Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > RSS ನವರು ಅಂಬೇಡ್ಕರ್ ಸಂವಿಧಾನ ವಿರೋಧಿಸಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ
ತಾಜಾ ಸುದ್ದಿ

RSS ನವರು ಅಂಬೇಡ್ಕರ್ ಸಂವಿಧಾನ ವಿರೋಧಿಸಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ

Dinamaana Kannada News
Last updated: October 18, 2025 10:02 am
Dinamaana Kannada News
Share
Chief Minister Siddaramaiah
SHARE
ಮೈಸೂರು ಅ18: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು.
ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು.
ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ.  ಅವರನ್ನು ಚುನಾವಣೆಯಲ್ಲಿ  ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು  ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದು ಕರೆ ನೀಡಿದರು.
ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ನಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದರು.
ವಿಶ್ವದ ಎಲ್ಲಾ ಸಂವಿಧಾನಗಳನ್ನು ಓದಿ, ಜೀರ್ಣಿಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟರು ಎಂದು ವಿವರಿಸಿದರು.

Read also : ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ –ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು , ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಎಂದರು.
ಶೂ ಎಸೆತವನ್ನು ದಲಿತರಷ್ಟೇ ಅಲ್ಲ. ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂದರು.
ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ. ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ ಎಂದರು.
ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ‌ ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ ಎಂದರು.
ಎಲ್ಲರಿಗೂ ಸಮಾನ ಅವಕಾಶಗಳು ಸಿಗದೇ ಇದ್ದುದರಿಂದ  ಅಸಮಾನತೆ ಸೃಷ್ಟಿಯಾಗಿದೆ.  ವಿದ್ಯೆ ಯಾರಪ್ಪನ ಮನೆ ಆಸ್ತಿ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ಅವಕಾಶ ಸಿಕ್ಕಾಗ ವಿದ್ವಾಂಸರಾಗುತ್ತಾರೆ, ಜ್ಞಾನಿ ಆಗುತ್ತಾರೆ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದರು.
ನಿಮ್ಮ ಸಹವಾಸ ಸರಿಯಾಗಿರಲಿ 
ಸಮಾಜದ ಪರವಾಗಿ ಇರುವವರ ಜೊತೆ ನಿಮ್ಮ ಸಹವಾಸ ಇರಲಿ. ಸಮಾಜ ಬದಲಾವಣೆಯ ವಿರೋಧಿಗಳ, ಸನಾತನಿಗಳ ಸಹವಾಸ ಬೇಡ ಎಂದು ಕರೆ ನೀಡಿದರು.
TAGGED:Chief Minister SiddaramaiahDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Chief Minister Siddaramaiah ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ –ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ
Next Article Davanagere ದಾವಣಗೆರೆ : ಸಂಕಷ್ಟದಲ್ಲಿರುವ ಮಹಿಳೆಯರಿಗೆ “ಉಚಿತ ಊಟ, ಬಟ್ಟೆ, ಆಶ್ರಯ” ನೀಡುವ ಯೋಜನೆಗೆ ಚಾಲನೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ : ಡಿಸಿ

ದಾವಣಗೆರೆ (Davanagere )ಮಾ.12: ಯುವ ಜನತೆ ಈ ದೇಶದ ಆಸ್ತಿ, ದೇಶ ಭವಿಷ್ಯ ನಿಮ್ಮ ಕೈಯಲ್ಲಿದೆ. ಆದರೆ ಇತ್ತೀಚಿನ ದಿನಗಳಲ್ಲಿ…

By Dinamaana Kannada News

ಜನರ ನಂಬಿಕೆ ಹುಸಿಯಾಗದಂತೆ ಸೇವೆ ನಿರಂತರವಾಗಿರಲಿ

ದಾವಣಗೆರೆ ಏ.2 : ಸರ್ಕಾರದ ವಿವಿಧ ಇಲಾಖೆಗಳ ಸೇವೆಗಿಂತಲೂ ಪೊಲೀಸ್ ಇಲಾಖೆ ಸೇವೆ ಭಿನ್ನವಾಗಿರುತ್ತದೆ. ಕಾನೂನು ಸುವ್ಯವಸ್ಥೆಯಲ್ಲಿ ಜನಸಾಮಾನ್ಯರಿಗೆ ನೆರವಾಗುವ…

By Dinamaana Kannada News

ಶಿಕ್ಷಣವೇ ಮಕ್ಕಳ ಭವಿಷ್ಯವನ್ನು ಉಜ್ಜಲವಾಗಿಸುವುದು : ಬಸವಪ್ರಭು ಸ್ವಾಮೀಜಿ

ದಾವಣಗೆರೆ :  ರಾಜ್ಯ ಹಾಗೂ ನಮ್ಮ ದೇಶದ ಅಭಿವೃದ್ದಿಯಾಗಬೇಕಾದರೆ ಮಕ್ಕಳಿಗೆ ಉಜ್ಜಲ ಭವಿಷ್ಯದ ಜೊತೆಗೆ ಉತ್ತಮ ಸಂಸ್ಕಾರ ದೊರೆಯಬೇಕಾದಲ್ಲಿ ಶಿಕ್ಷಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?