Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 35 ಮೆಕ್ಕೆಜೋಳ ಖರೀದಿ ಕೇಂದ್ರ: ಡಿಸ್ಟಿಲರಿಗಳಿಂದ 15,747, ಕುಕ್ಕುಟ ಉದ್ಯಮದಿಂದ 10,465 ಮೆಟ್ರಿಕ್‌ ಟನ್‌ ಬೇಡಿಕೆ
ತಾಜಾ ಸುದ್ದಿ

35 ಮೆಕ್ಕೆಜೋಳ ಖರೀದಿ ಕೇಂದ್ರ: ಡಿಸ್ಟಿಲರಿಗಳಿಂದ 15,747, ಕುಕ್ಕುಟ ಉದ್ಯಮದಿಂದ 10,465 ಮೆಟ್ರಿಕ್‌ ಟನ್‌ ಬೇಡಿಕೆ

Dinamaana Kannada News
Last updated: December 17, 2025 4:19 pm
Dinamaana Kannada News
Share
ಸಚಿವ ಶಿವಾನಂದ ಪಾಟೀಲ
SHARE
ಬೆಳಗಾವಿ: ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಗೆ ಒಟ್ಟು 35 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ಡಿಸೆಂಬರ್‌ 1ರಿಂದ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ  ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬುಧವಾರ ಎನ್.ಎಚ್‌. ಕೋನರೆಡ್ಡಿ  ಮತ್ತು ಶಿವಗಂಗ ಅವರು ನಿಯಮ 73ರ ಅಡಿಯಲ್ಲಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು,  ಡಿಸ್ಟಿಲರಿಗಳಿಂದ  15,747  ಮೆಟ್ರಿಕ್‌ ಟನ್‌ ಮೆಕ್ಕೆಜೋಳಕ್ಕೆ ಬೇಡಿಕೆ ಬಂದಿದ್ದು, 17 ಖರೀದಿ ಕೇಂದ್ರ ಆರಂಭಿಸಿ ಇದುವರೆಗೆ 114 ರೈತರಿಂದ 303.75 ಮೆಟ್ರಿಕ್‌ ಟನ್‌ ಖರೀದಿ ಮಾಡಲಾಗಿದೆ.
ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರ ಅಸೋಸಿಯೇಷನ್‌ನಿಂದ 10,465 ಮೆಟ್ರಿಕ್‌ ಟನ್‌ ಮೆಕ್ಕಜೋಳಕ್ಕೆ ಬೇಡಿಕೆ ಬಂದಿದ್ದು, 18 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. 1697 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಕೆಎಂಎಫ್‌ನಿಂದ 50 ಸಾವಿರ ಮೆಟ್ರಿಕ್‌ ಟನ್‌ಗೆ ಬೇಡಿಕೆ ಬಂದಿದ್ದು, 22,109 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. 3,185 ರೈತರಿಂದ 5,866 ಮೆಟ್ರಿಕ್‌ ಟನ್‌ ಖರೀದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಾಲ್‌ಗೆ 2,400 ರೂ. ಬೆಂಬಲ ಬೆಲೆ ಘೋಷಣೆ ಮಾಡಿದ್ದು,  ಈ ಯೋಜನೆಯಲ್ಲಿ ಖರೀದಿ ಮಾಡಿದರೆ ರಾಜ್ಯದ ಪಡಿತರ ವಿತರಣೆಗಾಗಿ ಮಾತ್ರ ಬಳಸಬೇಕು ಎಂದು ಸೂಚನೆ ನೀಡಿತ್ತು. ಆದರೆ ರಾಜ್ಯದಲ್ಲಿ ಮೆಕ್ಕೆಜೋಳವನ್ನು ಆಹಾರ ಪದ್ದತಿಯಲ್ಲಿ ಬಳಸದ ಕಾರಣ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿ ಮಾಡಲು ಅವಕಾಶವಿರಲಿಲ್ಲ.
ಹೀಗಾಗಿ ಪಿಡಿಪಿಎಸ್‌ ಯೋಜನೆಯಲ್ಲಿ ಖರೀದಿ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.  ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಮೆಕ್ಕೆಜೋಳ ಬೆಳೆಗಾರರ ಹಿತರಕ್ಷಣೆಗೆ ಡಿಸ್ಟಿಲರಿ ಮಾಲೀಕರು, ಪಶು ಮತ್ತು ಕುಕ್ಕುಟ ಆಹಾರ ಉತ್ಪಾದನೆ ಅಸೋಷಿಯೇಷನ್‌ ಪದಾಧಿಕಾರಿಗಳ ಸಭೆ ಕರೆದು ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸಲು ಅವರ ಮನವೊಲಿಸಲಾಯಿತು ಎಂದು ವಿವರಿಸಿದರು.
Read also : ಮೈಸೂರಲ್ಲಿ ದಾವಣಗೆರೆ ರಂಗಾಯಣದ ಪ್ರತಿಗಂಧರ್ವ ನಾಟಕ ಪ್ರದರ್ಶನಗಳು
ಡಿಸ್ಟಿಲರಿ ಮಾಲೀಕರು ಬೆಂಬಲ ಬೆಲೆಯಲ್ಲಿ ಖರೀದಿಸಿದರೆ ನಷ್ಟವಾಗಲಿದೆ  ಎಂದು ಹೇಳಿದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಸಾಗಾಟ ಮತ್ತು ಪ್ರಾಸಂಗಿಕ ವೆಚ್ಚ ಭರಿಸುವ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದಿಂದ ಖರೀದಿ ಮಾಡಿ ಡಿಸ್ಟಿಲರಿಗಳು ಹಾಗೂ ಪಶು ಮತ್ತು ಕುಕ್ಕುಟ ಆಹಾರ ಉತ್ಪಾದಕರ ಅಸೋಸಿಯೇಷನ್‌ಗೆ ಪೂರೈಕೆ ಮಾಡಲಾಗುತ್ತಿದೆ ಎಂದು ವಿವರಿಸಿದರು.
ಸರ್ಕಾರದ ಸಕಾಲಿಕ ಮಧ್ಯಪ್ರವೇಶದಿಂದ ಡಿಸೆಂಬರ್‌ ತಿಂಗಳಿನಲ್ಲಿ ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ಗೆ 1,800ರಿಂದ 2,100 ರೂ.ವರೆಗೆ ಮಾರಾಟವಾಗಿದೆ. ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸುವ ಪೂರ್ವದಲ್ಲಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ಧಾರಣಿ ಕ್ವಿಂಟಾಲ್‌ಗೆ 1,600ರಿಂದ 1,800 ರೂ.ವರೆಗೆ ಇತ್ತು ಎಂದು ಹೇಳಿದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಮಕ್ಕಳ ರಕ್ಷಣೆ ಜಾಗೃತಿ ಪ್ರಾಥಮಿಕ ಹಂತದಿಂದಲೇ ಅಗತ್ಯ: ಪ್ರೊ.ಕುಂಬಾರ
Next Article Karnataka Gramin Bank ಕರ್ನಾಟಕ ಗ್ರಾಮೀಣ ಬ್ಯಾಂಕ್ ಗ್ರಾಹಕರ ಸಭೆ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davangere Crime| ಸ್ವಾಮೀಜಿ ಶಿಷ್ಯರೆಂದು ಜನರಿಗೆ ವಂಚನೆ : ಐವರ ಬಂಧನ

