Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ|ಮಕ್ಕಳಲ್ಲಿರುವ ಅಜ್ಞಾನದ ಕತ್ತಲೆಯನ್ನು ಓಡಿಸಿ : ಸುಮತಿ ಜಯಪ್ಪ ಸಲಹೆ
ತಾಜಾ ಸುದ್ದಿ

ದಾವಣಗೆರೆ|ಮಕ್ಕಳಲ್ಲಿರುವ ಅಜ್ಞಾನದ ಕತ್ತಲೆಯನ್ನು ಓಡಿಸಿ : ಸುಮತಿ ಜಯಪ್ಪ ಸಲಹೆ

Dinamaana Kannada News
Last updated: September 6, 2025 11:53 am
Dinamaana Kannada News
Share
Eeshwaramma School
SHARE
ದಾವಣಗೆರೆ: ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ-ಶಿಕ್ಷಕರ ಕಾರ್ಯಕ್ಷಮತೆ ಶಿವ ಸ್ವರೂಪಿಯಾಗಿ, ಕ್ಷಕಿರಣದೋಪಾದಿಯಲ್ಲಿ ಯಾರು ಕರ್ಮ ಅಥವಾ ಕಾಯಕವನ್ನು ಮಾಡುವರೋ ಅವರೇ ಶಿಕ್ಷಕರು ಎಂದು ವಿಶ್ರಾಂತ ಉಪನ್ಯಾಸಕರಾದ ಸುಮತಿ ಜಯಪ್ಪ ಸಲಹೆ ನೀಡಿದರು.
ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕ ಎಂದರೆ ‘ಶಿಸ್ತು ಕ್ಷಮಾಗುಣ, ಕರುಣೆ ಹೊಂದಿರುವವರು, ಅಜ್ಞಾನದ ಕತ್ತಲೆಯನ್ನು ಓಡಿಸಿ, ಸುಜ್ಞಾನದ ಬೆಳಕನ್ನು ನೀಡುವವರು ಗುರುಗಳಾಗಿದ್ದಾರೆ ಎಂದರು.
ಇAಜಿನಿಯರ್ ಕಬ್ಬಿಣ, ಸಿಮೆಂಟ್ ನೋಡಿದರೆ, ಲಾಯರ್ ಅಪರಾಧಿಗಳನ್ನು ನೋಡುತ್ತಾರೆ. ಆದರೆ ಶಿಕ್ಷಕರು ಮುದ್ದು ಮಕ್ಕಳನ್ನು ನೋಡುತ್ತಾರೆ. ಮುಗ್ಧ ಮನಸ್ಸಿನ ಮಕ್ಕಳ ಜೊತೆಗಿದ್ದು ಅವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ಶ್ರೇಷ್ಠವಾದ, ಪವಿತ್ರವಾದ ವೃತ್ತಿ ಶಿಕ್ಷಕ ವೃತ್ತಿಯಾಗಿದೆ ಎಂದು ತಿಳಿಸಿದರು.
ಡಾ.ರಾಧಾಕೃಷ್ಣನ್‌ರವರು ಶ್ರೇಷ್ಠ ಶಿಕ್ಷಕರಾಗಿದ್ದು, ಭಾರತದ ಉನ್ನತ ಸ್ಥಾನವಾದ ರಾಷ್ಟçಪತಿ ಹುದ್ದೆಗೇರಿದವರು. ಅಂತಹ ಮಹಾನ್ ವ್ಯಕ್ತಿಯ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಮಕ್ಕಳು ಬೆಳೆದು ಯಾವುದೇ ಹುದ್ದೆಯಲ್ಲಿದ್ದರೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಎಂದೂ ಮರೆಯಬಾರದು ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಶಿಕ್ಷಕರು ಹೇಳಿದ ಮಾತು ಮಂತ್ರವಾಗಬೇಕು. ಶಿಕ್ಷಕರು ಸಹ ಮಕ್ಕಳಿಗಾಗಿ ತಮ್ಮ ತನು, ಮನ, ಜ್ಞಾನವನ್ನು ಅರ್ಪಿಸಬೇಕು. ಶಿಕ್ಷಕರು ತಮ್ಮ ವೃತ್ತಿಯನ್ನು ತಾವು ಬೋಧಿಸುವ ವಿಷಯವನ್ನು ಮತ್ತು ತಮ್ಮ ಮುಂದಿರುವ ಮಕ್ಕಳನ್ನು ಪ್ರೀತಿಸಬೇಕು. ಗುರು-ಶಿಷ್ಯರ ಬಾಂಧವ್ಯ ಮಧುರವಾದುದು. ಶಿಕ್ಷಕರು ಬದಲಾದ ಕಾಲಘಟ್ಟಕ್ಕನುಗುಣವಾಗಿ ತಮ್ಮಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಶಿಕ್ಷಕರು ಸದಾ ವಿದ್ಯಾರ್ಥಿಯಂತೆ ಅಧ್ಯಯನ ಶೀಲರಾಗಿರಬೇಕೆಂದರು.
Eeshwaramma Higher Primary and High School 1
ಎA.ಬಿ ಪದವಿ ಪೂರ್ವ ಕಾಲೇಜಿನ ನಿರ್ದೇಶಕ ಜಿ.ಎಚ್.ಕುಮಾರ್ ಮಾತನಾಡಿ, ಶಿಕ್ಷಣವೇ ಆಸ್ತಿ ಎಂಬುದನ್ನು ಬಾಲ್ಯಾವಸ್ಥೆಯಲ್ಲೇ ಕಂಡು ಕೊಳ್ಳಬೇಕು. ಗುರುಗಳು ಹೇಳಿದ ಮಾತನ್ನು ಚಾಚೂ ತಪ್ಪದೇ ಅನುಸರಿಸುತ್ತಾ ಬಂದು ವಿವಿಧ ವೃತ್ತಿಗಳಲ್ಲಿ ತೊಡಗಿದವರು ಯಶಸ್ವಿ ವ್ಯಕ್ತಿಗಳಾಗುತ್ತಾರೆ ಎಂದು ಸಲಹೆ ನೀಡಿದರು.
