Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರೊ.ಬಿ.ಕೃಷ್ಣಪ್ಪನವರು ದಲಿತರಲ್ಲಿ ಆತ್ಮಸ್ಥೈರ್ಯ ತುಂಬಿದರು :ಎಂ.ಗುರುಮೂರ್ತಿ
ತಾಜಾ ಸುದ್ದಿ

ಪ್ರೊ.ಬಿ.ಕೃಷ್ಣಪ್ಪನವರು ದಲಿತರಲ್ಲಿ ಆತ್ಮಸ್ಥೈರ್ಯ ತುಂಬಿದರು :ಎಂ.ಗುರುಮೂರ್ತಿ

Dinamaana Kannada News
Last updated: September 12, 2025 2:06 pm
Dinamaana Kannada News
Share
Davanagere
SHARE

ಹರಿಹರ: ಪ್ರೊ.ಬಿ.ಕೃಷ್ಣಪ್ಪನವರು ನಡೆಸಿದ ಹಲವಾರು ಹೋರಾಟಗಳ ಪರಿಣಾಮ ಕರ್ನಾಟಕದಲ್ಲಿ ದಲಿತ ಸಮುದಾಯದವರ ಆತ್ಮಸ್ಥೈರ್ಯ ಹೆಚ್ಚಾಯಿತೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ಹೇಳಿದರು.

ನಗರದ ಎಸ್‍ಜೆವಿಪಿ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶುಕ್ರವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪ್ರೊ.ಬಿ.ಕೃಷ್ಣಪ್ಪರವರ ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೋಬಳಿಗೊಂದು ವಸತಿ ಶಾಲೆ, ವಿದ್ಯಾರ್ಥಿ ವೇತನ, ದಲಿತರಿಗೆ ಭೂಮಿ ಮಂಜೂರಾತಿ, ಧರ್ಮದ ಹೆಸರಲ್ಲಿ ಮೌಢ್ಯಾಚರಣೆ ವಿರೋಧಿ, ಮೀಸಲಾತಿ ಸೇರಿದಂತೆ ಹತ್ತಾರು ಬಗೆಯ ನಿರಂತರ ಹೋರಾಟ ಆಡಳಿತಗಾರರ ಕಣ್ಣು ತೆರೆಸಿದವು ಎಂದರು.

20ನೇ ಶತಮಾನದ 4 ದಶಕಗಳ ಹೋರಾಟದ ಮೂಲಕ ರಾಜ್ಯದ ಸಾಂಸ್ಕøತಿಕ, ಸಾಮಾಜಿಕ, ಆರ್ಥಿಕ, ರಾಜಕೀಯ ಸಂರಕ್ಷಣೆಗಾಗಿ ಅತ್ಯಂತ ಸಮರ್ಥವಾಗಿ ಮುಖಾಮುಖಿಯಾದ ಕೃಷ್ಣಪ್ಪನವರು ರಾಜ್ಯದ ಬಹುದೊಡ್ಡ ಹೋರಾಟಗಾರರಾಗಿ ಹೊರಹೊಮ್ಮಿದರು. ಅಖಂಡ ಮಾನವತಾವಾದಿ ಡಾ.ಅಂಬೇಡ್ಕರ್‍ಅವರ ಆಲೋಚನೆಗಳನ್ನು ರಾಜ್ಯದ ಕೇರಿ, ಕೇರಿಗಳಲ್ಲಿ ಬಿತ್ತಿದಕೃಷ್ಣಪ್ಪನವರು ಒಂದು ಹೊಸ ಸಾಂಸಸಕೃತಿಕ ಪ್ರಜ್ಞೆಯ ವಲಯವನ್ನು ಕಟ್ಟುವ ಮೂಲಕ ದಲಿತರ ಬದುಕಿಗೆದಾರಿ ದೀಪವಾದರು ಎಂದರು.

ನಾಯಕತ್ವದಲ್ಲಿ ರಾಜ್ಯದಲ್ಲಿ ಜ್ವಾಲಾಮುಖಿಯಂತೆ ಸ್ಪೋಟಗೊಂಡ ಸಂಘಟನೆ ಅತಿಕಡಿಮೆ ಅವಧಿಯಲ್ಲಿ ರಾಜ್ಯದ ಮೂಲೆ, ಮೂಲೆಗಳಲ್ಲಿ ತನ್ನ ಶಾಖೆಗಳನ್ನು ಆರಂಭಿಸಿ ದೊಡ್ಡ ಶಕ್ತಿಯಾಗಿರೂಪಗೊಂಡಿದ್ದು ಜಾತಿವಾದಿಗಳಿಗೆ ಮತ್ತು ಆಳುವ ವರ್ಗಗಳಿಗೆ ಹಾಗೂ ಭೂ ಮಾಲಿಕರಿಗೆದೊಡ್ಡ ಸವಾಲಾಗಿ ಪರಿಣಮಿಸಿತು ಎಂದರು.

ಬಗರ್ ಹುಕುಂ ಸಾಗುವಳಿ ಒತ್ತುವರಿ ಜಮೀನು, ಹೆಚ್ಚುವರಿ ಜಮೀನು, ಸಿ ಮತ್ತು ಡಿ ಭೂಮಿ ವಿತರಣೆಯ ಬಾಪ್ತು 28,000 ಎಕರೆ ಜಮೀನು ಸೇರಿದಂತೆ 1980ರಲ್ಲಿ ಚೆಂಡೆಗೋಡು, 1981ರಲ್ಲಿ ಬಿದರೆಕಾವಲು, 1983ರಲ್ಲಿ ದೇವಲಾಪುರಚರಗುತ್ತಿ ಭೂ ಹೋರಾಟಗಳು ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ತಲೆಎತ್ತಿ ನಿಲ್ಲುವಂತೆ ಮಾಡಿತು ಎಂದರು.

