Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಹೆಣ್ಣನ್ನು ಪೌರಾಣಿಕ ಕಾಲದಿಂದಲೂ ದ್ವಿತೀಯ ದರ್ಜೆಯಾಗಿ ಕಾಣಲಾಗುತ್ತಿದೆ: ಡಾ. ಎಚ್. ಎಲ್. ಪುಷ್ಪ ಕಳವಳ
ತಾಜಾ ಸುದ್ದಿ

ಹೆಣ್ಣನ್ನು ಪೌರಾಣಿಕ ಕಾಲದಿಂದಲೂ ದ್ವಿತೀಯ ದರ್ಜೆಯಾಗಿ ಕಾಣಲಾಗುತ್ತಿದೆ: ಡಾ. ಎಚ್. ಎಲ್. ಪುಷ್ಪ ಕಳವಳ

Dinamaana Kannada News
Last updated: November 22, 2025 2:42 pm
Dinamaana Kannada News
Share
Davanagere
SHARE

ದಾವಣಗೆರೆ : ಹೆಣ್ಣನ್ನು ಪೌರಾಣಿಕ ಕಾಲದಿಂದಲೂ ದ್ವಿತೀಯ ದರ್ಜೆಯಾಗಿ ಕಾಣಲಾಗುತ್ತಾ ಬರಲಾಗಿದೆ. ಅತಂಹ ಸಂಕಟದಲ್ಲಿ ಹೆಣ್ಣು ಪುರುಷ ಪ್ರಧಾನ ಸಮಾಜದಲ್ಲಿ ಅನುಭವಿಸಿದ ನೋವು ಯಾತನೆ, ಶೋಷಣೆ ಕಲ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಖ್ಯಾತ ಕವಯತ್ರಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ. ಎಚ್.ಎಲ್. ಪುಷ್ಪ ಹೇಳಿದರು

ನಗರದ ಎ.ವಿ.ಕೆ ಮಹಿಳಾ ಕಾಲೇಜು ಮತ್ತು ಬೇರು-ಚಿಗುರು ವೇದಿಕೆ ಸಹಯೋಗದೊಂದಿಗೆ ಆಯೋಜನೆ ಮಾಡಿದ್ದ “ಕನ್ನಡ ಸಾಹಿತ್ಯ : ಮಹಿಳಾ ಸಂವೇದನೆ” ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪರಂಪರೆಯ ಒಳಗೆ ಒಂದಲ್ಲ ಒಂದು ಕಾರಣದಿಂದ ಹೆಣ್ಣನ್ನು ದೈಹಿಕ ರಚನೆಯಲ್ಲಿ ನೋಡುತ್ತಾ ಬರಲಾಗಿದೆ. ಅವಳನ್ನು ಪುರುಷ ಪ್ರಧಾನ ಸಮಾಜ ಲೈಂಗಿಕ ಸರಕಾಗಿ ಬಳಸಿಕೊಂಡದ್ದು ವಿಷಾದನೀಯ ಸಂಗತಿ. ಹಾಗೆಂದ ಮಾತ್ರಕ್ಕೆ ಎಲ್ಲಾ ಪುರುಷರು ಕೆಟ್ಟವರಲ್ಲ, ಒಳ್ಳವರಲ್ಲ. ಅದೇ ರೀತಿ ಎಲ್ಲಾ ಹೆಣ್ಣು ಮಕ್ಕಳು ಒಳ್ಳವರಲ್ಲ ಮತ್ತು ಕೆಟ್ಟವರಲ್ಲ ಎಂದು ಹೇಳಿದರು.

ಕನ್ನಡದ ಪ್ರಾಚೀನ ಕಾಲಘಟ್ಟದ ಸಾಹಿತ್ಯದಿಂದ ಇಂದಿನ ಹೊಸ ತಲೆಮಾರಿನ ಬರಹಗಾರರ ವರೆಗೂ ಹೆಣ್ತನದ ಆಂತರಿಕ ಸಂವೇದನೆಯನ್ನು ಇಟ್ಟುಕೊಂಡು ಬರೆದಿರುವುದು ನೋಡುತ್ತೇವೆ. ಪರಂಪರೆಯ ಒಳಗೆ ಅನೇಕ ಕವಿಗಳು ಆಯ ಘಟಕ್ಕೆ ಸಾಹಿತ್ಯ ಕೃತಿಗಳಲ್ಲಿ ಭಿನ್ನ ಭಿನ್ನ ಮಾದರಿಯಲ್ಲಿ, ಭಿನ್ನ ಭಿನ್ನ ನೋಟದಲ್ಲಿ ಚಿತ್ರಿಸಿರುವುದು ನೋಡುತ್ತೇವೆ ಎಂದರು.

