Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭದ್ರಾ ನಾಲೆಗಳ ದುರಸ್ತಿಗೆ ಅನುದಾನ : ರೈತರ ಹಿತಕ್ಕಾಗಿ ಡಿಸಿಎಂಗೆ ಮನವಿ ಸಲ್ಲಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಭದ್ರಾ ನಾಲೆಗಳ ದುರಸ್ತಿಗೆ ಅನುದಾನ : ರೈತರ ಹಿತಕ್ಕಾಗಿ ಡಿಸಿಎಂಗೆ ಮನವಿ ಸಲ್ಲಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Dinamaana Kannada News
Last updated: September 12, 2025 12:53 pm
Dinamaana Kannada News
Share
Davanagere
SHARE
ದಾವಣಗೆರೆ.ಸೆ.12; ಭದ್ರಾ ಅಚ್ಚುಕಟ್ಟಿನ ನಾಲೆಗಳ ನಿರ್ವಹಣೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಕೆಲವೆಡೆ ನಾಲೆಗಳು ಕುಸಿದು ನೀರು ವ್ಯರ್ಥವಾಗಿ ಹೊರಹೋಗುತ್ತಿರುವುದು, ಮತ್ತಿತರ ಭಾಗಗಳಲ್ಲಿ ಹೂಳು ತುಂಬಿಕೊಂಡಿರುವುದರಿಂದ ಕೊನೆಭಾಗದ ರೈತರಿಗೆ ನೀರು ತಲುಪುತ್ತಿಲ್ಲ ಆದ್ದರಿಂದ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಶಿವಮೊಗ್ಗ ಜಿಲ್ಲೆಯ ಲಕ್ಕವಳ್ಳಿಯಲ್ಲಿರುವ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ವೇದಿಕೆ ಕಾರ್ಯಕ್ರಮದಲ್ಲಿ ಸಂಸದರು ತಮ್ಮ ಮನವಿಯನ್ನು ಉಪಮುಖ್ಯಮಂತ್ರಿಗಳಿಗೆ ಅರ್ಪಿಸಿ ಅನುದಾನ ಬಿಡುಗಡೆಗೆ ಒತ್ತಾಯಿಸಿದರು.
ಈ ವಿಷಯವಾಗಿ ಕಳೆದ ವರ್ಷ ಸಂಬಂಧಪಟ್ಟ ಇಂಜಿನಿಯರ್‌ರನ್ನು ಕರೆಸಿ ಚರ್ಚೆ ನಡೆಸಿದ ಸಂದರ್ಭದಲ್ಲಿ, ಸುಮಾರು ₹100 ಕೋಟಿ ಅನುದಾನ ಅಗತ್ಯವಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದರು. ಈ ವಿಷಯ ಕುರಿತು ಮುಖ್ಯಮಂತ್ರಿಗಳಿಗೆ ಕೂಡ ಪತ್ರ ಬರೆದು ಮನವಿ ಸಲ್ಲಿಸಲಾಗಿತ್ತು. ಭದ್ರಾ ಅಚ್ಚುಕಟ್ಟಿನ ಕೊನೆಭಾಗವು ನಾಲ್ಕು ಉಪವಿಭಾಗಗಳನ್ನು ಒಳಗೊಂಡಿದ್ದು, ಒಟ್ಟಾರೆ 32,000 ಹೆಕ್ಟೇರ್ ಜಮೀನಿಗೆ ನೀರು ಸಿಗುತ್ತದೆ. ಆದರೆ, ಸುಮಾರು 5,700 ಹೆಕ್ಟೇರ್ ಜಮೀನಿಗೆ ಬೇಸಿಗೆಯ ಸಮಯದಲ್ಲಿ ನೀರು ತಲುಪದ ಕಾರಣ ರೈತರು ವರ್ಷಕ್ಕೆ ಕೇವಲ ಒಂದು ಬೆಳೆಗೆ ಮಾತ್ರ ಸೀಮಿತವಾಗುತ್ತಿದ್ದಾರೆ. ಇದರಿಂದ ರೈತರಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ.
Read also : ದಾವಣಗೆರೆಯಲ್ಲಿ ಎಎಸ್ಯುಎಸ್ ಎಕ್ಸ್ಕ್ಲೂಸಿವ್ ರಿಟೇಲ್ ‌ಸ್ಟೋರ್ ಪ್ರಾರಂಭ 
ಮೂರು ಜಿಲ್ಲೆಗಳ ರೈತರ ಬದುಕು, ಭವಿಷ್ಯ ಮತ್ತು ಕೃಷಿ ಆರ್ಥಿಕತೆಯ ಹಿತದೃಷ್ಟಿಯಿಂದ ತಕ್ಷಣವೇ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಸಂಸದರು ಒತ್ತಾಯಿಸಿದ್ದಾರೆ. ಇದರ ಜೊತೆಗೆ, ಭದ್ರಾ ಬಲದಂಡೆ ನಾಲೆಯಿಂದ ಪಕ್ಕದ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯಿಂದ ಅಚ್ಚುಕಟ್ಟು ವ್ಯಾಪ್ತಿಯ ಕೊನೆ ಭಾಗದ ರೈತರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಬಲದಂಡೆ ನಾಲೆಯಿಂದ ನೀರು ಲಿಫ್ಟ್ ಮಾಡುವ ಬದಲು ತುಂಗಾ ನದಿಯಿಂದ ನೀರು ಪೂರೈಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ನಿಯೋಗವು ಸರ್ಕಾರದ ಗಮನಕ್ಕೆ ತಂದಿದೆ.
“ಭದ್ರಾ ನಾಲೆಗಳ ಅಭಿವೃದ್ಧಿಗೆ ತಕ್ಷಣದ ಕ್ರಮ ಕೈಗೊಂಡು, ಅನುದಾನ ಬಿಡುಗಡೆ ಮಾಡುವ ಮೂಲಕ ರೈತರ ಬದುಕು ಉಳಿಸಬೇಕೆಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ .ಎಸ್ ಮಲ್ಲಿಕಾರ್ಜುನ್,ಹಿರಿಯ ನಾಯಕರಾದ ಟಿ.ಬಿ.ಜಯಚಂದ್ರ, ಶಾಸಕರುಗಳಾದ ಡಿ.ಜಿ ಶಾಂತನಗೌಡ,ಕೆ.ಎಸ್.ಬಸವಂತಪ್ಪ,ಶಿವಗಂಗಾ ಬಸವರಾಜ್,ಸಂಗಮೇಶ್ ಹಾಗೂ ಕಾಂಗ್ರೆಸ್ ಮುಖಂಡರುಗಳು,ಕಾರ್ಯಕರ್ತರು ಭಾಗವಹಿಸಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ASUS Exclusive Retail Store Launched in Davangere ದಾವಣಗೆರೆಯಲ್ಲಿ ಎಎಸ್ಯುಎಸ್ ಎಕ್ಸ್ಕ್ಲೂಸಿವ್ ರಿಟೇಲ್ ‌ಸ್ಟೋರ್ ಪ್ರಾರಂಭ 
Next Article Davanagere ಅಂಚೆ ಇಲಾಖೆಯಿಂದ ಗ್ರಾಹಕರಿಗೆ ತ್ವರಿತ ಸೇವೆ : ಅಂಚೆ ಅಧೀಕ್ಷಕ ಚಂದ್ರಶೇಖರ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಬಿಜೆಪಿಗೆ ದಲಿತರ ಸಚಿವರೇ ಟಾರ್ಗೆಟ್‌ : ಮಾಧ್ಯಮ ವಕ್ತಾರ ಶ್ರೀನಿವಾಸ್ ಕಿಡಿ