ರಿಪ್ಪನಪೇಟೆ ಸರ್ಕಾರಿ ಪ್ರಥಮ ದರ್ಜೆಕಾಲೇಜಿನ ಆಂಗ್ಲಬಾಷಾ ಪ್ರಾಧ್ಯಾಪಕ ಪ್ರೊ.ಬಿ.ಎಲ್. ರಾಜು ಡಾ.ಅಂಬೇಡ್ಕರ್‍ರವರ ಕುರಿತು ಉಪನ್ಯಾಸ ನೀಡಿ, ವಿವಿಧ ವಿಷಯಗಳಲ್ಲಿ ಭಾರತವೂ ಸೇರಿದಂತೆ ಲಂಡನ್, ಅಮೇರಿಕಾ ವಿಶ್ವವಿದ್ಯಾನಿಲಯಗಳಿಂದ 30 ಪದವಿ, ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದ ಅಂಬೇಡ್ಕರ್‍ರವರಿಗೆ ಸಹಜವಾಗಿ ಸಂವಿಧಾನ ರಚನೆ ಜವಾಬ್ದಾರಿ ವಹಿಸಲಾಯಿತು. ದಲಿತ, ಹಿಂದುಳಿದ, ಅಂಲ್ಪಸಂಖ್ಯಾತರ ಹಾಗೂ ಮಹಿಳೆಯರ ನಿಕೃಷ್ಟ ಬದುಕನ್ನು ಗಮನಿಸಿದ ಅಂಬೇಡ್ಕರ್‍ರವರುಇವರ ಸಂರಕ್ಷಣೆಗಾಗಿಯೆ ವಿಶೇಷ ಕಾಳಜಿಯನ್ನು ವಹಿಸಿದರು. ನೈಪುಣ್ಯತೆ, ಜ್ಞಾನವನ್ನಾಧರಿಸಿ ದೇಶದಲ್ಲಿ ವ್ಯಕ್ತಿಗಳಿಗೆ ಆಧ್ಯತೆ ಸಿಗಬೇಕೆ ಹೊರತು ಜಾತಿಯನ್ನಾಧರಿಸಿ ಅಲ್ಲಎಂದುಅವರು ಪ್ರಬಲವಾಗಿ ಪ್ರತಿಪಾದಿಸಿದರು ಎಂದರು.

Read also : ದಾವಣಗೆರೆ : ಗ್ರಾಮಾಂತರ ಪ್ರದೇಶಗಳಲ್ಲಿ ಸೆ.13 ರಂದು 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ಅಧ್ಯಕ್ಷತೆವಹಿಸಿದ್ದ ಪ್ರಾಧ್ಯಾಪಕ ಪ್ರೊ.ರಮೇಶ್ ಕೆ.ಪರ್ವತಿ, ಕದಸಂಸ ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಪ್ರಸ್ತಾವನೆ ಮಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ಎನ್.ಎಚ್.ಪಾಟೀಲ ಮಾತನಾಡಿದರು. ಕಡ್ಲೆಗೊಂದಿ ತಿಮ್ಮಣ್ಣ, ಕಡತಿ ನಾಗರಾಜಪ್ಪ, ಸಂಜೀವ್, ಅಣ್ಣಪ್ಪ, ಬಸವರಾಜ್, ರಾಜಪ್ಪ ಇದ್ದರು.

ವಿದ್ಯಾರ್ಥಿನಿ ಕಾವ್ಯ ಪ್ರಾರ್ಥಿಸಿದರು. ಸಂಜನಾ ಸ್ವಾಗತಿಸಿದರು.ಅಧ್ಯಾಪಕ ಸಿದ್ದಯ್ಯ ನಿರೂಪಿಸಿದರು.ದಿವ್ಯ ವಂದಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Power outage ದಾವಣಗೆರೆ : ಗ್ರಾಮಾಂತರ ಪ್ರದೇಶಗಳಲ್ಲಿ ಸೆ.13 ರಂದು 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
Next Article CM Siddaramay ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ: ಸಾಂತ್ವನ ಹೇಳಲು ನೀಡುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪ.ಜಾತಿಗಳ ಒಳಮೀಸಲಾತಿ ಸಮೀಕ್ಷಾ ಅವಧಿ ವಿಸ್ತರಣೆ : ಡಿಸಿ

ದಾವಣಗೆರೆ (Davanagere) : ಹೆಚ್ಚು ಮಳೆ ಹಾಗೂ ಬೇರೆ  ಕಾರಣಗಳಿಂದ  ಪ.ಜಾತಿ ಕುಟುಂಬಗಳ ಒಳ ಮೀಸಲಾತಿ ಸಮೀಕ್ಷೆಯ ದಿನಾಂಕವನ್ನು ವಿಸ್ತರಿಸಲಾಗಿದೆ…

By Dinamaana Kannada News

ದಾವಣಗೆರೆ | ವೃದ್ದನಿಗೆ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದ ನ್ಯಾ. ಡಿ.ಕೆ.ವೇಲಾ

ದಾವಣಗೆರೆ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಶನಿವಾರ ಮಧ್ಯಾಹ್ನ ಹರಿಹರ ನ್ಯಾಯಾಲಯಕ್ಕೆ ಆಗಮಿಸಿದ ಸಮಯದಲ್ಲಿ ದೊಡ್ಡಬತಿ ಸಮೀಪದ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 56 :  ಪ್ರಯೋಗವಸ್ತು

Kannada News | Sanduru Stories | Dinamaana.com | 16-06-2024 ಲಾರಿ ಡೈವರಿಗೆ ದಿನಕ್ಕೆ ಐದು ಸಾವಿರ ದುಡಿಮೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?