ಪ್ರಬಂಧ ಮಂಡನೆಯ ಆರು ಹೊತ್ತಿಗೆಯನ್ನು ಲೋಕಾರ್ಪಣೆಗೊಳಿದ ಎ.ವಿ.ಕೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕಮಲಾ ಸೊಪ್ಪಿನ್ ಮಾತನಾಡಿ, ಧರ್ಮದ ಕಾರಣದಿಂದ ಹೆಣ್ಣು ಶೋಷಣೆಗೆ ಒಳಗಾಗುತ್ತಿದ್ದಾಳೆ. ಅಂತಹದ್ದರ ನಡುವೆ ನಾವು ಜಾಗ್ರುತವಾಗಬೇಕಿದೆ. ಅಷ್ಟೇ ಅಲ್ಲದೆ ನಾವು ಸಾಹಿತ್ಯ ಕೃತಿಗಳನ್ನು ಹೆಚ್ಚು ಹೆಚ್ಚು ಓದುವ ಮೂಲಕ ನಾವು ಸಮ ಸಮಾಜ ಕಟ್ಟಬೇಕಿದೆ ಎಂದರು.

ಡಾ. ಕರಿಯಪ್ಪ ಮಾಳಗಿ  ಮಾತನಾಡಿ, ಸಾಹಿತ್ಯ ಎಂದರೆ ಸಂಭ್ರಮ, ಸಾಹಿತ್ಯ ಓದುವುದೇ ಸಂಭ್ರಮ, ಸಾಹಿತ್ಯ ವಿಚಾರವನ್ನು ಕುರಿತು ವಿಚಾರ ಕೇಳುವುದೇ ಸಂಭ್ರಮ ಆ ನಿಟ್ಟಿನಲ್ಲಿ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದರು.

Read also : ಶ್ರೀ ಸತ್ಯ ಸಾಯಿ ಜನ್ಮ ಶತಮಾನೋತ್ಸ|ಯಶಸ್ವಿ ವ್ಯಕ್ತಿಗಳ ಸಂಗದಿಂದ ಯಶಸ್ಸು ಸಾಧ್ಯ: ಕೆ.ಎಂ.ಗಂಗಾಧರಸ್ವಾಮಿ

ಶ್ರೀಮತಿ ಜಿ.ಎಸ್. ಸುಶೀಲಾ ಆರ್ ರಾವ್ ಅವರು ನವೋದಯ ಪೂರ್ವ ಮತ್ತು ನಂತರದ ಕಾಲ ಘಟ್ಟದ ಬರಹಗಳು ಅಂದಿನ ತಲೆಮಾರಿನ ಮೇಲೆ ಗಾಢವಾದ ಪ್ರಭಾವ ಬೀರುವ ಮೂಲಕ ಆ ತಲೆಮಾರಿನವರಿಗೆ ಪ್ರೇರಣೆ ನೀಡಿತು ಎಂದರು.

ಮೊದಲಮೊದಲ ಗೋಷ್ಠಿಯಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರು ಹಾಗೂ ಹಿರಿಯಡ್ಕ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಯಪ್ರಕಾಶ್ ಶಟ್ಟಿ ಅವರು ಪ್ರಾಚೀನ ಕನ್ನಡ ಸಾಹಿತ್ಯ: ಮಹಿಳಾ ಸಂವೇದನೆ ಕುರಿತು ವಿಚಾರ ಮಂಡಿಸಿದರು.

ಎರಡನೇ ಗೋಷ್ಠಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಪ್ರೊ. ಶುಭ ಮರವಂತೆ ಅವರು ವಚನ-ಷಟ್ಪದಿ-ಸಾಂಗತ್ಯ ಕಾವ್ಯಗಳು : ಮಹಿಳಾ ಸಂವೇದನೆ ಕುರಿತು ವಿಚಾರ ಮಂಡಿಸಿದರು.

ಮೂರನೇ ಗೋಷ್ಠಿಯಲ್ಲಿ ಖ್ಯಾತ ವಿಮರ್ಶಕಿ ಪ್ರೊ. ತಾರಿಣಿ ಶುಭದಾಯಿನಿ ಅವರು ಕೀರ್ತನೆ ಮತ್ತು ತತ್ವಪದ ಸಾಹಿತ್ಯ: ಮಹಿಳಾ ಸಂವೇದನೆ ಕುರಿತು ವಿಚಾರ ಮಂಡಿಸಿದರು.

