Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

Dinamaana Kannada News
Last updated: October 29, 2025 5:17 am
Dinamaana Kannada News
Share
CEO Gitte Madhava Vitthal Rao
SHARE

ದಾವಣಗೆರೆ : ನಗರ ಹಾಗೂ ಜಿಲ್ಲಾದ್ಯಂತ ತಾಲ್ಲೂಕುವಾರು ಅತೀ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಕುಷ್ಠರೋಗ, ಕ್ಷಯ ಹಾಗೂ ಇನ್ನಿತರೆ ಖಾಯಿಲೆಗಳ ಕುರಿತು ಕಾರ್ಯಗಾರ ಆಯೋಜಿಸಬೇಕು. ಈ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಜಿಪಂ ಸಿಇಓ ಗಿತ್ತೆ ಮಾಧವ ವಿಠಲ ರಾವ್ ತಿಳಿಸಿದರು.

ನಗರದ ಜಿಪಂ ಕಚೇರಿಯಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ಕಳೆದ 5 ವರ್ಷಗಳಲ್ಲಿ ಕಂಡು ಬಂದಂತಹ ಪ್ರದೇಶಗಳಾದ ನಗರ, ಕೊಳಗೇರಿ, ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳಲ್ಲಿ ನವೆಂಬರ್ 3 ರಿಂದ 14 ದಿನಗಳ ಕಾಲ ಕುಷ್ಠರೋಗಿಗಳನ್ನು ಗುರುತಿಸಿ  ಪತ್ತೆ ಹಚ್ಚುವ ಸಮೀಕ್ಷಾ ಕಾರ್ಯ ನಡೆಯಲಿದೆ. ಅಧಿಕಾರಿಗಳು ಸಿಬ್ಬಂದಿ ಅಂತಹ  ಸೂಕ್ಷ್ಮ ಪ್ರದೇಶಗಳಲ್ಲಿ ಸಂಶಯಾಸ್ಪದ ವ್ಯಕ್ತಿಗಳನ್ನು ಗುರುತಿಸಿ ಸೂಕ್ತ ಚಿಕಿತ್ಸೆ ನೀಡಬೇಕು.

ಈ ನಿಟ್ಟಿನಲ್ಲಿ ಅಧಿಕಾರಿಗಳು ಜಿಲ್ಲೆ ಹಾಗೂ ತಾಲ್ಲೂಕುವಾರು ಸಾರ್ವಜನಿಕರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಕುಷ್ಠರೋಗ, ಕ್ಷಯ ಮತ್ತು ಇನ್ನಿತರೆ ಖಾಯಿಲೆಗಳ ಬಗ್ಗೆ ಜಾಗೃತಿ ಕಾರ್ಯಗಾರ ಆಯೋಜಿಸಬೇಕು. ಅದರಲ್ಲೂ ಅತೀ ಹೆಚ್ಚು ಜನನಿಬಿಡ ಪ್ರದೇಶ ಮತ್ತು ನರೇಗಾ ಕಾಮಗಾರಿ, ಕೆರೆ ಹೂಳೆತ್ತುವ ಸ್ಥಳ ಅಥವಾ ಹೆಚ್ಚಿನ ಕಾರ್ಮಿಕರು ಇರುವ ಸ್ಥಳಗಳನ್ನು ಗುರುತಿಸಿ ಅವರಿರುವಲ್ಲಿಗೆ ತೆರಳಿ ಕಾರ್ಮಿಕರಿಗೆ ಚಿಕಿತ್ಸೆಗೆ ಒಳಪಪಡಿಸಬೇಕು ಎಂದು ತಿಳಿಸಿದರು.

ಕಳೆದ ವರ್ಷದಲ್ಲಿ 6802 ಜನ ಸಂಶಯಾಸ್ಪದ ಕುಷ್ಠರೋಗಿಗಳೆಂದು ಗುರುತಿಸಲಾಗಿದೆ. ಈ ಪೈಕಿ ಎಲ್ಲರನ್ನು ಸಮಗ್ರವಾಗಿ ಪರೀಕ್ಷೆಗೆ ಒಳಪಡಿಸಿದಾಗ ದಾವಣಗೆರೆ, ಹೊನ್ನಾಳಿ, ಚನ್ನಗಿರಿ ಹಾಗೂ ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ತಲಾ 2, ಹರಿಹರ ತಾಲ್ಲೂಕಿನಲ್ಲಿ 3 ಪ್ರಕರಣ ಸೇರಿ ಒಟ್ಟು 11 ಪ್ರಕರಣ ದೃಢಪಟ್ಟಿವೆ. ಪ್ರಸಕ್ತ ವರ್ಷದಲ್ಲಿ 56 ಪ್ರಕರಣ ಕಂಡು ಬಂದಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

