Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಅಗತ್ಯ: ಮಹಾವೀರ.ಮ.ಕೆರೆಣ್ಣನವರ್
ತಾಜಾ ಸುದ್ದಿ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವು ಅಗತ್ಯ: ಮಹಾವೀರ.ಮ.ಕೆರೆಣ್ಣನವರ್

Dinamaana Kannada News
Last updated: November 10, 2025 12:43 pm
Dinamaana Kannada News
Share
Davanagere
SHARE

ದಾವಣಗೆರೆ ನ.10:   ಕಾನೂನು ಸೇವಾ ಪ್ರಾಧಿಕಾರದ ಕಾಯ್ದೆಯಡಿ ವಿಚಾರಣಾಧೀನ ಕೈದಿಗಳಿಗೆ ಉಚಿತ ಮತ್ತು ಗುಣಮಟ್ಟದ ಕಾನೂನು ಸೇವೆಗಳನ್ನು ಕಡ್ಡಾಯವಾಗಿ ಒದಗಿಸಲಾಗುವುದು ಎಂದು ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಎಂ. ಕರೆಣ್ಣನವರ್ ಹೇಳಿದರು.

ಸೋಮವಾರ  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರಾಗೃಹದಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳಿಂದ ಈ ಸೇವೆಗಳನ್ನು ಒದಗಿಸಲಾಗಿದೆ. ಉಚಿತ ಕಾನೂನು ನೆರವು  ಎಲ್ಲಾ ವಿಚಾರಣಾಧೀನ ಕೈದಿಗಳು, ಅವರು ಅರ್ಹತಾ ಮಾನದಂಡಗಳನ್ನು ಪೂರೈಸಿದಲ್ಲಿ ಅಥವಾ  ಮಹಿಳೆಯರು, ಮಕ್ಕಳು ಇತ್ಯಾದಿ ವಿಶೇಷ ವರ್ಗಕ್ಕೆ ಸೇರಿದ್ದರೆ, ಉಚಿತ ಕಾನೂನು ನೆರವು ಪಡೆಯಲು ಅರ್ಹರಾಗಿರುತ್ತಾರೆ. ಜೈಲು ಕಾನೂನು ನೆರವು ಕೇಂದ್ರಗಳು ಕರ್ನಾಟಕದ ಪ್ರಮುಖ ಜೈಲುಗಳಲ್ಲಿ ಇಂತಹ ಕ್ಲಿನಿಕ್‍ಗಳನ್ನು ಸ್ಥಾಪಿಸಲಾಗಿದೆ.

ಇಲ್ಲಿ ಕಾನೂನು ಸಲಹೆಗಾರರು ಮತ್ತು ಪ್ಯಾರಾ ಲೀಗಲ್ ವಾಲಂಟಿಯರ್ಸ್ ನಿಯಮಿತವಾಗಿ ಭೇಟಿ ನೀಡುತ್ತಾರೆ. ಕೈದಿಗಳ ಕಷ್ಟಗಳನ್ನು ಆಲಿಸಿ, ಅವರ ಪ್ರಕರಣಗಳಿಗೆ ಸಂಬಂಧಿಸಿದಂತೆ ಅರ್ಜಿಗಳಾದ ಜಾಮೀನು, ಪೆರೋಲ್, ಮೇಲ್ಮನವಿ ತಯಾರಿಸಲು ಸಹಾಯ ಮಾಡುತ್ತಾರೆ. ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ, ಸರ್ಕಾರಿ ರಕ್ಷಣಾ ವಕೀಲರಂತೆ, ಪೂರ್ಣ ಸಮಯ ಮೀಸಲಾದ ವಕೀಲರ ತಂಡವನ್ನು ರಚಿಸಲಾಗಿದೆ. ಕೈದಿಗಳಿಗೆ ಬಂಧನದ ಆರಂಭಿಕ ಹಂತದಿಂದ ಮೇಲ್ಮನವಿ ಹಂತದವರೆಗೆ ಕಾನೂನು ನೆರವು ಮತ್ತು ಪ್ರಾತಿನಿಧ್ಯವನ್ನು ಒದಗಿಸಲಾಗುವುದು. ವಿಚಾರಣಾ ನ್ಯಾಯಾಲಯದಿಂದ ಪ್ರಕರಣ ಇತ್ಯರ್ಥಗೊಂಡಲ್ಲಿ ಅಪೀಲು ಕೂಡ ಸಲ್ಲಿಸಲು ಈ ವಕೀಲರು ಸಕ್ಷಮವಾಗಿರುತ್ತಾರೆ. ದಾವಣಗೆರೆಯಲ್ಲಿ ಈಗಾಗಲೇ ಎಂಟು ಜನ ಪೂರ್ಣ ಪ್ರಮಾಣದ ವಕೀಲರುಗಳನ್ನು ನೇಮಿಸಿಕೊಳ್ಳಲಾಗಿದೆ.

