Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಟ್ಟ ಕಡೆಯ ವ್ಯಕ್ತಿಗೂ ಸಹಕಾರ ಸಂಘದ ಫಲ ಲಭಿಸಲಿ: ಶಾಸಕ ಕೆ.ಎಸ್‌.ಬಸವಂತಪ್ಪ
ತಾಜಾ ಸುದ್ದಿ

ಕಟ್ಟ ಕಡೆಯ ವ್ಯಕ್ತಿಗೂ ಸಹಕಾರ ಸಂಘದ ಫಲ ಲಭಿಸಲಿ: ಶಾಸಕ ಕೆ.ಎಸ್‌.ಬಸವಂತಪ್ಪ

Dinamaana Kannada News
Last updated: November 18, 2025 4:08 pm
Dinamaana Kannada News
Share
Davanagere
SHARE
ದಾವಣಗೆರೆ: ಸಹಕಾರ ಕ್ಷೇತ್ರ ಹೆಮ್ಮರವಾಗಿ ಬೆಳೆದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಫಲ ಲಭಿಸಿದರೆ ಸಹಕಾರ ಕ್ಷೇತ್ರಕ್ಕೆ ಹೆಸರು ಬರಲಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಆಶಿಸಿದರು.
ತಾಲ್ಲೂಕಿನ ಕುರ್ಕಿ ಗ್ರಾಮದ ಕಮಲಮ್ಮ ಗುರುಶಾಂತಪ್ಪ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹದ 5 ನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಗಳು ಕೂಡ ಸಹಕಾರ ಕ್ಷೇತ್ರಕ್ಕೆ ಸಹಕಾರ ನೀಡಬೇಕಿದೆ. ಸಹಕಾರ ಸಂಘಗಳ ಮೂಲಕ ಎಲ್ಲ ರೈತರಿಗೆ ಸಾಲ ಸಿಗಬೇಕು ಎನ್ನುವುದು ನಮ್ಮ ಬಯಕೆಯಾಗಿದೆ. ಆದರೆ,  ಈ ಕ್ಷೇತ್ರದಲ್ಲಿ ಆರ್ಥಿಕ ಮುಗ್ಗಟ್ಟು ಇರುವುದು ಎಲ್ಲರಿಗೂ ಗೊತ್ತಿದೆ. ಇಂಥಹ ಸಂದರ್ಭದಲ್ಲಿ ಸರ್ಕಾರ ಹೆಚ್ಚು ಅನುದಾನ ನೀಡಿ ಸಂಘಗಳ ಕೈ ಹಿಡಿಯಬೇಕಾದ ಅಗತ್ಯವಿದೆ.
ನಬಾರ್ಡ್ ಕೂಡ ಸಾವಿರಾರು ಕೋಟಿ ರೂ ಸಾಲ ಕಡಿತಗೊಳಿಸಿರುವುದರಿಂದ ರೈತರಿಗೆ ಬಡ್ಡಿ ರಹಿತ ಸಾಲ ನೀಡಲು ಸಾಧ್ಯವಾಗುತಿಲ್ಲ. ಇಂಥಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬರುವ ದಿನಗಳಲ್ಲಿ ನಬಾರ್ಡ್ ಕಡಿತ ಮಾಡಿರುವ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಕೂಡ ಸಹಕಾರ ಸಂಘಗಳಿಗೆ ವಿಶೇಷ ಅನುದಾನ ನೀಡಲು ಮುಂದೆ ಬರಬೇಕು. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು. ಸಹಕಾರ ಕ್ಷೇತ್ರದಲ್ಲಿ ಯುವಕರು ಮತ್ತು ಮಹಿಳೆಯರು ಸಕ್ರ‍್ರಿಯವಾಗಿ ಭಾಗವಹಿಸಿದರೆ ಮಾತ್ರ ಸಂಘಗಳು ಅಭಿವೃದ್ಧಿ ಕಾಣಲು ಸಾಧ್ಯ. ಸಹಕಾರ ಸಂಘಗಳ ನಿರ್ದೇಶಕ, ಅಧ್ಯಕ್ಷರ ಹೀಗೆ ಎಲ್ಲ ಹಂತದ ಹುದ್ದೆಗಳನ್ನು ಯುವಕರು ಮತ್ತು ಮಹಿಳೆಯರು ನಿಭಾಯಿಸಬೇಕು ಎಂದು ಕರೆ ನೀಡಿದರು.
 ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಜೆ.ಆರ್.ಷಣ್ಮುಖಪ್ಪ ಮಾತನಾಡಿ, ಪ್ರಾಥ ಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸರ್ಕಾರ ನೀಡುವ ಬಡ್ಡಿ ಸಹಾಯಧನ ಶೇ.3 ರಿಂದ 1.75 ಗೆ ಇಳಿಕೆಗೊಂಡಿದ್ದು, ಈ ಸಂಬಂಧ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಕೆ.ಎಸ್.ಬಸವಂತಪ್ಪ ಅವರು ಸರ್ಕಾರದ ಗಮನ ಸೆಳೆದು ಪಿಎಸಿಎಸ್ ಕಾರ್ಯದರ್ಶಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.