ಶಾಲಾಡಳಿತ ಮಂಡಳಿಯ ಅಧ್ಯಕ್ಷರಾದ ಕೆ.ಆರ್.ಸುಜಾತ ಕೃಷ್ಣ ಮಾತನಾಡಿ, ಶಿಕ್ಷಕರ ದಿನಾಚರಣೆ ಬಹಳಷ್ಟು ಅರ್ಥಪೂರ್ಣವಾಗಿ ನಡೆದಿದೆ. ಈಶ್ವರಮ್ಮ ಶಾಲೆಯ ವೈಶಿಷ್ಟ್ಯವೆಂದರೆ ಮೌಲ್ಯಧಾರಿತ ಶಿಕ್ಷಣ. ಶಾಲೆಯ ಸಂಸ್ಥಾಪಕರಾದ ಬಿ.ಆರ್. ಶಾಂತಕುಮಾರಿಯವರ ಮಾರ್ಗದರ್ಶನದಂತೆ ಶಾಲೆ ಮುನ್ನೆಡೆಯುತ್ತಿದೆ. ನಮ್ಮ ಶಾಲೆಯಲ್ಲಿ ಆಡಳಿತ ಮಂಡಳಿಯವರಿಗೂ ಶಿಕ್ಷಕರಿಗೂ ತಾಯಿ-ಮಕ್ಕಳ ಬಾಂಧವ್ಯವಿದೆ ಎಂದು ತಿಳಿಸಿದರು.
Read also : ದಾವಣಗೆರೆ|ನಕಲಿ ಬಂಗಾರದ ಬಿಲ್ಲೆ ನೀಡಿ 08 ಲಕ್ಷ ರೂ ಮೋಸ : ಆರೋಪಿ ಸೆರೆ
ಇದೇ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ ವೃಂದವರಿಗೆ ಗುರು ಕಾಣಿಕೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಈಶ್ವರಮ್ಮ ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಎ.ಆರ್.ಉಷಾರಂಗನಾಥ್, ಪ್ರಾಂಶುಪಾಲರಾದ ಕೆ.ಎಸ್.ಪ್ರಭುಕುಮಾರ್,
ಉಪ ಪ್ರಾಂಶುಪಾಲರಾದ ಜಿ.ಎಸ್.ಶಶಿರೇಖಾ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸರಿಯಾದ ದಾರಿಯಲ್ಲಿ ಮುನ್ನಡೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ
ಪ್ರತಿಯೊಬ್ಬ ವಿದ್ಯಾರ್ಥಿಯ ಮನಸ್ಸನ್ನು ಅರಿತು ಬೋಧನೆ ಮಾಡಿ ಅವರನ್ನು ಸರಿಯಾದ ದಾರಿಯಲ್ಲಿ ಮುನ್ನಡೆಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಆಡಳಿತ ಮಂಡಳಿಯವರು ಶಿಕ್ಷಕರನ್ನು ಗೌರವಿಸುವ ರೀತಿ ಅತ್ಯಂತ ಶ್ರೇಷ್ಠವಾಗಿದೆ.
-ಜಿ.ಎಚ್.ಕುಮಾರ್, ಎಂ.ಬಿ ಪದವಿ ಪೂರ್ವ ಕಾಲೇಜಿನ ನಿರ್ದೇಶಕರು.
TAGGED:Davanagere NewsDinamana.comEeshwaramma School DavanagereKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Malebennur Police Station ದಾವಣಗೆರೆ|ನಕಲಿ ಬಂಗಾರದ ಬಿಲ್ಲೆ ನೀಡಿ 08 ಲಕ್ಷ ರೂ ಮೋಸ : ಆರೋಪಿ ಸೆರೆ
Next Article Applications invited ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ

ಸಂವಿಧಾನ ಜಾಗೃತಿಯ ಜಾಥಾ ಪ್ರತಿ ವರ್ಷ ನಡೆಯಲಿ ಭಾರತ ದೇಶದ 75ನೇ ಗಣರಾಜ್ಯೋತ್ಸವದ ಅಂಗವಾಗಿ ಸಂವಿಧಾನ ಹೆಸರಿನಲ್ಲಿ ರಾಜ್ಯಾದ್ಯಂತ ಸಂವಿಧಾನ…

By Dinamaana Kannada News

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಡಿಸಿ

ದಾವಣಗೆರೆ ಜ.30 (Davanagere) : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು  ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ…

By Dinamaana Kannada News

Davanagere | ಹಿರಿಯರನ್ನು ಸದಾ ಗೌರವಿಸಿ : ನ್ಯಾ. ಮಹಾವೀರ ಮ. ಕರೆಣ್ಣವರ್‌

ದಾವಣಗೆರೆ (Davanagere) : ಹಳೇಬೇರು, ಹೊಸಚಿಗರು ಎಂಬಂತೆ ಹಿರಿಯರನ್ನು ಗೌರವಿಸಿ ವಿಧೇಯರಾಗಿರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?