ದಾವಣಗೆರೆ.ಆ.19 (Davangere District) : ಐರಣಿ ಮಠದ ಸ್ವಾಮೀಜಿಯ ಶಿಷ್ಯರೆಂದು ಹೇಳಿಕೊಂಡು ಅಸಲಿ ನೋಟಿನ ಕೆಳಗೆ ಬಿಳಿಯ ಹಾಳೆಗಳುಳ್ಳ ಬಾಕ್ಸ್…

By Dinamaana Kannada News

ಭಗಂದರ (Fistula in ano) ಸಮಸ್ಯೆ: ಆಯುರ್ವೇದದಲ್ಲಿ ಉತ್ತಮ ಚಿಕಿತ್ಸೆ  

ಭಗಂದರ (Fistula) ವನ್ನು ಆಚಾರ್ಯ ಸುಶ್ರುತರು ಅಷ್ಟ ಮಹಾರೋಗಗಳಲ್ಲಿ (ಎಂಟು ಪ್ರಮುಖ ರೋಗಗಳು) ಒಂದು ಎಂದು ವಿವರಿಸಿದ್ದಾರೆ.  ಇದು ಗುಣಪಡಿಸಲು…

By Dinamaana Kannada News

ದಾವಣಗೆರೆ|ಮನಸ್ಸು ಸ್ವಚ್ಚದಿಂದ ಮಾತ್ರ ಆರೋಗ್ಯ : ನ್ಯಾ.ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ

ದಾವಣಗೆರೆ ಅ.23  : ಮನಸ್ಸು ಸ್ವಚ್ಚವಾಗಿದ್ದರೆ ಅವರು ಎಲ್ಲಾದರಲ್ಲಿ ಆರೋಗ್ಯವಂತನಾಗಿ ಶ್ರೀಮಂತನಾಗಿರುತ್ತಾನೆ ಎಂದು  1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

By Dinamaana Kannada News

You Might Also Like

Davanagere crime news
ಅಪರಾಧ ಸುದ್ದಿ

ಸೈಬರ್ ಅಪರಾಧ:ಸಿಐಡಿಗೆ ಹಸ್ತಾಂತರಿಸಿದ ದಾವಣಗೆರೆ ಎಸ್ಪಿ

By Dinamaana Kannada News
Davanagere
ತಾಜಾ ಸುದ್ದಿ

ಜೈನ್ ವಿದ್ಯಾಲಯ|ಮಕ್ಕಳು ಪ್ರತಿಭೆ ಪ್ರದರ್ಶಿಸಲು ವಸ್ತು ಪ್ರದರ್ಶನ ಉತ್ತಮ ವೇದಿಕೆ : ಗೀತಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಸ್ವತ್ತು ಕಳವು ಪ್ರಕರಣ: 20.38 ಕೋಟಿ ರೂ ಮೌಲ್ಯದ ಸ್ವತ್ತು ಮಾಲೀಕರಿಗೆ ವಿತರಣೆ

By Dinamaana Kannada News
Davanagere
ಆರೋಗ್ಯ

ಮೈಕೊರೆಯುವ ಚಳಿ|ಆರೋಗ್ಯದ ಸಮಸ್ಯೆಗೆ ಒಳಗಾಗದೇ ಇರಲು ಮುಂಜಾಗ್ರತೆ ವಹಿಸಿ :ಡಾ.ಜಿ.ಡಿ.ರಾಘವನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?