Read also : ನವೆಂಬರ್ 08 :ಕರುನಾಡಿನ ಇಬ್ಬರು ಮಹಾನ್ ಚೇತನಗಳ ಜಯಂತಿ 

ರಿಮಾಂಡ್ ಮತ್ತು ಜಾಮೀನು ವಕೀಲರು, ವಿಚಾರಣಾಧೀನ ಕೈದಿಗಳಿಗೆ ನ್ಯಾಯಾಂಗ ಬಂಧನ ವಿಧಿಸುವ ಹಂತದಲ್ಲಿ ಮತ್ತು ಜಾಮೀನು ಪಡೆಯಲು ಸಹಾಯ ಮಾಡಲು ನ್ಯಾಯಾಲಯಗಳಲ್ಲಿ ವಿಶೇಷ ವಕೀಲರನ್ನು ನೇಮಿಸಲಾಗಿದೆ.
ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಡಿಎಲ್‍ಎಸ್‍ಎ ಕಚೇರಿ ಇದೆ. ಕೈದಿಗಳ ಕುಟುಂಬದವರು ಅಥವಾ ಆಸಕ್ತರು ಅಲ್ಲಿಗೆ ಅರ್ಜಿ ಸಲ್ಲಿಸುವ ಮೂಲಕ ಕಾನೂನು ನೆರವನ್ನು ಪಡಯಬಹುದು. ಕರ್ನಾಟಕ ಕಾರಾಗೃಹ ನಿಯಮಾವಳಿಗಳು ವಿಚಾರಣಾಧೀನ ಕೈದಿಗಳನ್ನು ಶಿಕ್ಷೆಗೆ ಗುರಿಯಾದ ಕೈದಿಗಳಿಂದ ಪ್ರತ್ಯೇಕವಾಗಿ ಇಡುವುದು ಮತ್ತು ಅವರಿಗೆ ಸೂಕ್ತ ವಸತಿ, ಆಹಾರ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದನ್ನು ಕಡ್ಡಾಯವಾಗಿರುತ್ತದೆ. ವಕೀಲರನ್ನು ಭೇಟಿ ಮಾಡುವ ಸೌಲಭ್ಯವು ಇದರಲ್ಲಿ ಒಂದು ಪ್ರಮುಖ ಹಕ್ಕು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎ.ಡಿ.ಆರ್ ಕಟ್ಟಡ, ಹಳೇ ನ್ಯಾಯಾಲಯಗಳ ಸಂಕೀರ್ಣ, ದಾವಣಗೆರೆ-577002. ದೂರವಾಣಿ ಸಂಖ್ಯೆ: 08192-296364, ಇ-ಮೇಲ್: dlsadavangere4@gmail.com    ವೆಬ್ ಸೈಟ್ https://districts.ecourts.gov.in/davangere ಸಂಪರ್ಕಿಸಬಹುದು ಎಂದರು.