ದಾವಣಗೆರೆ (Davanagere) :  ದಲಿತ ಸಚಿವರುಗಳೇ ಬಿಜೆಪಿ ಗೆ ಟಾರ್ಗೆಟ್ ಆಗಿದೆ. ಪ್ರಿಯಾಂಕ ಖರ್ಗೆರವರ ನಾಯಕತ್ವ ಬೆಳೆಯುವುದು ಬಿಜೆಪಿಗೆ ಸಹಿಸಲು…

By Dinamaana Kannada News

ಶುದ್ದ ಆಹಾರ ಸೇವೆನೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ

ದಾವಣಗೆರೆ :  ಸಾತ್ವಿಕ ಶುದ್ಧ ಆಹಾರ ಪದಾರ್ಥಗಳ ಸೇವನೆಯಿಂದ ದೇಹದ ಆರೋಗ್ಯದ ಜೊತೆ ಮಾನಸಿಕ ಆರೋಗ್ಯ ಪಡೆಯಲು ಸಾಧ್ಯ ಎಂದು…

By Dinamaana Kannada News

ಹರಿಹರ ಬ್ರದರ್ಸ್ ಜಿಮ್‍ಗೆ ರಾಜ್ಯ ಮಟ್ಟದ 03 ಪ್ರಶಸ್ತಿ  

ದಾವಣಗೆರೆ (Davanagere): ಮೈಸೂರು ನಗರದಲ್ಲಿ ಇತ್ತೀಚಿಗೆ ನಡೆದ 13ನೇ ರಾಜ್ಯ ಮಟ್ಟದ ಆರ್ಮ್ ರಜ್ಲಿಂಗ್ ( ಪಂಜ ಕುಸ್ತಿ )…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?