಷಣೆ ಮಾಡಿದ್ದು, ದಾವಣಗೆರೆ…

By Dinamaana Kannada News

ಅಕ್ರಮ ಮಣ್ಣು ಗಣಿಗಾರಿಕೆ | ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ : ಡಿಎಸ್‌ ಎಸ್‌ ಆರೋಪ

ಹರಿಹರ (Harihara) : ತಾಲ್ಲೂಕಿನ ಹಲವೆಡೆ ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರೂ ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತಿದೆ ಎಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?