ಹರಿಹರ : ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ಹರಿಹರ ನಗರ ಪೊಲೀಸರ 03 ಜನ ಆರೋಪಿಗಳನ್ನು ಬಂಧಿಸಿ, 8 ದ್ವಿಚಕ್ರ ವಾಹನಗಳ ವಶಕ್ಕೆ ಪಡೆದಿದ್ದಾರೆ.
ಹರಿಹರ ನಗರದ ಬಜಾರ್ ಮೊಹಲ್ಲಾ ವಾಸಿ ಅಬ್ದುಲ್ ವಾಹಿದ್ ಬೈಕ್ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಹರಿಹರ ನಗರ ಠಾಣೆ ಪೊಲೀಸರು ಬೈಕ್ ಕಳ್ಳತನ ಪ್ರಕರಣದ ಆರೋಪಿತರ ಪತ್ತೆಗೆ ಎಎಸ್ಪಿ ಪರಮೇಶ್ವರ ಹೆಗಡೆ ಹಾಗೂ ಗ್ರಾಮಾಂತರ ಡಿವೈಎಸ್ಪಿ ಬಸವರಾಜ ಬಿ ಎಸ್ ಮಾರ್ಗದರ್ಶನದಲ್ಲಿ ಹರಿಹರ ನಗರ ಠಾಣೆ ಪಿಐ ಆರ್.ಎಫ್. ದೇಸಾಯಿ ನೇತೃತ್ವದಲ್ಲಿ ಅಧಿಕಾರಿ ಸಿಬ್ಬಂದಿಗಳ ತಂಡ ಕಾರ್ಯಚರಣೆ ನಡೆಸಿ ಆರೋಪಿತರಾದ ಚಂದ್ರು.ಎನ್, , ಸೈಯದ್ ಹಫೀಜ್, ತೌಶೀಪ್ ಅಹಮ್ಮದ್ ಬಂಧಿಸಿ, ಅಂದಾಜು 2,55,000/-ರೂ ಬೆಲೆಯ 08 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಹರಿಹರ ನಗರ ಠಾಣೆಯ 06 ಪ್ರಕರಣಗಳು ಹಾಗೂ ರಾಣೆಬೆನ್ನೂರು ನಗರದ 01 ಪ್ರಕರಣ, ಮಲೆಬೆನ್ನೂರು ಠಾಣೆಯ 01 ಪ್ರಕರಣಕ್ಕೆ ಸಂಬಂಧಿಸಿದವುಗಳಾಗಿವೆ. ಆರೋಪಿತರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪತ್ತೆಕಾರ್ಯದಲ್ಲಿ ಭಾಗಿಯಾಗಿದ ಪೊಲೀಸ್ ನಿರೀಕ್ಷ ಆರ್.ಎಫ್. ದೇಸಾಯಿ, ಪಿ.ಎಸ್.ಐ ಶ್ರೀಪತಿ ಗಿನ್ನಿ, ಸಿಬ್ಬಂದಿಗಳಾದ ನಾಗರಾಜ ಸುಣಗಾರ, ದಿಲೀಪ್. ಕೆ.ಸಿ, ಶಾಂತರಾಜ್ ಎಂ.ಎಸ್, ಸಿದ್ದೇಶ.ಹೆಚ್, ಮಂಜುನಾಥ ಕ್ಯಾತಮ್ಮನವರ್, ದೇವರಾಜ್ ಸೂರ್ವೆ, ರವಿ.ಆರ್, ರುದ್ರಸ್ವಾಮಿ.ಕೆ.ಸಿ, ಹನುಮಂತಪ್ಪ ಗೋಪನಾಳ, ರಂಗನಾಥ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ರಾಮಚಂದ್ರ ಜಾದವ್, ಶಿವಕುಮಾರ, ರಮೇಶ ರವರನ್ನು ಎಸ್ಪಿ ಉಮಾ ಪ್ರಶಾಂತ್ ಪ್ರಶಂಸಿಸಿದ್ದಾರೆ.