ನಂತರ ನಾಡಿನ ಅನೇಕ ಸಂಶೋಧನಾ ವಿದ್ಯಾರ್ಥಿಗಳು, ಅಧ್ಯಾಪಕರು ತಮ್ಮ ಪ್ರಬಂಧ ಮಂಡಿಸಿದರು.

ಕು|| ದೀಪಾ ಜಿ.ಟಿ ಮತ್ತು ತಂಡದವರು ಪ್ರಾರ್ಥಿಸಿದರು. ಎ.ವಿ.ಕೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ  ಡಾ. ರಣಧೀರ ಸ್ವಾಗತಿಸಿದರು.

ಬೇರು-ಚಿಗುರು ವೇದಿಕೆಯ ಕಾರ್ಯದರ್ಶಿ ಅಂಜಿನಪ್ಪ,  ಪ್ರಾಸ್ತಾವಿಕ ನುಡಿಗಳಾಡಿದರು. ಎ.ಎಂ.ಎಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ  ನಾಗೇಶಪ್ಪ ಕೆ ವಂದಿಸಿದರು. ಎ.ವಿ.ಕೆ. ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ. ಕವಿತ ಆರ್.ಜಿ. ಮತ್ತು ಡಾ. ಲೋಹಿತ್ ಹೆಚ್.ಎಂ. ನಿರೂಪಿಸಿದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಶ್ರೀ ಸತ್ಯ ಸಾಯಿ ಜನ್ಮ ಶತಮಾನೋತ್ಸ|ಯಶಸ್ವಿ ವ್ಯಕ್ತಿಗಳ ಸಂಗದಿಂದ ಯಶಸ್ಸು ಸಾಧ್ಯ: ಕೆ.ಎಂ.ಗಂಗಾಧರಸ್ವಾಮಿ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ನಾಯಿಗಳ ಹಾವಳಿ : ನಗರಸಭಾ ಸದಸ್ಯರಿಂದ ನಗರಸಭೆ ಕಚೇರಿಗೆ ಬೀಗ

ಹರಿಹರ  (Davangere District)  : ಹರಿಹರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಆಗ್ರಹಿಸಿ ನಗರಸಭೆ…

By Dinamaana Kannada News

ಪಾಲಿಕೆ ಅಧಿಕಾರಿ, ಸಿಬ್ಬಂದಿ ಹಣ ನೀಡುವಂತೆ ಬೇಡಿಕೆ ಇಟ್ಟರೆ ದೂರು ದಾಖಲಿಸಿ

ದಾವಣಗೆರೆ ಮಾ.20 (Davanagere )- ರಾಜೀವ್ ಗಾಂಧಿ ವಸತಿ ನಿಗಮ, ಮನೆ ವಸತಿ ಯೋಜನೆಗಳ ಅನುಸಾರ ವಸತಿ-ರಹಿತರನ್ನು ಗುರುತಿಸಿ ಮಾಹಿತಿಯನ್ನು…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು -8 ನೀಲ ಕುರುಂಜಿ ಹೂಗಳ ಮೌನ!

ನೀಲ ಕುರುಂಜಿ! ಸ್ಟ್ರಾಬಿಲೆಂತಸ್ ಕುಂಥಿಯಾನಾ  ಎಂಬ ವೈಜ್ಞಾನಿಕ ಹೆಸರಿನ ಇದೊಂದು ಹೂವ್ವೆ ಮೈವೆತ್ತ ಸಸ್ಯ. ದೀರ್ಘ ಕಾಲಕ್ಕೊಮ್ಮೆ ಅರಳುವ  ಈ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ಸತ್ಯ ಸಾಯಿ ಜನ್ಮ ಶತಮಾನೋತ್ಸ|ಯಶಸ್ವಿ ವ್ಯಕ್ತಿಗಳ ಸಂಗದಿಂದ ಯಶಸ್ಸು ಸಾಧ್ಯ: ಕೆ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಸಾರಿಗೆ ಇಲಾಖೆ : ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಶೇ.50 ವಿನಾಯಿತಿ

By Dinamaana Kannada News
Davanagere
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಪ್ರಾಣಿ ಸಂಗ್ರಹಾಲಯ ಸ್ಥಳಾಂತರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಸಲಹೆ

By Dinamaana Kannada News
poem
ಅಭಿಪ್ರಾಯ

poem|ಅವ್ವನ ಕೌದಿ :ಪಿ.ಆರ್.ವೆಂಕಟೇಶ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?