ಕಾರಾಗೃಹದ ಅಧೀಕ್ಷಕರಾದ ಆನಂದ ಭಜಂತ್ರಿ, ವಕೀಲರಾದ ಸೋಹನ್ ಕಟಗಿಹಳ್ಳಿ ಮಠ, ಸುಭಾಷ .ಹೆಚ್, ಕೆಂಚಪ್ಪ ಪೊಲೀಸ್  ಅಧಿಕಾರಿ ಸೋಮಶೇಖರ್ ಉಪಸ್ಥಿತರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Devotee Kanakadasa ನವೆಂಬರ್ 08 :ಕರುನಾಡಿನ ಇಬ್ಬರು ಮಹಾನ್ ಚೇತನಗಳ ಜಯಂತಿ 
Next Article Davanagere ದಾವಣಗೆರೆ:ವಿದ್ಯಾರ್ಥಿಗಳ ಸೇವಾ ಸ್ಫೂರ್ತಿ – ಶ್ರೀ ಸತ್ಯ ಸಾಯಿ ಬಾಬಾ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಇಹಲೋಕಕ್ಕೆ ವಿದಾಯ ಹೇಳಿದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಕಿರು ಪರಿಚಯ

ಮನಮೋಹನ್ ಸಿಂಗ್ ವಿಶ್ವದ ಅತ್ಯಂತ ಪ್ರಮುಖ ಆರ್ಥಿಕ ತಜ್ಞರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಭಾರತೀಯ ಅರ್ಥಶಾಸ್ತ್ರಜ್ಞರಾಗಿದ್ದರು ಹಾಗೂ ನಂತರ ದೇಶದ ರಾಜಕೀಯ…

By Dinamaana Kannada News

ಹರಿಹರ|ಹಲ್ಲೆ ನಡೆಸಿ ದರೋಡೆ ಪ್ರಕರಣ: ಆರು ಜನರ ಬಂಧನ

ದಾವಣಗೆರೆ : ಬೈಕ್ ತಡೆದು ಹಲ್ಲೆ ಮಾಡಿ ದರೋಡೆ ಮಾಡಿದ್ದ 06 ಜನ ಆರೋಪಿಗಳನ್ನು ಪ್ರಕರಣ ದಾಖಲಾಗಿ ಕೆಲವೇ ಗಂಟೆಗಳಲ್ಲಿ…

By Dinamaana Kannada News

ಗ್ರಾಹಕರಿಂದ ಹೆಚ್ಚುವರಿ ಕಂತು ವಸೂಲಿ : ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಬಿಸಿ ಮುಟ್ಟಿಸಿದ ಗ್ರಾಹಕ ಆಯೋಗ

ದಾವಣಗೆರೆ (Davanagere) : ಗ್ರಾಹಕರಿಂದ ಹೆಚ್ಚುವರಿ ಕಂತುಗಳನ್ನು ವಸೂಲಿ ಮಾಡಿದ ಇಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ಗೆ ಗ್ರಾಹಕರ ಆಯೋಗ ಬಿಸಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ|ಬುಳ್ಳಾಪುರ ಕೆರೆ ಜೀರ್ಣೋದ್ಧಾರ:ಗಂಭೀರ ಚರ್ಚೆ

By Dinamaana Kannada News
Davanagere
ತಾಜಾ ಸುದ್ದಿ

ಮತಕಳ್ಳತನ ತಡೆಯಲು ಪ್ರತಿಬೂತಮಟ್ಟದಲ್ಲಿ ಯುವಕರ ನೇಮಕ : ಮಂಜುನಾಥ ಗೌಡ

By Dinamaana Kannada News
Davanagere
ತಾಜಾ ಸುದ್ದಿ

ಹಿಂದಿ ವಸಾಹತೀಕರಣ ಆತಂಕಕಾರಿ: ಪೂರ್ವವಲಯ ಐಜಿಪಿ ರವಿಕಾಂತೇಗೌಡ

By Dinamaana Kannada News
davanagere
ತಾಜಾ ಸುದ್ದಿ

‘ಆರೋಗ್ಯಕ್ಕಿಂತ ಸಂಪತ್ತು ಮತ್ತೊಂದಿಲ್ಲ’: ಡಾ.ಮೂಗನಗೌಡ ಪಾಟೀಲ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?