Read also : ದಾವಣಗೆರೆ|ಭತ್ತ ಕಟಾವು ಯಂತ್ರಕ್ಕೆ ಪರಿಷ್ಕೃತ ಬಾಡಿಗೆ ದರ ನಿಗಧಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ
ಹಳ್ಳಿ ಉದ್ಧಾರವಾದರೆ ಮಾತ್ರ ದಿಲ್ಲಿ ಉದ್ಧಾರ ಎಂಬ ಮಾತಿದೆ. ಆದರೆ ಗ್ರಾಮೀಣ ಪ್ರದೇಶದ ರೈತರಿಗೆ ನೀಡುವ ಸಾಲದ ಪ್ರಮಾಣ ಸಾಕಷ್ಟು ಪ್ರಮಾಣದಲ್ಲಿ ಇಳಿಕೆ ಕಂಡಿದೆ. ನಬಾರ್ಡ್ನವರು ಶೇ.48 ರಷ್ಟು ಸಾಲ ನೀಡಿಕೆ ಕಡಿಮೆ ಮಾಡಿದ್ದಾರೆ. ಇದು ಕೇಂದ್ರ ಸರ್ಕಾರದ ನೀತಿಯಾಗಿದೆ. ಆದ್ದರಿಂದ ಕರ್ನಾಟಕ ಸೇರಿದಂತೆ ದೇಶದ ಎಲ್ಲ ಲೋಕಸಭಾ ಸದಸ್ಯರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಸಾಲ ನೀಡಿಕೆ ಪ್ರಮಾಣವನ್ನು ಹೆಚ್ಚು ಮಾಡಬೇಕೆಂದು ಆಗ್ರಹಿಸಿದರು.
ಗುಡಿ ಕೈಗಾರಿಕೆಗಳು, ಹೈನುಗಾರಿಕೆ, ಮೀನುಗಾರಿಕೆ ಹೆಚ್ಚು ಅಭಿವೃದ್ಧಿಯಾಗಬೇಕಾ ದರೆ ಅವರಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ. ಈ ಉದ್ಯಮ ಆರಂಭಿಸಲು ಬ್ಯಾಂಕುಗಳ ಸಾಲ ನೀಡಲು ಒಪ್ಪುವುದಿಲ್ಲ. ಸಾಲ ನೀಡಲು ಬ್ಯಾಂಕುಗಳು ಸಿಬಿಲ್ ಸ್ಕೋರ್ ಕೇಳುತ್ತವೆ. ಇದಕ್ಕೆ ಪರಿಹಾರ ಏನು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. ಈ ಸಮಸ್ಯೆಗೆ ಪರಿಹಾರ ಹುಡುಕಿದರೆ ಸಹಕಾರ ಕ್ಷೇತ್ರ ನಿಜವಾಗಿಯೂ ಅಭಿವೃದ್ಧಿ ಕಾಣಲಿದೆ ಎಂದರು.
ಇದಕ್ಕೂ ಮುನ್ನ ಡಾ.ಎಚ್.ಎಸ್.ಮಂಜುನಾಥ್ ಕುರ್ಕಿ, “ಸಹಕಾರಿ ಉದ್ಯಮ ಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ” ಕುರಿತು ಉಪನ್ಯಾಸ ನೀಡಿದರು.
ಕುರ್ಕಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಜಿ.ವೀರೇಶ್ ಅಧ್ಯಕ್ಷತೆ ವಹಿಸಿದ್ದರು.  ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿರಿಗೆರೆ ರಾಜಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಮಂಜುಳಾ ಗಣೇಶಪ್ಪ, ಜೆ.ಎಸ್.ವೇಣುಗೋಪಾಲ ರೆಡ್ಡಿ, ಕೆ.ಜಿ.ಸುರೇಶ್, ಜಗದೀಶಪ್ಪ ಬಣಕಾರ್, ಉಪಾಧ್ಯಕ್ಷ ಬಿ.ಶೇಖರಪ್ಪ, ಶಿಮುಲ್ ಉಪಾಧ್ಯಕ್ಷ ಚೇತನ್ ಎಸ್.ನಾಡಿಗೇರ್, ಎಚ್.ಬಿ.ಭೂಮೇಶ್ವರಪ್ಪ, ಯೂನಿಯನ್ ನಿರ್ದೇಶಕ ಎಚ್.ಆರ್.ಸಿದ್ದೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ದಾವಣಗೆರೆ|ಭತ್ತ ಕಟಾವು ಯಂತ್ರಕ್ಕೆ ಪರಿಷ್ಕೃತ ಬಾಡಿಗೆ ದರ ನಿಗಧಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ
Next Article Davanagere ನವೆಂಬರ್19 ವಿಶ್ವ ಸಿಓಪಿಡಿ”ಶ್ವಾಸಕೋಶದ ದೀರ್ಘ ಅಡಚಣೆಯ ಕಾಯಿಲೆ”: ಲೇಖನ  ಡಾ.ಎನ್.ಹೆಚ್.ಕೃಷ್ಣ, 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಾಸಕ ಶಾಮನೂರು ಶಿವಶಂಕರಪ್ಪ ಅವರಿಂದ ಧಾನ್ಯಗಳ ಪರಿಶೀಲನೆ