Read also : ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

ಕುಷ್ಠರೋಗ ಸಮೀಕ್ಷೆಗೆ 410 ತಂಡ:
ಜಿಲ್ಲಾದ್ಯಂತ ಸಮೀಕ್ಷಾ ಕಾರ್ಯಕ್ಕೆ ಒಬ್ಬ ಆಶಾ ಕಾರ್ಯಕರ್ತೆ ಮತ್ತು ಒಬ್ಬ ಸ್ವಯಂ ಸೇವಕರು ಒಳಗೊಂಡಂತೆ ಒಟ್ಟು 410 ತಂಡಗಳನ್ನು ರಚಿಸಲಾಗಿದೆ. ಆ ಒಂದು ತಂಡವು ದಿನಕ್ಕೆ ಗ್ರಾಮೀಣ ಭಾಗದಲ್ಲಿ 20 ಕುಟುಂಬ ಹಾಗೂ ನಗರ ಪ್ರದೇಶಗಳಲ್ಲಿ 25 ಕುಟುಂಬಗಳ ಸಮೀಕ್ಷೆ ನಡೆಸಲಿದ್ದಾರೆ. ಸಮೀಕ್ಷಾ ಕಾರ್ಯ ನಡೆಸಿದ ಒಂದು ತಂಡಕ್ಕೆ ರೂ.150 ಅಂದರೆ ತಲಾ ರೂ.75 ನಂತೆ ಗೌರವ ಧನ ನೀಡಲಾಗುತ್ತದೆ.

ಸಂಶಯಾಸ್ಪದ ವ್ಯಕ್ತಿಯನ್ನು ಚಿಕಿತ್ಸೆಗೆ ಒಳಪಡಿಸಿದಾಗ ಅವರಿಗೆ ಕಾಯಿಲೆ ದೃಢಪಟ್ಟಲ್ಲಿ ಆಶಾ ಕಾರ್ಯಕರ್ತೆಯರಿಗೆ ಪ್ರಕರಣ ಒಂದಕ್ಕೆ ರೂ.250 ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಅಧಿಕಾರಿಯವರು ಮಾಹಿತಿ ನೀಡಿದರು.

ಈ ವೇಳೆ ಡಿಹೆಚ್‌ಓ ಷಣ್ಮುಖಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಸಂದೀಪ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

TAGGED:CEO Gitte Madhava Vitthal RaoDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ
Next Article Davanagere ದಾವಣಗೆರೆ ಪಾಲಿಕೆ ಆಯುಕ್ತರಿಂದ ಪೌರಕಾರ್ಮಿಕರಿಗೆ ಕಿರುಕುಳ: ವರ್ಗಾವಣೆಗೆ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮಣ್ಣಿನ ಘಮಲು ಹಚ್ಚಿಕೊಂಡು ಬರೆಯುವ ಕವಿ – ಮೇಟಿ ಕೊಟ್ರಪ್ಪ

Kannada News | Dinamaanada Hemme  | Dinamaana.com | 04-07-2024 ಕವಿತೆಗಳನ್ನು ಓದಿದಾಗ ಮನಸ್ಸು ಅಭಿಮಾನದಿಂದ ತುಂಬಿದೆ.. ಒಬ್ಬ…

By Dinamaana Kannada News

ಸೆಂಟ್ ಪಾಲ್ಸ್ ಶಾಲೆಯ ಗೈಡ್ಸ್ ತಂಡ ಪಥ ಸಂಚಲನದಲ್ಲಿ ಪ್ರಥಮ

ದಾವಣಗೆರೆ ಜ. 27 (Davanagere) : ಜಿಲ್ಲಾಡಳಿತದಿಂದ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವ ಅಂಗವಾಗಿ ನಡೆದ ಪಥ…

By Dinamaana Kannada News

ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಗೆ ಡಾ.ನಾಗಲಕ್ಷ್ಮೀ ಚೌಧರಿ ಆಗಮನ

ಹರಿಹರ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ತಾಲ್ಲೂಕು ಘಟಕ ಹಾಗೂ ಸ್ಪೂರ್ತಿ ಛಾರಿಟೇಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?