ದಾವಣಗೆರೆ:   ಹಿರಿಯ ಶಾಸಕ  ಡಾ.ಶಾಮನೂರು ಶಿವಶಂಕರಪ್ಪ ಅವರು ಮಾರುಕಟ್ಟೆಯಲ್ಲಿ ಧಾನ್ಯಗಳ ಪರಿಶೀಲನೆ ನಡೆಸಿದರು. ಕಳಪೆ ಧಾನ್ಯಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ…

By Dinamaana Kannada News

ಅಭರಣ ದರೋಡೆ ಪ್ರಕರಣ:ಪಿಎಸೈ ಸೇವೆಯಿಂದ ವಜಾ

ದಾವಣಗೆರೆ : ಬಂಗಾರದ ಆಭರಣ ತಯಾರಕನಿಂದ ಅಭರಣದ ಸಾಮಾಗ್ರಿ ಕಿತ್ತುಕೊಂಡು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಸಬಾವಿ ಪೊಲೀಸ್ ಠಾಣೆಯ ಮಾಳಪ್ಪ…

By Dinamaana Kannada News

Davanagere cyber crime news | ಅಪ್ಲಿಕೇಷನ್ ಡೌನ್ಲೌಡ್ ನೆಪದಲ್ಲಿ 6 ಲಕ್ಷಕ್ಕೆ ಕತ್ತರಿ

ದಾವಣಗೆರೆ (Davanagere) : ಪೋನ್ ಪೇ ಕಸ್ಟಮರ್ ಕೇರ್ ಎಂದು ಹೇಳಿ ಅಪ್ಲಿಕೇಷನ್ ಡೌನ್‍ಲೌಡ್ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ ರೂ.5,00,000/-ರೂ ಮತ್ತು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?